Homeಮುಖಪುಟ’ನರೇಂದ್ರಜಿ ನಿಮಗೆ ಅಧಿಕಾರದ ಮದ ಏರಿದೆ’: ಕಿಡಿಕಾರಿದ ಆರೆಸ್ಸೆಸ್ ಮುಖಂಡ

’ನರೇಂದ್ರಜಿ ನಿಮಗೆ ಅಧಿಕಾರದ ಮದ ಏರಿದೆ’: ಕಿಡಿಕಾರಿದ ಆರೆಸ್ಸೆಸ್ ಮುಖಂಡ

ನಿಮ್ಮ ಉದ್ದೇಶ ರೈತರಿಗೆ ಸಹಾಯ ಮಾಡುವ ಉದ್ದೇಶವಾಗಿರಬಹುದು, ಆದರೆ ಕೆಲವು ಜನರಿಗೆ ಅದು ಅಗತ್ಯವಿಲ್ಲದಿದ್ದರೆ, ನೀವು ಮಾಡುವುದರಿಂದ ಏನು ಪ್ರಯೋಜನವಿದೆ?

- Advertisement -
- Advertisement -

ಮೂರು ಕೃಷಿ ಕಾನೂನುಗಳ ವಿರುದ್ಧ ಹೋರಾಟ ನಡೆಸುತ್ತಿರುವ ರೈತರನ್ನು, ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ನಡೆಸುತ್ತಿರುವ ರೀತಿಯ ಕುರಿತು ಹಿರಿಯ ಆರೆಸ್ಸೆಸ್ ಮುಖಂಡ ರಘುನಂದನ್ ಶರ್ಮಾ ವಾಗ್ದಾಳಿ ನಡೆಸಿದ್ದಾರೆ. ಅವರು ನಿಮಗೆ ಅಧಿಕಾರದ ಮದ ಏರಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಧ್ಯಪ್ರದೇಶ ಬಿಜೆಪಿ ಮುಖಂಡ ಮತ್ತು ಮಾಜಿ ರಾಜ್ಯಸಭಾ ಸದಸ್ಯರಾಗಿರುವ ರಘುನಂದನ್ ಶರ್ಮಾ ರೈತ ಹೋರಾಟದ ಬಗ್ಗೆ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಬರೆದಿದ್ದು, “ರಾಷ್ಟ್ರೀಯತೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕೆಂದು” ಸಚಿವರಿಗೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ’ಟ್ರಾಕ್ಟರ್‌ ಕ್ರಾಂತಿ’ಯಲ್ಲಿ ಭಾಗವಹಿಸಿ: ದೇಶಕ್ಕೆ ರೈತ ಮುಖಂಡ ಟಿಕಾಯತ್‌ ಕರೆ

“ನರೇಂದ್ರ ಅವರೆ, ನೀವು ಸರ್ಕಾರದ ಭಾಗವಾಗಿದ್ದೀರಿ” ಎಂಬ ಸಾಲಿನಿಂದ ಪ್ರಾರಂಭವಾಗುವ ಶರ್ಮಾ ಅವರ ಫೇಸ್‌‌ಬುಕ್‌ ಪೋಸ್ಟ್‌ನಲ್ಲಿ, “ನಿಮ್ಮ ಉದ್ದೇಶ ರೈತರಿಗೆ ಸಹಾಯ ಮಾಡುವ ಉದ್ದೇಶವಾಗಿರಬಹುದು, ಆದರೆ ಕೆಲವು ಜನರಿಗೆ ಅದು ಅಗತ್ಯವಿಲ್ಲದಿದ್ದರೆ, ನೀವು ಮಾಡುವುದರಿಂದ ಏನು ಪ್ರಯೋಜನವಿದೆ?” ಎಂದು ಅವರು ಪ್ರಶ್ನಿಸಿದ್ದಾರೆ.

“ಯಾರಾದರೂ ಬೆತ್ತಲೆಯಾಗಿರಲು ಬಯಸಿದರೆ, ಅವರಿಗೆ ಬಲವಂತವಾಗಿ ಬಟ್ಟೆ ತೊಡಿಸುವುದರಿಂದ ಏನು ಪ್ರಯೋಜನ” ಎಂದು ಅವರು ಹೇಳಿದ್ದಾರೆ.

ಗೌರಿ ಲಂಕೇಶ್ ಇಂಗ್ಲಿಷ್‌ ಯುಟ್ಯೂಬ್ ಚಾನೆಲ್ Gauri Lankesh News Subscribe ಮಾಡಲು ಇಲ್ಲಿ ಕ್ಲಿಕ್ ಮಾಡಿ.

“ನಿಮ್ಮ ಕಠಿಣ ಪರಿಶ್ರಮದ ಫಲವನ್ನು ನೀವು ಪಡೆಯುತ್ತಿದ್ದೀರಿ ಎಂಬ ಆಲೋಚನೆಯನ್ನು ನೀವು ಹೊಂದಿದ್ದೀರಿ, ಆದರೆ ಅದು ನಿಮ್ಮ ಭ್ರಮೆ, ಅಧಿಕಾರದ ಮದ ನಿಮ್ಮ ತಲೆಗೆ ಏರಿದೆ. ನೀವು ಜನಾದೇಶವನ್ನು ಏಕೆ ಕಳೆದುಕೊಳ್ಳುತ್ತಿದ್ದೀರಿ?” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ರಾಷ್ಟ್ರೀಯತೆಯನ್ನು ಬಲಪಡಿಸಲು ಎಲ್ಲ ಶಕ್ತಿಯನ್ನು ಬಳಸಿಕೊಳ್ಳಿ, ಇಲ್ಲದಿದ್ದರೆ ನಾವು ವಿಷಾದಿಸಬೇಕಾಗುತ್ತದೆ. ನಮ್ಮ ಸಿದ್ಧಾಂತವನ್ನು ಕಾಪಾಡುವ ಸೂಚನೆಯನ್ನು ನೀವು ಓದಿರಬಹುದು ಎಂದು ನಾನು ಭಾವಿಸುತ್ತೇನೆ” ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ:  ಕಾರ್ಮಿಕ ಮುಖಂಡರನ್ನು ಬಂಧಿಸುತ್ತಿರುವ ದೆಹಲಿ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...