Homeಮುಖಪುಟ'ಪಬ್ಲಿಕ್ ಟಾಯ್ಲೆಟ್' ಕಿರುಚಿತ್ರ ವಿಮರ್ಶೆ: ರಾಜಶೇಖರ್ ಅಕ್ಕಿ

‘ಪಬ್ಲಿಕ್ ಟಾಯ್ಲೆಟ್’ ಕಿರುಚಿತ್ರ ವಿಮರ್ಶೆ: ರಾಜಶೇಖರ್ ಅಕ್ಕಿ

ವಿಷಯದ ಆಳಕ್ಕೆ ಇಳಿಯದೇ ನೋಡುಗರಿಗೆ ‘ಮನುಷ್ಯರ ಆಳ ಸಂವೇದನೆಗಳು ಮನುಷ್ಯತ್ವದ ಕಡೆಗೇ ಚಲಿಸುತ್ತಿರುಬೇಕು’ ಎಂಬ ಮಹತ್ತರ ಸಂದೇಶ ನೀಡುವ ಉದ್ದೇಶದಿಂದ ಚಿತ್ರವನ್ನು ಮಾಡಿದ್ದಾರೆ.

- Advertisement -
- Advertisement -

ಯಾವುದೇ ಅಪರಾಧ ಆಗಿರಲಿ, ಅದೊಂದು ಅತ್ಯಂತ ನೋವು ತರಿಸುವ ಸಂಗತಿ. ಅದರಲ್ಲಿ ಕೆಲವು ಸಂಗತಿಗಳು ನಮ್ಮನ್ನು ಸುಮ್ಮನೇ ಇರಲು ಬಿಡುವುದಿಲ್ಲ. ಅಪರಾಧ ಎಷ್ಟು ಘೋರವಾಗಿ ತಟ್ಟಿರುತ್ತೆ ಎಂದರೆ, ಅದರಲ್ಲಿ ನಾವೂ ಭಾಗಿ ಎಂದೆನಿಸುತ್ತದೆ ಹಾಗೂ ಅದು ಸತ್ಯವೂ ಕೂಡ. ನಾವೆಲ್ಲರೂ ಒಂದಲ್ಲ ಒಂದು ರೀತಿಯಲ್ಲಿ ಆಗುವ ಎಲ್ಲಾ ಅಪರಾಧಗಳಲ್ಲಿ ಅಪರೋಕ್ಷವಾಗಿ ಭಾಗಿಯೇ.

ಇಂತಹ ಒಂದು ಅಪರಾಧ ನಡೆದಾಗ, ಅದಕ್ಕೆ ಕೇವಲ ಆ ಅಪರಾಧಿ ಮಾತ್ರ ಭಾಗಿಯಾಗದೇ, ಸಮಾಜವೇ ಭಾಗಿಯಾಗಿ ಅದನ್ನು ಸಂಭ್ರಮಿಸಿ, ಅಪರಾಧಕ್ಕೆ ತುತ್ತಾದವರನ್ನು ಇನ್ನಷ್ಟು ಕ್ಷೋಭೆಗೆ ಸಿಲುಕುವ ಕೆಲಸ ಮಾಡಿದಾಗ, ಅದಕ್ಕಾಗಿ ಏನಾದರೂ ಮಾಡಬೇಕು ಎಂದು ಎಲ್ಲರಿಗೂ ಅನಿಸುವುದು ಸಹಜ. ಆ ಅಪರಾಧಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳುವುದು, ಅಂತಹ ಅಪರಾಧಗಳು ಮತ್ತೊಮ್ಮೆ ಆಗಬಾರದು ಎಂದು ಸೂಕ್ತ ಕ್ರಮಗಳನ್ನು ಕೈಗೊಳ್ಳುವುದು, ಕೆಲವು ಸಲ ಆ ವಿಷಯಗಳ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವುದು ಎನ್ನುವ ಅನೇಕ ಕೆಲಸಗಳನ್ನು ಸಮಾಜದ ಕೆಲವು ಅಂಗಗಳು ಮಾಡುತ್ತವೆ.

ಅಂತಹದ್ದೇ ಒಂದು ಘೋರ ಅಪರಾಧದ ಬಗ್ಗೆ ನೊಂದಿರುವ ಯುವ ನಿರ್ದೇಶಕ ನಾಗೇಶ್ ಹೆಬ್ಬೂರು ಅವರು ‘ಪಬ್ಲಿಕ್ ಟಾಯ್ಲೆಟ್’ ಎಂಬ ಕಿರುಚಿತ್ರವನ್ನು ಮಾಡಿದ್ದಾರೆ. ಒಂದು ಸಾರ್ವಜನಿಕ ಶೌಚಾಲಯದಲ್ಲಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದಾಗ, ಆ ಕ್ರಿಯೆಯನ್ನು ಒಬ್ಬ ಕ್ಯಾಮೆರದಲ್ಲಿ ಸೆರೆ ಹಿಡಿದು, ಎಲ್ಲೆಡೆ ಹಂಚಲಾಗಿತ್ತು, ತದನಂತರ ಆ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದಳು ಎನ್ನಲಾದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದು ಸುದ್ದಿಯಾಗಿತ್ತು. ಇದೇ ವಿಷಯವನ್ನು ಇಟ್ಟುಕೊಂಡು ಈ ಕಿರುಚಿತ್ರವನ್ನು ಮಾಡಲಾಗಿದೆ.

ಇಂತಹ ವಿಷಯಗಳಲ್ಲಿ ಯಾರನ್ನು ಚಿತ್ರದ ಮುಖ್ಯಪಾತ್ರವನ್ನಾಗಿ ಮಾಡಬೇಕು ಎಂಬದು ಯಾವಾಗಲೂ ಒಂದು ಪ್ರಶ್ನೆ ಇರುತ್ತದೆ. ಈ ಚಿತ್ರದಲ್ಲಿ ತನ್ನ ಕ್ಯಾಮೆರದಲ್ಲಿ ಆ ದೃಶ್ಯವನ್ನು ಸೆರೆಹಿಡಿದ ವ್ಯಕ್ತಿಯನ್ನೇ ಪ್ರಮುಖಪಾತ್ರ ಮಾಡಲಾಗಿದೆ. ಅದು ಸರಿ ಕೂಡ. ಇಂತಹ ಘೋರ ಕೃತ್ಯಗಳನ್ನು ಎಸಗುತ್ತಾದರೂ ಏಕೆ ಎಂದು ತಿಳಿದು, ಅದರ ಬಗ್ಗೆ ಪರಿಹಾರ ಕಂಡುಕೊಳ್ಳಬೇಕಾದರೆ ಅಪರಾಧಿಯ ಮನೋಸ್ಥಿತಿಯನ್ನು ಪ್ರಮಾಣಿಕ ಪ್ರಯತ್ನ ಆಗಲೇಬೇಕು.

ಹೌದು ಈ ಚಿತ್ರದ ಉದ್ದೇಶವೂ ಪ್ರಾಮಾಣಿಕವಾಗಿಯೇ ಇದೆ. ಆದರೆ,

ಆ ಅಪರಾಧಿಯ ಮನೋಸ್ಥಿತಿಯನ್ನು ಅರಿಯುವ ಪ್ರಾಮಾಣಿಕ ಪ್ರಯತ್ನ ಕಾಣುವುದಿಲ್ಲ. ಅಂತಹ ಒಂದು ದೃಶ್ಯವನ್ನು ತನ್ನ ಫೋನಿನಲ್ಲಿ ಸೆರೆಹಿಡಿದು, ಎಲ್ಲೆಡೆ ವೈರಲ್ ಮಾಡಬೇಕಾದರೆ ಆ ವ್ಯಕ್ತಿ ಎಂಥವನಿರಬಹುದು, ಆ ಕ್ರೌರ್ಯ ಹೇಗೆ ಬಂದಿರಬಹುದು, ಆ ಮಟ್ಟದ ಅಸೂಕ್ಷ್ಮತೆಯನ್ನೆ ಹೇಗೆ ಅಳವಡಿಸಿಕೊಂಡಿರಬಹುದು, ಅದನ್ನು ವೈರಲ್ ಮಾಡಿ, ವಿಕೃತ ಖುಷಿಯನ್ನು ಅನುಭವಿಸಲು ಒಬ್ಬ ವ್ಯಕ್ತಿಗೆ ಹೇಗೆ ಸಾಧ್ಯ ಎಂಬ ಯಾವ ಪ್ರಶ್ನೆಗೂ ಉತ್ತರ ಸಿಗುವುದಿಲ್ಲ, ವಾಸ್ತವದಲ್ಲಿ ಆ ಪ್ರಶ್ನೆಗಳಿಗೆ ಉತ್ತರ ಹುಡುಕುವ ಗೋಜಿಗೇ ಹೋಗಿಲ್ಲ. ಆ ವಿಡಿಯೋ ವೈರಲ್ ಮಾಡಿ, ಬರುವ ಲೈಕ್‌ಗಳು, ವೀವ್ಸ್‌ಗಳಿಂದ ಅನುಂದತುಲಿತನಾಗುತ್ತದ್ದ ವ್ಯಕ್ತಿ, ಯಾರೋ ಒಬ್ಬ ಅದನ್ನು ಟೀಕಿಸಿದೊಡನೇ, ಈತನ ತಪ್ಪಿತಸ್ಥ ಭಾವನೆ ಜಾಗೃತವಾಗುತ್ತದೆ. ಅಲ್ಲಿಯವರೆಗೆ ಕಥೆಯನ್ನು ‘ಕಾಮೆಡಿ’ಯಾಗಿ ಚಿತ್ರಿಸಲು ಪ್ರಯತ್ನಿಸಿ, ತದನಂತರ ಚಿತ್ರದ ಟ್ರೀಟ್‌ಮೆಂಟ್‌ಅನ್ನು ಗಂಭೀರತೆಗೆ ಬದಲಾಯಿಸುತ್ತಾರೆ. ಆ ನಂತರ ಆ ತಪ್ಪಿತಸ್ಥ ಭಾವನೆಯೊಂದಿಗೆ ಅವನು ಹೇಗೆ ಒದ್ದಾಡುತ್ತಾನೆ ಎಂಬುದನ್ನು ತೋರಿಸುವ ಪ್ರಯತ್ನ ಮಾಡಲಾಗಿದೆ. ಆದರೆ ಅಲ್ಲಿಯೂ, ಯಾವುದೇ ಅಧ್ಯಯನ ಮಾಡದೇ, ವಿಷಯದ ಆಳಕ್ಕೆ ಇಳಿಯದೇ ನೋಡುಗರಿಗೆ ‘ಮನುಷ್ಯರ ಆಳ ಸಂವೇದನೆಗಳು ಮನುಷ್ಯತ್ವದ ಕಡೆಗೇ ಚಲಿಸುತ್ತಿರುಬೇಕು’ ಎಂಬ ಮಹತ್ತರ ಸಂದೇಶ ನೀಡುವ ಉದ್ದೇಶದಿಂದ ಚಿತ್ರವನ್ನು ಮಾಡಿದ್ದಾರೆ.

ಯಾವುದೇ ಒಂದು ಘಟನೆಯನ್ನು ಆಧಾರಿಸಿ ಸಿನೆಮಾ ಮಾಡಬೇಕಾದರೆ, ಅದನ್ನು ಸಿನೆಮಾದ ಚೌಕಟ್ಟಿನಲ್ಲಿ ಇಳಿಸಬೇಕಾಗುತ್ತದೆ. ಸಿನೆಮಾ ಎಂಬ ಮಾಧ್ಯಮದ ಇತಿಮಿತಿ ಮತ್ತು ಸಾಮರ್ಥ್ಯಗಳನ್ನು ಅರಿತು ಅದರನುಗುಣವಾಗಿ ಮಾಡಬೇಕಾಗುತ್ತದೆ. ಅದನ್ನೂ ಮಾಡದೆ, ವಿಷಯವಸ್ತುವಿನ ಆಳ ಅಧ್ಯವನ್ನೂ ಮಾಡದೇ, ಕೇವಲ ‘ಒಂದೊಳ್ಳೆ’ ಸಂದೇಶ ನೀಡಲೆಂದು ಸಿನೆಮಾ ಮಾಡುವುದೆಂದರೆ?


ಇದನ್ನೂ ಓದಿ; ಸಿನೆಮಾ ಮತ್ತು ಸಂದೇಶ: ‘ಒಂದೊಳ್ಳೇ ಮೆಸೇಜ್ ಇರೋ ಸಿನೆಮಾ ಮಾಡಬೇಕು’ ಎಂದರೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...