Homeಮುಖಪುಟಸಾಮಾಜಿಕ ಜಾಲತಾಣಗಳ ಡಬಲ್‌ಸ್ಟ್ಯಾಂಡರ್ಡ್‌ ಅನ್ನು ಸಹಿಸಲ್ಲ: ಕೇಂದ್ರ ಸರ್ಕಾರ

ಸಾಮಾಜಿಕ ಜಾಲತಾಣಗಳ ಡಬಲ್‌ಸ್ಟ್ಯಾಂಡರ್ಡ್‌ ಅನ್ನು ಸಹಿಸಲ್ಲ: ಕೇಂದ್ರ ಸರ್ಕಾರ

ಖಾತೆಗಳನ್ನು ನಿರ್ಬಂಧಿಸಲು ಕೇಂದ್ರ ಸರ್ಕಾರ ನಿರ್ದೇಶಿಸಿದ ಕ್ರಮವು ಭಾರತೀಯ ಕಾನೂನಿಗೆ ಅನುಗುಣವಾಗಿಲ್ಲ ಎಂದು ಟ್ವಿಟರ್‌ ತನ್ನ ಹೇಳಿಕೆಯಲ್ಲಿ ಹೇಳಿತ್ತು.

- Advertisement -
- Advertisement -

ಕೇಂದ್ರ ಸರ್ಕಾರ ಮತ್ತು ಟ್ವಿಟರ್ ನಡುವಿನ‌ ಸಂಘರ್ಷ ತಾರಕಕ್ಕೇರಿದ್ದು, ಸಾಮಾಜಿಕ ಜಾಲತಾಣ ಪ್ಲ್ಯಾಟ್‌ಫಾರ್ಮ್‌ಗಳ ಡಬಲ್ ಸ್ಟ್ಯಾಂಡರ್ಡ್ ಅನ್ನು ಭಾರತದಲ್ಲಿ ಅನುಮತಿಸಲಾಗುವುದಿಲ್ಲ ಎಂದು ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ರವಿಶಂಕರ್‌ ಪ್ರಸಾದ್ ಗುರುವಾರ ಹೇಳಿದರು. “ಇದು ಟ್ವಿಟರ್, ಫೇಸ್‌ಬುಕ್, ಲಿಂಕ್ಡ್‌ಇನ್ ಅಥವಾ ವಾಟ್ಸಾಪ್ ಸೇರಿದಂತೆ ಯಾವುದೆ ಪ್ಲ್ಯಾಟ್‌ಫಾರ್ಮ್‌ಗಳು ಆಗಿರಲಿ ತಪ್ಪಿದಲ್ಲಿ ಕ್ರಮ ಕೈಗೊಳ್ಳಲಾಗುವುದು” ಎಂದು ಸಚಿವರು ಹೇಳಿದರು.

“ಭಾರತದಲ್ಲಿ ಕೆಲಸ ಮಾಡಿ. ನಿಮಗೆ ಇಲ್ಲಿ ಕೋಟಿ ಅನುಯಾಯಿಗಳಿವೆ. ಹಣ ಸಂಪಾದಿಸಿ ಆದರೆ ನೀವು ಭಾರತೀಯ ಕಾನೂನು ಮತ್ತು ಸಂವಿಧಾನವನ್ನು ಪಾಲಿಸಬೇಕಾಗುತ್ತದೆ” ಎಂದು ಸಚಿವರು ಹೇಳಿದರು.

“ನಾವು ಈಗ ಟ್ವಿಟರ್‌‌ ಜೊತೆಗಿನ ಸಮಸ್ಯೆಯನ್ನು ಎತ್ತಿದ್ದೇವೆ. ನಮ್ಮ ಇಲಾಖೆಯು ಟ್ವಿಟರ್‌ನೊಂದಿಗೆ ಮಾತುಕತೆಯಲ್ಲಿದೆ. ಅದಕ್ಕಾಗಿಯೇ ನಾನು ಈ ವಿಷಯದ ಬಗ್ಗೆ ಬಹಿರಂಗವಾಗಿ ಪ್ರತಿಕ್ರಿಯಿಸಲು ಬಯಸುವುದಿಲ್ಲ. ಅಮೆರಿಕದ ಕ್ಯಾಪಿಟಲ್ ಹಿಲ್‌‌‌ನಲ್ಲಿ ಹಿಂಸಾಚಾರ ನಡೆದಾಗ ಏನಾಗಿದೆ ಎಂಬ ಬಗ್ಗೆ ನಾವು ಪಶ್ನೆಗಳನ್ನು ಎತ್ತಿದ್ದೇವೆ. ಅಲ್ಲಿ ಸಾಮಾಜಿಕ ಜಾಲತಾಣದ ಫ್ಲ್ಯಾಟ್‌‌ಪಾರ್ಮ್‌ ಪೊಲೀಸ್ ತನಿಖೆಗೆ ನಿಲ್ಲುತ್ತವೆ ಆದರೆ ಕೆಂಪು ಕೋಟೆಯಲ್ಲಿ ನಡೆದ ಅಹಿತಕರ ಘಟನೆಯ ಬಗ್ಗೆ ಅದೇ ಫ್ಲ್ಯಾಟ್‌‌ಫಾರ್ಮ್ ಭಾರತ ಸರ್ಕಾರದ ವಿರುದ್ಧ ನಿಲ್ಲುತ್ತಿದೆ. ಕೆಂಪು ಕೋಟೆ ನಮ್ಮ ಹೆಮ್ಮೆಯ ಸಂಕೇತವಾಗಿದೆ. ನಾವು ಈ ಡಬಲ್ ಸ್ಟ್ಯಾಂಡರ್ಡ್ ಅನ್ನು ಅನುಮತಿಸುವುದಿಲ್ಲ” ಎಂದು ಸಚಿವರು ಹೇಳಿದರು.

ಇದನ್ನೂ ಓದಿ: ಅಭಿವ್ಯಕ್ತಿ ಸ್ವಾತಂತ್ಯ್ರ, ಪ್ರಜಾಪ್ರಭುತ್ವ ಮೌಲ್ಯಕ್ಕೆ ಸದಾ ಬದ್ಧ: ಟ್ವಿಟರ್‌ ಬೆಂಬಲಕ್ಕೆ ಅಮೆರಿಕ

ಗಣರಾಜ್ಯೋತ್ಸವದಂದು ರೈತರ ಟ್ರಾಕ್ಟರ್ ರ್‍ಯಾಲಿಯಲ್ಲಿ ದೆಹಲಿಯಲ್ಲಿ ನಡೆದ ಅಹಿತಕರ ಘಟನೆಯ ನಂತರ ಕೇಂದ್ರ ಸರ್ಕಾರವು ಎರಡು ಆದೇಶಗಳಲ್ಲಿ 1,300 ಖಾತೆಗಳನ್ನು ಮತ್ತು ಪೋಸ್ಟ್‌ಗಳ ಪಟ್ಟಿಯನ್ನು ಹಸ್ತಾಂತರಿಸಿ ಅದನ್ನು ತೆಹಿಡಿಯುವಂತೆ ಕೇಳಿಕೊಂಡಿದೆ. ಆದರೆ ಬುಧವಾರ, ಟ್ವಿಟರ್ ತನ್ನ ಹೇಳಿಕೆಯನ್ನು ಪ್ರಕಟಿಸಿ, ಕೆಲವು ಹ್ಯಾಂಡಲ್‌ಗಳನ್ನು ನಿರ್ಬಂಧಿಸದಿರುವ ತನ್ನ ಕ್ರಮವನ್ನು ವಿವರಿಸಿದೆ. ಅದು ತನ್ನ ಹೇಳಿಕೆಯಲ್ಲಿ, “… ನಮಗೆ ಖಾತೆಗಳನ್ನು ನಿರ್ಬಂಧಿಸಲು ಕೇಂದ್ರ ಸರ್ಕಾರ ನಿರ್ದೇಶಿಸಿದ ಕ್ರಮವು ಭಾರತೀಯ ಕಾನೂನಿಗೆ ಅನುಗುಣವಾಗಿರುತ್ತವೆ ಎಂದು ನಾವು ನಂಬುವುದಿಲ್ಲ” ಎಂದು ಹೇಳಿದೆ.

“ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಿಸುವ ತತ್ವಗಳನ್ನು ಅನುಸರಿಸಿ ಸುದ್ದಿ ಮಾಧ್ಯಮ ಸಂಸ್ಥೆಗಳು, ಪತ್ರಕರ್ತರು, ಕಾರ್ಯಕರ್ತರು ಮತ್ತು ರಾಜಕಾರಣಿಗಳನ್ನು ಒಳಗೊಂಡಿರುವ ಖಾತೆಗಳ ಮೇಲೆ ಯಾವುದೇ ಕ್ರಮವನ್ನು ಕೈಗೊಂಡಿಲ್ಲ. ಹಾಗೆ ಮಾಡಿದರೆ, ಭಾರತೀಯ ಕಾನೂನಿನಡಿಯಲ್ಲಿ ಅವರ ಮುಕ್ತ ಅಭಿವ್ಯಕ್ತಿ ಸ್ವಾತಂತ್ಯ್ರವನ್ನು ಉಲ್ಲಂಘಿಸಿದಂತಾಗುತ್ತದೆ” ಎಂದು ಟ್ವಿಟರ್‌ ಹೇಳಿತ್ತು.

ಇದನ್ನೂ ಓದಿ: ರೈತರನ್ನು ಬೆಂಬಲಿಸುವ ಖಲಿಸ್ತಾನಿ-ಪಾಕಿಸ್ತಾನಿ ಟ್ವಿಟ್ಟರ್‌ ಖಾತೆಗಳನ್ನು ಕಿತ್ತುಹಾಕಿ: ಟ್ವಿಟರ್‌ಗೆ ಕೇಂದ್ರ ತಾಕೀತು

ಟ್ವಿಟರ್ ಈ ಹೇಳಿಕೆಯನ್ನು ನೀಡಿದ ಕೂಡಲೇ, ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯವು ಸ್ವದೇಶಿ ಸಾಮಾಜಿಕ ಜಾಲತಾಣವಾದ ’ಕೂ’ ಆಪ್‌‌ನಲ್ಲಿ, ಟ್ವಿಟ್ಟರ್‌ ಹೇಳಿಕೆಯನ್ನು “ಅಸಾಮಾನ್ಯ” ಎಂದು ಕರೆದಿದೆ. ’ಕೂ’ ಆಪ್‌ನಲ್ಲಿ ಪ್ರತಿಕ್ರಿಯೆ ನೀಡಿದ ಕೆಲವೆ ಗಂಟೆಗಳ ನಂತರ, ಸಚಿವಾಲಯದ ಪ್ರತಿನಿಧಿಗಳು ಮತ್ತು ಟ್ವಿಟರ್‌ನ ಜಾಗತಿಕ ನೀತಿ ಮತ್ತು ಸುರಕ್ಷತಾ ತಂಡಗಳು ಸಭೆ ನಡೆಸಿದೆ.

ಸಭೆಯಲ್ಲಿ ಟ್ವಿಟರ್‌ನ ಪ್ರತಿಕ್ರಿಯೆಯ ಬಗ್ಗೆ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯದ ಕಾರ್ಯದರ್ಶಿ ತೀವ್ರ ನಿರಾಶೆಯನ್ನು ವ್ಯಕ್ತಪಡಿಸಿದೆ. “ಭಾರತದಲ್ಲಿ, ಅದರ ಸಂವಿಧಾನ ಮತ್ತು ಕಾನೂನುಗಳು ಸರ್ವೋಚ್ಚವಾಗಿವೆ. ಇದನ್ನು ಜವಾಬ್ದಾರಿಯುತ ಘಟಕಗಳು ದೃಡೀಕರಿಸುವುದು ಮಾತ್ರವಲ್ಲದೆ ನೆಲದ ಕಾನೂನಿಗೆ ಅನುಸಾರವಾಗಿ ಬದ್ಧವಾಗಿರುತ್ತವೆ ಎಂದು ನಿರೀಕ್ಷಿಸುತ್ತೇವೆ” ಎಂದು ಸಚಿವಾಲಯವು ಸಭೆಯ ನಂತರ ಹೇಳಿಕೆಯಲ್ಲಿ ತಿಳಿಸಿದೆ.

ಇದಕ್ಕೆ ಪ್ರತಿಕ್ರಿಯಿಸಿದ ಟ್ವಿಟರ್ ತಾನು ಕಾನೂನು ಆಯ್ಕೆಯನ್ನು ನೋಡುತ್ತಿದ್ದೇನೆ ಎಂದು ಹೇಳಿದೆ. “ನಾವು ಸೇವೆ ಸಲ್ಲಿಸುವ ಜನರ ಪರವಾಗಿ ಮುಕ್ತ ಅಭಿವ್ಯಕ್ತಿ ಸ್ವಾತಂತ್ಯ್ರ ಪ್ರತಿಪಾದಿಸುವುದನ್ನು ಮುಂದುವರಿಸುತ್ತೇವೆ. ನಾವು ಭಾರತೀಯ ಕಾನೂನಿನಡಿಯಲ್ಲಿ ನಮಗೆ ಇರುವ ಆಯ್ಕೆಗಳನ್ನು ಹುಡುಕುತ್ತಿದ್ದೇವೆ” ಅದು ಹೇಳಿದೆ.

ಇದನ್ನೂ ಓದಿ: ‘ರೈತರ ನರಮೇಧ ನಡೆಸುತ್ತಿರುವ ಮೋದಿ’ – ಟ್ವಿಟರ್‌ನಲ್ಲಿ ಭುಗಿಲೆದ್ದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...