Homeಮುಖಪುಟ‘ಕೂ’ ಆಪ್ ಸುರಕ್ಷಿತವೆ? ಪ್ರಶ್ನೆಗೆ ’ರಾಷ್ಟ್ರೀಯತೆ’ ಹೆಸರು ಹೇಳಿ ತಪ್ಪಿಸಿಕೊಂಡ ’ಕೂ’ ಸಂಸ್ಥಾಪಕ!

‘ಕೂ’ ಆಪ್ ಸುರಕ್ಷಿತವೆ? ಪ್ರಶ್ನೆಗೆ ’ರಾಷ್ಟ್ರೀಯತೆ’ ಹೆಸರು ಹೇಳಿ ತಪ್ಪಿಸಿಕೊಂಡ ’ಕೂ’ ಸಂಸ್ಥಾಪಕ!

ನಿಜಕ್ಕೂ ’ಕೂ’ ಸುರಕ್ಷಿತವೆ? ಸಾಮಾಜಿಕ ಜಾಲತಾಣಗಳ ಭದ್ರತಾ ಸಂಶೋಧಕರು ಹೇಳುತ್ತಿರುವುದೇನು?

- Advertisement -
- Advertisement -

ಕೇಂದ್ರ ಸರ್ಕಾರವು ಟ್ವಿಟರ್‌ ಜೊತೆ ಅಸಮಧಾನಗೊಂಡಿದ್ದು, ಟ್ವಿಟರ್ ಮಾದರಿಯ ಸಾಮಾಜಿಕ ಜಾಲತಾಣವಾದ ’ಕೂ’ ಆಪ್‌ಗೆ ಪ್ರೋತ್ಸಾಹಿಸಿದೆ. ಈ ಹಿನ್ನಲೆಯಲ್ಲಿ ಈ ಆಪ್‌‌ ಅನ್ನು ಹಲವಾರು ಜನರು ಡೌನ್‌ಲೋಡ್ ಮಾಡಿದ್ದಾರೆ. ಮಾಹಿತಿಯಂತೆ ಕಳೆದ 24 ಗಂಟೆಗಳಲ್ಲಿ 30 ಲಕ್ಷ ಡೌನ್‌ಲೋಡ್‌ಗಳಾಗಿದೆ ಎನ್ನಲಾಗಿದೆ. ಆದರೆ ಈ ಆಪ್‌ ಬಗ್ಗೆ ಹಲವಾರು ಅಘಾತಕಾರಿ ಮಾಹಿತಿಗಳು ಹೊರಬಿದ್ದಿದ್ದು, ಆಪ್‌ ಸುರಕ್ಷಿತ ಅಲ್ಲ ಎಂದು ಫ್ರೆಂಚ್ ಸಂಶೋಧಕರು ಬಹಿರಂಗ ಪಡಿಸಿರುವುದ ಜೊತೆಗೆ, ಆಪ್‌‌ಗೆ ಚೀನಾದೊಂದಿಗೆ ಸಂಪರ್ಕವಿದೆ ಎನ್ನಲಾಗಿದೆ.

ಸಾಮಾಜಿಕ ಜಾಲತಾಣಗಳ ಭದ್ರತಾ ಸಂಶೋಧಕರು, ’ಕೂ’ ಆಪ್‌ ಹೆಚ್ಚು ಸುರಕ್ಷಿತವಲ್ಲ, ಅದು ಬಳಕೆದಾರರ ಇಮೇಲ್ ಐಡಿ, ಫೋನ್‌ ಸಂಖ್ಯೆಗಳು, ಹುಟ್ಟಿದ ದಿನಾಂಕ ಸೇರಿದಂತೆ ಬಹಳಷ್ಟು ಸೂಕ್ಷ್ಮ ಮಾಹಿತಿಗಳನ್ನು ಸೋರಿಕೆ ಮಾಡುತ್ತಿದೆ ಎಂದು ಹೇಳಿದ್ದಾರೆ.

ಟ್ವಿಟರ್‌ನಲ್ಲಿ ಎಲಿಯಟ್ ಆಂಡರ್ಸನ್ ಎಂದು ಜನಪ್ರಿಯವಾಗಿರುವ ಫ್ರೆಂಚ್ ಸೈಬರ್‌ ಸೆಕ್ಯುರಿಟಿ ಸಂಶೋಧಕ ರಾಬರ್ಟ್ ಬ್ಯಾಪ್ಟಿಸ್ಟ್, ’ಕೂ’ ಅಪ್ಲಿಕೇಷನ್‌ನಲ್ಲಿ  ಬಳಕೆದಾರರ ಮಾಹಿತಿ ಸೋರಿಕೆಯಾಗುತ್ತದೆ ಎಂದು ಕಂಡು ಹಿಡಿದಿದ್ದಾರೆ. ಬ್ಯಾಪ್ಟಿಸ್ಟ್ ಈ ಹಿಂದೆ ಆಧಾರ್ ವ್ಯವಸ್ಥೆಯಲ್ಲಿನ ಹಲವಾರು ದೋಷಗಳನ್ನು ಎತ್ತಿ ತೋರಿಸಿದ್ದು, ಇದರ ನಂತರ ಅವರು ಜನಪ್ರಿಯರಾಗಿದ್ದರು. ಇಷ್ಟೇ ಅಲ್ಲದೆ, ಇತರ ತಂತ್ರಜ್ಞಾನಗಳಲ್ಲಿನ ಹಲವಾರು ಭದ್ರತಾ ದೋಷಗಳು ಅವರು ಎತ್ತಿ ತೋರಿಸಿದ್ದರು.

ಇದನ್ನೂ ಓದಿ: ಅಭಿವ್ಯಕ್ತಿ ಸ್ವಾತಂತ್ಯ್ರ, ಪ್ರಜಾಪ್ರಭುತ್ವ ಮೌಲ್ಯಕ್ಕೆ ಸದಾ ಬದ್ಧ: ಟ್ವಿಟರ್‌ ಬೆಂಬಲಕ್ಕೆ ಅಮೆರಿಕ

ಕಳೆದ ರಾತ್ರಿ ಬ್ಯಾಪ್ಟಿಸ್ಟ್ ಮಾಡಿದ್ದ ಟ್ವೀಟ್‌ನಲ್ಲಿ, “ಹೊಸ ‘ಕೂ’ ಅಪ್ಲಿಕೇಶನ್‌ ಜೊತೆ ನಾನು ಕೇವಲ 30 ನಿಮಿಷ ಕಳೆದೆ. ಈ ಅಪ್ಲಿಕೇಷನ್ ತನ್ನ ಬಳಕೆದಾರರ, ಇಮೇಲ್, ಹುಟ್ಟಿದ ದಿನಾಂಕ, ಹೆಸರು, ಅವರ ವೈವಾಹಿಕ ಮಾಹಿತಿ, ಲಿಂಗ ಸೇರಿದಂತೆ ವೈಯಕ್ತಿಕ ಮಾಹಿತಿಯನ್ನು ಸೋರಿಕೆ ಮಾಡುತ್ತದೆ. ನೀವು ಕೇಳಿದ್ದರಿಂದ ಇದನ್ನು ಮಾಡಿದ್ದೇನೆ” ಎಂದು ಬರೆದಿದ್ದಾರೆ.

ಅವರು ಟ್ವೀಟ್‌ನಲ್ಲಿ ಹಂಚಿಕೊಂಡಿರುವ ಸ್ಕ್ರೀನ್‌ಶಾಟ್‌ಗಳನ್ನು ನೋಡಿದರೆ, ‘ಕೂ’ ಆಪ್‌ ಕೆಲವು ಸೂಕ್ಷ್ಮ ವಿವರಗಳನ್ನು ಸೋರಿಕೆ ಮಾಡುತ್ತಿರುವುದು ಸ್ಪಷ್ಟವಾಗಿದೆ. ಆದ್ದರಿಂದ ಈಗಾಗಲೆ ‘ಕೂ’ ಆಪ್‌ನಲ್ಲಿ ಖಾತೆಗಳನ್ನು ಸೃಷ್ಟಿಸಿರುವ ಭಾರತ ಸರ್ಕಾರದ ಇಲಾಖೆಗಳು, ಮಂತ್ರಿಗಳು ಸೇರಿದಂತೆ ಲಕ್ಷಾಂತರ ಬಳಕೆದಾರರ ಮಾಹಿತಿಗಳು ಸೋರಿಕೆಯಾಗಿರಬಹುದು ಎನ್ನಲಾಗಿದೆ.

ಬ್ಯಾಪ್ಟಿಸ್ಟ್ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ‘ಕೂ’ ಸಂಸ್ಥಾಪಕ ಅಪ್ರಮೇಯ, “ಕೂ ಪ್ರೋಫೈಲ್‌ನಲ್ಲಿ ಬಳಕೆದಾರರು ತಾವಾಗಿಯೆ ಈ ಮಾಹಿತಿಯನ್ನು ಬಹಿರಂಗ ಪಡಿಸಿದರಷ್ಟೇ ಅದು ಬಹಿರಂಗವಾಗುತ್ತದೆ” ಎಂದು ಹೇಳಿದ್ದಾರೆ. ಆದರೆ ಇದಕ್ಕೆ ಬ್ಯಾಷ್ಟಿಸ್ಟ್, ಸೋನಾಲ್ ಗೋಯಲ್ ಎಂಬ ಐಎಎಸ್ ಅಧಿಕಾರಿಯ ‘ಕೂ’ ಫ್ರೋಫೈಲ್‌ ಒಂದರ ಸ್ಕ್ರೀನ್ ಶಾರ್ಟ್ ಹಾಕಿ ಉತ್ತರಿಸಿದ್ದಾರೆ. ಅದರಲ್ಲಿ “ಮೊದಲಿಗೆ ಕಂಡು ಹಿಡಿದ ಫ್ರೋಫೈಲ್ ಇದು.  ಈ ಪ್ರೋಫೈಲ್‌‌ನಲ್ಲಿ ಇವರು ಯಾವುದೆ ಹುಟ್ಟಿದ ದಿನಾಂಕ, ಅವರ ಲಿಂಗ, ಅವರ ವೈವಾಹಿಕ ಸ್ಥಿತಿಯ ಬಗ್ಗೆ ಬಹಿರಂಗಪಡಿಸಿದ್ದಾರೆಯೆ ಎಂದು” ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಸಾಮಾಜಿಕ ಜಾಲತಾಣಗಳ ಡಬಲ್‌ಸ್ಟ್ಯಾಂಡರ್ಡ್‌ ಅನ್ನು ಸಹಿಸಲ್ಲ: ಕೇಂದ್ರ ಸರ್ಕಾರ

 

ಆದರೆ ಬ್ಯಾಪ್ಟಿಸ್ಟ್ ಅವರು ಎತ್ತಿದೆ ಪ್ರಶ್ನೆಗೆ ಕೂ ಸಂಸ್ಥಾಪಕ ಉತ್ತರಿಸದೆ, “ನಾವು ನಮ್ಮ ದೇಶ, ಭಾರತಕ್ಕಾಗಿ ಏನಾದರೂ ಮಾಡಲು ಪ್ರಯತ್ನಿಸುತ್ತಿದ್ದೇವೆ. ನಮ್ಮ ಈ ಪ್ರಯಾಣದಲ್ಲಿ ನೀವು ಸಹಾಯ ಮಾಡಲು ಬಯಸಿದರೆ ದಯವಿಟ್ಟು ನನಗೆ ಪತ್ರ ಬರೆಯಿರಿ. ನಿಮ್ಮ ಎಲ್ಲಾ ಪ್ರತಿಕ್ರಿಯೆಯನ್ನು ನಾವು ನೋಡುತ್ತೇವೆ” ಎಂದು ಹೇಳಿದ್ದಾರೆ. ಅಪ್ರಮೇಯ ಅವರ ಈ ಉತ್ತರಕ್ಕೆ ನೆಟ್ಟಿಗರು ವ್ಯಂಗ್ಯವಾಡಿದ್ದಾರೆ.

 

ರೈತರ ಹೋರಾಟದ ಬಗ್ಗೆ ಟ್ವೀಟ್ ಮಾಡುವ ಪತ್ರಕರ್ತರು, ರಾಜಕಾರಣಿಗಳು ಮತ್ತು ಸಾಮಾಜಿಕ ಕಾರ್ಯಕರ್ತರ ಖಾತೆಗಳನ್ನು ನಿರ್ಬಂಧಿಸಲು ಟ್ವಿಟರ್ ನಿರಾಕರಿಸಿದ ನಂತರ, ಕೇಂದ್ರ ಸರ್ಕಾರ ಸೇರಿದಂತೆ ಲಕ್ಷಾಂತರ ಜನರು ‘ಕೂ’ ಅಪ್ಲಿಕೇಶನ್‌‌‌ ಡೌನ್‌ಲೋಡ್ ಮಾಡಿಕೊಂಡಿದ್ದಾರೆ.

ಪ್ರಸ್ತುತ ಮಾಹಿತಿ ತಂತ್ರಜ್ಞಾನ ಸಚಿವಾಲಯ ಸೇರಿದಂತೆ ಹಲವಾರು ಸರ್ಕಾರಿ ಇಲಾಖೆಗಳ ಹ್ಯಾಂಡಲ್‌ಗಳನ್ನು ‘ಕೂ’ ವೇರಿಫೈ ಮಾಡಿದೆ. ನಾನು ಈಗ ‘ಕೂ’ ಆಪ್‌‌ನಲ್ಲಿದ್ದೇನೆ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್‌ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ರೈತರನ್ನು ಬೆಂಬಲಿಸುವ ಖಲಿಸ್ತಾನಿ-ಪಾಕಿಸ್ತಾನಿ ಟ್ವಿಟ್ಟರ್‌ ಖಾತೆಗಳನ್ನು ಕಿತ್ತುಹಾಕಿ: ಟ್ವಿಟರ್‌ಗೆ ಕೇಂದ್ರ ತಾಕೀತು

‘ಕೂ’ ಆಪ್‌ನಲ್ಲಿನ ದೋಷವನ್ನು ಬ್ಯಾಪ್ಟಿಸ್ಟ್ ಮಾತ್ರವಲ್ಲದೆ ಬೇರೊಬ್ಬರೂ ಕಂಡು ಹಿಡಿದಿದ್ದಾರೆ. ಪ್ರಣವ್ ಎಂಬವರು, ಈ ಆಪ್‌ನಲ್ಲಿ ತಾನು ಯಾವುದೆ ಖಾತೆಯನ್ನು ಮಾಡದೆ ಪೋಸ್ಟ್‌ ಮಾಡಿದೆ ಎಂದು ಹೇಳಿದ್ದಾರೆ.

 

 

 

ಚೀನೀ ಸಂಪರ್ಕ?

ಬ್ಯಾಪ್ಟಿಸ್ಟ್ ‘ಕೂ’ ಆಪ್‌ಗೆ ಚೀನಾ ಸಂಪರ್ಕವಿದೆ ಎಂಬ ಟ್ವೀಟ್ ಅನ್ನು ಕೂಡಾ ಹಂಚಿಕೊಂಡಿದ್ದಾರೆ. ಆದರೆ ಅದು ಅಷ್ಟೊಂದು ನಿಖರವಾಗಿಲ್ಲ ಎನ್ನಲಾಗಿದೆ. ‘ಕೂಆಪ್‌.ಕಾಮ್’ ಡೊಮೇನ್‌‌‌ ಅನ್ನು ನಾಲ್ಕು ವರ್ಷಗಳ ಹಿಂದೆ ರಚಿಸಲಾಗಿದೆ. ಅಂದಿನಿಂದ ಇಂದಿನವರೆಗೂ ಇದರ ಮಾಲಿಕತ್ವ ಹಲವು ಬಾರಿ ಬದಲಾಗಿದೆ ಎಂದು ಈ ದಾಖಲೆ ತಿಳಿಸುತ್ತದೆ. ಅದರ ಇತ್ತೀಚೆನ ಮಾಲಿಕರು ಬಾಂಬಿನೇಟ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಆಗಿದೆಯಾದರೂ, ಅದು ಅದನ್ನು 2019 ರಲ್ಲಷ್ಟೇ ಸ್ವಾಧೀನ ಪಡಿಸಿಕೊಂಡಿದೆ.

ಆದರೆ ಕೂ ಅಪ್ಲಿಕೇಶನ್‌ನಲ್ಲಿ ಚೀನೀ ಹೂಡಿಕೆ ಇದ್ದು, ಚೀನಾ ಮೂಲದ ಶಿಯೋಮಿ ಕಂಪೆನಿಯೊಂದಿಗೆ ಸಂಬಂಧವಿರುವ ಶುನ್‌ವೇಯು ಇದರಲ್ಲಿ ಹಣವನ್ನು ಹೂಡಿಕೆ ಮಾಡಿದೆ. ಆದರೆ ಕೂವನ್ನು ಸಂಪೂರ್ಣ ಸ್ವದೇಶಿ ಅಪ್ಲಿಕೇಶನ್ ಮಾಡುತ್ತಿದ್ದು ಅಲ್ಪ ಪಾಲಷ್ಟೆ ಶುನ್‌ವೆ ಅವರಲ್ಲಿದೆ, ಅವರು ಅದನ್ನು ಶೀಘ್ರದಲ್ಲೇ ಮಾರಾಟ ಮಾಡಲಿದ್ದಾರೆ ಎಂದು ‘ಕೂ’ ಸಿಇಒ ಅಪ್ರಮೇಯ ಹೇಳಿದ್ದಾರೆ.

ಇದನ್ನೂ ಓದಿ: ‘ರೈತರ ನರಮೇಧ ನಡೆಸುತ್ತಿರುವ ಮೋದಿ’ – ಟ್ವಿಟರ್‌ನಲ್ಲಿ ಭುಗಿಲೆದ್ದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನನ್ನಲ್ಲಿ ಇತ್ತು.
    ಅದು ಒಂದು ಪಕ್ಷದ ಪರವಾಗಿದೆ ಎಂದು ಅಲ್ಲಿಂದ ವರ್ಷಗಳ ಹಿಂದೆ ತೊರೆದಿದ್ದೇನೆ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...