Homeಮುಖಪುಟನಮ್ಮ ಅನ್ನದಾತರ ಹೋರಾಟಕ್ಕೆ ಜಯವಾಗಲಿ: ತಿಂಗಳ ಹಿಂದಿನ ನಾಸಿರುದ್ದೀನ್‌ ಶಾ ವಿಡಿಯೋ ವೈರಲ್

ನಮ್ಮ ಅನ್ನದಾತರ ಹೋರಾಟಕ್ಕೆ ಜಯವಾಗಲಿ: ತಿಂಗಳ ಹಿಂದಿನ ನಾಸಿರುದ್ದೀನ್‌ ಶಾ ವಿಡಿಯೋ ವೈರಲ್

ಇಂತಹ ಕಾಲದಲ್ಲಿ ಮೌನವಾಗಿರುವುದು ಎಂದರೆ ದಬ್ಬಾಳಿಕೆ ನಡೆಸುತ್ತಿರುವವರ ಪರವಹಿಸಿದಂತೆ ಎಂದು ನಾನು ಭಾವಿಸುತ್ತೇನೆ.

- Advertisement -
- Advertisement -

ಅನ್ನದಾತನ ಹೋರಾಟದ ಪರವಾಗಿ ಭಾರತೀಯ ಚಿತ್ರರಂಗದ ಸಂವೇದನಾಶೀಲ ನಟರು ಮಾತನಾಡುತ್ತಿದ್ದಾರೆ. ಹಿರಿಯ ರಂಗಕಲಾವಿದ, ಬಾಲಿವುಡ್‌ ನಟ ನಾಸಿರುದ್ದೀನ್‌ ಶಾ ಕೂಡ ರೈತರ ಹೋರಾಟ ಬೆಂಬಲಿಸಿ ಮಾತನಾಡಿದ್ದಾರೆ. ಕಳೆದ ತಿಂಗಳು ಅವರು ಸಿಟಿಜನ್ ಫಾರ್ ಜಸ್ಟೀಸ್ ಅಂಡ್ ಪೀಸ್ ಸಂಘಟನೆಗೆ ಅವರು ನೀಡಿದ ಸಂದರ್ಶನ ಈಗ ವೈರಲ್ ಆಗಿದೆ. ಅವರು ಹೆಸರಿನಲ್ಲಿ ಹಲವಾರು ಟ್ವಿಟರ್ ಖಾತೆಗಳಿದ್ದು ಅವುಗಳಲ್ಲಿ ರೈತ ಹೋರಾಟದ ಪರವಾಗಿ ಟ್ವೀಟ್ ಮಾಡಲಾಗಿದೆ. ಆದರೆ ಅವು ಅನಧಿಕೃತ ಎಂದು ಅವರ ಪತ್ನಿ ಸ್ಪಷ್ಟೀಕರಣ ನೀಡಿದ್ದಾರೆ. ಅವರ ವೈರಲ್ ವಿಡಿಯೋದ ಪೂರ್ಣ ಪಾಠ ಇಲ್ಲಿದೆ.

ನಾಸಿರುದ್ದೀನ್‌ ಶಾ ಹೇಳಿರುವುದೇನು?

ಸಾವಿರಾರು ರೈತ ಸೋದರ-ಸೋದರಿಯರು, ಮಕ್ಕಳು ದೆಹಲಿಯ ಕೊರೆಯುವ ಚಳಿಯಲ್ಲಿ ನ್ಯಾಯ ಕೇಳಲು, ತಮ್ಮ ಹಕ್ಕನ್ನು ಪಡೆಯಲು ಸೇರಿದ್ದೀರಿ, ನಿಮಗೆಲ್ಲಾ ನನ್ನ ನಮಸ್ಕಾರಗಳು

ಈ ದೇಶದ ಆಳ್ವಿಕೆಯು ನಿಮ್ಮೊಂದಿಗೆ ಯಾವ ರೀತಿಯಲ್ಲಿ ವರ್ತಿಸುತ್ತಿದೆಯೊ, ಅದು ನನಗೆ ದಬ್ಬಾಳಿಕೆಯ ತಂದೆ-ತಾಯಿಗಳ ಕತೆಯನ್ನು ನೆನಪಿಸುತ್ತದೆ.

ಅವರ ಮಕ್ಕಳು ಶಿಲ್ಪಿಯೋ, ಪ್ರವಾಸಿಯೋ ಆಗಬೇಕೆಂದು ಬಯಸಿದರೆ, ನಿಮಗೇನು ಬೇಕು ಎಂದು ನಿಮಗೆ ಗೊತ್ತಾಗೊಲ್ಲ. ನಿಮಗಿಂತ ಚೆನ್ನಾಗಿ ನಮಗೆ ಗೊತ್ತು. ನಿಮಗೆ ಯಾವುದು ಹೆಚ್ಚು ಲಾಭದಾಯಕ ಎಂಬುದು ನಮಗೆ ಗೊತ್ತು ಎನ್ನುತ್ತಾರೆ ಪೋಷಕರು.

ನಮ್ಮ ಪ್ರಕಾರ, ಯಾರು ತನ್ನ ಬಲವನ್ನು ನಂಬಿ, ನೇಗಿಲು ಹಿಡಿದು ನೆಲವನ್ನು ಉಳುತ್ತಾನೋ, ಪ್ರೀತಿ ಮತ್ತು ಪರಿಶ್ರಮದಿಂದ ಅದೇ ನೆಲದಲ್ಲಿ ಬೀಜ ಬಿತ್ತುತ್ತಾನೊ, ಆ ನೆಲವನ್ನು ಸಿಂಗರಿಸುತ್ತಾನೊ, ಬೆಳೆಯನ್ನು ತನ್ನ ಮಗುವಂತೆ ಪೊರೆಯುತ್ತಾನೋ ಆತನಿಗಿಂತ ಚೆನ್ನಾಗಿ ಬೇರೆ ಯಾರಿಗೂ ಯಾವುದೂ ಲಾಭದಾಯಕವಾದದ್ದು ಎಂಬುದು ತಿಳಿದಿರಲು ಸಾಧ್ಯವಿಲ್ಲ.

ಈ ಆಳ್ವಿಕೆಯು ಸಾವಿರಾರು ರೀತಿಯಲ್ಲಿ ಮುಗ್ದರನ್ನು ವಂಚಕರೆಂದು ಹೆಸರು ಕೆಡಿಸುವ ಪ್ರಯತ್ನ ಮಾಡಿದರೆ, ನನ್ನಂತಹ ಲಕ್ಷಾಂತರ ಜನರಿದ್ದಾರೆ, ಅವರೆಲ್ಲರ ಪ್ರಾರ್ಥನೆ ನಿಮ್ಮೊಂದಿಗಿದೆ. ಈ ಎಲ್ಲರಿಗೂ ನಿಮ್ಮ ಶಕ್ತಿ, ಸಂಯಮ, ಅಧಿಕಾರವೇ ಮಾದರಿ.

ನಿಮ್ಮಂತಹವರಿಗಾಗಿಯೇ ಕವಿಯೊಬ್ಬರು ಹೇಳಿದ್ದು, ಈ ಘಮ್ಮೆನ್ನುವ ಹೂ ರಾಶಿ, ನಳನಳಿಸುವ ಹೊಲದ ದೊರೆ ನೀನು ಎಂದು ವರ್ಣಿಸಿದ್ದಾರೆ.

ನಮ್ಮ ಅನ್ನದಾತರು ನೀವು, ನಿಮ್ಮ ಗುರಿಯನ್ನು ಮುಟ್ಟಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ನನಗೆ ನಂಬಿಕೆ ಇದೆ, ಈ ರೈತ ಹೋರಾಟ ವ್ಯಾಪಿಸುತ್ತದೆ ಮತ್ತು ಜನಸಾಮಾನ್ಯರು ಇದರಲ್ಲಿ ಭಾಗಿಯಾಗುತ್ತಾರೆ. ಆಗಲೇಬೇಕು. ಇಂತಹ ಕಾಲದಲ್ಲಿ ಮೌನವಾಗಿರುವುದು ಎಂದರೆ ದಬ್ಬಾಳಿಕೆ ನಡೆಸುತ್ತಿರುವವರ ಪರವಹಿಸಿದಂತೆ ಎಂದು ನಾನು ಭಾವಿಸುತ್ತೇನೆ. ನಮ್ಮ ಚಿತ್ರರಂಗದ ದೊಡ್ಡ ಮನುಷ್ಯರು ಸುಮ್ಮನೆ ಕೂತಿದ್ದಾರೆ. ತುಟಿ ಬಿಚ್ಚಿದರೆ ಬಹಳಷ್ಟು ಕಳೆದುಕೊಳ್ಳಬೇಕಾಗುತ್ತದೆ ಎಂದು ಅವರಿಗೆ ಅನ್ನಿಸುತ್ತಿದೆ. ಅಲ್ಲಾ, ಏಳು ತಲೆಮಾರು ಕೂತು ತಿನ್ನುವಷ್ಟು ಹಣ ಸಂಪಾದನೆ ಮಾಡಿದ್ದೀರಲ್ಲಾ, ಮಾತನಾಡುವುದಕ್ಕೆ ಏನು ತೊಂದರೆ’?


ಇದನ್ನೂ ಓದಿ: ಸಂಸತ್ತಿನಲ್ಲಿ ಮಹುವಾ ಮೊಯಿತ್ರ ಬಿರುಗಾಳಿ ಭಾಷಣ: ಯಾವುದೇ ಕ್ರಮವಿಲ್ಲವೆಂದ ಕೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...