Homeಅಂತರಾಷ್ಟ್ರೀಯಭಾರತೀಯ ಅಮೆರಿಕನ್ನರು: ‘ಅಮೆರಿಕದಲ್ಲಿ ಉದಾರವಾದಿ, ಭಾರತದಲ್ಲಿ ಸಂಪ್ರದಾಯವಾದಿ!’

ಭಾರತೀಯ ಅಮೆರಿಕನ್ನರು: ‘ಅಮೆರಿಕದಲ್ಲಿ ಉದಾರವಾದಿ, ಭಾರತದಲ್ಲಿ ಸಂಪ್ರದಾಯವಾದಿ!’

ವೃತ್ತಿಯಲ್ಲಿ ಇಂಜಿನಿಯರ್‌ ಆಗಿರುವ 61% ಭಾರತೀಯ ಅಮೆರಿಕನ್ನರು ಮೋದಿಯನ್ನು ಬೆಂಬಲಿಸುತ್ತಾರೆ ಎಂದು ಸಮಿಕ್ಷೆ ಹೇಳಿದೆ

- Advertisement -
- Advertisement -

ಭಾರತೀಯ ಅಮೆರಿಕನ್ನರು ರಾಜಕೀಯ ವಿಷಯದ ಬಗ್ಗೆ ಅಮೆರಿಕದಲ್ಲಿ ಉದಾರವಾದಿ ದೃಷ್ಟಿಕೋನ ಹೊಂದಿದ್ದು, ಅದುವೆ ಭಾರತದ ವಿಷಯಕ್ಕೆ ಬಂದಾಗ ಸಂಪ್ರದಾಯವಾದಿಗಳಾಗಿ ಪರಿವರ್ತನೆ ಹೊಂದುತ್ತಾರೆ ಎಂದು ಸಮೀಕ್ಷೆಯೊಂದು ಹೇಳಿದೆ.

ಉದಾಹರಣೆಗೆ, “ಹಿಂದೂಗಳು ಹಾಗೂ ಹಿಂದೂಯೇತರರು ’ಬಿಳಿ ಜನಾಂಗೀಯವಾದದ ಪ್ರಾಬಲ್ಯವು’ ಅಮೆರಿಕದಲ್ಲಿ ಅಪಾಯವನ್ನುಂಟುಮಾಡುತ್ತದೆ ಎಂದು ಒಪ್ಪುತ್ತಾರೆ. ಆದರೆ ಭಾರತದಲ್ಲಿ ಹಿಂದೂ ಬಹುಸಂಖ್ಯಾತವಾದದಿಂದ ಉಂಟಾಗುವ ಬೆದರಿಕೆಯ ಬಗ್ಗೆ ಅವರ ದೃಷ್ಟಿಕೋನ ಗಮನಾರ್ಹವಾಗಿ ಭಿನ್ನವಾಗಿದೆ” ಎಂದು ಸಮೀಕ್ಷೆಯು ಹೇಳಿದೆ.

ಕಾರ್ನೆಗೀ ಎಂಡೋಮೆಂಟ್ ಫಾರ್ ಇಂಟರ್ನ್ಯಾಷನಲ್ ಪೀಸ್, ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯ ಮತ್ತು ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯವು 2020 ಸೆಪ್ಟೆಂಬರ್‌ನಲ್ಲಿ ಆನ್‌ಲೈನ್ ಮೂಲಕ ಈ ಸಮೀಕ್ಷೆ ನಡೆಸಿದೆ. ಸಮೀಕ್ಷೆಯು 1,200 ಭಾರತೀಯ ಅಮೆರಿಕನ್ ವಯಸ್ಕ ನಿವಾಸಿಗಳನ್ನು ಒಳಗೊಂಡಿದೆ. ಅಮೆರಿಕದಲ್ಲಿ 42 ಲಕ್ಷ ಭಾರತೀಯ ಅಮೆರಿಕನ್ನರಿದ್ದು, ಇದು ಎರಡನೇ ಅತಿದೊಡ್ಡ ವಲಸೆಗಾರ ಸಮುದಾಯವಾಗಿದೆ. ಇದರಲ್ಲಿ 38% ಜನರು ಇನ್ನೂ ಅಮೆರಿಕದ ಪ್ರಜೆಗಳಲ್ಲ.

ಇದನ್ನೂ ಓದಿ: ಹಂಪನಾ ಅವರ ಪ್ರತಿರೋಧ ಮತ್ತು ವಿಸ್ತಾರವಾದ ವ್ಯಾಪ್ತಿ ಪಡೆಯಬೇಕಿರುವ ಕನ್ನಡದ ಕೆಲಸ

ಅಮೆರಿಕದಲ್ಲಿ ಬಿಳಿಜನಾಂಗೀಯವಾದವು ಅಲ್ಪಸಂಖ್ಯಾತರಿಗೆ ಅಪಾಯಕಾರಿಯಾಗಿದೆ ಎಂದು ಹೇಳಿರುವ 73% ದಷ್ಟು ಜನರಲ್ಲಿ, ಅರ್ಧಕ್ಕಿಂತ ಕಡಿಮೆ ಜನರು ಹಿಂದೂ ಬಹುಸಂಖ್ಯಾತವಾದವು ಭಾರತದಲ್ಲಿ ಅಲ್ಪಸಂಖ್ಯಾತರಿಗೆ ಅಪಾಯಕಾರಿಯಾಗಿದೆ ಎಂದು ನಂಬಿದ್ದಾರೆ. ಕೇವಲ 40% ಭಾರತೀಯ ಅಮೆರಿಕನ್‌ ಹಿಂದೂಗಳು, ಹಿಂದೂ ಬಹುಸಂಖ್ಯಾವಾದವು ಅಪಾಕಾರಿ ಎಂದು ನಂಬಿದ್ದಾರೆ. ಆದರೆ 67% ಹಿಂದೂಯೇತರ ಭಾರತೀಯ ಅಮೆರಿಕನ್ನರು ಹಿಂದೂ ಬಹುಸಂಖ್ಯಾತವಾದವು ಅಪಾಯ ಎಂದು ಹೇಳಿದ್ದಾರೆ.

ಭಾರತವು “ಸರಿಯಾದ ಹಾದಿಯಲ್ಲಿದೆ” ಎಂದು 36% ಜನರು ಒಪ್ಪಿಕೊಂಡಿದ್ದಾರೆ. ಆದರೆ 39% ಜನರು ಅದನ್ನು ಒಪ್ಪಿಕೊಂಡಿಲ್ಲ. ಅಮೆರಿಕದಲ್ಲಿ ಹುಟ್ಟಿದ ಭಾರತೀಯ ಅಮೆರಿಕನ್ನರಿಗಿಂತ ಹೆಚ್ಚಾಗಿ, ವಿದೇಶದಲ್ಲಿ ಹುಟ್ಟಿದ ಭಾರತೀಯ ಅಮೆರಿಕನ್ನರು ಭಾರತವು ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ ಎಂದು ನಂಬುತ್ತಾರೆ.

ಇದನ್ನೂ ಓದಿ: ಗೌರಿ ಕಾರ್ನರ್: ಓರ್ವ ಜನಪರ ನ್ಯಾಯಮೂರ್ತಿಯವರನ್ನು ಕುರಿತು

ಜನಸಂಖ್ಯೆಯ ಅತಿದೊಡ್ಡ ಭಾಗವಾದ 35% ಜನರು ತಮ್ಮನ್ನು “ಭಾರತ ಪರ” ಎಂದು ಗುರುತಿಸಿಕೊಂಡಿದ್ದಾರೆ ಆದರೆ ಪ್ರಸ್ತುತ ಸರ್ಕಾರದ ಕೆಲವು ನೀತಿಗಳನ್ನು ಟೀಕಿಸಿದ್ದಾರೆ. ಇನ್ನೂ 23% ಜನರು ಭಾರತದ ಪರವಾಗಿದ್ದರಾದರೂ ಅನೇಕ ರಾಜಕಾರಣವನ್ನು ಟೀಕಿಸಿದ್ದಾರೆ. 17% ಜನರು ಭಾರತ ಮತ್ತು ಪ್ರಸ್ತುತ ಸರ್ಕಾರದ ಬಗ್ಗೆ ಸಕಾರಾತ್ಮಕ ನಿಲುವನ್ನು ಹೊಂದಿದ್ದಾರೆ.

NRC-CAA ಯನ್ನು ಕ್ರಮವಾಗಿ 55% ಮತ್ತು 51% ರಷ್ಟು ಜನರು ಬೆಂಬಲಿಸಿದ್ದಾರೆ. ಆದರೆ, ಶಾಂತಿಯುತ ಪ್ರತಿಭಟನಾಕಾರರ ಮೇಲೆ ಪೊಲೀಸ್ ಬಲವನ್ನು ಬಳಸುವುದನ್ನು ಅವರು ವಿರೋಧಿಸಿದ್ದಾರೆ ಹಾಗೂ ಪತ್ರಕರ್ತರ ವಿರುದ್ಧ ಮತ್ತು ಮೋದಿ ಸರ್ಕಾರವನ್ನು ಟೀಕಿಸುವವರ ವಿರುದ್ದ ಮಾನಹಾನಿ ಮತ್ತು ದೇಶದ್ರೋಹ ಪ್ರಕರಣ ದಾಖಲಿಸುವುದನ್ನು ವಿರೋಧಿಸಿದ್ದಾರೆ.

ಅಮರಿಕದಲ್ಲಿ ಭಾರತೀಯ ಅಮೆರಿಕನ್ನರು ಹೆಚ್ಚು ಉದಾರವಾದಿಗಳಾಗಿದ್ದಾರೆ. ಉದಾಹರಣೆಗೆ, ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಕೆಲವು ಮುಸ್ಲಿಂ ಬಹುಸಂಖ್ಯಾತ ದೇಶಗಳ ಮೇಲೆ ಹೇರಿದ ನಿಷೇಧವನ್ನು 60% ಜನರು ವಿರೋಧಿಸಿದ್ದಾರೆ.

ಇದನ್ನೂ ಓದಿ: ಹಿಂದು ರಾಷ್ಟ್ರವೆಂಬುದೇ ಭ್ರಮೆ; ಆಕಾರ್ ಪಟೇಲ್ ಅವರ ’ಅವರ್ ಹಿಂದು ರಾಷ್ಟ್ರ’ ಪುಸ್ತಕ ಪರಿಚಯ

40% ಜನರು ಭಾರತೀಯ ರಾಜಕೀಯ ಪಕ್ಷದಲ್ಲಿ ಯಾವುದೆ ಪಕ್ಷವನ್ನು ಆಯ್ಕೆ ಮಾಡಲಿಲ್ಲ, ಆದರೆ 33% ಜನರು ಬಿಜೆಪಿಯನ್ನು ಆಯ್ಕೆ ಮಾಡಿದ್ದು, 12% ಜನರು ಕಾಂಗ್ರೆಸ್‌ ಪಕ್ಷವನ್ನು ಮತ್ತು 16% ಇತರ ಪಕ್ಷವನ್ನು ಆಯ್ಕೆ ಮಾಡಿದ್ದಾರೆ.

ಭಾರತ ಎದುರಿಸುತ್ತಿರುವ ದೊಡ್ಡ ಸವಾಲುಗಳ ಬಗ್ಗೆ, ಭ್ರಷ್ಟಾಚಾರವೆ ಅತೀ ದೊಡ್ಡ ಸಮಸ್ಯೆ ಎಂದು 18%  ಜನರು ಹೇಳಿದ್ದಾರೆ. ಆರ್ಥಿಕತೆ ಸಮಸ್ಯೆ 15%, ಧಾರ್ಮಿಕ ಬಹುಸಂಖ್ಯಾತವಾದ ಸಮಸ್ಯೆ 10%, ಆರೋಗ್ಯ ರಕ್ಷಣೆಯ ಸಮಸ್ಯೆ 8%, ಚೀನಾ 7%, ಭಯೋತ್ಪಾದನೆ 7%, ಜಾತಿ ತಾರತಮ್ಯ 6%, ಶಿಕ್ಷಣದ ಸಮಸ್ಯೆ 6%, ಆದಾಯ ಅಸಮಾನತೆ ಸಮಸ್ಯೆ 5%, ಹವಾಮಾನ ಬದಲಾವಣೆಯ ಸಮಸ್ಯೆ 4% ಮತ್ತು ಲಿಂಗಭೇದಭಾವದ ಸಮಸ್ಯೆ ಎಂದು 4% ಜನರು ಹೇಳಿದ್ದಾರೆ.

ಟ್ರಂಪ್‌ ಪಕ್ಷದಲ್ಲಿ ಮೋದಿ ಮತ್ತು ಬಿಜೆಪಿಯ ಬೆಂಬಲಿಗರ ನಡುವಿನ ಸಂಬಂಧವನ್ನು ಸಮೀಕ್ಷೆಯು ಕಂಡುಹಿಡಿದಿದೆ. ಅಮೆರಿಕನ್ ಭಾರತೀಯ ಹಿಂದೂಗಳಲ್ಲಿ 69% ಜನರು ಮೋದಿಯನ್ನು ಬೆಂಬಲಿಸುತ್ತಾರೆ. ಇತರ ಸಮುದಾಯಗಳಲ್ಲಿ 20% ರಿಂದ 33% ಜನರು ಮೋದಿಯನ್ನು ಬೆಂಬಲಿಸುತ್ತಾರೆ. ವೃತ್ತಿಯಲ್ಲಿ ಇಂಜಿನಿಯರ್‌ ಆಗಿರುವ 61% ಜನರು ಮೋದಿಯನ್ನು ಬೆಂಬಲಿಸುತ್ತಾರೆ. ಇಂಜಿನಿಯರ್‌ ಅಲ್ಲದ 48% ಜನರಷ್ಟೇ ಮೋದಿಯನ್ನು ಬೆಂಬಲಿಸುತ್ತಾರೆ.

ಇದನ್ನೂ ಓದಿ: ಬಹುಜನ ಭಾರತ: ಹೆಣ್ಣುಮಕ್ಕಳು ರೈತರಲ್ಲವೇ? ಸುಪ್ರೀಮ್ ಕೋರ್ಟು ತಿಳಿಯಲೊಲ್ಲದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...