Homeಸಿನಿಮಾಕ್ರೀಡೆಕ್ಯಾಪ್ಟನ್ ಕೂಲ್ ಧೋನಿಗೂ ಸಿಟ್ಟು ಬಂತು ನೋಡಿ !

ಕ್ಯಾಪ್ಟನ್ ಕೂಲ್ ಧೋನಿಗೂ ಸಿಟ್ಟು ಬಂತು ನೋಡಿ !

- Advertisement -
- Advertisement -

|ಅಂತಃಕರಣ |

ಕ್ರಿಕೆಟ್ ರಂಗದಲ್ಲಿ ಬಹಳ ಸನ್ನಿವೇಶಗಳು ನಮಗೆ ಬಹಳ ಕಡಿಮೆ ನೋಡಲು ಸಿಗುತ್ತವೆ ಅಥವಾ ನೋಡಲು ಸಿಗುವುದೇ ಇಲ್ಲ ! ಉದಾಹರಣೆಗೆ ಕ್ರಿಸ್ ಗೇಲ್ ಡೈವ್ ಮಾಡುವುದು, ವಿರಾಟ್ ಕೊಹ್ಲಿ ಕ್ರಿಕೆಟ್ ಪುಸ್ತಕದೊಳಗಿರದ ಹೊಸ ಶಾಟ್ ಹೊಡೆಯುವುದು, ತೆಂಡುಲ್ಕರ್ ಸ್ಟೇಡಿಯಂನಾಚೆ ಸಿಕ್ಸರ್ ಹೊಡೆಯುವುದು, ಕೀರನ್ ಪೊಲಾರ್ಡ್ ಕ್ಯಾಚ್ ಬಿಡುವುದು. ಇದೇ ಪಟ್ಟಿಯಲ್ಲಿ ಬರುವ ಇನ್ನೂ ಒಂದು ಅತ್ಯಂತ ವಿರಳವಾದ ಸಂಗತಿಯೇನೆಂದರೆ ಮಹೇಂದ್ರ ಸಿಂಗ್ ಧೋನಿ ಕೋಪಗೊಳ್ಳುವುದು ! ಹೌದು, ಕ್ಯಾಪ್ಟನ್ ಕೂಲ್ ಎನಿಸಿಕೊಂಡಿರುವ ಎಂ ಎಸ್ ಧೋನಿ ಕೋಪಗೊಳ್ಳುವ ಒಂದು ಸನ್ನಿವೇಶ ಮೊನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ನಿರ್ಮಾಣವಾಯಿತು.

ಏಪ್ರಿಲ್ 11ರಂದು ಜೈಪುರದಲ್ಲಿ ರಾಜಸ್ಥಾನ ರಾಯಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಪಂದ್ಯ ನಡೆಯಿತು. ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ ತಂಡ 151 ರನ್ ಗಳಿಸಿತು. 152ರ ಗುರಿ ಬೆನ್ನಟ್ಟಿದ ಚೆನ್ನೈ ತಂಡ ಬಹಳ ಬೇಗ ತನ್ನ ಟಾಪ್ 4 ಆಟಗಾರರನ್ನು ಕಳೆದುಕೊಂಡಿತು. ಆ ಸಮಯದಲ್ಲಿ ಜೊತೆಯಾದ ಅಂಬಾಟಿ ರಾಯುಡು ಹಾಗೂ ಮಹೇಂದ್ರ ಸಿಂಗ್ ಧೋನಿ 95ರ ಅತ್ಯಮೂಲ್ಯ ಜೊತೆಯಾಟದೊಂದಿಗೆ ಚೆನ್ನೈ ಗೆಲುವಿನ ಸನಿಹ ಬಂದಿತು. ಕೊನೆಯ ಓವರ್‍ನಲ್ಲಿ ಚೆನ್ನೈ ತಂಡಕ್ಕೆ 18 ರನ್‍ಗಳು ಬೇಕಿತ್ತು. ಆ ಸಮಯದಲ್ಲಿ ಬೌಲ್ ಮಾಡಲು ಬಂದಿದ್ದು ಬೆನ್ ಸ್ಟೋಕ್ಸ್. ಜಡೇಜ ಸ್ಟ್ರೈಕರ್ ಆಗಿದ್ದರೆ ನಾನ್ ಸ್ಟ್ರೈಕರ್ ಆಗಿ ಎಂ ಎಸ್ ಧೋನಿ ಇದ್ದರು. ಮೊದಲ ಎಸೆತದಲ್ಲಿಯೇ ಜಡೇಜ ಸಿಕ್ಸರ್ ಹೊಡೆದು ಒತ್ತಡ ಅಲ್ಪ ಮಟ್ಟಿಗೆ ಕಮ್ಮಿ ಮಾಡಿದರು. ಎರಡನೇ ಎಸೆತದಲ್ಲಿ ಜಡೇಜ ಒಂದು ರನ್ ಓಡಿದರು ! ಅದು ನೋ ಬಾಲ್ ಸಹ ಆಗಿತ್ತು. ಫ್ರೀ ಹಿಟ್ ಎಸೆತದಲ್ಲಿ ಧೋನಿ ಎರಡು ರನ್ ಓಡಿದರು. ಕೊನೆಯ ನಾಲ್ಕು ಎಸೆತಗಳಲ್ಲಿ ತಂಡಕ್ಕೆ ಗೆಲ್ಲಲು 8 ರನ್‍ಗಳ ಅವಶ್ಯಕತೆಯಿತ್ತು. ಆ ಸಮಯದಲ್ಲಿ ಅತ್ಯುತ್ತಮ ಯಾರ್ಕರ್ ಕಾರ್ಯರೂಪಕ್ಕೆ ತಂದ ಬೆನ್ ಸ್ಟೋಕ್ಸ್ ಧೋನಿಯವರನ್ನು ಬೌಲ್ಡ್ ಮಾಡಿದರು. ದ ಗ್ರೇಟ್ ಫಿನಿಶರ್ ಅನ್ನು ಔಟ್ ಮಾಡಿದ ಖುಷಿಯಲ್ಲಿ ರಾಜಸ್ಥಾನ ತಂಡವಿತ್ತು!


ಕೊನೆಯ 3 ಎಸೆತಗಳಲ್ಲಿ 8 ರನ್ ಅಗತ್ಯವಿತ್ತು. ಹೊಸ ಬ್ಯಾಟ್ಸ್‍ಮನ್ ನ್ಯೂಜಿಲೆಂಡ್‍ನ ಮಿಷೆಲ್ ಸ್ಯಾಂಟನರ್ ಕ್ರೀಸ್‍ನಲ್ಲಿದ್ದರು. ಈ ಸಮಯದಲ್ಲಿ ಬೆನ್ ಸ್ಟೋಕ್ಸ್ ಫುಲ್ ಟಾಸ್ ಎಸೆತವನ್ನು ಬೌಲ್ ಮಾಡಿದರು. ಸ್ಟ್ರೈಟ್ ಅಂಪೈರ್ (ನಾನ್ ಸ್ಟ್ರೈಕರ್ ಕಡೆಯಿದ್ದ ಅಂಪೈರ್) ಅದನ್ನು ನೋಬಾಲ್ (ಬ್ಯಾಟ್ಸ್‍ಮನ್‍ನ ಸೊಂಟಕ್ಕಿಂತ ಮೇಲಿದ್ದ ಕಾರಣ) ಎಂದು ಸನ್ನೆ ಮಾಡಿದರು. ಆದರೆ ಅದಾದ ಕೆಲವು ಕ್ಷಣಗಳ ನಂತರ ಲೆಗ್ ಅಂಪೈರ್ ಅದು ನೋಬಾಲ್ ಅಲ್ಲ ಸರಿಯಾದ ಎಸೆತ ಎಂದರು ! ಇದನ್ನು ನೋಡಿ ಬೌಂಡರಿಯಾಚೆಗಿನ ಡಗೌಟ್‍ನಲ್ಲಿದ್ದ ಎಂ ಎಸ್ ಧೋನಿ ಪೂರ್ತಿ ಕೋಪಗೊಂಡರು. ಕ್ರೀಸ್‍ನಲ್ಲಿದ್ದ ಜಡೇಜ ಹಾಗೂ ಸ್ಯಾಂಟನರ್ ಅಂಪೈರ್‍ಗಳ ಬಳಿ ಹೋಗಿ ಪ್ರಶ್ನಿಸತೊಡಗಿದರು. ಇದರ ಮಧ್ಯೆಯೇ ಧೋನಿ ಕ್ರೀಡಾಂಗಣಕ್ಕೆ ಕಾಲಿಟ್ಟರು ! ಅಷ್ಟು ಕೋಪಗೊಂಡಿರುವ ಧೋನಿಯನ್ನು ನಾನು ಇಷ್ಟು ವರ್ಷ ಒಮ್ಮೆ ಸಹ ನೋಡಿರಲಿಲ್ಲ!

ಲೆಗ್ ಅಂಪೈರ್ ಬಳಿ ಹೋಗಿ ಸ್ಟ್ರೈಟ್ ಅಂಪೈರ್‍ರ ಕಡೆಗೆ ಬೆರಳು ಮಾಡುತ್ತಾ ಅವರ ತಪ್ಪನ್ನು ಹೇಳತೊಡಗಿದರು. ಸ್ಟೋಕ್ಸ್, ಧೋನಿ ಹಾಗೂ ಅಂಪೈರ್‍ಗಳ ಮಧ್ಯೆ ಕೆಲವು ಕ್ಷಣಗಳ ಕಾಲ ಮಾತಿನ ಚಕಮಕಿ ನಡೆಯಿತು. ಆ ಎಸೆತವನ್ನು ನೋ ಬಾಲ್ ಎನ್ನದೇ ಸರಿಯಾದ ಎಸೆತ ಎಂದು ಪರಿಗಣಿಸಲಾಯಿತು. ಧೋನಿ ಕ್ರೀಡಾಂಗಣದಿಂದ ಹೊರನಡೆದರು.

ಅಂದ ಹಾಗೆ ಆ ಎಸೆತದಲ್ಲಿ ಎರಡು ರನ್‍ಗಳು ಬಂದವು. ಕೊನೆಯ ಎರಡು ಎಸೆತಗಳಲ್ಲಿ ಚೆನ್ನೈ ಗೆಲುವಿಗೆ 6 ರನ್ ಅಗತ್ಯವಿತ್ತು. ನಂತರದ ಎಸೆತದಲ್ಲಿ ಸಹ ಸ್ಯಾಂಟನರ್ ಎರಡು ರನ್ ಓಡಿದರು. 1 ಎಸೆತದಲ್ಲಿ 4 ರನ್‍ಗಳ ಅವಶ್ಯಕತೆಯಿತ್ತು ! ಕೊನೆಯ ಎಸೆತವನ್ನು ಸ್ಟೋಕ್ಸ್ ವೈಡ್ ಮಾಡಿದ್ದರಿಂದ ಮತ್ತೊಂದು ಅವಕಾಶ ಸ್ಯಾಂಟನರ್‍ಗೆ ದೊರೆಯಿತು. ಕೊನೆಯ ಎಸೆತದಲ್ಲಿ 3 ರನ್ ಗಳಿಸಬೇಕಾಗಿತ್ತು. ಆಗ ಸ್ಯಾಂಟನರ್ ಸ್ಟ್ರೈಟ್ ಆಗಿ ಸಿಕ್ಸ್ ಹೊಡೆದು ಚೆನ್ನೈ ತಂಡವನ್ನು ಗೆಲ್ಲಿಸಿದರು. ತಮ್ಮ ಎರಡನೇ ಪಂದ್ಯದಲ್ಲಿಯೇ ಸ್ಯಾಂಟನರ್ ಚೆನ್ನೈಗೆ ಪಂದ್ಯ ಗೆಲ್ಲಿಸಿ ತಂಡದ ಹೀರೋ ಆಗಿ ಬಿಟ್ಟರು !

ಅಂಪೈರಿಂಗ್ ವಿವಾದಕ್ಕೆ ಬರುವುದಾದರೆ ಧೋನಿಯವರು ಔಟಾದ ಮೇಲೆ ಕ್ರೀಡಾಂಗಣ ಪ್ರವೇಶಿಸಿದ್ದು ಸರಿಯಾ ಇಲ್ಲವಾ ಎಂಬ ಪ್ರಶ್ನೆ ಬರುತ್ತದೆ. ಅಷ್ಟು ಶಾಂತವಾದ ಧೋನಿ ಕೋಪಗೊಳ್ಳಲು ಕಾರಣವೇನು ಎಂಬ ಕುತೂಹಲ ಸಹ ಮೂಡುತ್ತದೆ.

ಪ್ರಾಯಶಃ ಹಿಂದಿನ ಎಸೆತದಲ್ಲಿಯೇ ಔಟಾಗಿ ತಂಡವನ್ನು ಗೆಲುವಿನ ದಡ ಸೇರಿಸಲಾಗದ ಬೇಜಾರು ಧೋನಿಯವರಿಗಿದ್ದರಬಹುದು. ಕ್ರೀಸ್‍ನಲ್ಲಿದ್ದವರಿಬ್ಬರೂ ಸಹ ಸ್ಪೆಷಲಿಸ್ಟ್ ಬ್ಯಾಟ್ಸ್‍ಮನ್‍ಗಳಲ್ಲದ ಕಾರಣ ಚೆನ್ನೈ ಆ ಸಮಯದಲ್ಲಿ ಸೋಲಿನ ಪರಿಸ್ಥಿತಿಯಲ್ಲಿಯೇ ಇತ್ತು ಎನ್ನಬಹುದು. ನಂತರದ ಎಸೆತ ನೋಬಾಲ್ ಎಂದು ಹೇಳಿ ನಂತರ ಅದನ್ನು ಹಿಂತೆಗೆದುಕೊಂಡ ಕಾರಣ ಪೂರ್ಣವಾಗಿ ಅಸಮಾಧಾನಗೊಂಡ ಧೋನಿ ಹೀಗೆ ಮಾಡಿದರು ಎನ್ನುವುದು ಒಂದು ಸಾಧ್ಯತೆಯಾದರೆ ಈ ಬಾರಿಯ ಐಪಿಎಲ್ ಅಂಪೈರ್‍ಗಳ ತಪ್ಪುಗಳಿಗೆ ಪ್ರಸಿದ್ಧವಾಗಿದೆ ಎನ್ನಬಹುದು. ಆರ್‍ಸಿಬಿ ಹಾಗೂ ಮುಂಬೈ ಎದುರಿನ ಪಂದ್ಯದಲ್ಲಿ ಕೊನೆಯ ಎಸೆತದಲ್ಲಿ 7 ರನ್ ಅಗತ್ಯವಿದ್ದಾಗ ಲಸಿತ್ ಮಾಲಿಂಗ ನೋಬಾಲ್ ಮಾಡಿದರು (ಗೆರೆ ದಾಟಿ). ಆದರೆ ಅಂಪೈರ್ ಅದನ್ನು ನೀಡಲಿಲ್ಲ. ಇದೇ ಕಾರಣ ಆರ್‍ಸಿಬಿ ಸೋತು ಹೋದರು ಹಾಗೂ ನಂತರ ರಿಪ್ಲೈನಲ್ಲಿ ಆ ಎಸೆತ ನೋಬಾಲ್ ಆಗಿದ್ದು ಸ್ಪಷ್ಟವಾಗಿ ಗೋಚರಿಸಿತ್ತು. ಆದರೆ ಪಂದ್ಯ ಮುಗಿದ ಕಾರಣ ಏನೂ ಮಾಡುವಂತಿರಲಿಲ್ಲ. ಆರ್‍ಸಿಬಿ ನಾಯಕ ಕೊಹ್ಲಿ ಪೋಸ್ಟ್-ಮ್ಯಾಚ್ ಪ್ರೆಸೇಂಟೇಷನ್‍ನಲ್ಲಿ ಅಸಮಾಧಾನ ವ್ಯಕ್ತಪಡಿಸಿದರೂ ಅದು ಪಂದ್ಯದ ಮೇಲೆ ಪರಿಣಾಮವೇನೂ ಬೀರಲಿಲ್ಲ. ಪಂಜಾಬ್ ಹಾಗೂ ಮುಂಬೈ ನಡುವಿನ ಪಂದ್ಯದಲ್ಲಿ ಅಂಕಿತ್ ರಜಪೂತ್ ಕೊನೆಯ ಓವರ್‍ನಲ್ಲಿ ಮಾಡಿದ ಒಂದು ಎಸೆತ ನೋ ಬಾಲ್ ಆಗಿರದಿದ್ದರೂ (ಅವರು ಗೆರೆ ದಾಟಿರದಿದ್ದರೂ) ಅಂಪೈರ್ ನೋ ಬಾಲ್ ನೀಡಿದರು. ಆ ಸಮಯದಲ್ಲಿಯೂ ಸಹ ಅದನ್ನು ಸರಿಯಾಗಿ ಗಮನಿಸದ ಫೀಲ್ಡಿಂಗ್ ಸೈಡ್ (ಪಂಜಾಬ್) ಆಟಗಾರರು ಅಂಪೈರ್‍ಗೆ ಪ್ರಶ್ನಿಸಲಿಲ್ಲ. ಆದರೆ ಈ ಸಂದರ್ಭದಲ್ಲಿ ಚೆನ್ನೈ ತಂಡಕ್ಕೆ ಅಂಪೈರ್‍ನ್ನು ಪ್ರಶ್ನಿಸುವ ಅವಕಾಶವಿತ್ತು ಹಾಗೂ ಅದನ್ನು ಜಡೇಜ ಮಾಡಿದರೂ ಅಂಪೈರ್ ಅದನ್ನು ಸರಿಯಾಗಿ ಗಣನೆಗೆ ತೆಗೆದುಕೊಳ್ಳದ ಕಾರಣ ಧೋನಿ ಕ್ರೀಡಾಂಗಣ ಪ್ರವೇಶಿಸಿ ಪ್ರಶ್ನಿಸಿದರು ಎಂದೂ ಸಹ ಹೇಳಬಹುದು. ಅಷ್ಟಕ್ಕೂ ಧೋನಿಯವರಂತಹ ಪ್ರಬುದ್ಧ ಆಟಗಾರ ಹೀಗೆ ಸುಮ್ಮನೆ ಅಥವಾ ಕ್ಷಣದ ಬಿಸಿಯಲ್ಲಿ ಮಾಡಿರುವುದಕ್ಕಂತೂ ಸಾಧ್ಯವಿಲ್ಲ ಎಂಬುದು ನನ್ನ ಅಭಿಪ್ರಾಯ. ಇಡೀ ಟೂರ್ನಮೆಂಟ್‍ನಲ್ಲಿ ಇಲ್ಲಿಯವರೆಗೆ ನಡೆದ ಅಂಪೈರಿಂಗ್ ತಪ್ಪುಗಳ ಬಿಂಬವಾಗಿ ಧೋನಿ ಅಂಪೈರ್‍ಗಳನ್ನು ಪ್ರಶ್ನಿಸಿದರು ಎಂದೂ ಹೇಳಬಹುದು. ಆದರೆ ಕ್ರೀಡಾಂಗಣವನ್ನು ಧೋನಿ ತೊರೆದ ನಂತರ ಪ್ರವೇಶಿಸಿದ್ದು ನಿಯಮಗಳಾನುಸಾರ ಖಂಡಿತವಾಗಿ ತಪ್ಪು. ಅದಕ್ಕಾಗಿ ಅವರಿಗೆ ತಮ್ಮ ಪಂದ್ಯದ ಸಂಭಾವನೆಯ 50ರಷ್ಟನ್ನು ದಂಡವಾಗಿ ಸಹ ವಿಧಿಸಲಾಯಿತು. ಧೋನಿ ಯಾಕೆ ಹಾಗೆ ಮಾಡಿದರು ಎಂಬುದಕ್ಕೆ ಸಿಎಸ್‍ಕೆ ಕೋಚ್ ಸ್ಟೀಫನ್ ಫ್ಲೆಮಿಂಗ್ ಹೇಳಿದ್ದು “ಧೋನಿ ಅಲ್ಲಿ ನಡೆದಿದ್ದುದರ ಬಗ್ಗೆ ಸರಿಯಾಗಿ ತಿಳಿದುಕೊಳ್ಳಲು ಕ್ರೀಡಾಂಗಣ ಪ್ರವೇಶಿದರು” ! ಸ್ವತಃ ಧೋನಿಯವರು ಇದರ ಬಗೆಗೆ ಇನ್ನೇನನ್ನೂ ಸಹ ಹೇಳಿಲ್ಲ. ಹಾಗಾಗಿ ಅವರು ತಮ್ಮ ಹೇಳಿಕೆ ನೀಡುವವರೆಗೆ ಎಲ್ಲವೂ ಸಾಧ್ಯತೆಗಳಷ್ಟೇ
ಏನೇ ಆಗಲಿ , ಕ್ರಿಕೆಟ್ ವಿಶ್ಲೇಷಕ ಹರ್ಷ ಭೊಗ್ಲೆ ಹೇಳಿದ ಹಾಗೆ ಧೋನಿ ಎಲ್ಲರ ಹಾಗೆ ತಾವೂ ಕೂಡ ಮನುಷ್ಯ ಎಂಬುದನ್ನು ತೋರಿಸಿಕೊಟ್ಟರು. ತಮ್ಮ ಸಿಟ್ಟನ್ನು ಕ್ರೀಡಾಂಗಣದಲ್ಲಿ ಅಷ್ಟು ತೀವ್ರವಾಗಿ ಹೊರಹಾಕಿದ್ದು ಮಾತ್ರ ಕ್ಯಾಪ್ಟನ್ ಕೂಲ್ ಅಭಿಮಾನಿಗಳಿಗೆ ಹಾಗೂ ಎಲ್ಲಾ ವೀಕ್ಷಕರಿಗೆ ಅಚ್ಚರಿಯಾಯಿತು. ನಾನಂತೂ ಅವರ ಹೇಳಿಕೆಗಾಗಿ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್‍ನಲ್ಲಿ ಕಾಯುತ್ತಿದ್ದೆ. ಆದರೆ ಅವರು ಅದರ ಬಗೆಗೆ ಏನೂ ಹೇಳಲಿಲ್ಲ.
ನಾನಂತೂ ಕ್ಯಾಪ್ಟನ್ ಕೂಲ್ ಹೇಳಿಕೆಗಾಗಿ ಕಾಯುತ್ತಿರುವೆ !!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...