Homeಮುಖಪುಟಉತ್ತರಾಖಂಡ ಹಿಮಪ್ರವಾಹ-ಇನ್ನೂ ಮುಂದುವರಿದ ರಕ್ಷಣಾ ಕಾರ್ಯ; 26 ಮೃತದೇಹ ಪತ್ತೆ

ಉತ್ತರಾಖಂಡ ಹಿಮಪ್ರವಾಹ-ಇನ್ನೂ ಮುಂದುವರಿದ ರಕ್ಷಣಾ ಕಾರ್ಯ; 26 ಮೃತದೇಹ ಪತ್ತೆ

- Advertisement -
- Advertisement -

ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಹಿಮ ಪ್ರವಾಹದಲ್ಲಿ ನಾಪತ್ತೆಯಾದವರ ಸಂಖ್ಯೆ 170 ಕ್ಕೆ ಏರಿಕೆಯಾಗಿದೆ. ಪ್ರವಾಹ ಉಂಟಾಗಿ 24 ಗಂಟೆಗಳು ಕಳೆದರೂ ಐಟಿಬಿಪಿ, ಎನ್‌ಡಿಆರ್‌ಎಫ್ ಮತ್ತು ಸೇನಾ ಸಿಬ್ಬಂದಿಗಳು ಇನ್ನೂ ರಕ್ಷಣಾಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಕಾಣೆಯಾದವರಲ್ಲಿ ಹೆಚ್ಚಾಗಿ ವಿದ್ಯುತ್ ಯೋಜನೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ಎಂದು ವರದಿಯಾಗಿದೆ.

ರಾಜ್ಯ ಎಮೆಜೆನ್ಸಿ ಕಂಟ್ರೋಲ್ ರೂಮ್ ಪ್ರಕಾರ, ಎನ್‌ಟಿಪಿಸಿಯ ತಪೋವನ್ ವಿಷ್ಣುಗಡ್ ಜಲ ವಿದ್ಯುತ್ ಯೋಜನೆ ಮತ್ತು ಖಾಸಗಿ ಒಡೆತನದ ಋಷಿಗಂಗಾ ವಿದ್ಯುತ್ ಯೋಜನೆಯ ಯೋಜನಾ ಸ್ಥಳಗಳಲ್ಲಿ ಈವರೆಗೆ 26 ಮೃತ ಶರೀರಗಳು ಪತ್ತೆಯಾಗಿದೆ.

ಎನ್‌ಟಿಪಿಸಿಯ ತಪೋವನ್ ಸ್ಥಳದಲ್ಲಿ 1,900 ಮೀಟರ್ ಉದ್ದದ ಸುರಂಗದ ಸುತ್ತ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದು, ಅಲ್ಲಿ ಕನಿಷ್ಠ 35 ಜನರು ಸಿಕ್ಕಿಬಿದ್ದಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಉತ್ತರಾಖಂಡ: ಹಿಮನದಿಯಲ್ಲಿ ಭಾರಿ ಹಿಮ ಪ್ರವಾಹ, 150 ಜನರು ನಾಪತ್ತೆ

“ಜನರು ಸುರಂಗದ ಒಳಗೆ ಇನ್ನೂ ಜೀವಂತವಾಗಿರುವ ಎಲ್ಲ ಅವಕಾಶಗಳಿವೆ. ಇದು ಉದ್ದವಾದ ಸುರಂಗವಾಗಿರುವುದರಿಂದ, ಸಾಕಷ್ಟು ಆಮ್ಲಜನಕವು ಅಲ್ಲಿ ಇರುವ ಸಾಧ್ಯತೆಯಿದೆ. ಈ ಸುರಂಗದ ಒಂದು ಸಣ್ಣ ಮಾರ್ಗ ಕಂಡುಕೊಂಡರೂ, ನಾವು ಕೊಳವೆಗಳ ಮೂಲಕ ಸುರಂಗಕ್ಕೆ ಆಮ್ಲಜನಕವನ್ನು ತುಂಬುತ್ತೇವೆ” ಎಂದು ಐಟಿಬಿಪಿ ಅಧಿಕಾರಿಯೊಬ್ಬರ ಹೇಳಿಕೆಯನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌‌ಪ್ರೆಸ್ ವರದಿ ಮಾಡಿದೆ.

ಈಗಾಗಲೆ ತಪೋವನ್ ಸುರಂಗದಲ್ಲಿ 130 ಮೀಟರ್‌ವರೆಗೂ ತಲುಪಿದ್ದೇವೆ ಎಂದು ಉತ್ತರಾಖಂಡದ ಡಿಜಿಪಿ ಅಶೋಕ್ ಕುಮಾರ್‌ ತಿಳಿಸಿದ್ದಾರೆಂದು ವರದಿಯಾಗಿದೆ.

ಇದನ್ನೂ ಓದಿ: ಉತ್ತರಾಖಂಡ ಹಿಮ ಪ್ರವಾಹ: ಸುರಂಗದಲ್ಲಿ ಸಿಕ್ಕಿಬಿದ್ದ 12 ಜನರ ರಕ್ಷಣೆ

“ನಿನ್ನೆ ತನಕ ನಾವು ಸುರಂಗದ 80 ಮೀಟರ್ ದೂರ ಹೋಗಿದ್ದೇವೆ. ಸೋಮವಾರ ಸಂಜೆ ವೇಳೆಗೆ ಇನ್ನೂ 50 ಮೀಟರ್ ದೂರ ತಲುಪಿದ್ದೇವೆ. ಇಡೀ ರಾತ್ರಿ ಕಾರ್ಯಾಚರಣೆ ಮುಂದುವರಿಯುತ್ತಿದೆ. ಅಲ್ಲಿ ಬಹಳಷ್ಟು ಕೆಸರು ತುಂಬಿದ್ದು ಅದನ್ನು ತೆಗೆಯಬೇಕಾಗಿದೆ. ಸಶಸ್ತ್ರ ಪಡೆ, ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಮತ್ತು ಪೊಲೀಸರು ಎಲ್ಲರೂ ಸಮನ್ವಯದಿಂದ ಕೆಲಸ ಮಾಡುತ್ತಿದ್ದಾರೆ” ಎಂದು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ಸಂಘಟಿಸುತ್ತಿರುವ ಭಾರತೀಯ ರಿಸರ್ವ್ ಬೆಟಾಲಿಯನ್‌ನ ಕಮಾಂಡೆಂಟ್ ಮಂಜುನಾಥ್ ಎಸ್ ಆರ್ ಹೇಳಿಕೆಯನ್ನು ಪತ್ರಿಗೆ ಉಲ್ಲೇಖಿಸಿದೆ.

ತಪೋವನ್‌‌ ಎನ್‌ಟಿಪಿಸಿ ಯೋಜನಾ ಸ್ಥಳದಲ್ಲಿ ಕೆಲಸ ಮಾಡುವ ಹೆಚ್ಚಿನ ಕಾರ್ಮಿಕರನ್ನು ಖಾಸಗಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ರಾಜ್ಯ ವಿಪತ್ತು ಪರಿಹಾರ ಅಧಿಕಾರಿ ತಿಳಿಸಿದ್ದಾರೆ. “ಕಂಪನಿಯು ನಮಗೆ ನೀಡಿರುವ ಮಾಹಿತಿಯ ಆಧಾರದಲ್ಲಿ ಮೇಲೆ, ಸುರಂಗದಲ್ಲಿ ಸುಮಾರು 35 ಜನರು ಸಿಲುಕಿಕೊಂಡಿದ್ದಾರೆ. ಇದಲ್ಲದೆ ಪ್ರವಾಹದಲ್ಲಿ ಕೊಚ್ಚಿಕೊಂಡು ಬಂದ ಜನರು ಸುರಂಗದಲ್ಲಿ ಸಿಲುಕಿಕೊಂಡಿರಬಹುದು” ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ನಾಯಕನ ಮುಖಕ್ಕೆ ಮಸಿ ಬಳಿದವರಿಗೆ 1 ಲಕ್ಷ ಬಹುಮಾನ ಘೋಷಿಸಿದ ಕಾಂಗ್ರೆಸ್ ನಾಯಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...