Homeಮುಖಪುಟ‘ಕೂ’ ಆಪ್ ಸುರಕ್ಷಿತವೆ? ಪ್ರಶ್ನೆಗೆ ’ರಾಷ್ಟ್ರೀಯತೆ’ ಹೆಸರು ಹೇಳಿ ತಪ್ಪಿಸಿಕೊಂಡ ’ಕೂ’ ಸಂಸ್ಥಾಪಕ!

‘ಕೂ’ ಆಪ್ ಸುರಕ್ಷಿತವೆ? ಪ್ರಶ್ನೆಗೆ ’ರಾಷ್ಟ್ರೀಯತೆ’ ಹೆಸರು ಹೇಳಿ ತಪ್ಪಿಸಿಕೊಂಡ ’ಕೂ’ ಸಂಸ್ಥಾಪಕ!

ನಿಜಕ್ಕೂ ’ಕೂ’ ಸುರಕ್ಷಿತವೆ? ಸಾಮಾಜಿಕ ಜಾಲತಾಣಗಳ ಭದ್ರತಾ ಸಂಶೋಧಕರು ಹೇಳುತ್ತಿರುವುದೇನು?

- Advertisement -
- Advertisement -

ಕೇಂದ್ರ ಸರ್ಕಾರವು ಟ್ವಿಟರ್‌ ಜೊತೆ ಅಸಮಧಾನಗೊಂಡಿದ್ದು, ಟ್ವಿಟರ್ ಮಾದರಿಯ ಸಾಮಾಜಿಕ ಜಾಲತಾಣವಾದ ’ಕೂ’ ಆಪ್‌ಗೆ ಪ್ರೋತ್ಸಾಹಿಸಿದೆ. ಈ ಹಿನ್ನಲೆಯಲ್ಲಿ ಈ ಆಪ್‌‌ ಅನ್ನು ಹಲವಾರು ಜನರು ಡೌನ್‌ಲೋಡ್ ಮಾಡಿದ್ದಾರೆ. ಮಾಹಿತಿಯಂತೆ ಕಳೆದ 24 ಗಂಟೆಗಳಲ್ಲಿ 30 ಲಕ್ಷ ಡೌನ್‌ಲೋಡ್‌ಗಳಾಗಿದೆ ಎನ್ನಲಾಗಿದೆ. ಆದರೆ ಈ ಆಪ್‌ ಬಗ್ಗೆ ಹಲವಾರು ಅಘಾತಕಾರಿ ಮಾಹಿತಿಗಳು ಹೊರಬಿದ್ದಿದ್ದು, ಆಪ್‌ ಸುರಕ್ಷಿತ ಅಲ್ಲ ಎಂದು ಫ್ರೆಂಚ್ ಸಂಶೋಧಕರು ಬಹಿರಂಗ ಪಡಿಸಿರುವುದ ಜೊತೆಗೆ, ಆಪ್‌‌ಗೆ ಚೀನಾದೊಂದಿಗೆ ಸಂಪರ್ಕವಿದೆ ಎನ್ನಲಾಗಿದೆ.

ಸಾಮಾಜಿಕ ಜಾಲತಾಣಗಳ ಭದ್ರತಾ ಸಂಶೋಧಕರು, ’ಕೂ’ ಆಪ್‌ ಹೆಚ್ಚು ಸುರಕ್ಷಿತವಲ್ಲ, ಅದು ಬಳಕೆದಾರರ ಇಮೇಲ್ ಐಡಿ, ಫೋನ್‌ ಸಂಖ್ಯೆಗಳು, ಹುಟ್ಟಿದ ದಿನಾಂಕ ಸೇರಿದಂತೆ ಬಹಳಷ್ಟು ಸೂಕ್ಷ್ಮ ಮಾಹಿತಿಗಳನ್ನು ಸೋರಿಕೆ ಮಾಡುತ್ತಿದೆ ಎಂದು ಹೇಳಿದ್ದಾರೆ.

ಟ್ವಿಟರ್‌ನಲ್ಲಿ ಎಲಿಯಟ್ ಆಂಡರ್ಸನ್ ಎಂದು ಜನಪ್ರಿಯವಾಗಿರುವ ಫ್ರೆಂಚ್ ಸೈಬರ್‌ ಸೆಕ್ಯುರಿಟಿ ಸಂಶೋಧಕ ರಾಬರ್ಟ್ ಬ್ಯಾಪ್ಟಿಸ್ಟ್, ’ಕೂ’ ಅಪ್ಲಿಕೇಷನ್‌ನಲ್ಲಿ  ಬಳಕೆದಾರರ ಮಾಹಿತಿ ಸೋರಿಕೆಯಾಗುತ್ತದೆ ಎಂದು ಕಂಡು ಹಿಡಿದಿದ್ದಾರೆ. ಬ್ಯಾಪ್ಟಿಸ್ಟ್ ಈ ಹಿಂದೆ ಆಧಾರ್ ವ್ಯವಸ್ಥೆಯಲ್ಲಿನ ಹಲವಾರು ದೋಷಗಳನ್ನು ಎತ್ತಿ ತೋರಿಸಿದ್ದು, ಇದರ ನಂತರ ಅವರು ಜನಪ್ರಿಯರಾಗಿದ್ದರು. ಇಷ್ಟೇ ಅಲ್ಲದೆ, ಇತರ ತಂತ್ರಜ್ಞಾನಗಳಲ್ಲಿನ ಹಲವಾರು ಭದ್ರತಾ ದೋಷಗಳು ಅವರು ಎತ್ತಿ ತೋರಿಸಿದ್ದರು.

ಇದನ್ನೂ ಓದಿ: ಅಭಿವ್ಯಕ್ತಿ ಸ್ವಾತಂತ್ಯ್ರ, ಪ್ರಜಾಪ್ರಭುತ್ವ ಮೌಲ್ಯಕ್ಕೆ ಸದಾ ಬದ್ಧ: ಟ್ವಿಟರ್‌ ಬೆಂಬಲಕ್ಕೆ ಅಮೆರಿಕ

ಕಳೆದ ರಾತ್ರಿ ಬ್ಯಾಪ್ಟಿಸ್ಟ್ ಮಾಡಿದ್ದ ಟ್ವೀಟ್‌ನಲ್ಲಿ, “ಹೊಸ ‘ಕೂ’ ಅಪ್ಲಿಕೇಶನ್‌ ಜೊತೆ ನಾನು ಕೇವಲ 30 ನಿಮಿಷ ಕಳೆದೆ. ಈ ಅಪ್ಲಿಕೇಷನ್ ತನ್ನ ಬಳಕೆದಾರರ, ಇಮೇಲ್, ಹುಟ್ಟಿದ ದಿನಾಂಕ, ಹೆಸರು, ಅವರ ವೈವಾಹಿಕ ಮಾಹಿತಿ, ಲಿಂಗ ಸೇರಿದಂತೆ ವೈಯಕ್ತಿಕ ಮಾಹಿತಿಯನ್ನು ಸೋರಿಕೆ ಮಾಡುತ್ತದೆ. ನೀವು ಕೇಳಿದ್ದರಿಂದ ಇದನ್ನು ಮಾಡಿದ್ದೇನೆ” ಎಂದು ಬರೆದಿದ್ದಾರೆ.

ಅವರು ಟ್ವೀಟ್‌ನಲ್ಲಿ ಹಂಚಿಕೊಂಡಿರುವ ಸ್ಕ್ರೀನ್‌ಶಾಟ್‌ಗಳನ್ನು ನೋಡಿದರೆ, ‘ಕೂ’ ಆಪ್‌ ಕೆಲವು ಸೂಕ್ಷ್ಮ ವಿವರಗಳನ್ನು ಸೋರಿಕೆ ಮಾಡುತ್ತಿರುವುದು ಸ್ಪಷ್ಟವಾಗಿದೆ. ಆದ್ದರಿಂದ ಈಗಾಗಲೆ ‘ಕೂ’ ಆಪ್‌ನಲ್ಲಿ ಖಾತೆಗಳನ್ನು ಸೃಷ್ಟಿಸಿರುವ ಭಾರತ ಸರ್ಕಾರದ ಇಲಾಖೆಗಳು, ಮಂತ್ರಿಗಳು ಸೇರಿದಂತೆ ಲಕ್ಷಾಂತರ ಬಳಕೆದಾರರ ಮಾಹಿತಿಗಳು ಸೋರಿಕೆಯಾಗಿರಬಹುದು ಎನ್ನಲಾಗಿದೆ.

ಬ್ಯಾಪ್ಟಿಸ್ಟ್ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ‘ಕೂ’ ಸಂಸ್ಥಾಪಕ ಅಪ್ರಮೇಯ, “ಕೂ ಪ್ರೋಫೈಲ್‌ನಲ್ಲಿ ಬಳಕೆದಾರರು ತಾವಾಗಿಯೆ ಈ ಮಾಹಿತಿಯನ್ನು ಬಹಿರಂಗ ಪಡಿಸಿದರಷ್ಟೇ ಅದು ಬಹಿರಂಗವಾಗುತ್ತದೆ” ಎಂದು ಹೇಳಿದ್ದಾರೆ. ಆದರೆ ಇದಕ್ಕೆ ಬ್ಯಾಷ್ಟಿಸ್ಟ್, ಸೋನಾಲ್ ಗೋಯಲ್ ಎಂಬ ಐಎಎಸ್ ಅಧಿಕಾರಿಯ ‘ಕೂ’ ಫ್ರೋಫೈಲ್‌ ಒಂದರ ಸ್ಕ್ರೀನ್ ಶಾರ್ಟ್ ಹಾಕಿ ಉತ್ತರಿಸಿದ್ದಾರೆ. ಅದರಲ್ಲಿ “ಮೊದಲಿಗೆ ಕಂಡು ಹಿಡಿದ ಫ್ರೋಫೈಲ್ ಇದು.  ಈ ಪ್ರೋಫೈಲ್‌‌ನಲ್ಲಿ ಇವರು ಯಾವುದೆ ಹುಟ್ಟಿದ ದಿನಾಂಕ, ಅವರ ಲಿಂಗ, ಅವರ ವೈವಾಹಿಕ ಸ್ಥಿತಿಯ ಬಗ್ಗೆ ಬಹಿರಂಗಪಡಿಸಿದ್ದಾರೆಯೆ ಎಂದು” ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಸಾಮಾಜಿಕ ಜಾಲತಾಣಗಳ ಡಬಲ್‌ಸ್ಟ್ಯಾಂಡರ್ಡ್‌ ಅನ್ನು ಸಹಿಸಲ್ಲ: ಕೇಂದ್ರ ಸರ್ಕಾರ

 

ಆದರೆ ಬ್ಯಾಪ್ಟಿಸ್ಟ್ ಅವರು ಎತ್ತಿದೆ ಪ್ರಶ್ನೆಗೆ ಕೂ ಸಂಸ್ಥಾಪಕ ಉತ್ತರಿಸದೆ, “ನಾವು ನಮ್ಮ ದೇಶ, ಭಾರತಕ್ಕಾಗಿ ಏನಾದರೂ ಮಾಡಲು ಪ್ರಯತ್ನಿಸುತ್ತಿದ್ದೇವೆ. ನಮ್ಮ ಈ ಪ್ರಯಾಣದಲ್ಲಿ ನೀವು ಸಹಾಯ ಮಾಡಲು ಬಯಸಿದರೆ ದಯವಿಟ್ಟು ನನಗೆ ಪತ್ರ ಬರೆಯಿರಿ. ನಿಮ್ಮ ಎಲ್ಲಾ ಪ್ರತಿಕ್ರಿಯೆಯನ್ನು ನಾವು ನೋಡುತ್ತೇವೆ” ಎಂದು ಹೇಳಿದ್ದಾರೆ. ಅಪ್ರಮೇಯ ಅವರ ಈ ಉತ್ತರಕ್ಕೆ ನೆಟ್ಟಿಗರು ವ್ಯಂಗ್ಯವಾಡಿದ್ದಾರೆ.

 

ರೈತರ ಹೋರಾಟದ ಬಗ್ಗೆ ಟ್ವೀಟ್ ಮಾಡುವ ಪತ್ರಕರ್ತರು, ರಾಜಕಾರಣಿಗಳು ಮತ್ತು ಸಾಮಾಜಿಕ ಕಾರ್ಯಕರ್ತರ ಖಾತೆಗಳನ್ನು ನಿರ್ಬಂಧಿಸಲು ಟ್ವಿಟರ್ ನಿರಾಕರಿಸಿದ ನಂತರ, ಕೇಂದ್ರ ಸರ್ಕಾರ ಸೇರಿದಂತೆ ಲಕ್ಷಾಂತರ ಜನರು ‘ಕೂ’ ಅಪ್ಲಿಕೇಶನ್‌‌‌ ಡೌನ್‌ಲೋಡ್ ಮಾಡಿಕೊಂಡಿದ್ದಾರೆ.

ಪ್ರಸ್ತುತ ಮಾಹಿತಿ ತಂತ್ರಜ್ಞಾನ ಸಚಿವಾಲಯ ಸೇರಿದಂತೆ ಹಲವಾರು ಸರ್ಕಾರಿ ಇಲಾಖೆಗಳ ಹ್ಯಾಂಡಲ್‌ಗಳನ್ನು ‘ಕೂ’ ವೇರಿಫೈ ಮಾಡಿದೆ. ನಾನು ಈಗ ‘ಕೂ’ ಆಪ್‌‌ನಲ್ಲಿದ್ದೇನೆ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್‌ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ರೈತರನ್ನು ಬೆಂಬಲಿಸುವ ಖಲಿಸ್ತಾನಿ-ಪಾಕಿಸ್ತಾನಿ ಟ್ವಿಟ್ಟರ್‌ ಖಾತೆಗಳನ್ನು ಕಿತ್ತುಹಾಕಿ: ಟ್ವಿಟರ್‌ಗೆ ಕೇಂದ್ರ ತಾಕೀತು

‘ಕೂ’ ಆಪ್‌ನಲ್ಲಿನ ದೋಷವನ್ನು ಬ್ಯಾಪ್ಟಿಸ್ಟ್ ಮಾತ್ರವಲ್ಲದೆ ಬೇರೊಬ್ಬರೂ ಕಂಡು ಹಿಡಿದಿದ್ದಾರೆ. ಪ್ರಣವ್ ಎಂಬವರು, ಈ ಆಪ್‌ನಲ್ಲಿ ತಾನು ಯಾವುದೆ ಖಾತೆಯನ್ನು ಮಾಡದೆ ಪೋಸ್ಟ್‌ ಮಾಡಿದೆ ಎಂದು ಹೇಳಿದ್ದಾರೆ.

 

 

 

ಚೀನೀ ಸಂಪರ್ಕ?

ಬ್ಯಾಪ್ಟಿಸ್ಟ್ ‘ಕೂ’ ಆಪ್‌ಗೆ ಚೀನಾ ಸಂಪರ್ಕವಿದೆ ಎಂಬ ಟ್ವೀಟ್ ಅನ್ನು ಕೂಡಾ ಹಂಚಿಕೊಂಡಿದ್ದಾರೆ. ಆದರೆ ಅದು ಅಷ್ಟೊಂದು ನಿಖರವಾಗಿಲ್ಲ ಎನ್ನಲಾಗಿದೆ. ‘ಕೂಆಪ್‌.ಕಾಮ್’ ಡೊಮೇನ್‌‌‌ ಅನ್ನು ನಾಲ್ಕು ವರ್ಷಗಳ ಹಿಂದೆ ರಚಿಸಲಾಗಿದೆ. ಅಂದಿನಿಂದ ಇಂದಿನವರೆಗೂ ಇದರ ಮಾಲಿಕತ್ವ ಹಲವು ಬಾರಿ ಬದಲಾಗಿದೆ ಎಂದು ಈ ದಾಖಲೆ ತಿಳಿಸುತ್ತದೆ. ಅದರ ಇತ್ತೀಚೆನ ಮಾಲಿಕರು ಬಾಂಬಿನೇಟ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಆಗಿದೆಯಾದರೂ, ಅದು ಅದನ್ನು 2019 ರಲ್ಲಷ್ಟೇ ಸ್ವಾಧೀನ ಪಡಿಸಿಕೊಂಡಿದೆ.

ಆದರೆ ಕೂ ಅಪ್ಲಿಕೇಶನ್‌ನಲ್ಲಿ ಚೀನೀ ಹೂಡಿಕೆ ಇದ್ದು, ಚೀನಾ ಮೂಲದ ಶಿಯೋಮಿ ಕಂಪೆನಿಯೊಂದಿಗೆ ಸಂಬಂಧವಿರುವ ಶುನ್‌ವೇಯು ಇದರಲ್ಲಿ ಹಣವನ್ನು ಹೂಡಿಕೆ ಮಾಡಿದೆ. ಆದರೆ ಕೂವನ್ನು ಸಂಪೂರ್ಣ ಸ್ವದೇಶಿ ಅಪ್ಲಿಕೇಶನ್ ಮಾಡುತ್ತಿದ್ದು ಅಲ್ಪ ಪಾಲಷ್ಟೆ ಶುನ್‌ವೆ ಅವರಲ್ಲಿದೆ, ಅವರು ಅದನ್ನು ಶೀಘ್ರದಲ್ಲೇ ಮಾರಾಟ ಮಾಡಲಿದ್ದಾರೆ ಎಂದು ‘ಕೂ’ ಸಿಇಒ ಅಪ್ರಮೇಯ ಹೇಳಿದ್ದಾರೆ.

ಇದನ್ನೂ ಓದಿ: ‘ರೈತರ ನರಮೇಧ ನಡೆಸುತ್ತಿರುವ ಮೋದಿ’ – ಟ್ವಿಟರ್‌ನಲ್ಲಿ ಭುಗಿಲೆದ್ದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನನ್ನಲ್ಲಿ ಇತ್ತು.
    ಅದು ಒಂದು ಪಕ್ಷದ ಪರವಾಗಿದೆ ಎಂದು ಅಲ್ಲಿಂದ ವರ್ಷಗಳ ಹಿಂದೆ ತೊರೆದಿದ್ದೇನೆ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...