Homeಮುಖಪುಟಮೋದಿ-ಆದಿತ್ಯನಾಥ್ ವಿರುದ್ದ ಟೀಕೆ: 293 ಭಾರತೀಯರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು!

ಮೋದಿ-ಆದಿತ್ಯನಾಥ್ ವಿರುದ್ದ ಟೀಕೆ: 293 ಭಾರತೀಯರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು!

ಪೋಸ್ಟರ್‌ಗಳನ್ನು ಹಿಡಿದುಕೊಳ್ಳುವುದು, ಅಂಟಿಸುವುದು, ಘೋಷಣೆಗಳನ್ನು ಕೂಗುವುದು, ಸಾಮಾಜಿಕ  ಜಾಲತಾಣದಲ್ಲಿ ಬರೆಯುವುದು ಸಹ ’ದೇಶದ್ರೋಹ’ ಎಂದು ಪರಿಣಿಸಲಾಗಿದೆ

- Advertisement -
- Advertisement -

ಕಳೆದ ಒಂದು ದಶಕದಲ್ಲಿ ರಾಜಕಾರಣಿಗಳು ಮತ್ತು ಸರ್ಕಾರಗಳ ವಿರುದ್ದ ಟೀಕೆ ಮಾಡಿರುವುದಕ್ಕೆ ಸಂಬಂಧಿಸಿದಂತೆ 405 ಭಾರತೀಯರ ವಿರುದ್ಧ ದೇಶದ್ರೋಹ ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ 96% ಪ್ರಕರಣಗಳು ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದಾಖಲಾಗಿರುವುದಾಗಿದೆ.

ಕಾನೂನು ಸುದ್ದಿ ವೆಬ್‌ಸೈಟ್ ಆಗಿರುವ ’ಆರ್ಟಿಕಲ್ 14’ ಜನವರಿ 1, 2010 ರಿಂದ 2020 ರ ಡಿಸೆಂಬರ್ 31 ರವರೆಗೆ ದಾಖಲಾಗಿರುವ ಎಲ್ಲಾ ದೇಶದ್ರೋಹ ಪ್ರಕರಣಗಳನ್ನು ಕಲೆಹಾಕದೆ. ಆದರೆ ವಿಪರ್ಯಾಸವೆಂದರೆ ಸರ್ಕಾರದ ವಿರುದ್ದದ ಟೀಕೆಗಳು ದೇಶದ್ರೋಹ ಆಗುವುದಿಲ್ಲ ಎಂದು ಕೋರ್ಟುಗಳು ತೀರ್ಪಿತ್ತಿವೆ. ಆದರೂ ದೇಶದ್ರೋಹ ಪ್ರಕರಣಗಳನ್ನು ದಾಖಲಿಸುವ ಪರಿಪಾಠ ಹೆಚ್ಚಾಗಿದೆ.

’ಆರ್ಟಿಕಲ್ 14’ ಸಂಗ್ರಹಿಸಿದ ದತ್ತಾಂಶದ ವಿಶ್ಲೇಷಣೆಯು, “ಪೋಸ್ಟರ್‌ಗಳನ್ನು ಹಿಡಿದುಕೊಳ್ಳುವುದು, ಅಂಟಿಸುವುದು, ಘೋಷಣೆಗಳನ್ನು ಕೂಗುವುದು, ಸಾಮಾಜಿಕ  ಜಾಲತಾಣದಲ್ಲಿ ಬರೆಯುವುದು ಮತ್ತು ಪರಸ್ಪರ ವೈಯಕ್ತಿಕ ಸಂಭಾಷಣೆಗಳನ್ನು ಸಹ ’ದೇಶದ್ರೋಹ’ ಎಂದು ಪರಿಣಿಸಲಾಗಿದೆ” ಎಂದು ಹೇಳಿದೆ.

ಇದನ್ನೂ ಓದಿ: ರೈತರ ವಿರುದ್ಧವೂ ಝಳಪಿಸಿದ ಹತಾರ: ’ದೇಶದ್ರೋಹ’ವೆಂಬ ಹಳೆಯ ಹುನ್ನಾರ

ಯುಪಿಎಯ ಎರಡನೆ ಅವಧಿಗೆ ಹೋಲಿಸಿದರೆ ಎನ್‌ಡಿಎ ಆಡಳಿತದಲ್ಲಿ ದೇಶದ್ರೋಹ ಪ್ರಕರಣಗಳನ್ನು ದಾಖಲಿಸುವುದು 28% ಹೆಚ್ಚಾಗಿದೆ. ಸಿಎಎ-ಎನ್‌ಆರ್‌ಸಿ ಆಂದೋಲನಗಳ ಸಂದರ್ಭದಲ್ಲಿ, ಹತ್ರಾಸ್ ಅತ್ಯಾಚಾರದ ನಂತರ ಹಲವಾರು ದೇಶದ್ರೋಹದ ಪ್ರಕರಣಗಳು ದಾಖಲಾಗಿವೆ.

ಮೋದಿ ಸರ್ಕಾರದ ಮೊದಲ ಆರು ವರ್ಷಗಳಲ್ಲಿ 519 ದೇಶದ್ರೋಹ ಪ್ರಕರಣಗಳು ದಾಖಲಾಗಿದೆ. 2010 ರಿಂದ ಮೇ 2014 ರವರೆಗೆ ಯುಪಿಎ ಸರ್ಕಾರದ ಅವಧಿಯಲ್ಲಿ 279 ದೇಶದ್ರೋಹ ಪ್ರಕರಣಗಳು ದಾಖಲಾಗಿದ್ದವು. ಈ 279 ಪ್ರಕರಣಗಳಲ್ಲಿ 39% ಪ್ರಕರಣಗಳು ತಮಿಳುನಾಡಿನ ಕೂಡಂಕುಲಂನ ಪರಮಾಣು ವಿದ್ಯುತ್ ಸ್ಥಾವರ ವಿರುದ್ಧ ನಡೆದ ಹೋರಾಟ ನಡೆದಾಗ ದಾಖಲಾದವುಗಳು ಮತ್ತು ಭಾರತದ ಕೆಲವು ಪ್ರದೇಶಗಳಲ್ಲಿ ಮಾವೋವಾದದ ಹೆಸರಲ್ಲಿ ದಾಖಲಾದ ಪ್ರಕರಣಗಳಾಗಿದೆ.

ಪ್ರಸ್ತುತ ಸಂಗ್ರಹಿಸಿದ ಮಾಹಿತಿಯಂತೆ ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ 6 ದೇಶದ್ರೋಹದ ಪ್ರಕರಣಗಳನ್ನು ದಾಖಲಿಸಲಾಗಿದೆ. ಹತ್ರಾಸ್ ಅತ್ಯಾಚಾರದ ನಂತರ 22 ಪ್ರಕರಣಗಳು ಮತ್ತು ಸಿಎಎ-ಎನ್ಆರ್‌ಸಿ ಪ್ರತಿಭಟನೆಯ ಸಂದರ್ಭದಲ್ಲಿ 25 ದೇಶದ್ರೋಹದ ಪ್ರಕರಣಗಳು ದಾಖಲಾಗಿವೆ. ಇವುಗಳು ಮಾತ್ರವಲ್ಲದೆ, ಪುಲ್ವಾಮಾ ದಾಳಿಯ ನಂತರ 27 ಪ್ರಕರಣಗಳು ದಾಖಲಾಗಿವೆ. ಸಿಎಎ-ಎನ್ಆರ್‌ಸಿ ವಿರುದ್ದ ಪ್ರತಿಭಟನೆ ನಡೆದಾಗ ದಾಖಲಾದ 25 ಪ್ರಕರಣಗಳಲ್ಲಿ 22 ಪ್ರಕರಣಗಳು ಬಿಜೆಪಿ ಆಡಳಿತದ ರಾಜ್ಯಗಳಲ್ಲೆ ದಾಖಲಾಗಿವೆ. ಪುಲ್ವಾಮಾ ದಾಳಿಯ ನಂತರ ದಾಖಲಾದ 27 ಪ್ರಕರಣಗಳಲ್ಲಿ 26 ಪ್ರಕರಣಗಳು ದಾಖಲಾಗಿದ್ದು ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ.

ಇದನ್ನೂ ಓದಿ: ದೇಶದ್ರೋಹ ಎನ್ನಲಾಗುವುದಿಲ್ಲ: ಯುಎಪಿಎ ಅಡಿ ಬಂಧಿತರಾಗಿದ್ದ ಕೇರಳದ ಯುವಕರಿಗೆ ಜಾಮೀನು

ಬಿಹಾರ, ಕರ್ನಾಟಕ, ತಮಿಳುನಾಡು, ಉತ್ತರ ಪ್ರದೇಶ ಮತ್ತು ಜಾರ್ಖಂಡ್‌ ಒಟ್ಟು ಐದು ರಾಜ್ಯಗಳಲ್ಲಿ ಕಳೆದ 10 ವರ್ಷಗಳಲ್ಲಿ 65% ದೇಶದ್ರೋಹ ಪ್ರಕರಣಗಳನ್ನು ದಾಖಲಿಸಲಾಗಿದೆ. ಇವುಗಳಲ್ಲಿ ಹೆಚ್ಚಿನ ರಾಜ್ಯಗಳು ಬಿಜೆಪಿ ತೆಕ್ಕೆಯಲ್ಲಿದೆ. ಇವುಗಳಲ್ಲಿ 30% ಪ್ರಕರಣಗಳು, ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ(UAPA), ಸಾರ್ವಜನಿಕ ಆಸ್ತಿಗೆ ಹಾನಿ (ತಡೆಗಟ್ಟುವಿಕೆ) ಕಾಯ್ದೆ, ಮತ್ತು ರಾಷ್ಟ್ರೀಯ ಗೌರವ ಮತ್ತು ಹಿತಾಸಕ್ತಿಗೆ ಹಾನಿಯಾಗುವುದನ್ನು ತಡೆಗಟ್ಟುವ ಕಾಯಿದೆಗಳನ್ನು ದೇಶದ್ರೋಹದ ಆರೋಪದ ಜೊತೆಗೆ ದಾಖಲಿಸಲಾಗಿದೆ.

ದೇಶದ್ರೋಹ ಎಂಬುದು ತನ್ನ ವಿರುದ್ದ ಟೀಕೆ ಮತ್ತು ವಿರೋಧ ಮಾಡುವವರ ವಿರುದ್ದ ದಾಖಲಿಸಬಹುದಾದ ಸರ್ಕಾರಗಳಿಗೆ ಅತಿ ಪ್ರಿಯವಾದ ಒಂದು ಕಾನೂನಾಗಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ಕಾಂಗ್ರೆಸ್ ನೇತೃತ್ವದ ಯುಪಿಎ ಎರಡೂ ಆಡಳಿತದ ಅವಧಿಯಲ್ಲಿ ಇದು ಸಂಭವಿಸಿದೆ. ಅಸೀಮ್ ತ್ರಿವೇದಿ, ಅರುಂಧತಿ ರಾಯ್ ಯುಪಿಎ ಸರ್ಕಾರವು ದೇಶದ್ರೋಹಿ ಎಂದು ಹಣೆಪಟ್ಟಿ ಕಟ್ಟಿದ ಕೆಲವು ವ್ಯಕ್ತಿಗಳಾಗಿದ್ದಾರೆ.

ಇದನ್ನೂ ಓದಿ: ತುರ್ತು ಪರಿಸ್ಥಿತಿಯ ಆರಾಧಕರ ಮುದ್ದಿನ ಕಾನೂನು-‘ದೇಶದ್ರೋಹ’

ಗಣರಾಜ್ಯೋತ್ಸವದಂದು ಸಂಭವಿಸಿದ ಅಹಿತಕರ ಘಟನೆಯ ನಂತರ ಕಾಂಗ್ರೆಸ್ ಸಂಸದ ಶಶಿ ತರೂರ್, ಇಂಡಿಯಾ ಟುಡೇ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಮತ್ತು ನ್ಯಾಷನಲ್‌ ಹೆರಾಲ್ಡ್‌ನ ಹಿರಿಯ ಸಲಹಾ ಸಂಪಾದಕ ಮೃಣಾಲ್ ಪಾಂಡೆ ಮುಂತಾದವರ ಮೇಲೆ ದೇಶದ್ರೋಹದ ಪ್ರಕರಣಗಳು ದಾಖಲಾಗಿದೆ. ಇವರುಗಳ ಜೊತೆಗೆ, ನ್ಯಾಷನಲ್ ಹೆರಾಲ್ಡ್‌ನ ಸಂಪಾದಕ ಜಾಫರ್ ಆಗಾ, ದಿ ಕಾರವಾನ್‌ನ ಸಂಸ್ಥಾಪಕ ಮತ್ತು ಸಂಪಾದಕ ಪರೇಶ್ ನಾಥ್ ಮತ್ತು ಅನಂತ್ ನಾಥ್, ಮತ್ತು ಕಾರ್ಯನಿರ್ವಾಹಕ ಸಂಪಾದಕ ವಿನೋದ್ ಕೆ ಜೋಸ್ ಅವರ ಮೇಲೆ ಕೂಡಾ ಸುಳ್ಳು ಸುದ್ದಿಗಳನ್ನು ವರದಿ ಮಾಡಿದ್ದಾರೆ ಎಂಬ ಆರೋಪದ ಮೇಲೆ ದೇಶದ್ರೋಹದ ಪ್ರಕರಣಗಳನ್ನು ದಾಖಲಿಸಲಾಗಿದೆ.

‘ಆರ್ಟಿಕಲ್ 14’ ವೆಬ್‌ಸೈಟ್ ಪ್ರಕಾರ, ಪ್ರಧಾನಿ ಮೋದಿಯವರ ವಿರುದ್ಧ ‘ಅನುಚಿತ’ ಅಥವಾ ‘ಅವಮಾನಕರ’ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಸುಮಾರು 149 ಜನರ ಮೇಲೆ ದೇಶದ್ರೋಹ ಪ್ರಕರಣ ದಾಖಲಾಗಿದೆ. ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಟೀಕಿಸಿದ್ದಕ್ಕಾಗಿ ಒಟ್ಟು 144 ಪ್ರಕರಣಗಳು ದಾಖಲಾಗಿದೆ.

ಇದನ್ನೂ ಓದಿ: ತಿಲಕ್‌ ಮತ್ತು ಗಾಂಧಿ ಮೇಲೆ ದೇಶದ್ರೋಹದ ಪ್ರಕರಣಗಳು – ಮೃದುಲಾ ಮುಖರ್ಜಿ ಭಾಷಣ ಭಾಗ-2

ರಾಜದ್ರೋಹ ಕಾಯ್ದೆಯ ಇತಿಹಾಸ : ತಿಲಕ್‌ & ಗಾಂಧಿ ಮೇಲೆ ದೇಶದ್ರೋಹದ ಪ್ರಕರಣ ದಾಖಲಾಗಿತ್ತೇಕೆ?

ಕೃಪೆ: ಜನಪತ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...