Homeಮುಖಪುಟನಿಮ್ಮ ಮನೆ 20 ವರ್ಷ ಹಳೆಯದೇ? ಹಾಗಾದರೆ ಕೂಡಲೇ ಕೆಡವಿ ಮತ್ತೆ ಕಟ್ಟಿಸಿ!

ನಿಮ್ಮ ಮನೆ 20 ವರ್ಷ ಹಳೆಯದೇ? ಹಾಗಾದರೆ ಕೂಡಲೇ ಕೆಡವಿ ಮತ್ತೆ ಕಟ್ಟಿಸಿ!

- Advertisement -
- Advertisement -

ನಿಮ್ಮ ಬಟ್ಟೆಗಳು ಒಂದು ವರ್ಷ ಹಳೆಯದೇ? ಹಾಗಿದ್ದಲ್ಲಿ ಅವನ್ನು ಕೂಡಲೇ ಹರಿದು ಹಾಕಿ ಹೊಸ ಬಟ್ಟೆ ಕೊಂಡುಕೊಳ್ಳಿರಿ. ಮೊಬೈಲ್ ಮೂರು ವರ್ಷ ಹಳೆಯದೇ, ಅದನ್ನು ಕೂಡಲೇ ಎಸೆದು ಹೊಸದೊಂದು ಕೊಳ್ಳಿರಿ.

ಲೇಖಕನಿಗೆ ತಲೆ ಕೆಟ್ಟಿದೆಯೇ ಎಂದು ಕೇಳಬೇಡಿ, ಬರುತ್ತೇನೆ ವಿಷಯಕ್ಕೆ.

ನಿಮ್ಮ ಕಾರು 20 ವರ್ಷ ಹಳೆಯದೇ? ಹಾಗಾದರೆ ಅದನ್ನು ಗುಜರಿಗೆ ಹಾಕಿ ಹೊಸ ಕಾರು ಖರೀದಿಸಿ ಎಂದು ಸರಕಾರ ಹೇಳಿದಾಗ ಯಾರನ್ನಾದರೂ ಪ್ರಶ್ನಿಸಿದಿರಾ, ಇಲ್ಲಾ ತಾನೆ? ಹಾಗಾದರೆ ನಾನು ಮೇಲೆ ಹೇಳಿದ ಮಾತುಗಳು ಶೀಘ್ರದಲ್ಲೇ ಸರಕಾರದ ಆದೇಶವಾಗಿ ಬರುವುದರಲ್ಲಿ ಸಂದೇಹವಿಲ್ಲ.

ಈ ಬಾರಿಯ ಬಜೆಟ್ ಮಂಡನೆಯಾದ ನಂತರ ಹಲವಾರು ಆರ್ಥಿಕ ತಜ್ಞರು ಮುಂಗಡಪತ್ರದಲ್ಲಿ ಕೇವಲ ಸಪ್ಪ್ಲೈ ಸೈಡನ್ನು ಗಮನಿಸಲಾಗಿದೆ, ಇದಕ್ಕೆ ಬೇಕಾದ ಡಿಮ್ಯಾಂಡ್ ಹೇಗೆ ಸರಕಾರ ಸೃಷ್ಟಿಸುತ್ತದೆ ಎನ್ನುವ ಬಗ್ಗೆ ವಿವರ ಇಲ್ಲ ಎಂದು ಗೊಣಗಿದ್ದರು. ಇದೋ ಇಲ್ಲಿದೆ ಡಿಮ್ಯಾಂಡ್ ಸೃಷ್ಟಿಯ ವಿವರ.

ಇದನ್ನೂ ಓದಿ: ಭಾರತದ ಪ್ರಗತಿಯನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವ ಕೃಷಿ ಕಾಯ್ದೆಗಳು

ಇತ್ತೀಚೆಗೆ ಬಂದ ಭಾರತ ಸರಕಾರದ “ಅದ್ವಿತೀಯ” ಮುಂಗಡಪತ್ರದಲ್ಲಿ ಹಳೆಯ ಕಾರಿನ ಪ್ರಸ್ತಾವನೆ ಇದೆ. ಕೇವಲ ಕಾರಿನ ಬಗ್ಗೆ ಮಾತನಾಡುವುದಾದರೆ ನನ್ನ ಕಾರು ನನ್ನ ವೈಯುಕ್ತಿಕ ವಿಚಾರ, ಇದರಲ್ಲಿ ಇನ್ನೊಬ್ಬರಿಗೆ ಮೂಗು ತೂರಿಸುವ ಅವಕಾಶವಿಲ್ಲ. ಭಾರತದಲ್ಲಿ ಹಿಂದಿನಿಂದಲೂ ಮಧ್ಯಮ ವರ್ಗದ ಜನರು ಜೀವನದಲ್ಲಿ ಒಂದೇ ಹೆಂಡತಿ, ಒಂದೇ ಮಗು, ಒಂದೇ ಮನೆ, ಒಂದೇ ಕಾರು ಎಂದು ಜೀವನ ಮಾಡಿದವರು. ಕಾರನ್ನು ಹೆಂಡತಿ ಅಥವಾ ಮಗುವಿನಷ್ಟೇ ಪ್ರೀತಿಯಿಂದ ಸಾಕಿದವರು. ಅದನ್ನು ಗುಜರಿಗೆ ಹಾಕುವುದು ಅವರಿಗೆ ಜೀರ್ಣವಾಗದ ಮಾತು. ವೈಯುಕ್ತಿಕ ವಿಚಾರಗಳು ಹಾಗಿರಲಿ.

PC: Google Sites

ನಮ್ಮ ಗ್ರಾಮೀಣ ಸಾರಿಗೆ ನಿಂತಿರುವುದೇ ಹಳೆಯ ವಾಹನಗಳ ಕೃಪೆಯಿಂದ. ಸಾರ್ವಜನಿಕ ಸಾರಿಗೆ ವ್ಯವಸ್ಥೆ ಇಲ್ಲದೆ ಗ್ರಾಮೀಣ ಭಾಗದ ಜನರು ಹಳೆಯ ಮತ್ತು ಮಾರ್ಪಡಿಸಲ್ಪಟ್ಟ ವಾಹನಗಳನ್ನೇ ನಂಬಿಕೊಂಡು ಇದೇ ಗ್ರಾಮೀಣ ಸಾರಿಗೆ ಎಂದು ಜೀವನ ನಡೆಸುತ್ತಿದ್ದಾರೆ. ಹಾಗಾದರೆ ಅವರೆಲ್ಲಾ ಏನು ಮಾಡಬೇಕು. ಹಳೆಯ ವಾಹನಗಳ ರಿಪೇರಿ ಮಾಡಿ ಜೀವನ ನಡೆಸುತ್ತಿರುವ ಲಕ್ಷಾಂತರ ಮೆಕ್ಯಾನಿಕ್‌‌‌ಗಳು ಏನು ಮಾಡಬೇಕು.

ಇದನ್ನೂ ಓದಿ: ಓಡಿಒಪಿ: ಎಲ್ಲದರೊಳಗು ಸ್ವತಂತ್ರ ಬೇಕು ಅಂದ್ರ ಹೆಂಗ? 1947ರೊಳಗ ಸಿಕ್ಕದಲ್ಲಾ ಸಾಕು

ಒಂದು ಅಂದಾಜಿನ ಪ್ರಕಾರ 2000-2001 ರಲ್ಲಿ ದೇಶದಲ್ಲಿ ಸುಮಾರು ನಲವತ್ತು ಲಕ್ಷ ವಾಹನಗಳ ಉತ್ಪಾದನೆಯಾಗಿತ್ತು. ಅವೆಲ್ಲವೂ ಏಕಕಾಲಕ್ಕೆ ಗುಜರಿಗೆ ಹೋದರೆ ಅವನ್ನು ಕೊಂಡುಕೊಳ್ಳುವವರು ಯಾರು? ಬಹುಶ: ಮಹೀಂದ್ರ ಮತ್ತು ಟಾಟಾ ಈಗಾಗಲೇ ಅದಕ್ಕೆ ಬೇಕಾದ ವ್ಯವಸ್ಥೆ ಮಾಡಿಕೊಂಡಿರಬಹು (ಅದಾನಿ ಪಂಜಾಬಿನಲ್ಲಿ ಧಾನ್ಯಸಂಗ್ರಹಣೆ ಗೋಡೌನ್ ಕಟ್ಟಿಸಿದಂತೆ). ಆಟೋಮೊಬೀಲ್ ಲಾಬಿ ಸರಕಾರಕ್ಕೆ ಕಪ್ಪಕಾಣಿಕೆ ಸಲ್ಲಿಸಿರಬಹುದೇನೋ, ಅದಕ್ಕಾಗಿ ಈ ಆದೇಶ ಎಂದು ಸಂದೇಹ ಮೂಡುವುದು ಸ್ವಾಭಾವಿಕ.

ಹಾಗಾದರೆ ನಾಳೆ ರಿಯಲ್ ಎಸ್ಟೇಟ್ ಲಾಬಿ ಭೇಟಿಯಾದಲ್ಲಿ ಎಲ್ಲಾ 20 ವರ್ಷ ಹಳೆಯ ಮನೆ ಕೆಡವಿ ಹೊಸ ಮನೆ ಕಟ್ಟಬೇಕೆಂಬ ಕಾನೂನು ಬಂದರೆ ಅಥವಾ ಬಟ್ಟೆ ಲಾಬಿ ಒತ್ತಡದ ಮೇರೆಗೆ ಎಲ್ಲರೂ ಪ್ರತಿ ವರ್ಷ ಹೊಸ ಬಟ್ಟೆಯನ್ನೇ ಕೊಳ್ಳಬೇಕೆಂಬ ಕಾನೂನು ಜಾರಿಯಾದರೆ ಏನೂ ಆಶ್ಚರ್ಯವಿಲ್ಲ.

ಗೌರಿ ಲಂಕೇಶ್ ಇಂಗ್ಲಿಷ್‌ ಯುಟ್ಯೂಬ್ ಚಾನೆಲ್ Gauri Lankesh News Subscribe ಮಾಡಲು ಇಲ್ಲಿ ಕ್ಲಿಕ್ ಮಾಡಿ.

ಇಷ್ಟೇ ಅಲ್ಲ, ಮನೆಯ ಪಾತ್ರೆ, ವಾಷಿಂಗ್ ಮಷಿನ್, ಮಿಕ್ಸರ್-ಗ್ರೈಂಡರ್, ಫ್ರಿಜ್, ಟಿವಿ, ಮೊಬೈಲ್, ಆಭರಣಗಳು, ಎಲ್ಲದಕ್ಕೂ ಎಕ್ಸ್ಪೈರಿ ಡೇಟ್ ಫಿಕ್ಸ್ ಆಗುತ್ತದೆ. ಇದೆಲ್ಲಾ ಕೊಂಡುಕೊಳ್ಳಲು ಹಣ ಎಲ್ಲಿಂದ ಬರುತ್ತದೆ ಎಂದು ನನ್ನನ್ನು ಕೇಳಬೇಡಿ, ವಿತ್ತಮಂತ್ರಿಗಳನ್ನು ಕೇಳಿ ನೋಡಿ. ಬಹುಶ: ಹೆಲಿಕಾಪ್ಟರ್ ಮನಿ. ಸರ್ಕಾರ ಗರಿಗರಿ ನೋಟು ಮುದ್ರಿಸಿ ಮೇಲಿನಿಂದ ಎಸೆಯಬಹುದು.

ಹೆಂಡತಿ/ಗಂಡ ಅದೇ ಇರಬೇಕೋ ಅಥವಾ ಅದೂ ಬದಲಾಯಿಸುತ್ತಿರಬೇಕೋ ಏನೋ ಗೊತ್ತಿಲ್ಲ. ವಿಚಾರಿಸಿ ನೋಡಿ.

 -ಜಿ.ಆರ್. ವಿದ್ಯಾರಣ್ಯ (ಅಭಿಪ್ರಾಯಗಳು ವೈಯಕ್ತಿಕವಾದವು)

ಇದನ್ನೂ ಓದಿ: ಪುಟಕ್ಕಿಟ್ಟ ಪುಟಗಳು: ಪುರುಷಾಧಿಪತ್ಯವನ್ನು ಪ್ರಶ್ನಿಸಿ ಆರೋಗ್ಯಕರ ಶೃಂಗಾರ ಪಾಠ ಹೇಳುವ ’ಪ್ರಾಚೀನ ಭಾರತದಲ್ಲಿ ಕಾಮಶಾಸ್ತ್ರ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. The Indian and state governments are implementing new new bills on public (scraping the old cars and two wheelers ) but it will be affecting only to the middle class families not to politicians nor rich families and it’s like a indirect death penalty to citizens of India.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...