Homeಅಂತರಾಷ್ಟ್ರೀಯಭಾರತೀಯ ಅಮೆರಿಕನ್ನರು: ‘ಅಮೆರಿಕದಲ್ಲಿ ಉದಾರವಾದಿ, ಭಾರತದಲ್ಲಿ ಸಂಪ್ರದಾಯವಾದಿ!’

ಭಾರತೀಯ ಅಮೆರಿಕನ್ನರು: ‘ಅಮೆರಿಕದಲ್ಲಿ ಉದಾರವಾದಿ, ಭಾರತದಲ್ಲಿ ಸಂಪ್ರದಾಯವಾದಿ!’

ವೃತ್ತಿಯಲ್ಲಿ ಇಂಜಿನಿಯರ್‌ ಆಗಿರುವ 61% ಭಾರತೀಯ ಅಮೆರಿಕನ್ನರು ಮೋದಿಯನ್ನು ಬೆಂಬಲಿಸುತ್ತಾರೆ ಎಂದು ಸಮಿಕ್ಷೆ ಹೇಳಿದೆ

- Advertisement -
- Advertisement -

ಭಾರತೀಯ ಅಮೆರಿಕನ್ನರು ರಾಜಕೀಯ ವಿಷಯದ ಬಗ್ಗೆ ಅಮೆರಿಕದಲ್ಲಿ ಉದಾರವಾದಿ ದೃಷ್ಟಿಕೋನ ಹೊಂದಿದ್ದು, ಅದುವೆ ಭಾರತದ ವಿಷಯಕ್ಕೆ ಬಂದಾಗ ಸಂಪ್ರದಾಯವಾದಿಗಳಾಗಿ ಪರಿವರ್ತನೆ ಹೊಂದುತ್ತಾರೆ ಎಂದು ಸಮೀಕ್ಷೆಯೊಂದು ಹೇಳಿದೆ.

ಉದಾಹರಣೆಗೆ, “ಹಿಂದೂಗಳು ಹಾಗೂ ಹಿಂದೂಯೇತರರು ’ಬಿಳಿ ಜನಾಂಗೀಯವಾದದ ಪ್ರಾಬಲ್ಯವು’ ಅಮೆರಿಕದಲ್ಲಿ ಅಪಾಯವನ್ನುಂಟುಮಾಡುತ್ತದೆ ಎಂದು ಒಪ್ಪುತ್ತಾರೆ. ಆದರೆ ಭಾರತದಲ್ಲಿ ಹಿಂದೂ ಬಹುಸಂಖ್ಯಾತವಾದದಿಂದ ಉಂಟಾಗುವ ಬೆದರಿಕೆಯ ಬಗ್ಗೆ ಅವರ ದೃಷ್ಟಿಕೋನ ಗಮನಾರ್ಹವಾಗಿ ಭಿನ್ನವಾಗಿದೆ” ಎಂದು ಸಮೀಕ್ಷೆಯು ಹೇಳಿದೆ.

ಕಾರ್ನೆಗೀ ಎಂಡೋಮೆಂಟ್ ಫಾರ್ ಇಂಟರ್ನ್ಯಾಷನಲ್ ಪೀಸ್, ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯ ಮತ್ತು ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯವು 2020 ಸೆಪ್ಟೆಂಬರ್‌ನಲ್ಲಿ ಆನ್‌ಲೈನ್ ಮೂಲಕ ಈ ಸಮೀಕ್ಷೆ ನಡೆಸಿದೆ. ಸಮೀಕ್ಷೆಯು 1,200 ಭಾರತೀಯ ಅಮೆರಿಕನ್ ವಯಸ್ಕ ನಿವಾಸಿಗಳನ್ನು ಒಳಗೊಂಡಿದೆ. ಅಮೆರಿಕದಲ್ಲಿ 42 ಲಕ್ಷ ಭಾರತೀಯ ಅಮೆರಿಕನ್ನರಿದ್ದು, ಇದು ಎರಡನೇ ಅತಿದೊಡ್ಡ ವಲಸೆಗಾರ ಸಮುದಾಯವಾಗಿದೆ. ಇದರಲ್ಲಿ 38% ಜನರು ಇನ್ನೂ ಅಮೆರಿಕದ ಪ್ರಜೆಗಳಲ್ಲ.

ಇದನ್ನೂ ಓದಿ: ಹಂಪನಾ ಅವರ ಪ್ರತಿರೋಧ ಮತ್ತು ವಿಸ್ತಾರವಾದ ವ್ಯಾಪ್ತಿ ಪಡೆಯಬೇಕಿರುವ ಕನ್ನಡದ ಕೆಲಸ

ಅಮೆರಿಕದಲ್ಲಿ ಬಿಳಿಜನಾಂಗೀಯವಾದವು ಅಲ್ಪಸಂಖ್ಯಾತರಿಗೆ ಅಪಾಯಕಾರಿಯಾಗಿದೆ ಎಂದು ಹೇಳಿರುವ 73% ದಷ್ಟು ಜನರಲ್ಲಿ, ಅರ್ಧಕ್ಕಿಂತ ಕಡಿಮೆ ಜನರು ಹಿಂದೂ ಬಹುಸಂಖ್ಯಾತವಾದವು ಭಾರತದಲ್ಲಿ ಅಲ್ಪಸಂಖ್ಯಾತರಿಗೆ ಅಪಾಯಕಾರಿಯಾಗಿದೆ ಎಂದು ನಂಬಿದ್ದಾರೆ. ಕೇವಲ 40% ಭಾರತೀಯ ಅಮೆರಿಕನ್‌ ಹಿಂದೂಗಳು, ಹಿಂದೂ ಬಹುಸಂಖ್ಯಾವಾದವು ಅಪಾಕಾರಿ ಎಂದು ನಂಬಿದ್ದಾರೆ. ಆದರೆ 67% ಹಿಂದೂಯೇತರ ಭಾರತೀಯ ಅಮೆರಿಕನ್ನರು ಹಿಂದೂ ಬಹುಸಂಖ್ಯಾತವಾದವು ಅಪಾಯ ಎಂದು ಹೇಳಿದ್ದಾರೆ.

ಭಾರತವು “ಸರಿಯಾದ ಹಾದಿಯಲ್ಲಿದೆ” ಎಂದು 36% ಜನರು ಒಪ್ಪಿಕೊಂಡಿದ್ದಾರೆ. ಆದರೆ 39% ಜನರು ಅದನ್ನು ಒಪ್ಪಿಕೊಂಡಿಲ್ಲ. ಅಮೆರಿಕದಲ್ಲಿ ಹುಟ್ಟಿದ ಭಾರತೀಯ ಅಮೆರಿಕನ್ನರಿಗಿಂತ ಹೆಚ್ಚಾಗಿ, ವಿದೇಶದಲ್ಲಿ ಹುಟ್ಟಿದ ಭಾರತೀಯ ಅಮೆರಿಕನ್ನರು ಭಾರತವು ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ ಎಂದು ನಂಬುತ್ತಾರೆ.

ಇದನ್ನೂ ಓದಿ: ಗೌರಿ ಕಾರ್ನರ್: ಓರ್ವ ಜನಪರ ನ್ಯಾಯಮೂರ್ತಿಯವರನ್ನು ಕುರಿತು

ಜನಸಂಖ್ಯೆಯ ಅತಿದೊಡ್ಡ ಭಾಗವಾದ 35% ಜನರು ತಮ್ಮನ್ನು “ಭಾರತ ಪರ” ಎಂದು ಗುರುತಿಸಿಕೊಂಡಿದ್ದಾರೆ ಆದರೆ ಪ್ರಸ್ತುತ ಸರ್ಕಾರದ ಕೆಲವು ನೀತಿಗಳನ್ನು ಟೀಕಿಸಿದ್ದಾರೆ. ಇನ್ನೂ 23% ಜನರು ಭಾರತದ ಪರವಾಗಿದ್ದರಾದರೂ ಅನೇಕ ರಾಜಕಾರಣವನ್ನು ಟೀಕಿಸಿದ್ದಾರೆ. 17% ಜನರು ಭಾರತ ಮತ್ತು ಪ್ರಸ್ತುತ ಸರ್ಕಾರದ ಬಗ್ಗೆ ಸಕಾರಾತ್ಮಕ ನಿಲುವನ್ನು ಹೊಂದಿದ್ದಾರೆ.

NRC-CAA ಯನ್ನು ಕ್ರಮವಾಗಿ 55% ಮತ್ತು 51% ರಷ್ಟು ಜನರು ಬೆಂಬಲಿಸಿದ್ದಾರೆ. ಆದರೆ, ಶಾಂತಿಯುತ ಪ್ರತಿಭಟನಾಕಾರರ ಮೇಲೆ ಪೊಲೀಸ್ ಬಲವನ್ನು ಬಳಸುವುದನ್ನು ಅವರು ವಿರೋಧಿಸಿದ್ದಾರೆ ಹಾಗೂ ಪತ್ರಕರ್ತರ ವಿರುದ್ಧ ಮತ್ತು ಮೋದಿ ಸರ್ಕಾರವನ್ನು ಟೀಕಿಸುವವರ ವಿರುದ್ದ ಮಾನಹಾನಿ ಮತ್ತು ದೇಶದ್ರೋಹ ಪ್ರಕರಣ ದಾಖಲಿಸುವುದನ್ನು ವಿರೋಧಿಸಿದ್ದಾರೆ.

ಅಮರಿಕದಲ್ಲಿ ಭಾರತೀಯ ಅಮೆರಿಕನ್ನರು ಹೆಚ್ಚು ಉದಾರವಾದಿಗಳಾಗಿದ್ದಾರೆ. ಉದಾಹರಣೆಗೆ, ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಕೆಲವು ಮುಸ್ಲಿಂ ಬಹುಸಂಖ್ಯಾತ ದೇಶಗಳ ಮೇಲೆ ಹೇರಿದ ನಿಷೇಧವನ್ನು 60% ಜನರು ವಿರೋಧಿಸಿದ್ದಾರೆ.

ಇದನ್ನೂ ಓದಿ: ಹಿಂದು ರಾಷ್ಟ್ರವೆಂಬುದೇ ಭ್ರಮೆ; ಆಕಾರ್ ಪಟೇಲ್ ಅವರ ’ಅವರ್ ಹಿಂದು ರಾಷ್ಟ್ರ’ ಪುಸ್ತಕ ಪರಿಚಯ

40% ಜನರು ಭಾರತೀಯ ರಾಜಕೀಯ ಪಕ್ಷದಲ್ಲಿ ಯಾವುದೆ ಪಕ್ಷವನ್ನು ಆಯ್ಕೆ ಮಾಡಲಿಲ್ಲ, ಆದರೆ 33% ಜನರು ಬಿಜೆಪಿಯನ್ನು ಆಯ್ಕೆ ಮಾಡಿದ್ದು, 12% ಜನರು ಕಾಂಗ್ರೆಸ್‌ ಪಕ್ಷವನ್ನು ಮತ್ತು 16% ಇತರ ಪಕ್ಷವನ್ನು ಆಯ್ಕೆ ಮಾಡಿದ್ದಾರೆ.

ಭಾರತ ಎದುರಿಸುತ್ತಿರುವ ದೊಡ್ಡ ಸವಾಲುಗಳ ಬಗ್ಗೆ, ಭ್ರಷ್ಟಾಚಾರವೆ ಅತೀ ದೊಡ್ಡ ಸಮಸ್ಯೆ ಎಂದು 18%  ಜನರು ಹೇಳಿದ್ದಾರೆ. ಆರ್ಥಿಕತೆ ಸಮಸ್ಯೆ 15%, ಧಾರ್ಮಿಕ ಬಹುಸಂಖ್ಯಾತವಾದ ಸಮಸ್ಯೆ 10%, ಆರೋಗ್ಯ ರಕ್ಷಣೆಯ ಸಮಸ್ಯೆ 8%, ಚೀನಾ 7%, ಭಯೋತ್ಪಾದನೆ 7%, ಜಾತಿ ತಾರತಮ್ಯ 6%, ಶಿಕ್ಷಣದ ಸಮಸ್ಯೆ 6%, ಆದಾಯ ಅಸಮಾನತೆ ಸಮಸ್ಯೆ 5%, ಹವಾಮಾನ ಬದಲಾವಣೆಯ ಸಮಸ್ಯೆ 4% ಮತ್ತು ಲಿಂಗಭೇದಭಾವದ ಸಮಸ್ಯೆ ಎಂದು 4% ಜನರು ಹೇಳಿದ್ದಾರೆ.

ಟ್ರಂಪ್‌ ಪಕ್ಷದಲ್ಲಿ ಮೋದಿ ಮತ್ತು ಬಿಜೆಪಿಯ ಬೆಂಬಲಿಗರ ನಡುವಿನ ಸಂಬಂಧವನ್ನು ಸಮೀಕ್ಷೆಯು ಕಂಡುಹಿಡಿದಿದೆ. ಅಮೆರಿಕನ್ ಭಾರತೀಯ ಹಿಂದೂಗಳಲ್ಲಿ 69% ಜನರು ಮೋದಿಯನ್ನು ಬೆಂಬಲಿಸುತ್ತಾರೆ. ಇತರ ಸಮುದಾಯಗಳಲ್ಲಿ 20% ರಿಂದ 33% ಜನರು ಮೋದಿಯನ್ನು ಬೆಂಬಲಿಸುತ್ತಾರೆ. ವೃತ್ತಿಯಲ್ಲಿ ಇಂಜಿನಿಯರ್‌ ಆಗಿರುವ 61% ಜನರು ಮೋದಿಯನ್ನು ಬೆಂಬಲಿಸುತ್ತಾರೆ. ಇಂಜಿನಿಯರ್‌ ಅಲ್ಲದ 48% ಜನರಷ್ಟೇ ಮೋದಿಯನ್ನು ಬೆಂಬಲಿಸುತ್ತಾರೆ.

ಇದನ್ನೂ ಓದಿ: ಬಹುಜನ ಭಾರತ: ಹೆಣ್ಣುಮಕ್ಕಳು ರೈತರಲ್ಲವೇ? ಸುಪ್ರೀಮ್ ಕೋರ್ಟು ತಿಳಿಯಲೊಲ್ಲದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...