Homeಮುಖಪುಟಮೋದಿಗೆ ಅಂಬಾನಿ ‘ಕಂಪನಿ’ ಕೊಡುತ್ತಿದ್ದಾರೋ, ಅಥವಾ ಅಂಬಾನಿಗೇ ಮೋದಿ ‘ಕಂಪನಿ’ ಕೊಡುತ್ತಿದ್ದಾರೋ?

ಮೋದಿಗೆ ಅಂಬಾನಿ ‘ಕಂಪನಿ’ ಕೊಡುತ್ತಿದ್ದಾರೋ, ಅಥವಾ ಅಂಬಾನಿಗೇ ಮೋದಿ ‘ಕಂಪನಿ’ ಕೊಡುತ್ತಿದ್ದಾರೋ?

- Advertisement -
- Advertisement -

| ಮಲ್ಲನಗೌಡರ್ ಪಿ.ಕೆ |

ಕಂಡ ಕಂಡಲ್ಲಿ ಸಾಲ ಮಾಡಿಕೊಂಡು ತಿರುಗುವ, ಪರದೇಶಗಳಲ್ಲೂ ತೆರಿಗೆ ವಂಚನೆ ಮಾಡಿ ‘ವಿಶ್ವಗುರು’ ಭಾರತದ ಕೀರ್ತಿ ಪತಾಕೆ ಹಾರಿಸುವ, ಪಾಲುದಾರ ಕಂಪನಿಗಳಿಗೆ ಕೊಡಬೇಕಾದ ಹಣ ನೀಡದೇ ಸತಾಯಿಸುವ, ಜೈಲಿಗೆ ಹಾಕಬೇಕ್ತಾಗದೆ ಹುಷಾರ್ ಎಂದು ಸುಪ್ರಿಂಕೋರ್ಟ್‍ನಿಂದ ಉಗಿಸಿಕೊಳ್ಳುವ ಒಬ್ಬ ದುಷ್ಟ ಬ್ಯುಸಿನೆಸ್‍ಮ್ಯಾನ್ ಜೊತೆ ಪ್ರಧಾನಿ ನರೇಂದ್ರ ಮೋದಿಯ ಸ್ನೇಹ ಎಂಥದ್ದು? ವಿದೇಶ ಪ್ರವಾಸಗಳಲ್ಲಿ ಮೋದಿಗೆ ಅಂಬಾನಿ ಕಂಪನಿ ಕೊಟ್ಟರೋ, ಅಂಬಾನಿಗೇ ಕಂಪನಿ ಕೊಡಲು ಮೋದಿ ಟೂರ್ ಮಾಡಿದರೋ?

ಇವೆಲ್ಲ ಪ್ರಶ್ನೆಗಳನ್ನು ಮತದಾರರು ಈಗ ಎತ್ತಿಕೊಳ್ಳಲೇ ಬೇಕಾಗಿದೆ. ರಫೆಲ್ ಒಪ್ಪಂದದ ನಂತರ ಫ್ರಾನ್ಸ್ ಸರ್ಕಾರ ಅನಿಲ್ ಅಂಬಾನಿ ಕಂಪನಿಗೆ 1,124.9 ಕೋಟಿ ರೂಪಾಯಿ ತೆರಿಗೆ ವಿನಾಯಿತಿ ನೀಡಿರುವುದು ಬೆಳಕಿಗೆ ಬಂದಿದೆ.

      ರಕ್ಷಣಾ ಇಲಾಖೆಯ ‘ಡಿಫೆನ್ಸ್’ ಆಟ!

ಫ್ರಾನ್ಸಿನ ‘ಲೆ ಮಾಂಡೆ’ ಪತ್ರಿಕೆ ಇದನ್ನು ಪ್ರಕಟಿಸಿದ ನಂತರ, ‘ದಿ ವೈರ್’ ಅದನ್ನು ಭಾರತದಲ್ಲಿ ಪ್ರಕಟಿಸಿತು. ವಿಪಕ್ಷಗಳು ಈ ಕುರಿತು ಮೋದಿಯತ್ತ, ಸರ್ಕಾರದತ್ತ ಬೊಟ್ಟು ಮಾಡಿದವು. ಸರ್ಕಾರದ ನಡೆಯ ಬಗ್ಗೆ, ಪ್ರಧಾನಿ ವಿರುದ್ಧ ಟೀಕೆಗೆ ಪ್ರತ್ಯುತ್ತರ ನೀಡುವಲ್ಲಿ ಬಿಜೆಪಿಗಿಂತ ರಕ್ಷಣಾ ಸಚಿವಾಲಯಕ್ಕೇ ಹೆಚ್ಚು ಆಸಕ್ತಿಯಿರುವಂತಿದೆ!

‘ಡಿಫೆನ್ಸ್ ಗೆ ಇಳಿದ ರಕ್ಷಣಾ ಸಚಿವಾಲಯ, ‘ತೆರಿಗೆ ವಿನಾಯತಿ ಪಡೆದಿರುವುದನ್ನು ರಫೆಲ್ ಒಪ್ಪಂದದ ಜತೆ ಸಂಬಂಧ ಕಲ್ಪಿಸುವುದು ತಪ್ಪು. ಸರ್ಕಾರಕ್ಕೂ ಹಾಗೂ ತೆರಿಗೆ ವಿನಾಯತಿಗೂ ಸಂಬಂಧವಿಲ್ಲ’ ಎಂದು ಸರ್ಕಾರದ ಪರ, ಮೋದಿ ಪರ ‘ರಕ್ಷಣಾತ್ಮಕ’ ಬ್ಯಾಟಿಂಗ್ ಮಾಡಿದೆ! ರಫೆಲ್ ಡೀಲ್‍ನ ಅಧಿಕೃತ ಭಾಗವಾಗಿ ಅಥವಾ ರಫೆಲ್ ಕಾರಣಕ್ಕೇ ಅಂತ ಬಹಿರಂಗವಾಗಿ ಘೋಷಿಸಿ ತೆರಿಗೆ ವಿನಾಯತಿ ಮಾಡಲು ಫ್ರಾನ್ಸ್ ಸರ್ಕಾರವೂ ಮೂರ್ಖವಲ್ಲ, ಅಂಬಾನಿ-ಮೊದಿಯೂ ಮೂರ್ಖರಲ್ಲ. ಈ ಸರಳ ಸತ್ಯ  ರಕ್ಷಣಾ ಸಚಿವಾಲಯಕ್ಕೆ ತಿಳಿಯಲಿಲ್ಲವೇ? ಅಥವಾ ಸರ್ಕಾರವೇ ಒತ್ತಾಯದಿಂದ ಅದರ ಕಡೆ ಸ್ಟೇಟ್‍ಮೆಂಟ್ ಕೊಡೊಸಿತೇ?

ರಫೆಲ್‍ಗೆ ಪೂರಕವಾಗಿ, ಸಮಾಂತರವಾಗಿ ಅನಧಿಕೃತ ಡೀಲ್ ಏರ್ಪಟ್ಟ ಕಾರಣಕ್ಕೆ ತೆರಿಗೆ ವಿನಾಯತಿ ಮಾಡಲಾಗಿದೆ, ಇದಕ್ಕೆ ಪ್ರಧಾನಿಯ ಕೃಪೆ ಇದೆ ಎಂಬುದು ಆರೋಪ. ಹೀಗಿರುವಾಗ ಡಿಫೆನ್ಸ್ ಮಿನಿಸ್ಟ್ರಿ ಕುಂಬಳಕಾಯಿ ಕಳ್ಳನಂತೆ ವರ್ತಿಸಿತೇ?

  ಸಂಶಯಾತ್ಮಕ ಘಟನಾವಳಿಗಳು

ಮಾರ್ಚ್ 25, 2015: ಡಸಾಲ್ಟ್ ಬಿಡುಗಡೆ ಮಾಡಿದ ಅಧಿಕೃತ ವಿಡಿಯೋ ಪ್ರಕಾರ, ಎಚ್‍ಎಎಲ್, ಭಾರತೀಯ ರಕ್ಷಣಾ ಇಲಾಖೆ  ನಡುವಿನ ರಫೆಲ್ ಒಪ್ಪಂದದ ಮಾತುಕತೆಗಳು ಶೇ.95ರಷ್ಟು ಮುಗಿದಿದ್ದು, ಭಾರತ ವಾಯುಸೇನೆಗೆ 126 ರಫೆಲ್ ವಿಮಾನ ಪೂರೈಸಲು ಡಸಾಲ್ಟ್ ಖುಷಿ ಪಡುತ್ತದೆ.

ಮಾರ್ಚ್ 28, 2015: ಯುದ್ಧ ವಿಮಾನವಿರಲಿ, ಏರೋನಾಟಿಕ್ಸ್‍ನಲ್ಲಿ ಕಿಂಚಿತ್ ಅನುಭವ ಇಲ್ಲದ ಅನಿಲ್ ಅಂಬಾನಿಯ ರಿಲಾಯನ್ಸ್‍ನಿಂದ ಡಿಫೆನ್ಸ್ ಕಂಪನಿಯೊಂದು ರಿಜಿಸ್ಟರ್ ಆಗುತ್ತದೆ.

ಏಪ್ರಿಲ್ 8, 2015: ಪ್ರಧಾನಿ ಏಪ್ರಿಲ್ 9ರಿಂದ (ಮರುದಿನ) ಕೈಗೊಳ್ಳಲಿರುವ ಫ್ರಾನ್ಸ್ ಪ್ರವಾಸ ಕುರಿತು ವಿದೇಶಾಂಗ ಕಾರ್ಯದರ್ಶಿ ಎಸ್ ಜೈಶಂಕರ್ ಅವರಿಂದ ಪತ್ರಿಕಾಗೋಷ್ಠಿ. 126 ರಫೆಲ್ ವಿಮಾನ ಖರೀದಿ ಕುರಿತು ಡಸಾಲ್ಟ್, ಎಚ್‍ಎಎಲ್, ರಕ್ಷಣಾ ಇಲಾಖೆ ನಡುವೆ ಸುದೀರ್ಘ ಮತ್ತು ತಾಂತ್ರಿಕ ಚರ್ಚೆಗಳು ಮುಂದುವರೆದಿವೆ, ಪ್ರಧಾನಿ ಭೇಟಿಗೂ ಈ ವಿಷಯಕ್ಕೂ ಸಂಬಂಧವಿಲ್ಲ ಎಂದು ಹೇಳಿದ್ದರು.

ಅಂದರೆ, ಅಲ್ಲಿವರೆಗೂ ವಿದೇಶಾಂಗ ಇಲಾಖೆಗೂ ಎರಡೇ ದಿನದಲ್ಲಿ  ‘ಅಂಬಾನಿಯ ರಫೆಲ್’ ಹಾರುವುದೂ ಗೊತ್ತಿರಲಿಲ್ಲ.

ಏಪ್ರಿಲ್ 10: ಫ್ರಾನ್ಸಿನ ರಾಹಧಾನಿ ಪ್ಯಾರಿಸ್‍ನಲ್ಲಿ ಪ್ರಧಾನಿ ಮೋದಿಯಿಂದ ಸಂಪೂರ್ಣ ಮಾರ್ಪಾಡಾದ ರಫೆಲ್ ಒಪ್ಪಂದದ ಘೋಷಣೆ! ಎಚ್‍ಎಎಲ್ ಬದಲು ಅನಿಲ್ ಅಂಬಾನಿಯ ಕಂಪನಿ1 126ರ ಬದಲು 36 ರಫೆಲ್ ವಿಮಾನ! ಮೂಲ ದರಕ್ಕಿಂತ ಹೆಚ್ಚಿನ ದರದಲ್ಲಿ ಖರೀದಿಯ ಒಪ್ಪಂದ.

ಇದಾದ ಆರು ತಿಂಗಳಿಗೆ, ಫ್ರಾನ್ಸ್ ಸರ್ಕಾರದಿಂದ ಬಹು ವರ್ಷಗಳವರೆಗೂ ಇತ್ಯರ್ಥವಾಗದ ಅಂಬಾನಿಯ ತೆರಿಗೆ ವಂಚನೆ ಪ್ರಕರಣದ ಇತ್ಯರ್ಥ. ಅಂಬಾನಿಗೆ 1,100 ಕೋಟಿ ತೆರಿಗೆ ರಿಯಾಯಿತಿ!

ವಿದೇಶದಲ್ಲೂ ತೆರಿಗೆ ವಂಚಿಸಿದ ಅಂಬಾನಿಗೆ ಮೋದಿ ‘ಕಂಪನಿ’ ಕೊಡುತ್ತಿರುವುದೇಕೆ? ಸ್ವೀಡನ್ನಿನ ಎರಿಕ್ಸನ್ ಕಂನಿಗೆ ಕೊಡಬೇಕಿದ್ದ 462 ಕೋಟಿ ರೂ.ಗಳನ್ನು ನೀಡದೇ ಸತಾಯಿಸಿ, ಪದೇ ಪದೇ ಕೋರ್ಟಿಗೆ ಗೈರಾಗಿ, ಅಂತಿಮದಲ್ಲಿ ಜೈಲಿಗೆ ಕಾಕಬೇಕಾಗ್ತದೆ ಎಂದು ಸುಪ್ರಿಂಕೋರ್ಟಿಂದ ಎಚ್ಚರಿಕೆ ಪಡೆದಿದ್ದ ದಗಲ್ಬಾಜಿ ಅನಿಲ್ ಅಂಬಾನಿಯಂ ಮನುಷ್ಯನನ್ನು ರಫೆಲ್ ಡೀಲ್‍ನಲ್ಲಿ ಸೇರಿಸಿಕೊಂಡಿದ್ದು ಏಕೆ?

ಚೌಕಿದಾರ್ ಮತ್ತು ಅಂಬಾನಿ ನಡುವೆ ಬರೀ ‘ಚಾಯ್’ ಪಾರ್ಟಿಗಳು ನಡೆಯುತ್ತಿವೆಯೋ ಅಥವಾ ಪರಸ್ಪರ ಹಂಚಿ ತಿನ್ನುವ ಡೀಲ್ ನಡೆದಿವೆಯೋ?

ಕೊನೆಯಲ್ಲಿ ಕೇಳಬೇಕಾದ ಪ್ರಶ್ನೆ: ಮೋದಿಗೆ ಅಂಬಾನಿ ‘ಕಂಪನಿ’ ಕೊಡುತ್ತಿದ್ದಾರೋ, ಅಂಬಾನಿಗೇ ಮೋದಿ ‘ಕಂಪನಿ’ ಕೊಡುತ್ತಿದ್ದಾರೋ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...