Homeಮುಖಪುಟರೈತರಿಗೆ ಪ್ರತಿಭಟಿಸುವ ಹಕ್ಕಿದೆ: ರೈತ ಹೋರಾಟ ಬೆಂಬಲಿಸಿದ ಅಮೆರಿಕ ರಾಜಕಾರಣಿಗಳು

ರೈತರಿಗೆ ಪ್ರತಿಭಟಿಸುವ ಹಕ್ಕಿದೆ: ರೈತ ಹೋರಾಟ ಬೆಂಬಲಿಸಿದ ಅಮೆರಿಕ ರಾಜಕಾರಣಿಗಳು

ಭಾರತದ ರೈತರಿಗೆ ಶಾಂತಿಯುತವಾಗಿ ಪ್ರತಿಭಟಿಸಲು ಅವಕಾಶ ನೀಡಬೇಕೆಂದೂ, ಅನ್ಯಾಯಯುತವಾಗಿರುವ ಕೃಷಿ ಕಾಯ್ದೆಗಳನ್ನು ರದ್ದುಪಡಿಸಬೇಕೆಂದೂ ನಾನು ಭಾರತ ಸರ್ಕಾರವನ್ನು ಒತ್ತಾಯಿಸುತ್ತೇನೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಗಡಿಗಳಲ್ಲಿ ಕಳೆದ 79 ದಿನಗಳಿಂದ ಹೋರಾಟ ನಡೆಸುತ್ತಿರುವ ರೈತರಿಗೆ ಪ್ರಪಂಚದೆಲ್ಲೆಡೆಯಿಂದ ಬೆಂಬಲ ಮುಂದುವರೆದಿದೆ. ಕ್ಯಾಲಿಫೋರ್ನಿಯ ರಾಜ್ಯದ ಬೇಕರ್ಸ್‌ಫೀಲ್ಡ್ ನಗರದ ಮೇಯರ್ ಕೆರೆನ್ ಗೌ ಮತ್ತು ಮಿಚಿಗನ್‌ನ 13 ನೇ ಕಾಂಗ್ರೆಸ್ ಜಿಲ್ಲೆಯ ಯು.ಎಸ್. ಪ್ರತಿನಿಧಿ ರಶೀದಾ ಹರ್ಬಿ ತ್ಲೈಬ್ ಭಾರತದ ರೈತರಿಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ.

ರಶೀದಾ ಹರ್ಬಿ ತ್ಲೈಬ್ ಮಂಗಳವಾರ ರಾತ್ರಿ ಟ್ವೀಟ್ ಮಾಡಿ “ಭಾರತದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗಳು ಇದುವರೆಗಿನ ಅತ್ಯಂತ ವಿವಿಧ್ಯಮಯ ಪ್ರತಿಭಟನೆಗಳಾಗಿವೆ. ಕೃಷಿಯನ್ನು ಕಾರ್ಪೊರೇಟ್‌ ವಯಲಕ್ಕೆ ಹಸ್ತಾಂತರಿಸುವುದನ್ನು ವಿರೋಧಿಸಿ ಭಾರತದ ರೈತರಿಗೆ (ಅಮೆರಿಕದಂತೆಯೇ) ತಮ್ಮ ಸಾಮೂಹಿಕ ಧ್ವನಿಯನ್ನು ಬಳಸುವ ಎಲ್ಲ ಹಕ್ಕಿದೆ” ಎಂದು ತಿಳಿಸಿದ್ದಾರೆ.

ಸಿಎಎ, ಕಾಶ್ಮೀರ ಮತ್ತು ಕೃಷಿ ಕಾಯ್ದೆ ಬಿಕ್ಕಟ್ಟುಗಳ ಮೂಲಕ ನಾಗರಿಕರ ವಿರುದ್ಧ ಹೆಚ್ಚುತ್ತಿರುವ ರಾಜ್ಯ ಹಿಂಸಾಚಾರದ ಗೊಂದಲದ ಪ್ರವೃತ್ತಿಯನ್ನು ನಾವು ನೋಡಿದ್ದೇವೆ. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವಾಗಿ, ಮೋದಿ ಸರ್ಕಾರ ಪ್ರತಿಭಟಿಸುವ ಹಕ್ಕನ್ನು ಗೌರವಿಸುವುದು ನಿರ್ಣಾಯಕ ಎಂದು ಅವರು ನ್ಯೂಯಾರ್ಕ್ ಟೈಮ್ಸ್‌ನ ಪತ್ರಿಕಾ ವರದಿಯೊಂದನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಅಮೇರಿಕದ ಕ್ಯಾಲಿಫೋರ್ನಿಯ ರಾಜ್ಯದ ಬೇಕರ್ಸ್‌ಫೀಲ್ಡ್ ನಗರದ ಮೇಯರ್ ಕೆರೆನ್ ಗೌ ಕಿಸಾನ್ ಏಕತಾ ಜಿಂದಾಬಾದ್ ಹೆಸರಿನ ವಿಡಿಯೋವೊಂದನ್ನು ಮಾಡಿ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ ಎಂದು ಅಸೋಸಿಯೇಟ್ಸ್‌‌ ಟೈಮ್ಸ್‌ ವರದಿ ಮಾಡಿದೆ.

ಆ ವಿಡಿಯೋದಲ್ಲಿ “ಭಾರತದ ರೈತರೆ, ನಿಮಗೆ ಶುಭಾಶಯಗಳು. ನಾನು ಭಾರತದಲ್ಲಿ ಜನಿಸಿದವಳು. ಭಾರತದ ಪುತ್ರಿಯಾಗಿ ನನ್ನ ಮಾತೃದೇಶದ ರೈತರ ಸ್ಥಿತಿಗತಿ ಬಗ್ಗೆ ನನಗೆ ಬಹಳ ಕಳವಳವಾಗಿದೆ. ನಾನು ನಿಮ್ಮ ಬೆಂಬಲಕ್ಕೆ ಇದ್ದೇನೆ. ನಮ್ಮ ಬೇಕರ್ಸ್‌ಫೀಲ್ಡ್ ನಗರವೊಂದು ರೈತಾಪಿ ಸೀಮೆ. ರೈತರ ಮಹತ್ವ ಎಷ್ಟೆನ್ನುವುದು ನಮಗೆ ಚೆನ್ನಾಗಿ ಗೊತ್ತಿದೆ. ನೀವು ನಮ್ಮ ಅನ್ನದಾತರು. ನೀವು ಜಗತ್ತಿಗೇ ಊಟ ನೀಡುವವರು” ಎಂದು ಹೇಳಿದ್ದಾರೆ.

ಭಾರತದ ರೈತರಿಗೆ ಶಾಂತಿಯುತವಾಗಿ ಪ್ರತಿಭಟಿಸಲು ಅವಕಾಶ ನೀಡಬೇಕೆಂದೂ, ಅನ್ಯಾಯಯುತವಾಗಿರುವ ಕೃಷಿ ಕಾಯ್ದೆಗಳನ್ನು ರದ್ದುಪಡಿಸಬೇಕೆಂದೂ ನಾನು ಭಾರತ ಸರ್ಕಾರವನ್ನು ಒತ್ತಾಯಿಸುತ್ತೇನೆ. ಕಿಸಾನ್ ಏಕತಾ ಜಿಂದಾಬಾದ್ ಎಂದು ವಿಡಿಯೋದಲ್ಲಿ ಅವರು ತಿಳಿಸಿದ್ದಾರೆ.

ಅಮೆರಿಕ ಸಂಸತ್ತಿನ ಇಂಡಿಯಾ ಕಾಕಸ್‌ನ ಸಹ-ಅಧ್ಯಕ್ಷ, ಸಂಸದ ಬ್ರಾಡ್ ಶೆರ್ಮನ್ ಅವರು ಭಾರತೀಯ ರೈತರ ಪ್ರತಿಭಟನೆ ಕುರಿತಂತೆ ಚರ್ಚೆ ಮಾಡಲು ಒಂದು ಸಭೆ ಕರೆದಿದ್ದಾರೆ. ಪ್ರಜಾಪ್ರಭುತ್ವದ ಬೇರುಗಳನ್ನು ಕಾಪಾಡಿಕೊಳ್ಳಲಾಗಿದೆಯೇ? ಪ್ರತಿಭಟನಾಕಾರರಿಗೆ ಶಾಂತಿಯುತವಾಗಿ ಪ್ರತಿಭಟಿಸಲು ಅವಕಾಶ ನೀಡಲಾಗಿದೆಯೇ? ಪ್ರತಿಭಟನಾಕಾರರಿಗೆ ಇಂಟರ್ನೆಟ್ ಲಭ್ಯವಿದೆಯೇ ಮತ್ತು ಪ್ರತಿಭಟನಾಕಾರರು ಪತ್ರಕರ್ತರನ್ನು ಭೇಟಿ ಮಾಡಲು ಅವಕಾಶ ಕಲ್ಪಿಸಲಾಗಿದೆಯೇ ಎಂಬುದನ್ನು ಖಚಿತಪಡಿಸಬೇಕು” ಎಂದು ಬ್ರಾಡ್ ಶೆರ್ಮನ್ ಹೇಳಿದ್ದಾರೆ.

ಪಾಪ್ ತಾರೆ ರಿಹಾನ್ನ ನಾವು ವಿಷಯದ ಕುರಿತು ಮಾತನಾಡಬಾರದೇಕೆ ಎಂದು ರೈತರ ಹೋರಾಟವನ್ನು ಉಲ್ಲೇಖಿಸಿದ ನಂತರ ಈ ಚಳವಳಿಗೆ ವಿಶ್ವದಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.


ಇದನ್ನೂ ಓದಿ : ಭಾರತೀಯ ರೈತರ ಪರ ಧ್ವನಿಯೆತ್ತಿದ ಅಮೆರಿಕ ಸಂಸದರ ಗುಂಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...