Homeಅಂತರಾಷ್ಟ್ರೀಯಭಾರತೀಯ ಅಮೆರಿಕನ್ನರು: ‘ಅಮೆರಿಕದಲ್ಲಿ ಉದಾರವಾದಿ, ಭಾರತದಲ್ಲಿ ಸಂಪ್ರದಾಯವಾದಿ!’

ಭಾರತೀಯ ಅಮೆರಿಕನ್ನರು: ‘ಅಮೆರಿಕದಲ್ಲಿ ಉದಾರವಾದಿ, ಭಾರತದಲ್ಲಿ ಸಂಪ್ರದಾಯವಾದಿ!’

ವೃತ್ತಿಯಲ್ಲಿ ಇಂಜಿನಿಯರ್‌ ಆಗಿರುವ 61% ಭಾರತೀಯ ಅಮೆರಿಕನ್ನರು ಮೋದಿಯನ್ನು ಬೆಂಬಲಿಸುತ್ತಾರೆ ಎಂದು ಸಮಿಕ್ಷೆ ಹೇಳಿದೆ

- Advertisement -
- Advertisement -

ಭಾರತೀಯ ಅಮೆರಿಕನ್ನರು ರಾಜಕೀಯ ವಿಷಯದ ಬಗ್ಗೆ ಅಮೆರಿಕದಲ್ಲಿ ಉದಾರವಾದಿ ದೃಷ್ಟಿಕೋನ ಹೊಂದಿದ್ದು, ಅದುವೆ ಭಾರತದ ವಿಷಯಕ್ಕೆ ಬಂದಾಗ ಸಂಪ್ರದಾಯವಾದಿಗಳಾಗಿ ಪರಿವರ್ತನೆ ಹೊಂದುತ್ತಾರೆ ಎಂದು ಸಮೀಕ್ಷೆಯೊಂದು ಹೇಳಿದೆ.

ಉದಾಹರಣೆಗೆ, “ಹಿಂದೂಗಳು ಹಾಗೂ ಹಿಂದೂಯೇತರರು ’ಬಿಳಿ ಜನಾಂಗೀಯವಾದದ ಪ್ರಾಬಲ್ಯವು’ ಅಮೆರಿಕದಲ್ಲಿ ಅಪಾಯವನ್ನುಂಟುಮಾಡುತ್ತದೆ ಎಂದು ಒಪ್ಪುತ್ತಾರೆ. ಆದರೆ ಭಾರತದಲ್ಲಿ ಹಿಂದೂ ಬಹುಸಂಖ್ಯಾತವಾದದಿಂದ ಉಂಟಾಗುವ ಬೆದರಿಕೆಯ ಬಗ್ಗೆ ಅವರ ದೃಷ್ಟಿಕೋನ ಗಮನಾರ್ಹವಾಗಿ ಭಿನ್ನವಾಗಿದೆ” ಎಂದು ಸಮೀಕ್ಷೆಯು ಹೇಳಿದೆ.

ಕಾರ್ನೆಗೀ ಎಂಡೋಮೆಂಟ್ ಫಾರ್ ಇಂಟರ್ನ್ಯಾಷನಲ್ ಪೀಸ್, ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯ ಮತ್ತು ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯವು 2020 ಸೆಪ್ಟೆಂಬರ್‌ನಲ್ಲಿ ಆನ್‌ಲೈನ್ ಮೂಲಕ ಈ ಸಮೀಕ್ಷೆ ನಡೆಸಿದೆ. ಸಮೀಕ್ಷೆಯು 1,200 ಭಾರತೀಯ ಅಮೆರಿಕನ್ ವಯಸ್ಕ ನಿವಾಸಿಗಳನ್ನು ಒಳಗೊಂಡಿದೆ. ಅಮೆರಿಕದಲ್ಲಿ 42 ಲಕ್ಷ ಭಾರತೀಯ ಅಮೆರಿಕನ್ನರಿದ್ದು, ಇದು ಎರಡನೇ ಅತಿದೊಡ್ಡ ವಲಸೆಗಾರ ಸಮುದಾಯವಾಗಿದೆ. ಇದರಲ್ಲಿ 38% ಜನರು ಇನ್ನೂ ಅಮೆರಿಕದ ಪ್ರಜೆಗಳಲ್ಲ.

ಇದನ್ನೂ ಓದಿ: ಹಂಪನಾ ಅವರ ಪ್ರತಿರೋಧ ಮತ್ತು ವಿಸ್ತಾರವಾದ ವ್ಯಾಪ್ತಿ ಪಡೆಯಬೇಕಿರುವ ಕನ್ನಡದ ಕೆಲಸ

ಅಮೆರಿಕದಲ್ಲಿ ಬಿಳಿಜನಾಂಗೀಯವಾದವು ಅಲ್ಪಸಂಖ್ಯಾತರಿಗೆ ಅಪಾಯಕಾರಿಯಾಗಿದೆ ಎಂದು ಹೇಳಿರುವ 73% ದಷ್ಟು ಜನರಲ್ಲಿ, ಅರ್ಧಕ್ಕಿಂತ ಕಡಿಮೆ ಜನರು ಹಿಂದೂ ಬಹುಸಂಖ್ಯಾತವಾದವು ಭಾರತದಲ್ಲಿ ಅಲ್ಪಸಂಖ್ಯಾತರಿಗೆ ಅಪಾಯಕಾರಿಯಾಗಿದೆ ಎಂದು ನಂಬಿದ್ದಾರೆ. ಕೇವಲ 40% ಭಾರತೀಯ ಅಮೆರಿಕನ್‌ ಹಿಂದೂಗಳು, ಹಿಂದೂ ಬಹುಸಂಖ್ಯಾವಾದವು ಅಪಾಕಾರಿ ಎಂದು ನಂಬಿದ್ದಾರೆ. ಆದರೆ 67% ಹಿಂದೂಯೇತರ ಭಾರತೀಯ ಅಮೆರಿಕನ್ನರು ಹಿಂದೂ ಬಹುಸಂಖ್ಯಾತವಾದವು ಅಪಾಯ ಎಂದು ಹೇಳಿದ್ದಾರೆ.

ಭಾರತವು “ಸರಿಯಾದ ಹಾದಿಯಲ್ಲಿದೆ” ಎಂದು 36% ಜನರು ಒಪ್ಪಿಕೊಂಡಿದ್ದಾರೆ. ಆದರೆ 39% ಜನರು ಅದನ್ನು ಒಪ್ಪಿಕೊಂಡಿಲ್ಲ. ಅಮೆರಿಕದಲ್ಲಿ ಹುಟ್ಟಿದ ಭಾರತೀಯ ಅಮೆರಿಕನ್ನರಿಗಿಂತ ಹೆಚ್ಚಾಗಿ, ವಿದೇಶದಲ್ಲಿ ಹುಟ್ಟಿದ ಭಾರತೀಯ ಅಮೆರಿಕನ್ನರು ಭಾರತವು ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ ಎಂದು ನಂಬುತ್ತಾರೆ.

ಇದನ್ನೂ ಓದಿ: ಗೌರಿ ಕಾರ್ನರ್: ಓರ್ವ ಜನಪರ ನ್ಯಾಯಮೂರ್ತಿಯವರನ್ನು ಕುರಿತು

ಜನಸಂಖ್ಯೆಯ ಅತಿದೊಡ್ಡ ಭಾಗವಾದ 35% ಜನರು ತಮ್ಮನ್ನು “ಭಾರತ ಪರ” ಎಂದು ಗುರುತಿಸಿಕೊಂಡಿದ್ದಾರೆ ಆದರೆ ಪ್ರಸ್ತುತ ಸರ್ಕಾರದ ಕೆಲವು ನೀತಿಗಳನ್ನು ಟೀಕಿಸಿದ್ದಾರೆ. ಇನ್ನೂ 23% ಜನರು ಭಾರತದ ಪರವಾಗಿದ್ದರಾದರೂ ಅನೇಕ ರಾಜಕಾರಣವನ್ನು ಟೀಕಿಸಿದ್ದಾರೆ. 17% ಜನರು ಭಾರತ ಮತ್ತು ಪ್ರಸ್ತುತ ಸರ್ಕಾರದ ಬಗ್ಗೆ ಸಕಾರಾತ್ಮಕ ನಿಲುವನ್ನು ಹೊಂದಿದ್ದಾರೆ.

NRC-CAA ಯನ್ನು ಕ್ರಮವಾಗಿ 55% ಮತ್ತು 51% ರಷ್ಟು ಜನರು ಬೆಂಬಲಿಸಿದ್ದಾರೆ. ಆದರೆ, ಶಾಂತಿಯುತ ಪ್ರತಿಭಟನಾಕಾರರ ಮೇಲೆ ಪೊಲೀಸ್ ಬಲವನ್ನು ಬಳಸುವುದನ್ನು ಅವರು ವಿರೋಧಿಸಿದ್ದಾರೆ ಹಾಗೂ ಪತ್ರಕರ್ತರ ವಿರುದ್ಧ ಮತ್ತು ಮೋದಿ ಸರ್ಕಾರವನ್ನು ಟೀಕಿಸುವವರ ವಿರುದ್ದ ಮಾನಹಾನಿ ಮತ್ತು ದೇಶದ್ರೋಹ ಪ್ರಕರಣ ದಾಖಲಿಸುವುದನ್ನು ವಿರೋಧಿಸಿದ್ದಾರೆ.

ಅಮರಿಕದಲ್ಲಿ ಭಾರತೀಯ ಅಮೆರಿಕನ್ನರು ಹೆಚ್ಚು ಉದಾರವಾದಿಗಳಾಗಿದ್ದಾರೆ. ಉದಾಹರಣೆಗೆ, ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಕೆಲವು ಮುಸ್ಲಿಂ ಬಹುಸಂಖ್ಯಾತ ದೇಶಗಳ ಮೇಲೆ ಹೇರಿದ ನಿಷೇಧವನ್ನು 60% ಜನರು ವಿರೋಧಿಸಿದ್ದಾರೆ.

ಇದನ್ನೂ ಓದಿ: ಹಿಂದು ರಾಷ್ಟ್ರವೆಂಬುದೇ ಭ್ರಮೆ; ಆಕಾರ್ ಪಟೇಲ್ ಅವರ ’ಅವರ್ ಹಿಂದು ರಾಷ್ಟ್ರ’ ಪುಸ್ತಕ ಪರಿಚಯ

40% ಜನರು ಭಾರತೀಯ ರಾಜಕೀಯ ಪಕ್ಷದಲ್ಲಿ ಯಾವುದೆ ಪಕ್ಷವನ್ನು ಆಯ್ಕೆ ಮಾಡಲಿಲ್ಲ, ಆದರೆ 33% ಜನರು ಬಿಜೆಪಿಯನ್ನು ಆಯ್ಕೆ ಮಾಡಿದ್ದು, 12% ಜನರು ಕಾಂಗ್ರೆಸ್‌ ಪಕ್ಷವನ್ನು ಮತ್ತು 16% ಇತರ ಪಕ್ಷವನ್ನು ಆಯ್ಕೆ ಮಾಡಿದ್ದಾರೆ.

ಭಾರತ ಎದುರಿಸುತ್ತಿರುವ ದೊಡ್ಡ ಸವಾಲುಗಳ ಬಗ್ಗೆ, ಭ್ರಷ್ಟಾಚಾರವೆ ಅತೀ ದೊಡ್ಡ ಸಮಸ್ಯೆ ಎಂದು 18%  ಜನರು ಹೇಳಿದ್ದಾರೆ. ಆರ್ಥಿಕತೆ ಸಮಸ್ಯೆ 15%, ಧಾರ್ಮಿಕ ಬಹುಸಂಖ್ಯಾತವಾದ ಸಮಸ್ಯೆ 10%, ಆರೋಗ್ಯ ರಕ್ಷಣೆಯ ಸಮಸ್ಯೆ 8%, ಚೀನಾ 7%, ಭಯೋತ್ಪಾದನೆ 7%, ಜಾತಿ ತಾರತಮ್ಯ 6%, ಶಿಕ್ಷಣದ ಸಮಸ್ಯೆ 6%, ಆದಾಯ ಅಸಮಾನತೆ ಸಮಸ್ಯೆ 5%, ಹವಾಮಾನ ಬದಲಾವಣೆಯ ಸಮಸ್ಯೆ 4% ಮತ್ತು ಲಿಂಗಭೇದಭಾವದ ಸಮಸ್ಯೆ ಎಂದು 4% ಜನರು ಹೇಳಿದ್ದಾರೆ.

ಟ್ರಂಪ್‌ ಪಕ್ಷದಲ್ಲಿ ಮೋದಿ ಮತ್ತು ಬಿಜೆಪಿಯ ಬೆಂಬಲಿಗರ ನಡುವಿನ ಸಂಬಂಧವನ್ನು ಸಮೀಕ್ಷೆಯು ಕಂಡುಹಿಡಿದಿದೆ. ಅಮೆರಿಕನ್ ಭಾರತೀಯ ಹಿಂದೂಗಳಲ್ಲಿ 69% ಜನರು ಮೋದಿಯನ್ನು ಬೆಂಬಲಿಸುತ್ತಾರೆ. ಇತರ ಸಮುದಾಯಗಳಲ್ಲಿ 20% ರಿಂದ 33% ಜನರು ಮೋದಿಯನ್ನು ಬೆಂಬಲಿಸುತ್ತಾರೆ. ವೃತ್ತಿಯಲ್ಲಿ ಇಂಜಿನಿಯರ್‌ ಆಗಿರುವ 61% ಜನರು ಮೋದಿಯನ್ನು ಬೆಂಬಲಿಸುತ್ತಾರೆ. ಇಂಜಿನಿಯರ್‌ ಅಲ್ಲದ 48% ಜನರಷ್ಟೇ ಮೋದಿಯನ್ನು ಬೆಂಬಲಿಸುತ್ತಾರೆ.

ಇದನ್ನೂ ಓದಿ: ಬಹುಜನ ಭಾರತ: ಹೆಣ್ಣುಮಕ್ಕಳು ರೈತರಲ್ಲವೇ? ಸುಪ್ರೀಮ್ ಕೋರ್ಟು ತಿಳಿಯಲೊಲ್ಲದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಸ್ಕರ್ ನಾಮನಿರ್ದೇಶಿತ ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಚಿತ್ರ ಪ್ರದರ್ಶನಕ್ಕೆ ಭಾರತದಲ್ಲಿ ನಿರ್ಬಂಧ!

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ಳನ್ನು ಇಸ್ರೇಲಿ ಸೈನಿಕರು ಸುಮಾರು 300 ಸುತ್ತು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿರುವ ಕಥೆಯನ್ನು ಹೇಳುವ, 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರದ ಪ್ರದರ್ಶನಕ್ಕೆ...

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...

‘ನಾವು ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಪ್ರಯತ್ನಿಸುತ್ತೇವೆ’; ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ: ವರದಿ

ಟೆಹ್ರಾನ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗಳ ನಂತರ ಇರಾನ್‌ನ ಉನ್ನತ ಅಧಿಕಾರಿಗಳು ಮತ್ತು ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ ಸಾವಿರಾರು ಜನರು ಸಾವನ್ನಪ್ಪಿದ ನಂತರ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ...

‘ಅಮೆರಿಕ ಇಲ್ಲದೆ, ನ್ಯಾಟೋ ಒಂದು ಕಾಗದದ ಹುಲಿ’: ಅಟ್ಲಾಂಟಿಕ್ ಮೈತ್ರಿಕೂಟದ ದೇಶಗಳನ್ನು ‘ಹೇಡಿಗಳು’ ಎಂದ ಡೊನಾಲ್ಡ್ ಟ್ರಂಪ್  

ಇರಾನ್ ವಿರುದ್ಧದ ಅಮೆರಿಕ - ಇಸ್ರೇಲ್ ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ಮಿತ್ರರಾಷ್ಟ್ರಗಳ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದೀರ್ಘಕಾಲದ ಅಮೆರಿಕದ ಮಿತ್ರರಾಷ್ಟ್ರಗಳನ್ನು "ಹೇಡಿಗಳು" ಎಂದು ಕರೆದಿದ್ದಾರೆ. "ಯುಎಸ್ಎ ಇಲ್ಲದೆ,...

ಮುಖ್ಯಮಂತ್ರಿಗಳಿಗೆ ವರ್ಗಾವಣೆಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮಹತ್ವದ ಕೆಲಸವಿದೆ: ಕರ್ನಾಟಕ ಹೈಕೋರ್ಟ್ 

ಸರ್ಕಾರಿ ನೌಕರರ ವರ್ಗಾವಣೆ ಮತ್ತು ನೇಮಕಾತಿಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮುಖ್ಯಮಂತ್ರಿಗಳು ನಿರ್ವಹಿಸಬೇಕಾದ ಕೆಲಸ ಉತ್ತಮ ಮತ್ತು ಹೆಚ್ಚು ಮುಖ್ಯವಾದುದು ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚಿನ ತೀರ್ಪೊಂದರಲ್ಲಿ ಹೇಳಿದೆ.  ಬೆಸ್ಕಾಂ ಎಂಜಿನಿಯರ್ ವರ್ಗಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ...

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...