Homeಮುಖಪುಟ'ಪಬ್ಲಿಕ್ ಟಾಯ್ಲೆಟ್' ಕಿರುಚಿತ್ರ ವಿಮರ್ಶೆ: ರಾಜಶೇಖರ್ ಅಕ್ಕಿ

‘ಪಬ್ಲಿಕ್ ಟಾಯ್ಲೆಟ್’ ಕಿರುಚಿತ್ರ ವಿಮರ್ಶೆ: ರಾಜಶೇಖರ್ ಅಕ್ಕಿ

ವಿಷಯದ ಆಳಕ್ಕೆ ಇಳಿಯದೇ ನೋಡುಗರಿಗೆ ‘ಮನುಷ್ಯರ ಆಳ ಸಂವೇದನೆಗಳು ಮನುಷ್ಯತ್ವದ ಕಡೆಗೇ ಚಲಿಸುತ್ತಿರುಬೇಕು’ ಎಂಬ ಮಹತ್ತರ ಸಂದೇಶ ನೀಡುವ ಉದ್ದೇಶದಿಂದ ಚಿತ್ರವನ್ನು ಮಾಡಿದ್ದಾರೆ.

- Advertisement -
- Advertisement -

ಯಾವುದೇ ಅಪರಾಧ ಆಗಿರಲಿ, ಅದೊಂದು ಅತ್ಯಂತ ನೋವು ತರಿಸುವ ಸಂಗತಿ. ಅದರಲ್ಲಿ ಕೆಲವು ಸಂಗತಿಗಳು ನಮ್ಮನ್ನು ಸುಮ್ಮನೇ ಇರಲು ಬಿಡುವುದಿಲ್ಲ. ಅಪರಾಧ ಎಷ್ಟು ಘೋರವಾಗಿ ತಟ್ಟಿರುತ್ತೆ ಎಂದರೆ, ಅದರಲ್ಲಿ ನಾವೂ ಭಾಗಿ ಎಂದೆನಿಸುತ್ತದೆ ಹಾಗೂ ಅದು ಸತ್ಯವೂ ಕೂಡ. ನಾವೆಲ್ಲರೂ ಒಂದಲ್ಲ ಒಂದು ರೀತಿಯಲ್ಲಿ ಆಗುವ ಎಲ್ಲಾ ಅಪರಾಧಗಳಲ್ಲಿ ಅಪರೋಕ್ಷವಾಗಿ ಭಾಗಿಯೇ.

ಇಂತಹ ಒಂದು ಅಪರಾಧ ನಡೆದಾಗ, ಅದಕ್ಕೆ ಕೇವಲ ಆ ಅಪರಾಧಿ ಮಾತ್ರ ಭಾಗಿಯಾಗದೇ, ಸಮಾಜವೇ ಭಾಗಿಯಾಗಿ ಅದನ್ನು ಸಂಭ್ರಮಿಸಿ, ಅಪರಾಧಕ್ಕೆ ತುತ್ತಾದವರನ್ನು ಇನ್ನಷ್ಟು ಕ್ಷೋಭೆಗೆ ಸಿಲುಕುವ ಕೆಲಸ ಮಾಡಿದಾಗ, ಅದಕ್ಕಾಗಿ ಏನಾದರೂ ಮಾಡಬೇಕು ಎಂದು ಎಲ್ಲರಿಗೂ ಅನಿಸುವುದು ಸಹಜ. ಆ ಅಪರಾಧಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳುವುದು, ಅಂತಹ ಅಪರಾಧಗಳು ಮತ್ತೊಮ್ಮೆ ಆಗಬಾರದು ಎಂದು ಸೂಕ್ತ ಕ್ರಮಗಳನ್ನು ಕೈಗೊಳ್ಳುವುದು, ಕೆಲವು ಸಲ ಆ ವಿಷಯಗಳ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವುದು ಎನ್ನುವ ಅನೇಕ ಕೆಲಸಗಳನ್ನು ಸಮಾಜದ ಕೆಲವು ಅಂಗಗಳು ಮಾಡುತ್ತವೆ.

ಅಂತಹದ್ದೇ ಒಂದು ಘೋರ ಅಪರಾಧದ ಬಗ್ಗೆ ನೊಂದಿರುವ ಯುವ ನಿರ್ದೇಶಕ ನಾಗೇಶ್ ಹೆಬ್ಬೂರು ಅವರು ‘ಪಬ್ಲಿಕ್ ಟಾಯ್ಲೆಟ್’ ಎಂಬ ಕಿರುಚಿತ್ರವನ್ನು ಮಾಡಿದ್ದಾರೆ. ಒಂದು ಸಾರ್ವಜನಿಕ ಶೌಚಾಲಯದಲ್ಲಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದಾಗ, ಆ ಕ್ರಿಯೆಯನ್ನು ಒಬ್ಬ ಕ್ಯಾಮೆರದಲ್ಲಿ ಸೆರೆ ಹಿಡಿದು, ಎಲ್ಲೆಡೆ ಹಂಚಲಾಗಿತ್ತು, ತದನಂತರ ಆ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದಳು ಎನ್ನಲಾದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದು ಸುದ್ದಿಯಾಗಿತ್ತು. ಇದೇ ವಿಷಯವನ್ನು ಇಟ್ಟುಕೊಂಡು ಈ ಕಿರುಚಿತ್ರವನ್ನು ಮಾಡಲಾಗಿದೆ.

ಇಂತಹ ವಿಷಯಗಳಲ್ಲಿ ಯಾರನ್ನು ಚಿತ್ರದ ಮುಖ್ಯಪಾತ್ರವನ್ನಾಗಿ ಮಾಡಬೇಕು ಎಂಬದು ಯಾವಾಗಲೂ ಒಂದು ಪ್ರಶ್ನೆ ಇರುತ್ತದೆ. ಈ ಚಿತ್ರದಲ್ಲಿ ತನ್ನ ಕ್ಯಾಮೆರದಲ್ಲಿ ಆ ದೃಶ್ಯವನ್ನು ಸೆರೆಹಿಡಿದ ವ್ಯಕ್ತಿಯನ್ನೇ ಪ್ರಮುಖಪಾತ್ರ ಮಾಡಲಾಗಿದೆ. ಅದು ಸರಿ ಕೂಡ. ಇಂತಹ ಘೋರ ಕೃತ್ಯಗಳನ್ನು ಎಸಗುತ್ತಾದರೂ ಏಕೆ ಎಂದು ತಿಳಿದು, ಅದರ ಬಗ್ಗೆ ಪರಿಹಾರ ಕಂಡುಕೊಳ್ಳಬೇಕಾದರೆ ಅಪರಾಧಿಯ ಮನೋಸ್ಥಿತಿಯನ್ನು ಪ್ರಮಾಣಿಕ ಪ್ರಯತ್ನ ಆಗಲೇಬೇಕು.

ಹೌದು ಈ ಚಿತ್ರದ ಉದ್ದೇಶವೂ ಪ್ರಾಮಾಣಿಕವಾಗಿಯೇ ಇದೆ. ಆದರೆ,

ಆ ಅಪರಾಧಿಯ ಮನೋಸ್ಥಿತಿಯನ್ನು ಅರಿಯುವ ಪ್ರಾಮಾಣಿಕ ಪ್ರಯತ್ನ ಕಾಣುವುದಿಲ್ಲ. ಅಂತಹ ಒಂದು ದೃಶ್ಯವನ್ನು ತನ್ನ ಫೋನಿನಲ್ಲಿ ಸೆರೆಹಿಡಿದು, ಎಲ್ಲೆಡೆ ವೈರಲ್ ಮಾಡಬೇಕಾದರೆ ಆ ವ್ಯಕ್ತಿ ಎಂಥವನಿರಬಹುದು, ಆ ಕ್ರೌರ್ಯ ಹೇಗೆ ಬಂದಿರಬಹುದು, ಆ ಮಟ್ಟದ ಅಸೂಕ್ಷ್ಮತೆಯನ್ನೆ ಹೇಗೆ ಅಳವಡಿಸಿಕೊಂಡಿರಬಹುದು, ಅದನ್ನು ವೈರಲ್ ಮಾಡಿ, ವಿಕೃತ ಖುಷಿಯನ್ನು ಅನುಭವಿಸಲು ಒಬ್ಬ ವ್ಯಕ್ತಿಗೆ ಹೇಗೆ ಸಾಧ್ಯ ಎಂಬ ಯಾವ ಪ್ರಶ್ನೆಗೂ ಉತ್ತರ ಸಿಗುವುದಿಲ್ಲ, ವಾಸ್ತವದಲ್ಲಿ ಆ ಪ್ರಶ್ನೆಗಳಿಗೆ ಉತ್ತರ ಹುಡುಕುವ ಗೋಜಿಗೇ ಹೋಗಿಲ್ಲ. ಆ ವಿಡಿಯೋ ವೈರಲ್ ಮಾಡಿ, ಬರುವ ಲೈಕ್‌ಗಳು, ವೀವ್ಸ್‌ಗಳಿಂದ ಅನುಂದತುಲಿತನಾಗುತ್ತದ್ದ ವ್ಯಕ್ತಿ, ಯಾರೋ ಒಬ್ಬ ಅದನ್ನು ಟೀಕಿಸಿದೊಡನೇ, ಈತನ ತಪ್ಪಿತಸ್ಥ ಭಾವನೆ ಜಾಗೃತವಾಗುತ್ತದೆ. ಅಲ್ಲಿಯವರೆಗೆ ಕಥೆಯನ್ನು ‘ಕಾಮೆಡಿ’ಯಾಗಿ ಚಿತ್ರಿಸಲು ಪ್ರಯತ್ನಿಸಿ, ತದನಂತರ ಚಿತ್ರದ ಟ್ರೀಟ್‌ಮೆಂಟ್‌ಅನ್ನು ಗಂಭೀರತೆಗೆ ಬದಲಾಯಿಸುತ್ತಾರೆ. ಆ ನಂತರ ಆ ತಪ್ಪಿತಸ್ಥ ಭಾವನೆಯೊಂದಿಗೆ ಅವನು ಹೇಗೆ ಒದ್ದಾಡುತ್ತಾನೆ ಎಂಬುದನ್ನು ತೋರಿಸುವ ಪ್ರಯತ್ನ ಮಾಡಲಾಗಿದೆ. ಆದರೆ ಅಲ್ಲಿಯೂ, ಯಾವುದೇ ಅಧ್ಯಯನ ಮಾಡದೇ, ವಿಷಯದ ಆಳಕ್ಕೆ ಇಳಿಯದೇ ನೋಡುಗರಿಗೆ ‘ಮನುಷ್ಯರ ಆಳ ಸಂವೇದನೆಗಳು ಮನುಷ್ಯತ್ವದ ಕಡೆಗೇ ಚಲಿಸುತ್ತಿರುಬೇಕು’ ಎಂಬ ಮಹತ್ತರ ಸಂದೇಶ ನೀಡುವ ಉದ್ದೇಶದಿಂದ ಚಿತ್ರವನ್ನು ಮಾಡಿದ್ದಾರೆ.

ಯಾವುದೇ ಒಂದು ಘಟನೆಯನ್ನು ಆಧಾರಿಸಿ ಸಿನೆಮಾ ಮಾಡಬೇಕಾದರೆ, ಅದನ್ನು ಸಿನೆಮಾದ ಚೌಕಟ್ಟಿನಲ್ಲಿ ಇಳಿಸಬೇಕಾಗುತ್ತದೆ. ಸಿನೆಮಾ ಎಂಬ ಮಾಧ್ಯಮದ ಇತಿಮಿತಿ ಮತ್ತು ಸಾಮರ್ಥ್ಯಗಳನ್ನು ಅರಿತು ಅದರನುಗುಣವಾಗಿ ಮಾಡಬೇಕಾಗುತ್ತದೆ. ಅದನ್ನೂ ಮಾಡದೆ, ವಿಷಯವಸ್ತುವಿನ ಆಳ ಅಧ್ಯವನ್ನೂ ಮಾಡದೇ, ಕೇವಲ ‘ಒಂದೊಳ್ಳೆ’ ಸಂದೇಶ ನೀಡಲೆಂದು ಸಿನೆಮಾ ಮಾಡುವುದೆಂದರೆ?


ಇದನ್ನೂ ಓದಿ; ಸಿನೆಮಾ ಮತ್ತು ಸಂದೇಶ: ‘ಒಂದೊಳ್ಳೇ ಮೆಸೇಜ್ ಇರೋ ಸಿನೆಮಾ ಮಾಡಬೇಕು’ ಎಂದರೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...