Homeಮುಖಪುಟ'ಪಬ್ಲಿಕ್ ಟಾಯ್ಲೆಟ್' ಕಿರುಚಿತ್ರ ವಿಮರ್ಶೆ: ರಾಜಶೇಖರ್ ಅಕ್ಕಿ

‘ಪಬ್ಲಿಕ್ ಟಾಯ್ಲೆಟ್’ ಕಿರುಚಿತ್ರ ವಿಮರ್ಶೆ: ರಾಜಶೇಖರ್ ಅಕ್ಕಿ

ವಿಷಯದ ಆಳಕ್ಕೆ ಇಳಿಯದೇ ನೋಡುಗರಿಗೆ ‘ಮನುಷ್ಯರ ಆಳ ಸಂವೇದನೆಗಳು ಮನುಷ್ಯತ್ವದ ಕಡೆಗೇ ಚಲಿಸುತ್ತಿರುಬೇಕು’ ಎಂಬ ಮಹತ್ತರ ಸಂದೇಶ ನೀಡುವ ಉದ್ದೇಶದಿಂದ ಚಿತ್ರವನ್ನು ಮಾಡಿದ್ದಾರೆ.

- Advertisement -
- Advertisement -

ಯಾವುದೇ ಅಪರಾಧ ಆಗಿರಲಿ, ಅದೊಂದು ಅತ್ಯಂತ ನೋವು ತರಿಸುವ ಸಂಗತಿ. ಅದರಲ್ಲಿ ಕೆಲವು ಸಂಗತಿಗಳು ನಮ್ಮನ್ನು ಸುಮ್ಮನೇ ಇರಲು ಬಿಡುವುದಿಲ್ಲ. ಅಪರಾಧ ಎಷ್ಟು ಘೋರವಾಗಿ ತಟ್ಟಿರುತ್ತೆ ಎಂದರೆ, ಅದರಲ್ಲಿ ನಾವೂ ಭಾಗಿ ಎಂದೆನಿಸುತ್ತದೆ ಹಾಗೂ ಅದು ಸತ್ಯವೂ ಕೂಡ. ನಾವೆಲ್ಲರೂ ಒಂದಲ್ಲ ಒಂದು ರೀತಿಯಲ್ಲಿ ಆಗುವ ಎಲ್ಲಾ ಅಪರಾಧಗಳಲ್ಲಿ ಅಪರೋಕ್ಷವಾಗಿ ಭಾಗಿಯೇ.

ಇಂತಹ ಒಂದು ಅಪರಾಧ ನಡೆದಾಗ, ಅದಕ್ಕೆ ಕೇವಲ ಆ ಅಪರಾಧಿ ಮಾತ್ರ ಭಾಗಿಯಾಗದೇ, ಸಮಾಜವೇ ಭಾಗಿಯಾಗಿ ಅದನ್ನು ಸಂಭ್ರಮಿಸಿ, ಅಪರಾಧಕ್ಕೆ ತುತ್ತಾದವರನ್ನು ಇನ್ನಷ್ಟು ಕ್ಷೋಭೆಗೆ ಸಿಲುಕುವ ಕೆಲಸ ಮಾಡಿದಾಗ, ಅದಕ್ಕಾಗಿ ಏನಾದರೂ ಮಾಡಬೇಕು ಎಂದು ಎಲ್ಲರಿಗೂ ಅನಿಸುವುದು ಸಹಜ. ಆ ಅಪರಾಧಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳುವುದು, ಅಂತಹ ಅಪರಾಧಗಳು ಮತ್ತೊಮ್ಮೆ ಆಗಬಾರದು ಎಂದು ಸೂಕ್ತ ಕ್ರಮಗಳನ್ನು ಕೈಗೊಳ್ಳುವುದು, ಕೆಲವು ಸಲ ಆ ವಿಷಯಗಳ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವುದು ಎನ್ನುವ ಅನೇಕ ಕೆಲಸಗಳನ್ನು ಸಮಾಜದ ಕೆಲವು ಅಂಗಗಳು ಮಾಡುತ್ತವೆ.

ಅಂತಹದ್ದೇ ಒಂದು ಘೋರ ಅಪರಾಧದ ಬಗ್ಗೆ ನೊಂದಿರುವ ಯುವ ನಿರ್ದೇಶಕ ನಾಗೇಶ್ ಹೆಬ್ಬೂರು ಅವರು ‘ಪಬ್ಲಿಕ್ ಟಾಯ್ಲೆಟ್’ ಎಂಬ ಕಿರುಚಿತ್ರವನ್ನು ಮಾಡಿದ್ದಾರೆ. ಒಂದು ಸಾರ್ವಜನಿಕ ಶೌಚಾಲಯದಲ್ಲಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದಾಗ, ಆ ಕ್ರಿಯೆಯನ್ನು ಒಬ್ಬ ಕ್ಯಾಮೆರದಲ್ಲಿ ಸೆರೆ ಹಿಡಿದು, ಎಲ್ಲೆಡೆ ಹಂಚಲಾಗಿತ್ತು, ತದನಂತರ ಆ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದಳು ಎನ್ನಲಾದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದು ಸುದ್ದಿಯಾಗಿತ್ತು. ಇದೇ ವಿಷಯವನ್ನು ಇಟ್ಟುಕೊಂಡು ಈ ಕಿರುಚಿತ್ರವನ್ನು ಮಾಡಲಾಗಿದೆ.

ಇಂತಹ ವಿಷಯಗಳಲ್ಲಿ ಯಾರನ್ನು ಚಿತ್ರದ ಮುಖ್ಯಪಾತ್ರವನ್ನಾಗಿ ಮಾಡಬೇಕು ಎಂಬದು ಯಾವಾಗಲೂ ಒಂದು ಪ್ರಶ್ನೆ ಇರುತ್ತದೆ. ಈ ಚಿತ್ರದಲ್ಲಿ ತನ್ನ ಕ್ಯಾಮೆರದಲ್ಲಿ ಆ ದೃಶ್ಯವನ್ನು ಸೆರೆಹಿಡಿದ ವ್ಯಕ್ತಿಯನ್ನೇ ಪ್ರಮುಖಪಾತ್ರ ಮಾಡಲಾಗಿದೆ. ಅದು ಸರಿ ಕೂಡ. ಇಂತಹ ಘೋರ ಕೃತ್ಯಗಳನ್ನು ಎಸಗುತ್ತಾದರೂ ಏಕೆ ಎಂದು ತಿಳಿದು, ಅದರ ಬಗ್ಗೆ ಪರಿಹಾರ ಕಂಡುಕೊಳ್ಳಬೇಕಾದರೆ ಅಪರಾಧಿಯ ಮನೋಸ್ಥಿತಿಯನ್ನು ಪ್ರಮಾಣಿಕ ಪ್ರಯತ್ನ ಆಗಲೇಬೇಕು.

ಹೌದು ಈ ಚಿತ್ರದ ಉದ್ದೇಶವೂ ಪ್ರಾಮಾಣಿಕವಾಗಿಯೇ ಇದೆ. ಆದರೆ,

ಆ ಅಪರಾಧಿಯ ಮನೋಸ್ಥಿತಿಯನ್ನು ಅರಿಯುವ ಪ್ರಾಮಾಣಿಕ ಪ್ರಯತ್ನ ಕಾಣುವುದಿಲ್ಲ. ಅಂತಹ ಒಂದು ದೃಶ್ಯವನ್ನು ತನ್ನ ಫೋನಿನಲ್ಲಿ ಸೆರೆಹಿಡಿದು, ಎಲ್ಲೆಡೆ ವೈರಲ್ ಮಾಡಬೇಕಾದರೆ ಆ ವ್ಯಕ್ತಿ ಎಂಥವನಿರಬಹುದು, ಆ ಕ್ರೌರ್ಯ ಹೇಗೆ ಬಂದಿರಬಹುದು, ಆ ಮಟ್ಟದ ಅಸೂಕ್ಷ್ಮತೆಯನ್ನೆ ಹೇಗೆ ಅಳವಡಿಸಿಕೊಂಡಿರಬಹುದು, ಅದನ್ನು ವೈರಲ್ ಮಾಡಿ, ವಿಕೃತ ಖುಷಿಯನ್ನು ಅನುಭವಿಸಲು ಒಬ್ಬ ವ್ಯಕ್ತಿಗೆ ಹೇಗೆ ಸಾಧ್ಯ ಎಂಬ ಯಾವ ಪ್ರಶ್ನೆಗೂ ಉತ್ತರ ಸಿಗುವುದಿಲ್ಲ, ವಾಸ್ತವದಲ್ಲಿ ಆ ಪ್ರಶ್ನೆಗಳಿಗೆ ಉತ್ತರ ಹುಡುಕುವ ಗೋಜಿಗೇ ಹೋಗಿಲ್ಲ. ಆ ವಿಡಿಯೋ ವೈರಲ್ ಮಾಡಿ, ಬರುವ ಲೈಕ್‌ಗಳು, ವೀವ್ಸ್‌ಗಳಿಂದ ಅನುಂದತುಲಿತನಾಗುತ್ತದ್ದ ವ್ಯಕ್ತಿ, ಯಾರೋ ಒಬ್ಬ ಅದನ್ನು ಟೀಕಿಸಿದೊಡನೇ, ಈತನ ತಪ್ಪಿತಸ್ಥ ಭಾವನೆ ಜಾಗೃತವಾಗುತ್ತದೆ. ಅಲ್ಲಿಯವರೆಗೆ ಕಥೆಯನ್ನು ‘ಕಾಮೆಡಿ’ಯಾಗಿ ಚಿತ್ರಿಸಲು ಪ್ರಯತ್ನಿಸಿ, ತದನಂತರ ಚಿತ್ರದ ಟ್ರೀಟ್‌ಮೆಂಟ್‌ಅನ್ನು ಗಂಭೀರತೆಗೆ ಬದಲಾಯಿಸುತ್ತಾರೆ. ಆ ನಂತರ ಆ ತಪ್ಪಿತಸ್ಥ ಭಾವನೆಯೊಂದಿಗೆ ಅವನು ಹೇಗೆ ಒದ್ದಾಡುತ್ತಾನೆ ಎಂಬುದನ್ನು ತೋರಿಸುವ ಪ್ರಯತ್ನ ಮಾಡಲಾಗಿದೆ. ಆದರೆ ಅಲ್ಲಿಯೂ, ಯಾವುದೇ ಅಧ್ಯಯನ ಮಾಡದೇ, ವಿಷಯದ ಆಳಕ್ಕೆ ಇಳಿಯದೇ ನೋಡುಗರಿಗೆ ‘ಮನುಷ್ಯರ ಆಳ ಸಂವೇದನೆಗಳು ಮನುಷ್ಯತ್ವದ ಕಡೆಗೇ ಚಲಿಸುತ್ತಿರುಬೇಕು’ ಎಂಬ ಮಹತ್ತರ ಸಂದೇಶ ನೀಡುವ ಉದ್ದೇಶದಿಂದ ಚಿತ್ರವನ್ನು ಮಾಡಿದ್ದಾರೆ.

ಯಾವುದೇ ಒಂದು ಘಟನೆಯನ್ನು ಆಧಾರಿಸಿ ಸಿನೆಮಾ ಮಾಡಬೇಕಾದರೆ, ಅದನ್ನು ಸಿನೆಮಾದ ಚೌಕಟ್ಟಿನಲ್ಲಿ ಇಳಿಸಬೇಕಾಗುತ್ತದೆ. ಸಿನೆಮಾ ಎಂಬ ಮಾಧ್ಯಮದ ಇತಿಮಿತಿ ಮತ್ತು ಸಾಮರ್ಥ್ಯಗಳನ್ನು ಅರಿತು ಅದರನುಗುಣವಾಗಿ ಮಾಡಬೇಕಾಗುತ್ತದೆ. ಅದನ್ನೂ ಮಾಡದೆ, ವಿಷಯವಸ್ತುವಿನ ಆಳ ಅಧ್ಯವನ್ನೂ ಮಾಡದೇ, ಕೇವಲ ‘ಒಂದೊಳ್ಳೆ’ ಸಂದೇಶ ನೀಡಲೆಂದು ಸಿನೆಮಾ ಮಾಡುವುದೆಂದರೆ?


ಇದನ್ನೂ ಓದಿ; ಸಿನೆಮಾ ಮತ್ತು ಸಂದೇಶ: ‘ಒಂದೊಳ್ಳೇ ಮೆಸೇಜ್ ಇರೋ ಸಿನೆಮಾ ಮಾಡಬೇಕು’ ಎಂದರೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...