Homeಚಳವಳಿಮಹಾಪಂಚಾಯತ್‌ಗಳತ್ತ ಗಮನ ಹರಿಸಲಿದ್ದಾರೆಯೆ ರೈತರು? ಹೋರಾಟದ ದಿಕ್ಕು ಇಂದು ನಿರ್ಧಾರ

ಮಹಾಪಂಚಾಯತ್‌ಗಳತ್ತ ಗಮನ ಹರಿಸಲಿದ್ದಾರೆಯೆ ರೈತರು? ಹೋರಾಟದ ದಿಕ್ಕು ಇಂದು ನಿರ್ಧಾರ

- Advertisement -
- Advertisement -

ಕೇಂದ್ರ ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟಿಸುತ್ತಿರುವ ರೈತ ಸಂಘಗಳ ಒಕ್ಕೂಟವಾದ ಸಂಯುಕ್ತ್ ಕಿಸಾನ್ ಮೋರ್ಚಾ ಇಂದು ಸಭೆ ಸೇರಲಿದ್ದು, ರೈತ ಹೋರಾಟದ ಮುಂದೆಯಿರುವ ಗುರಿಗಳ ಬಗ್ಗೆ ನಿರ್ಧರಿಸಲಿದೆ.

ಒಂದೂವರೆ ವರ್ಷಗಳ ಕಾಲ ಕಾನೂನುಗಳನ್ನು ಅಮಾನತಿನಲ್ಲಿಡುವ ಕೇಂದ್ರದ ಪ್ರಸ್ತಾಪವನ್ನು ಸಂಯುಕ್ತ್‌ ಕಿಸಾನ್ ಮೋರ್ಚಾವು ಈಗಾಗಲೇ ತಿರಸ್ಕರಿಸಿದೆ. ಈ ನಿರಾಕರಣೆಯ ನಂತರ, 11 ನೇ ಸುತ್ತಿನ ಮಾತುಕತೆಯಾದರೂ, ಮುಂದಿನ ಮಾತುಕತೆಗೆ ಯಾವುದೆ ಹೊಸ ದಿನಾಂಕವನ್ನು ನಿರ್ಧರಿಸಲಾಗಿಲ್ಲ. ಆದರೆ ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿಯು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ರೈತರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ’ಟ್ರಾಕ್ಟರ್‌ ಕ್ರಾಂತಿ’ಯಲ್ಲಿ ಭಾಗವಹಿಸಿ: ದೇಶಕ್ಕೆ ರೈತ ಮುಖಂಡ ಟಿಕಾಯತ್‌ ಕರೆ

ಗಣರಾಜ್ಯೋತ್ಸವದಂದು ನಡೆದ ಅಹಿತಕರ ಘಟನೆಯ ನಂತರ, ಇಲ್ಲಿಯವರೆಗೆ ರೈತರ ಹೋರಾಟವು ಮತ್ತೊಂದು ದಿಕ್ಕಿನತ್ತ ಹೊರಳಿದೆ. ರೈತ ಸಂಘದ ಮುಖಂಡರಿಗೆ ಕೇಂದ್ರ ಸರ್ಕಾರ ಕಿರುಕುಳ ನೀಡಲು ಪ್ರಾರಂಭಿಸಿದ ನಂತರ ದೆಹಲಿ ಕೇಂದ್ರವಾಗಿ ಇದ್ದ ಹೋರಾಟದ ಕಾವು ಉತ್ತರ ಪ್ರದೇಶ, ಹರಿಯಾಣ ಸೇರಿದಂತೆ ಇತರ ರಾಜ್ಯಗಳಲ್ಲಿ ’ರೈತ ಮಹಾಪಂಚಾಯತ್’ ನಡೆಯುವ ಮೂಲಕ ಹೋರಾಟದ ವ್ಯಾಪ್ತಿ ಹೆಚ್ಚಾಗತೊಡಗಿದೆ.

ಇಲ್ಲಿಯವರೆಗೆ ನಡೆದ ಮಹಾಪಂಚಾಯತ್‌ಗಳಿಗೆ ಭಾರಿ ಬೆಂಬಲ ದೊರೆತಿರುವುದರಿಂದ, ಇಂತಹ ಹೆಚ್ಚಿನ ಮಹಾಪಂಚಾಯತ್‌ಗಳನ್ನು ಆಯೋಜಿಸುವುದರತ್ತ ಗಮನಹರಿಸಲಾಗುತ್ತಿದೆ. ಗಣರಾಜ್ಯೋತ್ಸವದಲ್ಲಿ ನಡೆದ ಅಹಿತಕರ ಘಟನೆಯ ನಂತರ, ಹೋರಾಟದ ದಿಕ್ಕನ್ನೆ ಬದಲಾಯಿಸಿದ ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್‌, ಇಂತಹ ಮಹಾಪಂಚಾಯತ್‌‌ಗಳಿಗೆ ಹೆಚ್ಚಿನ ಸಂಖ್ಯೆಯ ಜನಸಮೂಹವನ್ನು ಸೆಳೆಯಲು ಪ್ರಾರಂಭಿಸಿದ್ದಾರೆ.

ಟಿಕಾಯತ್‌‌ ಇದುವರೆಗೆ ಜಿಂದ್, ದಾದ್ರಿ, ಕುರುಕ್ಷೇತ್ರ ಒಟ್ಟು ಮೂರು ಮಹಾಪಂಚಾಯತ್‌ಗಳಿಗೆ ಹಾಜರಾಗಿದ್ದಾರೆ. ಇತ್ತ ರಾಜಸ್ಥಾನದಲ್ಲಿ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಮಹಾಪಂಚಾಯತ್‌‌‌‌ ನಡೆಸಿ ಭಾಷಣ ಮಾಡಿದ್ದಾರೆ; ಪ್ರಿಯಾಂಕಾ ಗಾಂಧಿ ಸಹರಾನ್ಪುರದಲ್ಲಿ ಭಾಷಣ ಮಾಡಲಿದ್ದಾರೆ.

ಹೋರಾಟ ನಿರತ ರೈತರ ಕೊನೆಯ ಕಾರ್ಯಕ್ರಮ ಶಾಂತಿಯುತ ‘ಚಕ್ಕಾ ಜಾಮ್’ ಆಗಿದ್ದು, ಇದಕ್ಕೆ ದೇಶಾದ್ಯಂತ ಭಾರಿ ಬೆಂಬಲ ವ್ಯಕ್ತವಾಯಿತು. ಕೇಂದ್ರಕ್ಕೆ ಅಕ್ಟೋಬರ್‌‌ವರೆಗೆ ಕಾನೂನನ್ನು ಕೈಬಿಡುವುದಕ್ಕೆ ಅಕ್ಟೋಬರ್‌ವರೆಗೆ ಸಮಯವಿದೆ ಎಂದು ಹೇಳುವ ಮೂಲಕ ರಾಕೇಶ್‌ ಟಿಕಾಯತ್‌, ಪ್ರತಿಭಟನೆಯು ಅಲ್ಲಿಯವರೆಗೆ ನಡೆಯಲಿದೆ ಎಂದು ಸೂಚಿಸಿದ್ದರು.

ಇದನ್ನೂ ಓದಿ: ದೇಶವ್ಯಾಪಿ ಹರಡುತ್ತಿರುವ ರೈತ ಹೋರಾಟ: ಪ್ರತಿಭಟನೆ ಜೀವಂತವಾಗಿಡಲು ವಾರಕ್ಕೊಮ್ಮೆ ‘ಚಕ್ಕಾ ಜಾಮ್’?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...