Homeಕರ್ನಾಟಕರಾಯಚೂರಿನಲ್ಲಿ ಅನಾವರಣಗೊಂಡ ಅಲೆಮಾರಿಗಳ ಸಾಂಸ್ಕೃತಿಕ ಕಲೆ

ರಾಯಚೂರಿನಲ್ಲಿ ಅನಾವರಣಗೊಂಡ ಅಲೆಮಾರಿಗಳ ಸಾಂಸ್ಕೃತಿಕ ಕಲೆ

- Advertisement -
- Advertisement -

ಅವರು ಅಲೆಮಾರಿಗಳು, ಒಂದು ಕಡೆ ನಿಂತವರಲ್ಲ, ನಿಲ್ಲುವವರೂ ಅಲ್ಲ, ನೆಲೆ ನಿಂತರೂ ಒಂದು ಹಗಲು ಒಂದು ರಾತ್ರಿ ಮಾತ್ರ. ಮತ್ತೆ ಮನಸ್ಸು ಹರಿದತ್ತ ಹೆಜ್ಜೆ ಹಾಕುತ್ತಲೇ ಬದುಕು ಕಟ್ಟಿಕೊಂಡವರು. ಆಧುನಿಕತೆ ವ್ಯಾಪಿಸಿದಂತೆ ಈ ಅಲೆಮಾರಿ ಕುಟುಂಬಗಳು ನೆಲೆ ಕಂಡುಕೊಂಡು ಅವರ ಮಕ್ಕಳು ಶಾಲೆಯ ಮುಖವನ್ನು ಕಾಣುವಂತೆ ಆಗಿದೆ. ಇಂತಹ ಅಲೆಮಾರಿ ಸಮುದಾಯ ತಮ್ಮ ಸಾಂಸ್ಕೃತಿಕ ಕಥನಗಳನ್ನು ಕಟ್ಟಿಕೊಡುವ, ಸಾಂಸ್ಕೃತಿಕ ಕಲೆಗಳನ್ನು ನಗರೀಕರಣದ ಮುಂದೆ ಅನಾವರಣಗೊಳಿಸುವ ಕೆಲಸ ರಾಯಚೂರಿನಲ್ಲಿ ನಡೆಯಿತು. ನೆಲಮೂಲ ಸಂಸ್ಕೃತಿಯ ಒಂದೊಂದು ಕಲೆಯೂ ನಗರೀಕರಣಕ್ಕೆ ಸವಾಲೊಡ್ಡುವ ರೀತಿಯಲ್ಲಿ ವ್ಯಕ್ತವಾಯಿತು.

ಕೊಳೆಗೇರಿ ಪ್ರದೇಶದಲ್ಲಿ ವಾಸಿಸುವ ಬಗೆಬಗೆಯ ಬುಡಕಟ್ಟುಗಳು ಮತ್ತು ಅಲೆಮಾರಿ ಸಮುದಾಯ ತಮ್ಮಲ್ಲಿನ ಸಾಂಸ್ಕೃತಿಕ ಸಂಪತ್ತನ್ನು ಪ್ರದರ್ಶನಗೊಳಿಸುವುದಕ್ಕೆ ವೇದಿಕೆ ಒದಗಿಸಲಾಗಿತ್ತು. ಸ್ಲಂ ಜನಾಂದೋಲನ – ಕರ್ನಾಟಕ ನೇತೃತ್ವದಲ್ಲಿ ನಮ್ ಹಾಡು, ನಮ್ ಕುಣಿತ, ನಮ್ ಖುಷಿ ಶೀರ್ಷಿಕೆಯಡಿ ಸಾಂಸ್ಕೃತಿಕ ಕಲೆಗಳ ಸ್ಲಂಹಬ್ಬ ಜನಮನ ಸೂರೆಗೊಳ್ಳುವಲ್ಲಿ ಯಶಸ್ವಿಯಾಯಿತು.

ಅಳಿವಿನಂಚಿನಲ್ಲಿರುವ ಹಕ್ಕಿಪಿಕ್ಕಿಯವರ ಕಾಡಿನ ಹಾಡುಗಳು, ಪೋತರಾಜರ ನೃತ್ಯ, ಅಸ್ಪೃಶ್ಯಯ ಸಮುದಾಯಕ್ಕೆ ಸೇರಿದ ದರವೇಸಿಗಳ ಜನಸಮೂಹದ ಕಷ್ಟಕೋಟಲೆಗಳನ್ನು ಒಳಗೊಂಡ ಕವಾಲಿಗಳು, ಸುಡುಗಾಡು ಸಿದ್ದರ ಮಾಯಾಜಾಲ ಅಥವಾ ಕಣ್ಕಟ್ಟು, ಶಿಳ್ಳೇಕ್ಯಾತರ ಆಟಗಳು, ದುರ್ಗಿಮುರ್ಗಿಯ ಕುಣಿತ, ಲಂಬಾಣಿ ಜನರ ಕೋಲಾಟ, ಮಂಗಳಮುಖಿಯರ ಕಲೆಗಳು ವೇದಿಕೆಯಲ್ಲಿ ಅನಾವರಣಗೊಂಡು ಪ್ರೇಕ್ಷಕರ ಗಮನ ಸೆಳೆದವು.

2007 ರಿಂದ ಆರಂಭವಾಗಿರುವ ಸ್ಲಂಹಬ್ಬ ಇದುವರೆಗೆ ಮೂರು ರಾಜ್ಯಮಟ್ಟದ ಸಾಂಸ್ಕೃತಿಕ ಕಲಾ ಸ್ಲಂಹಬ್ಬ ಗಳನ್ನು ಆಯೋಜಿಸಿ ರಾಜ್ಯದ ಗಮನ ಸೆಳೆಯಲಾಗಿದೆ. ಈ ಮೂಲಕ ಅಲೆಮಾರಿಗಳನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನಗಳು ನಡೆದಿವೆ. ನಗರದ ಜಂಝಡದ ಗದ್ದಲದ ನಡುವೆ ಶ್ರಮದಾನದಿಂದಲೇ ನಲುಗಿ ಹೋಗುತ್ತಿರುವ ಈ ಸಮುದಾಯದ ಸಾಂಸ್ಕೃತಿಕ ಪರಂಪರೆಯನ್ನು ಮುಖ್ಯವಾಹಿನಿಗೆ ತಲುಪಿಸುವ ಉದ್ದೇಶವನ್ನು ಇಟ್ಟುಕೊಂಡು ಸ್ಲಂಹಬ್ಬಗಳನ್ನು ಹಮ್ಮಿಕೊಂಡು ಬರಲಾಗುತ್ತಿದೆ.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ ಡಾ. ಡೊಮಿನಿಕ್, “ಅಸ್ಪೃಶ್ಯರು ಮತ್ತು ಅಲೆಮಾರಿ ಸಮುದಾಯಗಳ ಕಲಾ ಪ್ರಕಾರಗಳು ಸ್ಥಾಪಿತ ಪರಂಪರೆ, ಅಮಾನವೀಯ ಸಾಂಸ್ಕೃತಿಕ ಪರಿಸರವನ್ನು ಬದಿಗೆ ಸರಿಸಿ, ಕೇವಲ ಮನೋರಂಜನೆಗಾಗಿ ಪ್ರದರ್ಶನಗೊಳ್ಳುವ ಕಲೆಗಳೆಂದು ಭಾವಿಸಲಾಗಿದ್ದ ಆಚರಣೆಗಳನ್ನು ಇಂದು ಸ್ಲಂ-ನಿವಾಸಿಗಳು ತಮ್ಮ ದುಡಿಮೆ ಸಾಂಸ್ಕೃತಿಕ ಗುರುತುಗಳನ್ನಾಗಿ ನೆಲೆಗೊಳಿಸುತ್ತಿದ್ದಾರೆ. ಹೀಗೆ ಮಾಡುವ ಮೂಲಕ, ಆ ಕಲೆಗಳ ಹಿಂದಿರುವ ಶ್ರೀಮಂತಿಕೆ ಹಾಗೂ ಮಾನವೀಯ ಮೌಲ್ಯಗಳನ್ನು ಮತ್ತೆ ಹೊಸ ಸಮಾಜ ನಿರ್ಮಾಣಕ್ಕೆ ಕೊಳಗೇರಿ ಸಮುದಾಯಗಳು ತೊಡಗಿರುವುದನ್ನು ನಾವು ನೋಡಬಹುದು” ಎಂದು ಹೇಳಿದ್ದಾರೆ.

ಸ್ಲಂ ಜನಾಂದೋಲನ ಕರ್ನಾಟಕ ರಾಜ್ಯ ಸಂಚಾಲಕ ಎ. ನರಸಿಂಹಮೂರ್ತಿ ನಾನುಗೌರಿ.ಕಾಂ ಜೊತೆ ಮಾತನಾಡಿ ನಗರದಲ್ಲಿ ಅಲೆಮಾರಿ ಸಂಸ್ಕೃತಿಗಳ ಮೇಲೆ ದಾಳಿ, ದೌರ್ಜನ್ಯ ದಬ್ಬಾಳಿಕೆ ನಡೆದರೂ ಅದರ ವಿರುದ್ಧವೇ ತಿರುಗಿಬಿದ್ದಿರುವ ನೆಲಮೂಲ ಸಂಸ್ಕೃತಿಯ ಕಲೆಯ ಅನಾವರಣದ ಮೂಲಕ ಈ ಸಮುದಾಯದ ಜನರಿಗೆ ಹಕ್ಕುಗಳ ಬಗ್ಗೆ ಮನವರಿಕೆ ಮಾಡಿಕೊಡಲಾಗುತ್ತಿದೆ. ಆಧುನಿಕತೆಯ ಪರಿಣಾಮ ಅಲೆಮಾರಿಗಳು ಇಂದು ನೆಲೆ ನಿಲ್ಲುವಂತಹ ಸ್ಥಿಗೆ ಬರುವಂತೆ ಆಗಿದೆ. ಇದರಿಂದ ಆಧಾರ್, ರೇಷನ್ ಕಾರ್ಡುಗಳು ದೊರೆತಿವೆ. ಕೆಲ ಸಮುದಾಯಗಳಿಗೆ ಈ ಸೌಲಭ್ಯಗಳು ದೊರೆತಿಲ್ಲ. ಅಲೆಮಾರಿ ಕುಟುಂಬಗಳ ಮಕ್ಕಳು ಶಾಲೆಯ ಮುಖ ನೋಡುವಂತಹ ವಾತಾವರಣ ನಿರ್ಮಾಣವಾಗಿದೆ ಎಂದರು.

ಪ್ರತಿವರ್ಷ ಸರ್ಕಾರಗಳು ಕೊಳೆಗೇರಿಗಳಲ್ಲಿ ವಾಸಿಸುವ ಅಲೆಮಾರಿಗಳ ಶೈಕ್ಷಣಿಕ ಮೊದಲಾದ ಅಭಿವೃದ್ಧಿ ಕೆಲಸಗಳಿಗೆ 50-70 ಕೋಟಿ ರೂಪಾಯಿ ಮೀಸಲಿಡಲಾಗುತ್ತಿದೆ. ಈ ಹಣದಲ್ಲಿ ಕೇವಲ ಪ್ರತಿಶತ 20ರಷ್ಟು ಹಣ ಮಾತ್ರ ವೆಚ್ಚವಾಗುತ್ತಿದೆ. ಉಳಿದ ಹಣ ಸರ್ಕಾರಕ್ಕೆ ವಾಪಸ್ಸಾಗುತ್ತಿದೆ. ಕಾರಣ ಅಲೆಮಾರಿ ಸಮುದಾಯ ಶಿಕ್ಷಣ ಪಡೆದಿಲ್ಲ. ಹಾಗಾಗಿ ಸರ್ಕಾರ ಕೇಳುವ ದಾಖಲೆಗಳು ಅವರ ಬಳಿ ಸಿಗುತ್ತಿಲ್ಲ. ಇದು ಕೂಡ ಅಲೆಮಾರಿ ಗಳಿಗೆ ಮೀಸಲಿಟ್ಟ ಹಣ ಹಾಗೇ ಉಳಿಯಲು ಕಾರಣ’ ಎಂದು ತಿಳಿಸಿದರು.

ಸರ್ಕಾರ ಭೂ ಮಂಜೂರಾತಿ ಕೊಡುತ್ತಿದೆ. ಅಲೆಮಾರಿ ಸಮುದಾಯಗಳಿಗೂ ಭೂಮಿ ಕೊಡಬೇಕು. ಘನತೆ ಗೌರವದಿಂದ ಬದುಕಲು ವಸತಿ ವ್ಯವಸ್ಥೆ ಮಾಡಬೇಕು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆಗಳು ಸಮನ್ವಯ ಸಾಧಿಸಿ ಕೆಲಸ ಮಾಡಿದರೆ ಈ ಸಮುದಾಯಗಳ ಅಭಿವೃದ್ಧಿ ಸಾಧ್ಯ. ಸ್ವಾತಂತ್ರ್ಯ ಬಂದು 7 ದಶಕ ಕಳೆದರೂ ಅಲೆಮಾರಿಗಳಲ್ಲಿ ಕೆಲ ಸಮುದಾಯಗಳು ಹಿಂದುಳಿದ ವರ್ಗಕ್ಕೆ ಬರುತ್ತವೆಯೇ? ಪರಿಶಿಷ್ಟ ಸಮುದಾಯಕ್ಕೆ ಸೇರುತ್ತವೆಯೇ ಎಂಬುದೇ ಗೊತ್ತಿಲ್ಲ. ಇದು ಕೂಡ ಈ ಅಲೆಮಾರಿಗಳು ಹಿಂದುಳಿಯಲು ಕಾರಣವಾಗಿದೆ. ಸರ್ಕಾರ ಈಗಲಾದರೂ ಅಲೆಮಾರಿಗಳ ಜನಗಣತಿ ಮಾಡಿ ಅವರ ಶೈಕ್ಷಣಿಕ, ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ ಸಬಲೀಕರಣಕ್ಕೆ ಒತ್ತು ನೀಡಬೇಕಾಗಿದೆ.


ಇದನ್ನೂ ಓದಿ; ತುಮಕೂರಿನಲ್ಲಿ ‘ಕೆ.ಬಿ. ಕಾವ್ಯ: ಕಣ್ಣು ಧರಿಸಿ ಕಾಣಿರೋ’ ಕೃತಿ ಬಿಡುಗಡೆಗೊಳಿಸಿದ ನಟರಾಜ್ ಬೂದಾಳ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...