Homeಮುಖಪುಟಮೋದಿ-ಆದಿತ್ಯನಾಥ್ ವಿರುದ್ದ ಟೀಕೆ: 293 ಭಾರತೀಯರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು!

ಮೋದಿ-ಆದಿತ್ಯನಾಥ್ ವಿರುದ್ದ ಟೀಕೆ: 293 ಭಾರತೀಯರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು!

ಪೋಸ್ಟರ್‌ಗಳನ್ನು ಹಿಡಿದುಕೊಳ್ಳುವುದು, ಅಂಟಿಸುವುದು, ಘೋಷಣೆಗಳನ್ನು ಕೂಗುವುದು, ಸಾಮಾಜಿಕ  ಜಾಲತಾಣದಲ್ಲಿ ಬರೆಯುವುದು ಸಹ ’ದೇಶದ್ರೋಹ’ ಎಂದು ಪರಿಣಿಸಲಾಗಿದೆ

- Advertisement -
- Advertisement -

ಕಳೆದ ಒಂದು ದಶಕದಲ್ಲಿ ರಾಜಕಾರಣಿಗಳು ಮತ್ತು ಸರ್ಕಾರಗಳ ವಿರುದ್ದ ಟೀಕೆ ಮಾಡಿರುವುದಕ್ಕೆ ಸಂಬಂಧಿಸಿದಂತೆ 405 ಭಾರತೀಯರ ವಿರುದ್ಧ ದೇಶದ್ರೋಹ ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ 96% ಪ್ರಕರಣಗಳು ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದಾಖಲಾಗಿರುವುದಾಗಿದೆ.

ಕಾನೂನು ಸುದ್ದಿ ವೆಬ್‌ಸೈಟ್ ಆಗಿರುವ ’ಆರ್ಟಿಕಲ್ 14’ ಜನವರಿ 1, 2010 ರಿಂದ 2020 ರ ಡಿಸೆಂಬರ್ 31 ರವರೆಗೆ ದಾಖಲಾಗಿರುವ ಎಲ್ಲಾ ದೇಶದ್ರೋಹ ಪ್ರಕರಣಗಳನ್ನು ಕಲೆಹಾಕದೆ. ಆದರೆ ವಿಪರ್ಯಾಸವೆಂದರೆ ಸರ್ಕಾರದ ವಿರುದ್ದದ ಟೀಕೆಗಳು ದೇಶದ್ರೋಹ ಆಗುವುದಿಲ್ಲ ಎಂದು ಕೋರ್ಟುಗಳು ತೀರ್ಪಿತ್ತಿವೆ. ಆದರೂ ದೇಶದ್ರೋಹ ಪ್ರಕರಣಗಳನ್ನು ದಾಖಲಿಸುವ ಪರಿಪಾಠ ಹೆಚ್ಚಾಗಿದೆ.

’ಆರ್ಟಿಕಲ್ 14’ ಸಂಗ್ರಹಿಸಿದ ದತ್ತಾಂಶದ ವಿಶ್ಲೇಷಣೆಯು, “ಪೋಸ್ಟರ್‌ಗಳನ್ನು ಹಿಡಿದುಕೊಳ್ಳುವುದು, ಅಂಟಿಸುವುದು, ಘೋಷಣೆಗಳನ್ನು ಕೂಗುವುದು, ಸಾಮಾಜಿಕ  ಜಾಲತಾಣದಲ್ಲಿ ಬರೆಯುವುದು ಮತ್ತು ಪರಸ್ಪರ ವೈಯಕ್ತಿಕ ಸಂಭಾಷಣೆಗಳನ್ನು ಸಹ ’ದೇಶದ್ರೋಹ’ ಎಂದು ಪರಿಣಿಸಲಾಗಿದೆ” ಎಂದು ಹೇಳಿದೆ.

ಇದನ್ನೂ ಓದಿ: ರೈತರ ವಿರುದ್ಧವೂ ಝಳಪಿಸಿದ ಹತಾರ: ’ದೇಶದ್ರೋಹ’ವೆಂಬ ಹಳೆಯ ಹುನ್ನಾರ

ಯುಪಿಎಯ ಎರಡನೆ ಅವಧಿಗೆ ಹೋಲಿಸಿದರೆ ಎನ್‌ಡಿಎ ಆಡಳಿತದಲ್ಲಿ ದೇಶದ್ರೋಹ ಪ್ರಕರಣಗಳನ್ನು ದಾಖಲಿಸುವುದು 28% ಹೆಚ್ಚಾಗಿದೆ. ಸಿಎಎ-ಎನ್‌ಆರ್‌ಸಿ ಆಂದೋಲನಗಳ ಸಂದರ್ಭದಲ್ಲಿ, ಹತ್ರಾಸ್ ಅತ್ಯಾಚಾರದ ನಂತರ ಹಲವಾರು ದೇಶದ್ರೋಹದ ಪ್ರಕರಣಗಳು ದಾಖಲಾಗಿವೆ.

ಮೋದಿ ಸರ್ಕಾರದ ಮೊದಲ ಆರು ವರ್ಷಗಳಲ್ಲಿ 519 ದೇಶದ್ರೋಹ ಪ್ರಕರಣಗಳು ದಾಖಲಾಗಿದೆ. 2010 ರಿಂದ ಮೇ 2014 ರವರೆಗೆ ಯುಪಿಎ ಸರ್ಕಾರದ ಅವಧಿಯಲ್ಲಿ 279 ದೇಶದ್ರೋಹ ಪ್ರಕರಣಗಳು ದಾಖಲಾಗಿದ್ದವು. ಈ 279 ಪ್ರಕರಣಗಳಲ್ಲಿ 39% ಪ್ರಕರಣಗಳು ತಮಿಳುನಾಡಿನ ಕೂಡಂಕುಲಂನ ಪರಮಾಣು ವಿದ್ಯುತ್ ಸ್ಥಾವರ ವಿರುದ್ಧ ನಡೆದ ಹೋರಾಟ ನಡೆದಾಗ ದಾಖಲಾದವುಗಳು ಮತ್ತು ಭಾರತದ ಕೆಲವು ಪ್ರದೇಶಗಳಲ್ಲಿ ಮಾವೋವಾದದ ಹೆಸರಲ್ಲಿ ದಾಖಲಾದ ಪ್ರಕರಣಗಳಾಗಿದೆ.

ಪ್ರಸ್ತುತ ಸಂಗ್ರಹಿಸಿದ ಮಾಹಿತಿಯಂತೆ ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ 6 ದೇಶದ್ರೋಹದ ಪ್ರಕರಣಗಳನ್ನು ದಾಖಲಿಸಲಾಗಿದೆ. ಹತ್ರಾಸ್ ಅತ್ಯಾಚಾರದ ನಂತರ 22 ಪ್ರಕರಣಗಳು ಮತ್ತು ಸಿಎಎ-ಎನ್ಆರ್‌ಸಿ ಪ್ರತಿಭಟನೆಯ ಸಂದರ್ಭದಲ್ಲಿ 25 ದೇಶದ್ರೋಹದ ಪ್ರಕರಣಗಳು ದಾಖಲಾಗಿವೆ. ಇವುಗಳು ಮಾತ್ರವಲ್ಲದೆ, ಪುಲ್ವಾಮಾ ದಾಳಿಯ ನಂತರ 27 ಪ್ರಕರಣಗಳು ದಾಖಲಾಗಿವೆ. ಸಿಎಎ-ಎನ್ಆರ್‌ಸಿ ವಿರುದ್ದ ಪ್ರತಿಭಟನೆ ನಡೆದಾಗ ದಾಖಲಾದ 25 ಪ್ರಕರಣಗಳಲ್ಲಿ 22 ಪ್ರಕರಣಗಳು ಬಿಜೆಪಿ ಆಡಳಿತದ ರಾಜ್ಯಗಳಲ್ಲೆ ದಾಖಲಾಗಿವೆ. ಪುಲ್ವಾಮಾ ದಾಳಿಯ ನಂತರ ದಾಖಲಾದ 27 ಪ್ರಕರಣಗಳಲ್ಲಿ 26 ಪ್ರಕರಣಗಳು ದಾಖಲಾಗಿದ್ದು ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ.

ಇದನ್ನೂ ಓದಿ: ದೇಶದ್ರೋಹ ಎನ್ನಲಾಗುವುದಿಲ್ಲ: ಯುಎಪಿಎ ಅಡಿ ಬಂಧಿತರಾಗಿದ್ದ ಕೇರಳದ ಯುವಕರಿಗೆ ಜಾಮೀನು

ಬಿಹಾರ, ಕರ್ನಾಟಕ, ತಮಿಳುನಾಡು, ಉತ್ತರ ಪ್ರದೇಶ ಮತ್ತು ಜಾರ್ಖಂಡ್‌ ಒಟ್ಟು ಐದು ರಾಜ್ಯಗಳಲ್ಲಿ ಕಳೆದ 10 ವರ್ಷಗಳಲ್ಲಿ 65% ದೇಶದ್ರೋಹ ಪ್ರಕರಣಗಳನ್ನು ದಾಖಲಿಸಲಾಗಿದೆ. ಇವುಗಳಲ್ಲಿ ಹೆಚ್ಚಿನ ರಾಜ್ಯಗಳು ಬಿಜೆಪಿ ತೆಕ್ಕೆಯಲ್ಲಿದೆ. ಇವುಗಳಲ್ಲಿ 30% ಪ್ರಕರಣಗಳು, ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ(UAPA), ಸಾರ್ವಜನಿಕ ಆಸ್ತಿಗೆ ಹಾನಿ (ತಡೆಗಟ್ಟುವಿಕೆ) ಕಾಯ್ದೆ, ಮತ್ತು ರಾಷ್ಟ್ರೀಯ ಗೌರವ ಮತ್ತು ಹಿತಾಸಕ್ತಿಗೆ ಹಾನಿಯಾಗುವುದನ್ನು ತಡೆಗಟ್ಟುವ ಕಾಯಿದೆಗಳನ್ನು ದೇಶದ್ರೋಹದ ಆರೋಪದ ಜೊತೆಗೆ ದಾಖಲಿಸಲಾಗಿದೆ.

ದೇಶದ್ರೋಹ ಎಂಬುದು ತನ್ನ ವಿರುದ್ದ ಟೀಕೆ ಮತ್ತು ವಿರೋಧ ಮಾಡುವವರ ವಿರುದ್ದ ದಾಖಲಿಸಬಹುದಾದ ಸರ್ಕಾರಗಳಿಗೆ ಅತಿ ಪ್ರಿಯವಾದ ಒಂದು ಕಾನೂನಾಗಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ಕಾಂಗ್ರೆಸ್ ನೇತೃತ್ವದ ಯುಪಿಎ ಎರಡೂ ಆಡಳಿತದ ಅವಧಿಯಲ್ಲಿ ಇದು ಸಂಭವಿಸಿದೆ. ಅಸೀಮ್ ತ್ರಿವೇದಿ, ಅರುಂಧತಿ ರಾಯ್ ಯುಪಿಎ ಸರ್ಕಾರವು ದೇಶದ್ರೋಹಿ ಎಂದು ಹಣೆಪಟ್ಟಿ ಕಟ್ಟಿದ ಕೆಲವು ವ್ಯಕ್ತಿಗಳಾಗಿದ್ದಾರೆ.

ಇದನ್ನೂ ಓದಿ: ತುರ್ತು ಪರಿಸ್ಥಿತಿಯ ಆರಾಧಕರ ಮುದ್ದಿನ ಕಾನೂನು-‘ದೇಶದ್ರೋಹ’

ಗಣರಾಜ್ಯೋತ್ಸವದಂದು ಸಂಭವಿಸಿದ ಅಹಿತಕರ ಘಟನೆಯ ನಂತರ ಕಾಂಗ್ರೆಸ್ ಸಂಸದ ಶಶಿ ತರೂರ್, ಇಂಡಿಯಾ ಟುಡೇ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಮತ್ತು ನ್ಯಾಷನಲ್‌ ಹೆರಾಲ್ಡ್‌ನ ಹಿರಿಯ ಸಲಹಾ ಸಂಪಾದಕ ಮೃಣಾಲ್ ಪಾಂಡೆ ಮುಂತಾದವರ ಮೇಲೆ ದೇಶದ್ರೋಹದ ಪ್ರಕರಣಗಳು ದಾಖಲಾಗಿದೆ. ಇವರುಗಳ ಜೊತೆಗೆ, ನ್ಯಾಷನಲ್ ಹೆರಾಲ್ಡ್‌ನ ಸಂಪಾದಕ ಜಾಫರ್ ಆಗಾ, ದಿ ಕಾರವಾನ್‌ನ ಸಂಸ್ಥಾಪಕ ಮತ್ತು ಸಂಪಾದಕ ಪರೇಶ್ ನಾಥ್ ಮತ್ತು ಅನಂತ್ ನಾಥ್, ಮತ್ತು ಕಾರ್ಯನಿರ್ವಾಹಕ ಸಂಪಾದಕ ವಿನೋದ್ ಕೆ ಜೋಸ್ ಅವರ ಮೇಲೆ ಕೂಡಾ ಸುಳ್ಳು ಸುದ್ದಿಗಳನ್ನು ವರದಿ ಮಾಡಿದ್ದಾರೆ ಎಂಬ ಆರೋಪದ ಮೇಲೆ ದೇಶದ್ರೋಹದ ಪ್ರಕರಣಗಳನ್ನು ದಾಖಲಿಸಲಾಗಿದೆ.

‘ಆರ್ಟಿಕಲ್ 14’ ವೆಬ್‌ಸೈಟ್ ಪ್ರಕಾರ, ಪ್ರಧಾನಿ ಮೋದಿಯವರ ವಿರುದ್ಧ ‘ಅನುಚಿತ’ ಅಥವಾ ‘ಅವಮಾನಕರ’ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಸುಮಾರು 149 ಜನರ ಮೇಲೆ ದೇಶದ್ರೋಹ ಪ್ರಕರಣ ದಾಖಲಾಗಿದೆ. ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಟೀಕಿಸಿದ್ದಕ್ಕಾಗಿ ಒಟ್ಟು 144 ಪ್ರಕರಣಗಳು ದಾಖಲಾಗಿದೆ.

ಇದನ್ನೂ ಓದಿ: ತಿಲಕ್‌ ಮತ್ತು ಗಾಂಧಿ ಮೇಲೆ ದೇಶದ್ರೋಹದ ಪ್ರಕರಣಗಳು – ಮೃದುಲಾ ಮುಖರ್ಜಿ ಭಾಷಣ ಭಾಗ-2

ರಾಜದ್ರೋಹ ಕಾಯ್ದೆಯ ಇತಿಹಾಸ : ತಿಲಕ್‌ & ಗಾಂಧಿ ಮೇಲೆ ದೇಶದ್ರೋಹದ ಪ್ರಕರಣ ದಾಖಲಾಗಿತ್ತೇಕೆ?

ಕೃಪೆ: ಜನಪತ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...