Homeಮುಖಪುಟಎಂಎಸ್‌ಪಿ ಕುರಿತು ಪ್ರಧಾನಿ ಮೋದಿ ಸುಳ್ಳು ಹೇಳುತ್ತಿದ್ದಾರೆ: ಎಐಕೆಎಂಎಸ್ ಆರೋಪ

ಎಂಎಸ್‌ಪಿ ಕುರಿತು ಪ್ರಧಾನಿ ಮೋದಿ ಸುಳ್ಳು ಹೇಳುತ್ತಿದ್ದಾರೆ: ಎಐಕೆಎಂಎಸ್ ಆರೋಪ

ಭಾರತೀಯ ಸಂಪನ್ಮೂಲಗಳನ್ನು ವಿದೇಶಿ ಕಂಪನಿಗಳಿಗೆ ಹಸ್ತಾಂತರಿಸುವುದನ್ನು ಪ್ರಧಾನ ಮಂತ್ರಿ “ಆತ್ಮ್ ನಿರ್ಭರ್” ಎಂದು ಕರೆಯುತ್ತಾರೆ.

- Advertisement -
- Advertisement -

ಪ್ರಮುಖ ರೈತ ಸಂಘಟನೆಗಳಲ್ಲಿ ಒಂದಾದ ಆಲ್ ಇಂಡಿಯಾ ಕಿಸಾನ್ ಮಜ್ದೂರ್ ಸಭಾ, (ಎಐಕೆಎಂಎಸ್) ಪ್ರಧಾನ ಮಂತ್ರಿಯವರು ರೈತರ ಕುರಿತು ಸಂಸತ್ತಿನಲ್ಲಿ ಅಪಹಾಸ್ಯ ಮಾಡಿದ್ದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ತಮ್ಮದೇ ದೇಶದ ಹೆಣಗಾಡುತ್ತಿರುವ ರೈತರನ್ನು ‘ವಿದೇಶಿ ವಿನಾಶಕಾರಿ ಸಿದ್ಧಾಂತಕ್ಕೆ’ (FDI-Foreign Destructive Ideology) ತಲೆ ಒಡ್ಡಿದವರು ಮತ್ತು ರೈತರ ಹೋರಾಟದ ವಿಷಯಗಳ ಬಗ್ಗೆ ಅಜ್ಞಾನವನ್ನು ಹೊಂದಿದವರು ಪ್ರತಿಭಟನೆ ಮಾಡುತ್ತಿದ್ದಾರೆ ಎಂಬ ಪ್ರಧಾನಿ ಹೇಳಿಕೆಗೆ ಸಂಘಟನೆ ಆಕ್ರೋಶ ವ್ಯಕ್ತಪಡಿಸಿದೆ. ಹಕ್ಕೊತ್ತಾಯಗಳನ್ನು ಮುಂದಿಡುತ್ತಿರುವ ರೈತರಿಗೆ ‘ಆಂದೋಲನ್ ಜೀವಿ’ ಎಂಬ ಹಣೆಪಟ್ಟೆ ಕಟ್ಟುವುದು ರೈತರಿಗೆ ಮಾಡಿದ ಅವಮಾನ ಮತ್ತು ಅವರ ಅಧಿಕಾರದ ದುರುಪಯೋಗವಾಗಿದೆ ಎಂದು ಸಂಘಟನೆಯ ಪ್ರಧಾನ ಕಾರ್ಯದರ್ಶಿ ಡಾ. ಆಶಿಶ್ ಮಿತ್ತಲ್ ತಿಳಿಸಿದ್ದಾರೆ.

11 ಸುತ್ತಿನ ಮಾತುಕತೆಯ ಸಂದರ್ಭದಲ್ಲಿ ರೈತರ ಹಕ್ಕುಗಳನ್ನು ಸ್ಪಷ್ಟವಾಗಿ ಹಾಳುಮಾಡುವ ವಿವಿಧ ಷರತ್ತುಗಳ ಕುರಿತು ರೈತ ಮುಖಂಡರು ಗಮನಸೆಳೆದಿದ್ದಾರೆ. ಇದೆಲ್ಲ ಪ್ರಧಾನ ಮಂತ್ರಿಗೆ ತಿಳಿದಿಲ್ಲ ಅನ್ನುವುದನ್ನು ಒಪ್ಪಲಾದೀತೆ? ಇದು ತಮಾಷೆಯಲ್ಲ, ಸತ್ಯವೆಂದರೆ ಪ್ರಧಾನಿ ಸಮಸ್ಯೆಯನ್ನು ಪರಿಹರಿಸಲು ಬಯಸುವುದಿಲ್ಲ ಮತ್ತು ಕಾರ್ಪೊರೇಟ್ ಲೂಟಿಯನ್ನು ಉತ್ತೇಜಿಸಲು ಮುಂದುವರಿಯಲು ಬಯಸುತ್ತಾರೆ ಎಂದು ಸಂಘಟನೆ ಆರೋಪಿಸಿದೆ.

ಮಂಡಿ ಬೈಪಾಸ್ ಕಾಯ್ದೆಯ ಸೆಕ್ಷನ್ 5 ಸ್ಪಷ್ಟವಾಗಿ ಹೇಳುವಂತೆ, ಖಾಸಗಿ ಮಂಡಿ ಮಾಲೀಕರು ಬೆಳೆ ದರವನ್ನು ಲೈನ್ (ರೂಟಿನ್) ವ್ಯಾಪಾರಕ್ಕೆ ಅನುಗುಣವಾಗಿ ನಿರ್ಧರಿಸುತ್ತಾರೆ, ಆದರೆ ಎಂಎಸ್ಪಿ ಪ್ರಕಾರವಲ್ಲ. ಇದರರ್ಥ ಖಾಸಗಿ ಮಂಡಿಗಳು ಪಂಜಾಬ್ ರೈತರಿಗೆ ಭತ್ತಕ್ಕಾಗಿ ಕ್ವಿಂಟಲ್‌ಗೆ 900 ರೂ. ದರವನ್ನು ನೀಡುತ್ತವೆ, ಆದರೆ 1886 ರೂ.ಗಳ ಎಂಎಸ್ಪಿ ನೀಡುವುದಿಲ್ಲ…..’ ಎಂದು ಎಐಕೆಎಂಎಸ್ ಆರೋಪಿಸಿದೆ.

ಸೆಕ್ಷನ್ 5 (2) ರ ಪ್ರಕಾರ ಖಾಸಗಿ ಕಂಪನಿಗಳು ತಮ್ಮದೇ ಆದ ವ್ಯಾಪಾರದ ನಿಯಮಗಳನ್ನು ನಿರ್ಧರಿಸುತ್ತವೆ ಮತ್ತು ಬೆಳೆ ವ್ಯಾಪಾರದ ಎಲ್ಲಾ ವಿವಾದ ಇತ್ಯರ್ಥಗಳು ಅವರ ನಿಯಮಗಳ ಪ್ರಕಾರವೇ ನಡೆಯುತ್ತವೆ, ಆದರೆ ಎಂಎಸ್ಪಿ ಪ್ರಜಾರ ಅಲ್ಲಿ ವಹಿವಾಟು ನಡೆಯುವುದೇ ಇಲ್ಲ’ ಎಂದು ಎಐಕೆಎಂಎಸ್ ವಿವರಣೆ ನೀಡಿದೆ.

‘ಗುತ್ತಿಗೆ ಕಾಯ್ದೆಯ ಸೆಕ್ಷನ್ 9, ರೈತರಿಗೆ ಸಾಲಕ್ಕಾಗಿ ಬ್ಯಾಂಕುಗಳೊಂದಿಗೆ ಭೂಮಿಯನ್ನು ಅಡಮಾನ ಇಡಲು ಆದೇಶಿಸುತ್ತದೆ. ಸೆಕ್ಷನ್ 14 (2 ಮತ್ತು 7) ರ ಪ್ರಕಾರ ಅವರು ಪ್ರಾಯೋಜಕ ಕಂಪನಿಯಿಂದ ಮುಂಗಡ ಪಡೆದರೆ, ವಸೂಲಿಗಳು ‘ಭೂ ಆದಾಯದ ಬಾಕಿ’ ಆಗಿರುತ್ತವೆ….’
‘ಈ ಕಾಯಿದೆಗಳು ಆಹಾರಧಾನ್ಯವನ್ನು ಅನಧಿಕೃತವಾಗಿ ಶೇಖರಿಸಲು, ಕಪ್ಪು ಮಾರುಕಟ್ಟೆ (ಬ್ಲಾಕ್ ಮಾರ್ಕೆಟ್) ಸೃಷ್ಟಿಸಲು, ಆಹಾರದ ಬೆಲೆಗಳನ್ನು ಹೆಚ್ಚಿಸಲು ಮತ್ತು ಸರ್ಕಾರಿ ಖರೀದಿ ಮತ್ತು ಪಿಡಿಎಸ್ ಅನ್ನು ರದ್ದುಗೊಳಿಸಲು ಪರವಾನಗಿ ನೀಡುತ್ತವೆ’ ಎಂದು ಎಐಕೆಎಂಎಸ್ ಆರೋಪಿಸಿದೆ.

‘ಈ ಕಾಯ್ದೆಗಳ ಯಾವುದೇ ವಿಳಂಬ ಅನುಷ್ಠಾನ / ಅಮಾನತು ಪ್ರಕ್ರಿಯೆಗಳನ್ನು ಸ್ವೀಕರಿಸಲು ರೈತರು ನಿರಾಕರಿಸುವುದು ಈ ಕಾಯಿದೆಗಳಲ್ಲಿನ ಅಂತಹ ನಿಬಂಧನೆಗಳು ಅವರ ವಿರುದ್ಧ ಇವೆ ಎಂಬ ಕಾರಣಕ್ಕೇ. ಈ ಕಾನೂನುಗಳನ್ನು ಖಾಸಗಿ ಬಂಡವಾಳಶಾಹಿಗಳ ಲಾಭಕ್ಕಷ್ಟೇ ಜಾರಿ ಮಾಡಲಾಗಿದೆ’ಎಂದು ಎಐಕೆಎಂಎಸ್ ಪ್ರಕಟನೆಯಲ್ಲಯ ತಿಳಿಸಿದೆ.

ಸಿಂಘು
ಟಿಕ್ರಿ ಗಡಿಯಲ್ಲಿ ರೈತರು ಪ್ರತಿಭಟಿಸುತ್ತಿರುವುದು

ಭಾರತೀಯ ಪಶುಸಂಗೋಪನೆ ಮತ್ತು ಹಸಿರು ಕ್ರಾಂತಿಗೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿಗಳು ಸತ್ಯವನ್ನು ತಪ್ಪಾಗಿ ನಿರೂಪಿಸಿದ್ದಾರೆ. ಹಾಲು ಉತ್ಪಾದನೆಯು ರೈತರಿಗೆ ಪ್ರಯೋಜನಕಾರಿಯಾಗಿದೆ, ಅಲ್ಲಿ ಸರ್ಕಾರ ಸಹಕಾರಿ ಹಾಲು ವಲಯವು ಲಾಭದಾಯಕ ದರವನ್ನು ನೀಡಿದರೆ, ಹಸಿರು ಕ್ರಾಂತಿಯು ಎಂಎಸ್ಪಿ ದರಗಳು ಮತ್ತು ಸರ್ಕಾರಿ ಸಂಗ್ರಹಣೆಯ ಮೇಲೆ ಮಾತ್ರ ಉಳಿದಿದೆ. ಈಗ ಈ ಕಾನೂನುಗಳ ಪ್ರಕಾರ ಸರ್ಕಾರಿ ಖರೀದಿ ಮತ್ತು ಸರ್ಕಾರಿ ಮಂಡಳಿಗಳನ್ನು ಖಾಸಗೀಕರಣ ಮಾಡಲು ಹೊರಟಿದೆ. ಇದರಿಂದ ಈ ವರ್ಗದ ರೈತರು ಸಹ ತಮ್ಮ ಭೂಮಿ ಮತ್ತು ಜೀವನೋಪಾಯದಿಂದ ವಂಚಿತರಾಗುತ್ತಾರೆ.

ಸರ್ಕಾರವು ಕಿವುಡ ಕಿವಿ ಹೊಂದಿದ್ದು, ಕಾರಣಗಳನ್ನು ಸ್ಪಷ್ಟಪಡಿಸಲು ಶಕ್ತಿ ಇಲ್ಲದ ಕಾರಣಕ್ಕೆ ರೈತರನ್ನು ದೂಷಿಸುತ್ತಿದೆ ಎಂಬುದು ಈಗ ಸ್ಪಷ್ಟವಾಗಿದೆ ಎಂದು ಎಐಕೆಎಂಎಸ್ ಹೇಳಿದೆ.
ಒಬ್ಬ ಪ್ರಧಾನ ಮಂತ್ರಿಯು ತನ್ನ ಜನರನ್ನು ಮರುಳು ಮಾಡಲು ಇಂತಹ ಮಟ್ಟಕ್ಕೆ ಇಳಿಯಬಹುದು ಎಂಬುದು ವಿಚಿತ್ರವಾಗಿದೆ! ದೇಶದ ಸಂಸತ್ತು ಭಾರತೀಯ ಕಾರ್ಪೊರೇಟ್‌ನೊಂದಿಗೆ ಸಂಪರ್ಕ ಹೊಂದಿದ್ದು, ವಿದೇಶಿ ಶೋಷಕ ಕಾರ್ಪೊರೇಟ್ ಶಕ್ತಿಗಳ ಗುಲಾಮ ಆಗಿರುವುದನ್ನು ಇದು ಸೂಚಿಸುತ್ತದೆಯಲ್ಲವೆ? ಸಂಪೂರ್ಣ ಕೃಷಿ ಪ್ರಕ್ರಿಯೆಗಳು, ಕೃಷಿ ಭೂಮಿ, ನೈಸರ್ಗಿಕ ಸಂಪನ್ಮೂಲಗಳು, ಕೃಷಿ ಸಂಸ್ಕರಣೆ, ಸಂಗ್ರಹಣೆ ಮತ್ತು ಮಾರುಕಟ್ಟೆಗಳ ಮೇಲಿನ ನಿಯಂತ್ರಣವನ್ನು ಎಂಎನ್ಸಿ ಮತ್ತು ಭಾರತೀಯ ಕಾರ್ಪೊರೇಟ್ಗೆ ಹಸ್ತಾಂತರಿಸಲು ಕಾನೂನುಗಳು ಅವಕಾಶ ಮಾಡಿಕೊಡುತ್ತಿವೆ. ಇದು ಆರ್ಎಸ್ಎಸ್ ನಿಯಮ ಮತ್ತು ಅದರ ಮೋಸಗೊಳಿಸುವ ಸಿದ್ಧಾಂತದ ಲಕ್ಷಣವಾಗಿದೆ ಎಂದು ಎಐಕೆಎಂಎಸ್ ವಿವರಿಸಿದೆ. ಭಾರತೀಯ ಸಂಪನ್ಮೂಲಗಳನ್ನು ವಿದೇಶಿ ಕಂಪನಿಗಳಿಗೆ ಹಸ್ತಾಂತರಿಸುವುದನ್ನು ಪ್ರಧಾನ ಮಂತ್ರಿ “ಆತ್ಮ್ ನಿರ್ಭರ್” ಎಂದು ಕರೆಯುತ್ತಾರೆ. ವಿದೇಶಿ ಶೋಷಕರ ಸೇವೆ, ಸ್ವಾತಂತ್ರ್ಯ ಚಳವಳಿಯ ಸಮಯದಲ್ಲಿ ಜನರಿಗೆ ದ್ರೋಹ ಬಗೆದ ಅವರ ಪಾತ್ರದ ಪುನರಾವರ್ತನೆಯಾಗಿದೆ ಎಂದು ಸಂಘಟನೆ ಹೇಳಿಕೆ ನೀಡಿದೆ.


ಇದನ್ನೂ ಓದಿ: ಆಂದೋಲನ್ ಜೀವಿಗಳಾಗಲು ಹೆಮ್ಮೆ ಪಡುತ್ತೇವೆ: ಮೋದಿಗೆ ತಿರುಗೇಟು ನೀಡಿದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...