Homeಕರ್ನಾಟಕರಾಯಚೂರಿನಲ್ಲಿ ಅನಾವರಣಗೊಂಡ ಅಲೆಮಾರಿಗಳ ಸಾಂಸ್ಕೃತಿಕ ಕಲೆ

ರಾಯಚೂರಿನಲ್ಲಿ ಅನಾವರಣಗೊಂಡ ಅಲೆಮಾರಿಗಳ ಸಾಂಸ್ಕೃತಿಕ ಕಲೆ

- Advertisement -
- Advertisement -

ಅವರು ಅಲೆಮಾರಿಗಳು, ಒಂದು ಕಡೆ ನಿಂತವರಲ್ಲ, ನಿಲ್ಲುವವರೂ ಅಲ್ಲ, ನೆಲೆ ನಿಂತರೂ ಒಂದು ಹಗಲು ಒಂದು ರಾತ್ರಿ ಮಾತ್ರ. ಮತ್ತೆ ಮನಸ್ಸು ಹರಿದತ್ತ ಹೆಜ್ಜೆ ಹಾಕುತ್ತಲೇ ಬದುಕು ಕಟ್ಟಿಕೊಂಡವರು. ಆಧುನಿಕತೆ ವ್ಯಾಪಿಸಿದಂತೆ ಈ ಅಲೆಮಾರಿ ಕುಟುಂಬಗಳು ನೆಲೆ ಕಂಡುಕೊಂಡು ಅವರ ಮಕ್ಕಳು ಶಾಲೆಯ ಮುಖವನ್ನು ಕಾಣುವಂತೆ ಆಗಿದೆ. ಇಂತಹ ಅಲೆಮಾರಿ ಸಮುದಾಯ ತಮ್ಮ ಸಾಂಸ್ಕೃತಿಕ ಕಥನಗಳನ್ನು ಕಟ್ಟಿಕೊಡುವ, ಸಾಂಸ್ಕೃತಿಕ ಕಲೆಗಳನ್ನು ನಗರೀಕರಣದ ಮುಂದೆ ಅನಾವರಣಗೊಳಿಸುವ ಕೆಲಸ ರಾಯಚೂರಿನಲ್ಲಿ ನಡೆಯಿತು. ನೆಲಮೂಲ ಸಂಸ್ಕೃತಿಯ ಒಂದೊಂದು ಕಲೆಯೂ ನಗರೀಕರಣಕ್ಕೆ ಸವಾಲೊಡ್ಡುವ ರೀತಿಯಲ್ಲಿ ವ್ಯಕ್ತವಾಯಿತು.

ಕೊಳೆಗೇರಿ ಪ್ರದೇಶದಲ್ಲಿ ವಾಸಿಸುವ ಬಗೆಬಗೆಯ ಬುಡಕಟ್ಟುಗಳು ಮತ್ತು ಅಲೆಮಾರಿ ಸಮುದಾಯ ತಮ್ಮಲ್ಲಿನ ಸಾಂಸ್ಕೃತಿಕ ಸಂಪತ್ತನ್ನು ಪ್ರದರ್ಶನಗೊಳಿಸುವುದಕ್ಕೆ ವೇದಿಕೆ ಒದಗಿಸಲಾಗಿತ್ತು. ಸ್ಲಂ ಜನಾಂದೋಲನ – ಕರ್ನಾಟಕ ನೇತೃತ್ವದಲ್ಲಿ ನಮ್ ಹಾಡು, ನಮ್ ಕುಣಿತ, ನಮ್ ಖುಷಿ ಶೀರ್ಷಿಕೆಯಡಿ ಸಾಂಸ್ಕೃತಿಕ ಕಲೆಗಳ ಸ್ಲಂಹಬ್ಬ ಜನಮನ ಸೂರೆಗೊಳ್ಳುವಲ್ಲಿ ಯಶಸ್ವಿಯಾಯಿತು.

ಅಳಿವಿನಂಚಿನಲ್ಲಿರುವ ಹಕ್ಕಿಪಿಕ್ಕಿಯವರ ಕಾಡಿನ ಹಾಡುಗಳು, ಪೋತರಾಜರ ನೃತ್ಯ, ಅಸ್ಪೃಶ್ಯಯ ಸಮುದಾಯಕ್ಕೆ ಸೇರಿದ ದರವೇಸಿಗಳ ಜನಸಮೂಹದ ಕಷ್ಟಕೋಟಲೆಗಳನ್ನು ಒಳಗೊಂಡ ಕವಾಲಿಗಳು, ಸುಡುಗಾಡು ಸಿದ್ದರ ಮಾಯಾಜಾಲ ಅಥವಾ ಕಣ್ಕಟ್ಟು, ಶಿಳ್ಳೇಕ್ಯಾತರ ಆಟಗಳು, ದುರ್ಗಿಮುರ್ಗಿಯ ಕುಣಿತ, ಲಂಬಾಣಿ ಜನರ ಕೋಲಾಟ, ಮಂಗಳಮುಖಿಯರ ಕಲೆಗಳು ವೇದಿಕೆಯಲ್ಲಿ ಅನಾವರಣಗೊಂಡು ಪ್ರೇಕ್ಷಕರ ಗಮನ ಸೆಳೆದವು.

2007 ರಿಂದ ಆರಂಭವಾಗಿರುವ ಸ್ಲಂಹಬ್ಬ ಇದುವರೆಗೆ ಮೂರು ರಾಜ್ಯಮಟ್ಟದ ಸಾಂಸ್ಕೃತಿಕ ಕಲಾ ಸ್ಲಂಹಬ್ಬ ಗಳನ್ನು ಆಯೋಜಿಸಿ ರಾಜ್ಯದ ಗಮನ ಸೆಳೆಯಲಾಗಿದೆ. ಈ ಮೂಲಕ ಅಲೆಮಾರಿಗಳನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನಗಳು ನಡೆದಿವೆ. ನಗರದ ಜಂಝಡದ ಗದ್ದಲದ ನಡುವೆ ಶ್ರಮದಾನದಿಂದಲೇ ನಲುಗಿ ಹೋಗುತ್ತಿರುವ ಈ ಸಮುದಾಯದ ಸಾಂಸ್ಕೃತಿಕ ಪರಂಪರೆಯನ್ನು ಮುಖ್ಯವಾಹಿನಿಗೆ ತಲುಪಿಸುವ ಉದ್ದೇಶವನ್ನು ಇಟ್ಟುಕೊಂಡು ಸ್ಲಂಹಬ್ಬಗಳನ್ನು ಹಮ್ಮಿಕೊಂಡು ಬರಲಾಗುತ್ತಿದೆ.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ ಡಾ. ಡೊಮಿನಿಕ್, “ಅಸ್ಪೃಶ್ಯರು ಮತ್ತು ಅಲೆಮಾರಿ ಸಮುದಾಯಗಳ ಕಲಾ ಪ್ರಕಾರಗಳು ಸ್ಥಾಪಿತ ಪರಂಪರೆ, ಅಮಾನವೀಯ ಸಾಂಸ್ಕೃತಿಕ ಪರಿಸರವನ್ನು ಬದಿಗೆ ಸರಿಸಿ, ಕೇವಲ ಮನೋರಂಜನೆಗಾಗಿ ಪ್ರದರ್ಶನಗೊಳ್ಳುವ ಕಲೆಗಳೆಂದು ಭಾವಿಸಲಾಗಿದ್ದ ಆಚರಣೆಗಳನ್ನು ಇಂದು ಸ್ಲಂ-ನಿವಾಸಿಗಳು ತಮ್ಮ ದುಡಿಮೆ ಸಾಂಸ್ಕೃತಿಕ ಗುರುತುಗಳನ್ನಾಗಿ ನೆಲೆಗೊಳಿಸುತ್ತಿದ್ದಾರೆ. ಹೀಗೆ ಮಾಡುವ ಮೂಲಕ, ಆ ಕಲೆಗಳ ಹಿಂದಿರುವ ಶ್ರೀಮಂತಿಕೆ ಹಾಗೂ ಮಾನವೀಯ ಮೌಲ್ಯಗಳನ್ನು ಮತ್ತೆ ಹೊಸ ಸಮಾಜ ನಿರ್ಮಾಣಕ್ಕೆ ಕೊಳಗೇರಿ ಸಮುದಾಯಗಳು ತೊಡಗಿರುವುದನ್ನು ನಾವು ನೋಡಬಹುದು” ಎಂದು ಹೇಳಿದ್ದಾರೆ.

ಸ್ಲಂ ಜನಾಂದೋಲನ ಕರ್ನಾಟಕ ರಾಜ್ಯ ಸಂಚಾಲಕ ಎ. ನರಸಿಂಹಮೂರ್ತಿ ನಾನುಗೌರಿ.ಕಾಂ ಜೊತೆ ಮಾತನಾಡಿ ನಗರದಲ್ಲಿ ಅಲೆಮಾರಿ ಸಂಸ್ಕೃತಿಗಳ ಮೇಲೆ ದಾಳಿ, ದೌರ್ಜನ್ಯ ದಬ್ಬಾಳಿಕೆ ನಡೆದರೂ ಅದರ ವಿರುದ್ಧವೇ ತಿರುಗಿಬಿದ್ದಿರುವ ನೆಲಮೂಲ ಸಂಸ್ಕೃತಿಯ ಕಲೆಯ ಅನಾವರಣದ ಮೂಲಕ ಈ ಸಮುದಾಯದ ಜನರಿಗೆ ಹಕ್ಕುಗಳ ಬಗ್ಗೆ ಮನವರಿಕೆ ಮಾಡಿಕೊಡಲಾಗುತ್ತಿದೆ. ಆಧುನಿಕತೆಯ ಪರಿಣಾಮ ಅಲೆಮಾರಿಗಳು ಇಂದು ನೆಲೆ ನಿಲ್ಲುವಂತಹ ಸ್ಥಿಗೆ ಬರುವಂತೆ ಆಗಿದೆ. ಇದರಿಂದ ಆಧಾರ್, ರೇಷನ್ ಕಾರ್ಡುಗಳು ದೊರೆತಿವೆ. ಕೆಲ ಸಮುದಾಯಗಳಿಗೆ ಈ ಸೌಲಭ್ಯಗಳು ದೊರೆತಿಲ್ಲ. ಅಲೆಮಾರಿ ಕುಟುಂಬಗಳ ಮಕ್ಕಳು ಶಾಲೆಯ ಮುಖ ನೋಡುವಂತಹ ವಾತಾವರಣ ನಿರ್ಮಾಣವಾಗಿದೆ ಎಂದರು.

ಪ್ರತಿವರ್ಷ ಸರ್ಕಾರಗಳು ಕೊಳೆಗೇರಿಗಳಲ್ಲಿ ವಾಸಿಸುವ ಅಲೆಮಾರಿಗಳ ಶೈಕ್ಷಣಿಕ ಮೊದಲಾದ ಅಭಿವೃದ್ಧಿ ಕೆಲಸಗಳಿಗೆ 50-70 ಕೋಟಿ ರೂಪಾಯಿ ಮೀಸಲಿಡಲಾಗುತ್ತಿದೆ. ಈ ಹಣದಲ್ಲಿ ಕೇವಲ ಪ್ರತಿಶತ 20ರಷ್ಟು ಹಣ ಮಾತ್ರ ವೆಚ್ಚವಾಗುತ್ತಿದೆ. ಉಳಿದ ಹಣ ಸರ್ಕಾರಕ್ಕೆ ವಾಪಸ್ಸಾಗುತ್ತಿದೆ. ಕಾರಣ ಅಲೆಮಾರಿ ಸಮುದಾಯ ಶಿಕ್ಷಣ ಪಡೆದಿಲ್ಲ. ಹಾಗಾಗಿ ಸರ್ಕಾರ ಕೇಳುವ ದಾಖಲೆಗಳು ಅವರ ಬಳಿ ಸಿಗುತ್ತಿಲ್ಲ. ಇದು ಕೂಡ ಅಲೆಮಾರಿ ಗಳಿಗೆ ಮೀಸಲಿಟ್ಟ ಹಣ ಹಾಗೇ ಉಳಿಯಲು ಕಾರಣ’ ಎಂದು ತಿಳಿಸಿದರು.

ಸರ್ಕಾರ ಭೂ ಮಂಜೂರಾತಿ ಕೊಡುತ್ತಿದೆ. ಅಲೆಮಾರಿ ಸಮುದಾಯಗಳಿಗೂ ಭೂಮಿ ಕೊಡಬೇಕು. ಘನತೆ ಗೌರವದಿಂದ ಬದುಕಲು ವಸತಿ ವ್ಯವಸ್ಥೆ ಮಾಡಬೇಕು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆಗಳು ಸಮನ್ವಯ ಸಾಧಿಸಿ ಕೆಲಸ ಮಾಡಿದರೆ ಈ ಸಮುದಾಯಗಳ ಅಭಿವೃದ್ಧಿ ಸಾಧ್ಯ. ಸ್ವಾತಂತ್ರ್ಯ ಬಂದು 7 ದಶಕ ಕಳೆದರೂ ಅಲೆಮಾರಿಗಳಲ್ಲಿ ಕೆಲ ಸಮುದಾಯಗಳು ಹಿಂದುಳಿದ ವರ್ಗಕ್ಕೆ ಬರುತ್ತವೆಯೇ? ಪರಿಶಿಷ್ಟ ಸಮುದಾಯಕ್ಕೆ ಸೇರುತ್ತವೆಯೇ ಎಂಬುದೇ ಗೊತ್ತಿಲ್ಲ. ಇದು ಕೂಡ ಈ ಅಲೆಮಾರಿಗಳು ಹಿಂದುಳಿಯಲು ಕಾರಣವಾಗಿದೆ. ಸರ್ಕಾರ ಈಗಲಾದರೂ ಅಲೆಮಾರಿಗಳ ಜನಗಣತಿ ಮಾಡಿ ಅವರ ಶೈಕ್ಷಣಿಕ, ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ ಸಬಲೀಕರಣಕ್ಕೆ ಒತ್ತು ನೀಡಬೇಕಾಗಿದೆ.


ಇದನ್ನೂ ಓದಿ; ತುಮಕೂರಿನಲ್ಲಿ ‘ಕೆ.ಬಿ. ಕಾವ್ಯ: ಕಣ್ಣು ಧರಿಸಿ ಕಾಣಿರೋ’ ಕೃತಿ ಬಿಡುಗಡೆಗೊಳಿಸಿದ ನಟರಾಜ್ ಬೂದಾಳ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...