Homeಕರ್ನಾಟಕವೇತನ ಪಾವತಿ ವಿಳಂಬ ವಿರೋಧಿಸಿ ಬಿಎಂಟಿಸಿ ಉದ್ಯೋಗಿಗಳಿಂದ ಪ್ರತಿಭಟನೆ

ವೇತನ ಪಾವತಿ ವಿಳಂಬ ವಿರೋಧಿಸಿ ಬಿಎಂಟಿಸಿ ಉದ್ಯೋಗಿಗಳಿಂದ ಪ್ರತಿಭಟನೆ

ಕಳೆದ ಡಿಸೆಂಬರ್‌ನಲ್ಲಿ ನಿಗಮದ ನೌಕರರು, ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಹಾಗೂ ಇನ್ನೂ ಕೆಲವು ಬೇಡಿಕೆಗಳನ್ನು ಮುಂದಿಟ್ಟು ಕರ್ತವ್ಯಕ್ಕೆ ಹಾಜರಾಗದೆ ಪ್ರತಿಭಟನೆ ನಡೆಸಿದ್ದರು.

- Advertisement -
- Advertisement -

ವೇತನ ಪಾವತಿ ವಿಳಂಬದ ಬಗ್ಗೆ ಸಿಐಟಿಯು ಸೇರಿದಂತೆ ಸಾರಿಗೆ ಸಂಘಗಳು ಬುಧವಾರ ಬೆಂಗಳೂರು ಮಹಾನಗರ ಸಾರಿಗೆ ನಿಗಮ (ಬಿಎಂಟಿಸಿ) ಕೇಂದ್ರ ಕಚೇರಿಯಲ್ಲಿ ಪ್ರತಿಭಟನೆ ನಡೆಸಲಿವೆ. ಆದರೆ, ಪ್ರತಿಭಟನೆ ವೇಳೆ ಬಸ್ ಸೇವೆಗಳಿಗೆ ತೊಂದರೆಯಾಗುವುದಿಲ್ಲ ಎಂದು ಸಾರಿಗೆ ನಿಗಮ ತಿಳಿಸಿದೆ.

“ಕೆಲವು ಒಕ್ಕೂಟಗಳು ಕೇಂದ್ರ ಕಚೇರಿಗೆ ಭೇಟಿ ನೀಡಿ ಬಿಎಂಟಿಸಿ ಆಡಳಿತ ಮಂಡಳಿಗೆ ಮನವಿ ಪತ್ರವನ್ನು ಸಲ್ಲಿಸಲಿವೆ. ಬಿಎಂಟಿಸಿ ಬಸ್ ಕಾರ್ಯಾಚರಣೆ ಎಂದಿನಂತೆ ಬುಧವಾರವು ಇರಲಿದೆ”ಎಂದು ಬಸ್ ಕಾರ್ಯಾಚರಣೆಯನ್ನು ಉಲ್ಲೇಖಿಸಿ ಬಿಎಂಟಿಸಿ ಸಾರ್ವಜನಿಕಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಿಸೆಂಬರ್‌‌ ಮತ್ತು ಜನವರಿಯಲ್ಲಿ ಸಾರಿಗೆ ಉದ್ಯೋಗಿಗಳಿಗೆ ಕೇವಲ ಅರ್ಧದಷ್ಟು ವೇತನವನ್ನು ಮಾತ್ರ ನೀಡಲಾಗಿದೆ ಎಂದು ಕಾರ್ಮಿಕ ಸಂಘದ ಸದಸ್ಯರ ಹೇಳಿಕೆಯನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಸರ್ಕಾರ ಸಾರಿಗೆ ನೌಕರರ ಸಮಸ್ಯೆ ಬಗೆಹರಿಸಬೇಕಾದುದ್ದು ಹೀಗೆ..: ಬಸ್ ಪ್ರಯಾಣಿಕರ ವೇದಿಕೆಯ ಸಲಹೆಗಳು

ಪ್ರತಿಭಟನೆಯು ಕೇವಲ ಸಂಬಳದ ವಿಳಂಬದ ಬಗ್ಗೆ ಮಾತ್ರವಲ್ಲ. ಅದರ ಹೊರತಾಗಿ, ಯಾವುದೇ ಷರತ್ತುಗಳಿಲ್ಲದೆ ಸಾಪ್ತಾಹಿಕ ರಜೆ ನೀಡುವುದು, ಬಿಎಂಟಿಸಿಯಲ್ಲಿ ಮಹಿಳಾ ಸಿಬ್ಬಂದಿಗೆ ಕೆಲಸಕ್ಕೆ ಆದ್ಯತೆ ನೀಡುವುದು ಮತ್ತು ನೌಕರರ ಕುಂದುಕೊರತೆ ಸಮಿತಿಯನ್ನು ರಚಿಸುವುದು ಸೇರಿದಂತೆ ಹಲವು ಬೇಡಿಕೆಗಳು ಸೇರಿವೆ ಎಂದು ಕಾರ್ಮಿಕ ಸಂಘದ ಸದಸ್ಯರು ಹೇಳಿದ್ದಾರೆ.

“ಕೊರೊನಾದ ಪ್ರಭಾವದಿಂದಾಗಿ ಸಂಬಳದ ವಿಳಂಬವಾಗಿದೆ. ಸರ್ಕಾರದ ಆರ್ಥಿಕ ವಾಸ್ತವತೆಗಳನ್ನು ಅರ್ಥಮಾಡಿಕೊಳ್ಳಬೇಕೆಂದು ನಾನು ಕಾರ್ಮಿಕರಿಗೆ ಮನವಿ ಮಾಡುತ್ತೇನೆ. ಹಣಕಾಸು ಇಲಾಖೆಗೆ ಪ್ರಸ್ತಾವನೆ ಕಳುಹಿಸಲಾಗಿದೆ, ಎರಡು ದಿನಗಳಲ್ಲಿ ಎಲ್ಲಾ ಚಾಲಕರು ಮತ್ತು ಕಂಡಕ್ಟರ್‌ಗಳ ವೇತನವನ್ನು ನೀಡಲಾಗುವುದು” ಎಂದು ಕರ್ನಾಟಕದ ಉಪಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಹೇಳಿದ್ದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಕಳೆದ ಡಿಸೆಂಬರ್‌ನಲ್ಲಿ ನಿಗಮದ ನೌಕರರು, ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಹಾಗು ಇನ್ನೂ ಕೆಲವು ಬೇಡಿಕೆಗಳನ್ನು ಮುಂದಿಟ್ಟು ಕರ್ತವ್ಯಕ್ಕೆ ಹಾಜರಾಗದೆ ಪ್ರತಿಭಟನೆ ನಡೆಸಿದ್ದರು.

ಇದನ್ನೂ ಓದಿ: ಎನ್‌ಆರ್‌ಐಗಳಂತೆ ವಲಸೆ ಕಾರ್ಮಿಕರು ಮನುಷ್ಯರಲ್ಲವೇ? ಸರ್ಕಾರದಿಂದ ಈ ತಾರತಮ್ಯವೇತಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....