Homeಮುಖಪುಟಮಾಲೆಗಾಂವ್ ಸ್ಫೋಟ ತಡೆಗಟ್ಟಲು ಏನು ಮಾಡಿದಿರಿ?: ಆರೋಪಿ ಪುರೋಹಿತ್‌ಗೆ ಹೈಕೋರ್ಟ್ ಪ್ರಶ್ನೆ

ಮಾಲೆಗಾಂವ್ ಸ್ಫೋಟ ತಡೆಗಟ್ಟಲು ಏನು ಮಾಡಿದಿರಿ?: ಆರೋಪಿ ಪುರೋಹಿತ್‌ಗೆ ಹೈಕೋರ್ಟ್ ಪ್ರಶ್ನೆ

- Advertisement -
- Advertisement -

2008ರ ಮಾಲೆಂಗಾವ್ ಸ್ಫೋಟ ತಡೆಗಟ್ಟಲು ಗುಪ್ತಚರ ಇಲಾಖೆಯ ಕರ್ತವ್ಯದ ಭಾಗವಾಗಿ ಕೈಗೊಂಡ ಕ್ರಮಗೇಳನು? ಆ ಪಿತೂರಿ ಸಭೆಗಳಲ್ಲಿ ಭಾಗವಹಿಸಿದ್ದೇಕೆ ಎಂದು ಪ್ರಕರಣದ ಆರೋಪಿಗಳಲ್ಲೊಬ್ಬರಾದ ಲೆಫ್ಟಿನೆಂಟ್ ಕರ್ನಲ್ ಪುರೋಹಿತ್‌ಗೆ ಬಾಂಬೆ ಹೈಕೋರ್ಟ್ ಪ್ರಶ್ನೆ ಮಾಡಿದೆ.

ನ್ಯಾಯಮೂರ್ತಿಗಳಾದ ಎಸ್.ಎಸ್. ಶಿಂಧೆ ಮತ್ತು ಮನೀಶ್ ಪಿಟಾಲೆ ಅವರ ಪೀಠವು 2008 ರ ಜನವರಿ 26 ರಂದು ಭಾಗವಹಿಸಿದ್ದ ಸಭೆಯ ಬಗ್ಗೆ ಪುರೋಹಿತ್ ಅವರನ್ನು ಪ್ರಶ್ನೆ ಮಾಡಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಪ್ರಕಾರ, ಈ ಸಭೆಯನ್ನು ಮುಂಬೈನಲ್ಲಿ ಅಭಿನವ್ ಭಾರತ್ ಎಂಬ ಗುಂಪು ಆಯೋಜಿಸಿತ್ತು ಮತ್ತು ಸ್ಫೋಟದ ಪಿತೂರಿಯನ್ನು ನಡೆಸಲಾಯಿತು. ಸೆಪ್ಟೆಂಬರ್ 29, 2008 ರಂದು ಮಾಲೆಗಾಂವ್‌ನ ಮಸೀದಿಯ ಬಳಿ ನಡೆದ ಸ್ಫೋಟದಲ್ಲಿ ಆರು ಜನರು ಸಾವನ್ನಪ್ಪಿ, 100 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.

ಮುಂದೆ ಏನಾಗಲಿದೆ ಎಂದು ಅವನಿಗೆ ತಿಳಿದಿದ್ದರೆ, ಅದನ್ನು ತಡೆಯಲು ಅವನು ಯಾವ ಕ್ರಮಗಳನ್ನು ತೆಗೆದುಕೊಂಡಿದ್ದಾರೆ? ಸಭೆ ಯಾವಾಗ ನಡೆಯಿತು ಮತ್ತು ಯಾವಾಗ ಸ್ಫೋಟ ಸಂಭವಿಸಿತು? ನಡುವಿನ ಅವಧಿಯಲ್ಲಿ ಏನು ಮಾಡುತ್ತಿದ್ದನು? ಎಂಬುದಾಗಿ ನ್ಯಾಯಪೀಠ ಪ್ರಶ್ನಿಸಿದೆ.

ಇದಕ್ಕೆ ಉತ್ತರಿಸಿದ ಪುರೋಹಿತ್ ಪರ ವಕೀಲ ಶ್ರೀಕಾಂತ್ ಶಿವಾಡೆ, “ಅದು ಕೇವಲ ಸಾಮಾಜಿಕ-ರಾಜಕೀಯ ಸಭೆಯಾಗಿತ್ತು.ಅಲ್ಲಿ ಸ್ಪೋಟದ ಬಗ್ಗೆ ತನ್ನ ಅಧಿಕಾರಿಗಳಿಗೆ ಗುಪ್ತಚರ ಮಾಹಿತಿ ನೀಡಲು ಪುರೋಹಿತ್ ಸಭೆಯಲ್ಲಿ ಭಾಗವಹಿಸಿದ್ದರು. ಅಲ್ಲಿ ಮಾಲೆಗಾಂವ್ ಸ್ಫೋಟದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಪುರೋಹಿತ್ ವಿರುದ್ಧ ಸ್ಫೋಟ ನಡೆಸಿದ ಆರೋಪವಿಲ್ಲ. ಆ ಸಭೆಯು 2008ರ ಜನವರಿ 26-27 ರಂದು ನಡೆಯಿತು ಮತ್ತು 2008ರ ಸೆಪ್ಟೆಂಬರ್ 29 ರಂದು ಸ್ಫೋಟ ಸಂಭವಿಸಿದೆ” ಎಂದು ಉತ್ತರಿಸಿದರು.

ಪುರೋಹಿತ್ ತನ್ನ ಕರ್ತವ್ಯದ ಭಾಗವಾಗಿಯೇ ಸಭೆಯಲ್ಲಿ ಭಾಗವಹಿಸಿದ್ದರು ಎನ್ನುವುದಕ್ಕೆ ಯಾವುದಾದರೂ ಸಾಕ್ಷಿ ಇದೆಯೇ? ಇದಕ್ಕೆ ಯಾವುದೇ ಲಿಖಿತ ಪತ್ರ ಇಲ್ಲ ಎಂದ ಪುರೋಹಿತ್ ವಕೀಲರು ಮೂಲಗಳಿಂದ ಮಾಹಿತಿ ಆಧರಿಸಿ ಸಭೆಯಲ್ಲಿ ಭಾಗವಹಿಸಿದ್ದಾರೆ. ನಂತರ ಅದರ ವರದಿಯನ್ನು ಹಿರಿಯ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ ಎಂದು ತಿಳಿಸಿದ್ದಾರೆ.

ಪುರೋಹಿತ್ 2008 ರ ಮಾಲೆಗಾಂವ್ ಸ್ಫೋಟ ಪ್ರಕರಣದಿಂದ ತಮ್ಮನ್ನು ಕೈಬಿಡಬೇಕೆಂದು ಬಾಂಬೈ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಅವರ ವಿಚಾರಣೆಗೆ ಸರ್ಕಾರದ ಕಾರ್ಯವಿಧಾನದ ಅನುಮತಿ ನೀಡಿಲ್ಲ ಎಂದು ಅವರು ವಾದಿಸಿದ್ದಾರೆ. ಇದೆಲ್ಲವೂ ವಿಚಾರಣೆಯ ವೇಳೆ ಪರಿಶೀಲನೆಗೊಳಪಡುತ್ತವೆ, ಇದನ್ನು ಹೈಕೋರ್ಟಿಗೆ ಏಕೆ ತಂದೀರಿ ಎಂದು ನ್ಯಾಯಾಲಯ ಪ್ರಶ್ನಿಸಿದೆ.

ಇದಕ್ಕೆ ಉತ್ತರಿಸಿದ ಪುರೋಹಿತ್ ವಕೀಲರು ಯಾವುದೇ ಸಾಕ್ಷಿಯು ಸಹ ಪುರೋಹಿತ್ ಹೆಸರನ್ನು ಉಲ್ಲೇಖಿಸಿಲ್ಲ. ನೂರಕ್ಕೂ ಹೆಚ್ಚು ಸಾಕ್ಷಿಗಳಿದ್ದರೂ ಯಾವುವು ಪುರೋಹಿತ್ ವಿರುದ್ಧವಿಲ್ಲ. ಅಲ್ಲದೆ ಅವರನ್ನು ಮತ್ತೆ ಸೇವೆಗೆ ಸೇರಿಸಿಕೊಳ್ಳಲಾಗಿದೆ. ಹಾಗಾಗಿ ವಿಚಾರಣಾ ನ್ಯಾಯಲಯದ ಧೀರ್ಘ ವಿಚಾರಣೆಯಿಂದ ಅವರು ಏಕೆ ಬಾಧಿತರಾಗಬೇಕು ಎಂದಿದ್ದಾರೆ.

ನಂತರ ನ್ಯಾಯಾಲಯವು ತನಿಖಾ ಸಂಸ್ಥೆ ಎನ್‌ಐಎಯನ್ನು ಪ್ರತಿನಿಧಿಸುತ್ತಿದ್ದ ವಕೀಲ ಸಂದೇಶ್ ಪಾಟೀಲ್ ಅವರನ್ನು ವಿಚಾರಣೆಯ ಹಂತದ ಬಗ್ಗೆ ಕೇಳಿತು. ವಿಚಾರಣಾ ನ್ಯಾಯಾಲಯದ ಮುಂದೆ 159 ಸಾಕ್ಷಿಗಳಿದ್ದು, ಇನ್ನೂ 495 ಮಂದಿಯನ್ನು ಪಟ್ಟಿ ಮಾಡಲಾಗಿದ್ದರೂ, ಇನ್ನೂ 300 ಮಂದಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪಾಟೀಲ್ ಹೇಳಿದ್ದಾರೆ. ವಿಚಾರಣೆಯನ್ನು ದಿನನಿತ್ಯದ ಆಧಾರದ ಮೇಲೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಫೆಬ್ರವರಿ 24ಕ್ಕೆ ಮುಂದೂಡಿತು.

ಸೆಪ್ಟೆಂಬರ್ 29, 2008 ರಂದು, ಮಹಾರಾಷ್ಟ್ರದ ನಾಸಿಕ್ ಬಳಿಯ ಮಾಲೆಗಾಂವ್‌ನಲ್ಲಿರುವ ಶಕೀಲ್ ಗೂಡ್ಸ್ ಟ್ರಾನ್ಸ್‌ಪೋರ್ಟ್ ಕಂಪನಿಯ ಎದುರು ಬಾಂಬ್ ಸ್ಫೋಟ ಸಂಭವಿಸಿದೆ. ಎಲ್ಎಂಎಲ್ ಫ್ರೀಡಮ್ ಮೋಟಾರ್ ಬೈಕ್‌ನಿಂದ ಸ್ಫೋಟಕಗಳನ್ನು ಮಸೀದಿಯೊಂದಕ್ಕೆ ನುಗ್ಗಿಸಲಾಯ್ತು. ಘಟನೆಯಲ್ಲಿ ಒಟ್ಟು ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಸ್ಫೋಟದಲ್ಲಿ 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಪ್ರಕರಣದ ವಿಚಾರಣೆ ಇನ್ನೂ ಮುಂಬೈ ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಪ್ರಾಸಿಕ್ಯೂಷನ್ ಪ್ರಕಾರ, ಆರೋಪಿಗಳು ಸ್ಫೋಟಕ್ಕೆ ಸಂಚು ರೂಪಿಸಿದ ಅಭಿನವ್ ಭಾರತ್ ಸಂಘಟನೆಯವರಾಗಿದ್ದಾರೆ.


ಇದನ್ನೂ ಓದಿ: ಸಂಸತ್ತಿನಲ್ಲಿ ಮಹುವಾ ಮೊಯಿತ್ರ ಬಿರುಗಾಳಿ ಭಾಷಣ: ಯಾವುದೇ ಕ್ರಮವಿಲ್ಲವೆಂದ ಕೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...