Homeಮುಖಪುಟನಮ್ಮ ಅನ್ನದಾತರ ಹೋರಾಟಕ್ಕೆ ಜಯವಾಗಲಿ: ತಿಂಗಳ ಹಿಂದಿನ ನಾಸಿರುದ್ದೀನ್‌ ಶಾ ವಿಡಿಯೋ ವೈರಲ್

ನಮ್ಮ ಅನ್ನದಾತರ ಹೋರಾಟಕ್ಕೆ ಜಯವಾಗಲಿ: ತಿಂಗಳ ಹಿಂದಿನ ನಾಸಿರುದ್ದೀನ್‌ ಶಾ ವಿಡಿಯೋ ವೈರಲ್

ಇಂತಹ ಕಾಲದಲ್ಲಿ ಮೌನವಾಗಿರುವುದು ಎಂದರೆ ದಬ್ಬಾಳಿಕೆ ನಡೆಸುತ್ತಿರುವವರ ಪರವಹಿಸಿದಂತೆ ಎಂದು ನಾನು ಭಾವಿಸುತ್ತೇನೆ.

- Advertisement -
- Advertisement -

ಅನ್ನದಾತನ ಹೋರಾಟದ ಪರವಾಗಿ ಭಾರತೀಯ ಚಿತ್ರರಂಗದ ಸಂವೇದನಾಶೀಲ ನಟರು ಮಾತನಾಡುತ್ತಿದ್ದಾರೆ. ಹಿರಿಯ ರಂಗಕಲಾವಿದ, ಬಾಲಿವುಡ್‌ ನಟ ನಾಸಿರುದ್ದೀನ್‌ ಶಾ ಕೂಡ ರೈತರ ಹೋರಾಟ ಬೆಂಬಲಿಸಿ ಮಾತನಾಡಿದ್ದಾರೆ. ಕಳೆದ ತಿಂಗಳು ಅವರು ಸಿಟಿಜನ್ ಫಾರ್ ಜಸ್ಟೀಸ್ ಅಂಡ್ ಪೀಸ್ ಸಂಘಟನೆಗೆ ಅವರು ನೀಡಿದ ಸಂದರ್ಶನ ಈಗ ವೈರಲ್ ಆಗಿದೆ. ಅವರು ಹೆಸರಿನಲ್ಲಿ ಹಲವಾರು ಟ್ವಿಟರ್ ಖಾತೆಗಳಿದ್ದು ಅವುಗಳಲ್ಲಿ ರೈತ ಹೋರಾಟದ ಪರವಾಗಿ ಟ್ವೀಟ್ ಮಾಡಲಾಗಿದೆ. ಆದರೆ ಅವು ಅನಧಿಕೃತ ಎಂದು ಅವರ ಪತ್ನಿ ಸ್ಪಷ್ಟೀಕರಣ ನೀಡಿದ್ದಾರೆ. ಅವರ ವೈರಲ್ ವಿಡಿಯೋದ ಪೂರ್ಣ ಪಾಠ ಇಲ್ಲಿದೆ.

ನಾಸಿರುದ್ದೀನ್‌ ಶಾ ಹೇಳಿರುವುದೇನು?

ಸಾವಿರಾರು ರೈತ ಸೋದರ-ಸೋದರಿಯರು, ಮಕ್ಕಳು ದೆಹಲಿಯ ಕೊರೆಯುವ ಚಳಿಯಲ್ಲಿ ನ್ಯಾಯ ಕೇಳಲು, ತಮ್ಮ ಹಕ್ಕನ್ನು ಪಡೆಯಲು ಸೇರಿದ್ದೀರಿ, ನಿಮಗೆಲ್ಲಾ ನನ್ನ ನಮಸ್ಕಾರಗಳು

ಈ ದೇಶದ ಆಳ್ವಿಕೆಯು ನಿಮ್ಮೊಂದಿಗೆ ಯಾವ ರೀತಿಯಲ್ಲಿ ವರ್ತಿಸುತ್ತಿದೆಯೊ, ಅದು ನನಗೆ ದಬ್ಬಾಳಿಕೆಯ ತಂದೆ-ತಾಯಿಗಳ ಕತೆಯನ್ನು ನೆನಪಿಸುತ್ತದೆ.

ಅವರ ಮಕ್ಕಳು ಶಿಲ್ಪಿಯೋ, ಪ್ರವಾಸಿಯೋ ಆಗಬೇಕೆಂದು ಬಯಸಿದರೆ, ನಿಮಗೇನು ಬೇಕು ಎಂದು ನಿಮಗೆ ಗೊತ್ತಾಗೊಲ್ಲ. ನಿಮಗಿಂತ ಚೆನ್ನಾಗಿ ನಮಗೆ ಗೊತ್ತು. ನಿಮಗೆ ಯಾವುದು ಹೆಚ್ಚು ಲಾಭದಾಯಕ ಎಂಬುದು ನಮಗೆ ಗೊತ್ತು ಎನ್ನುತ್ತಾರೆ ಪೋಷಕರು.

ನಮ್ಮ ಪ್ರಕಾರ, ಯಾರು ತನ್ನ ಬಲವನ್ನು ನಂಬಿ, ನೇಗಿಲು ಹಿಡಿದು ನೆಲವನ್ನು ಉಳುತ್ತಾನೋ, ಪ್ರೀತಿ ಮತ್ತು ಪರಿಶ್ರಮದಿಂದ ಅದೇ ನೆಲದಲ್ಲಿ ಬೀಜ ಬಿತ್ತುತ್ತಾನೊ, ಆ ನೆಲವನ್ನು ಸಿಂಗರಿಸುತ್ತಾನೊ, ಬೆಳೆಯನ್ನು ತನ್ನ ಮಗುವಂತೆ ಪೊರೆಯುತ್ತಾನೋ ಆತನಿಗಿಂತ ಚೆನ್ನಾಗಿ ಬೇರೆ ಯಾರಿಗೂ ಯಾವುದೂ ಲಾಭದಾಯಕವಾದದ್ದು ಎಂಬುದು ತಿಳಿದಿರಲು ಸಾಧ್ಯವಿಲ್ಲ.

ಈ ಆಳ್ವಿಕೆಯು ಸಾವಿರಾರು ರೀತಿಯಲ್ಲಿ ಮುಗ್ದರನ್ನು ವಂಚಕರೆಂದು ಹೆಸರು ಕೆಡಿಸುವ ಪ್ರಯತ್ನ ಮಾಡಿದರೆ, ನನ್ನಂತಹ ಲಕ್ಷಾಂತರ ಜನರಿದ್ದಾರೆ, ಅವರೆಲ್ಲರ ಪ್ರಾರ್ಥನೆ ನಿಮ್ಮೊಂದಿಗಿದೆ. ಈ ಎಲ್ಲರಿಗೂ ನಿಮ್ಮ ಶಕ್ತಿ, ಸಂಯಮ, ಅಧಿಕಾರವೇ ಮಾದರಿ.

ನಿಮ್ಮಂತಹವರಿಗಾಗಿಯೇ ಕವಿಯೊಬ್ಬರು ಹೇಳಿದ್ದು, ಈ ಘಮ್ಮೆನ್ನುವ ಹೂ ರಾಶಿ, ನಳನಳಿಸುವ ಹೊಲದ ದೊರೆ ನೀನು ಎಂದು ವರ್ಣಿಸಿದ್ದಾರೆ.

ನಮ್ಮ ಅನ್ನದಾತರು ನೀವು, ನಿಮ್ಮ ಗುರಿಯನ್ನು ಮುಟ್ಟಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ನನಗೆ ನಂಬಿಕೆ ಇದೆ, ಈ ರೈತ ಹೋರಾಟ ವ್ಯಾಪಿಸುತ್ತದೆ ಮತ್ತು ಜನಸಾಮಾನ್ಯರು ಇದರಲ್ಲಿ ಭಾಗಿಯಾಗುತ್ತಾರೆ. ಆಗಲೇಬೇಕು. ಇಂತಹ ಕಾಲದಲ್ಲಿ ಮೌನವಾಗಿರುವುದು ಎಂದರೆ ದಬ್ಬಾಳಿಕೆ ನಡೆಸುತ್ತಿರುವವರ ಪರವಹಿಸಿದಂತೆ ಎಂದು ನಾನು ಭಾವಿಸುತ್ತೇನೆ. ನಮ್ಮ ಚಿತ್ರರಂಗದ ದೊಡ್ಡ ಮನುಷ್ಯರು ಸುಮ್ಮನೆ ಕೂತಿದ್ದಾರೆ. ತುಟಿ ಬಿಚ್ಚಿದರೆ ಬಹಳಷ್ಟು ಕಳೆದುಕೊಳ್ಳಬೇಕಾಗುತ್ತದೆ ಎಂದು ಅವರಿಗೆ ಅನ್ನಿಸುತ್ತಿದೆ. ಅಲ್ಲಾ, ಏಳು ತಲೆಮಾರು ಕೂತು ತಿನ್ನುವಷ್ಟು ಹಣ ಸಂಪಾದನೆ ಮಾಡಿದ್ದೀರಲ್ಲಾ, ಮಾತನಾಡುವುದಕ್ಕೆ ಏನು ತೊಂದರೆ’?


ಇದನ್ನೂ ಓದಿ: ಸಂಸತ್ತಿನಲ್ಲಿ ಮಹುವಾ ಮೊಯಿತ್ರ ಬಿರುಗಾಳಿ ಭಾಷಣ: ಯಾವುದೇ ಕ್ರಮವಿಲ್ಲವೆಂದ ಕೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...