Homeಮುಖಪುಟ‘ಕೂ’ ಆಪ್ ಸುರಕ್ಷಿತವೆ? ಪ್ರಶ್ನೆಗೆ ’ರಾಷ್ಟ್ರೀಯತೆ’ ಹೆಸರು ಹೇಳಿ ತಪ್ಪಿಸಿಕೊಂಡ ’ಕೂ’ ಸಂಸ್ಥಾಪಕ!

‘ಕೂ’ ಆಪ್ ಸುರಕ್ಷಿತವೆ? ಪ್ರಶ್ನೆಗೆ ’ರಾಷ್ಟ್ರೀಯತೆ’ ಹೆಸರು ಹೇಳಿ ತಪ್ಪಿಸಿಕೊಂಡ ’ಕೂ’ ಸಂಸ್ಥಾಪಕ!

ನಿಜಕ್ಕೂ ’ಕೂ’ ಸುರಕ್ಷಿತವೆ? ಸಾಮಾಜಿಕ ಜಾಲತಾಣಗಳ ಭದ್ರತಾ ಸಂಶೋಧಕರು ಹೇಳುತ್ತಿರುವುದೇನು?

- Advertisement -
- Advertisement -

ಕೇಂದ್ರ ಸರ್ಕಾರವು ಟ್ವಿಟರ್‌ ಜೊತೆ ಅಸಮಧಾನಗೊಂಡಿದ್ದು, ಟ್ವಿಟರ್ ಮಾದರಿಯ ಸಾಮಾಜಿಕ ಜಾಲತಾಣವಾದ ’ಕೂ’ ಆಪ್‌ಗೆ ಪ್ರೋತ್ಸಾಹಿಸಿದೆ. ಈ ಹಿನ್ನಲೆಯಲ್ಲಿ ಈ ಆಪ್‌‌ ಅನ್ನು ಹಲವಾರು ಜನರು ಡೌನ್‌ಲೋಡ್ ಮಾಡಿದ್ದಾರೆ. ಮಾಹಿತಿಯಂತೆ ಕಳೆದ 24 ಗಂಟೆಗಳಲ್ಲಿ 30 ಲಕ್ಷ ಡೌನ್‌ಲೋಡ್‌ಗಳಾಗಿದೆ ಎನ್ನಲಾಗಿದೆ. ಆದರೆ ಈ ಆಪ್‌ ಬಗ್ಗೆ ಹಲವಾರು ಅಘಾತಕಾರಿ ಮಾಹಿತಿಗಳು ಹೊರಬಿದ್ದಿದ್ದು, ಆಪ್‌ ಸುರಕ್ಷಿತ ಅಲ್ಲ ಎಂದು ಫ್ರೆಂಚ್ ಸಂಶೋಧಕರು ಬಹಿರಂಗ ಪಡಿಸಿರುವುದ ಜೊತೆಗೆ, ಆಪ್‌‌ಗೆ ಚೀನಾದೊಂದಿಗೆ ಸಂಪರ್ಕವಿದೆ ಎನ್ನಲಾಗಿದೆ.

ಸಾಮಾಜಿಕ ಜಾಲತಾಣಗಳ ಭದ್ರತಾ ಸಂಶೋಧಕರು, ’ಕೂ’ ಆಪ್‌ ಹೆಚ್ಚು ಸುರಕ್ಷಿತವಲ್ಲ, ಅದು ಬಳಕೆದಾರರ ಇಮೇಲ್ ಐಡಿ, ಫೋನ್‌ ಸಂಖ್ಯೆಗಳು, ಹುಟ್ಟಿದ ದಿನಾಂಕ ಸೇರಿದಂತೆ ಬಹಳಷ್ಟು ಸೂಕ್ಷ್ಮ ಮಾಹಿತಿಗಳನ್ನು ಸೋರಿಕೆ ಮಾಡುತ್ತಿದೆ ಎಂದು ಹೇಳಿದ್ದಾರೆ.

ಟ್ವಿಟರ್‌ನಲ್ಲಿ ಎಲಿಯಟ್ ಆಂಡರ್ಸನ್ ಎಂದು ಜನಪ್ರಿಯವಾಗಿರುವ ಫ್ರೆಂಚ್ ಸೈಬರ್‌ ಸೆಕ್ಯುರಿಟಿ ಸಂಶೋಧಕ ರಾಬರ್ಟ್ ಬ್ಯಾಪ್ಟಿಸ್ಟ್, ’ಕೂ’ ಅಪ್ಲಿಕೇಷನ್‌ನಲ್ಲಿ  ಬಳಕೆದಾರರ ಮಾಹಿತಿ ಸೋರಿಕೆಯಾಗುತ್ತದೆ ಎಂದು ಕಂಡು ಹಿಡಿದಿದ್ದಾರೆ. ಬ್ಯಾಪ್ಟಿಸ್ಟ್ ಈ ಹಿಂದೆ ಆಧಾರ್ ವ್ಯವಸ್ಥೆಯಲ್ಲಿನ ಹಲವಾರು ದೋಷಗಳನ್ನು ಎತ್ತಿ ತೋರಿಸಿದ್ದು, ಇದರ ನಂತರ ಅವರು ಜನಪ್ರಿಯರಾಗಿದ್ದರು. ಇಷ್ಟೇ ಅಲ್ಲದೆ, ಇತರ ತಂತ್ರಜ್ಞಾನಗಳಲ್ಲಿನ ಹಲವಾರು ಭದ್ರತಾ ದೋಷಗಳು ಅವರು ಎತ್ತಿ ತೋರಿಸಿದ್ದರು.

ಇದನ್ನೂ ಓದಿ: ಅಭಿವ್ಯಕ್ತಿ ಸ್ವಾತಂತ್ಯ್ರ, ಪ್ರಜಾಪ್ರಭುತ್ವ ಮೌಲ್ಯಕ್ಕೆ ಸದಾ ಬದ್ಧ: ಟ್ವಿಟರ್‌ ಬೆಂಬಲಕ್ಕೆ ಅಮೆರಿಕ

ಕಳೆದ ರಾತ್ರಿ ಬ್ಯಾಪ್ಟಿಸ್ಟ್ ಮಾಡಿದ್ದ ಟ್ವೀಟ್‌ನಲ್ಲಿ, “ಹೊಸ ‘ಕೂ’ ಅಪ್ಲಿಕೇಶನ್‌ ಜೊತೆ ನಾನು ಕೇವಲ 30 ನಿಮಿಷ ಕಳೆದೆ. ಈ ಅಪ್ಲಿಕೇಷನ್ ತನ್ನ ಬಳಕೆದಾರರ, ಇಮೇಲ್, ಹುಟ್ಟಿದ ದಿನಾಂಕ, ಹೆಸರು, ಅವರ ವೈವಾಹಿಕ ಮಾಹಿತಿ, ಲಿಂಗ ಸೇರಿದಂತೆ ವೈಯಕ್ತಿಕ ಮಾಹಿತಿಯನ್ನು ಸೋರಿಕೆ ಮಾಡುತ್ತದೆ. ನೀವು ಕೇಳಿದ್ದರಿಂದ ಇದನ್ನು ಮಾಡಿದ್ದೇನೆ” ಎಂದು ಬರೆದಿದ್ದಾರೆ.

ಅವರು ಟ್ವೀಟ್‌ನಲ್ಲಿ ಹಂಚಿಕೊಂಡಿರುವ ಸ್ಕ್ರೀನ್‌ಶಾಟ್‌ಗಳನ್ನು ನೋಡಿದರೆ, ‘ಕೂ’ ಆಪ್‌ ಕೆಲವು ಸೂಕ್ಷ್ಮ ವಿವರಗಳನ್ನು ಸೋರಿಕೆ ಮಾಡುತ್ತಿರುವುದು ಸ್ಪಷ್ಟವಾಗಿದೆ. ಆದ್ದರಿಂದ ಈಗಾಗಲೆ ‘ಕೂ’ ಆಪ್‌ನಲ್ಲಿ ಖಾತೆಗಳನ್ನು ಸೃಷ್ಟಿಸಿರುವ ಭಾರತ ಸರ್ಕಾರದ ಇಲಾಖೆಗಳು, ಮಂತ್ರಿಗಳು ಸೇರಿದಂತೆ ಲಕ್ಷಾಂತರ ಬಳಕೆದಾರರ ಮಾಹಿತಿಗಳು ಸೋರಿಕೆಯಾಗಿರಬಹುದು ಎನ್ನಲಾಗಿದೆ.

ಬ್ಯಾಪ್ಟಿಸ್ಟ್ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ‘ಕೂ’ ಸಂಸ್ಥಾಪಕ ಅಪ್ರಮೇಯ, “ಕೂ ಪ್ರೋಫೈಲ್‌ನಲ್ಲಿ ಬಳಕೆದಾರರು ತಾವಾಗಿಯೆ ಈ ಮಾಹಿತಿಯನ್ನು ಬಹಿರಂಗ ಪಡಿಸಿದರಷ್ಟೇ ಅದು ಬಹಿರಂಗವಾಗುತ್ತದೆ” ಎಂದು ಹೇಳಿದ್ದಾರೆ. ಆದರೆ ಇದಕ್ಕೆ ಬ್ಯಾಷ್ಟಿಸ್ಟ್, ಸೋನಾಲ್ ಗೋಯಲ್ ಎಂಬ ಐಎಎಸ್ ಅಧಿಕಾರಿಯ ‘ಕೂ’ ಫ್ರೋಫೈಲ್‌ ಒಂದರ ಸ್ಕ್ರೀನ್ ಶಾರ್ಟ್ ಹಾಕಿ ಉತ್ತರಿಸಿದ್ದಾರೆ. ಅದರಲ್ಲಿ “ಮೊದಲಿಗೆ ಕಂಡು ಹಿಡಿದ ಫ್ರೋಫೈಲ್ ಇದು.  ಈ ಪ್ರೋಫೈಲ್‌‌ನಲ್ಲಿ ಇವರು ಯಾವುದೆ ಹುಟ್ಟಿದ ದಿನಾಂಕ, ಅವರ ಲಿಂಗ, ಅವರ ವೈವಾಹಿಕ ಸ್ಥಿತಿಯ ಬಗ್ಗೆ ಬಹಿರಂಗಪಡಿಸಿದ್ದಾರೆಯೆ ಎಂದು” ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಸಾಮಾಜಿಕ ಜಾಲತಾಣಗಳ ಡಬಲ್‌ಸ್ಟ್ಯಾಂಡರ್ಡ್‌ ಅನ್ನು ಸಹಿಸಲ್ಲ: ಕೇಂದ್ರ ಸರ್ಕಾರ

 

ಆದರೆ ಬ್ಯಾಪ್ಟಿಸ್ಟ್ ಅವರು ಎತ್ತಿದೆ ಪ್ರಶ್ನೆಗೆ ಕೂ ಸಂಸ್ಥಾಪಕ ಉತ್ತರಿಸದೆ, “ನಾವು ನಮ್ಮ ದೇಶ, ಭಾರತಕ್ಕಾಗಿ ಏನಾದರೂ ಮಾಡಲು ಪ್ರಯತ್ನಿಸುತ್ತಿದ್ದೇವೆ. ನಮ್ಮ ಈ ಪ್ರಯಾಣದಲ್ಲಿ ನೀವು ಸಹಾಯ ಮಾಡಲು ಬಯಸಿದರೆ ದಯವಿಟ್ಟು ನನಗೆ ಪತ್ರ ಬರೆಯಿರಿ. ನಿಮ್ಮ ಎಲ್ಲಾ ಪ್ರತಿಕ್ರಿಯೆಯನ್ನು ನಾವು ನೋಡುತ್ತೇವೆ” ಎಂದು ಹೇಳಿದ್ದಾರೆ. ಅಪ್ರಮೇಯ ಅವರ ಈ ಉತ್ತರಕ್ಕೆ ನೆಟ್ಟಿಗರು ವ್ಯಂಗ್ಯವಾಡಿದ್ದಾರೆ.

 

ರೈತರ ಹೋರಾಟದ ಬಗ್ಗೆ ಟ್ವೀಟ್ ಮಾಡುವ ಪತ್ರಕರ್ತರು, ರಾಜಕಾರಣಿಗಳು ಮತ್ತು ಸಾಮಾಜಿಕ ಕಾರ್ಯಕರ್ತರ ಖಾತೆಗಳನ್ನು ನಿರ್ಬಂಧಿಸಲು ಟ್ವಿಟರ್ ನಿರಾಕರಿಸಿದ ನಂತರ, ಕೇಂದ್ರ ಸರ್ಕಾರ ಸೇರಿದಂತೆ ಲಕ್ಷಾಂತರ ಜನರು ‘ಕೂ’ ಅಪ್ಲಿಕೇಶನ್‌‌‌ ಡೌನ್‌ಲೋಡ್ ಮಾಡಿಕೊಂಡಿದ್ದಾರೆ.

ಪ್ರಸ್ತುತ ಮಾಹಿತಿ ತಂತ್ರಜ್ಞಾನ ಸಚಿವಾಲಯ ಸೇರಿದಂತೆ ಹಲವಾರು ಸರ್ಕಾರಿ ಇಲಾಖೆಗಳ ಹ್ಯಾಂಡಲ್‌ಗಳನ್ನು ‘ಕೂ’ ವೇರಿಫೈ ಮಾಡಿದೆ. ನಾನು ಈಗ ‘ಕೂ’ ಆಪ್‌‌ನಲ್ಲಿದ್ದೇನೆ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್‌ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ರೈತರನ್ನು ಬೆಂಬಲಿಸುವ ಖಲಿಸ್ತಾನಿ-ಪಾಕಿಸ್ತಾನಿ ಟ್ವಿಟ್ಟರ್‌ ಖಾತೆಗಳನ್ನು ಕಿತ್ತುಹಾಕಿ: ಟ್ವಿಟರ್‌ಗೆ ಕೇಂದ್ರ ತಾಕೀತು

‘ಕೂ’ ಆಪ್‌ನಲ್ಲಿನ ದೋಷವನ್ನು ಬ್ಯಾಪ್ಟಿಸ್ಟ್ ಮಾತ್ರವಲ್ಲದೆ ಬೇರೊಬ್ಬರೂ ಕಂಡು ಹಿಡಿದಿದ್ದಾರೆ. ಪ್ರಣವ್ ಎಂಬವರು, ಈ ಆಪ್‌ನಲ್ಲಿ ತಾನು ಯಾವುದೆ ಖಾತೆಯನ್ನು ಮಾಡದೆ ಪೋಸ್ಟ್‌ ಮಾಡಿದೆ ಎಂದು ಹೇಳಿದ್ದಾರೆ.

 

 

 

ಚೀನೀ ಸಂಪರ್ಕ?

ಬ್ಯಾಪ್ಟಿಸ್ಟ್ ‘ಕೂ’ ಆಪ್‌ಗೆ ಚೀನಾ ಸಂಪರ್ಕವಿದೆ ಎಂಬ ಟ್ವೀಟ್ ಅನ್ನು ಕೂಡಾ ಹಂಚಿಕೊಂಡಿದ್ದಾರೆ. ಆದರೆ ಅದು ಅಷ್ಟೊಂದು ನಿಖರವಾಗಿಲ್ಲ ಎನ್ನಲಾಗಿದೆ. ‘ಕೂಆಪ್‌.ಕಾಮ್’ ಡೊಮೇನ್‌‌‌ ಅನ್ನು ನಾಲ್ಕು ವರ್ಷಗಳ ಹಿಂದೆ ರಚಿಸಲಾಗಿದೆ. ಅಂದಿನಿಂದ ಇಂದಿನವರೆಗೂ ಇದರ ಮಾಲಿಕತ್ವ ಹಲವು ಬಾರಿ ಬದಲಾಗಿದೆ ಎಂದು ಈ ದಾಖಲೆ ತಿಳಿಸುತ್ತದೆ. ಅದರ ಇತ್ತೀಚೆನ ಮಾಲಿಕರು ಬಾಂಬಿನೇಟ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಆಗಿದೆಯಾದರೂ, ಅದು ಅದನ್ನು 2019 ರಲ್ಲಷ್ಟೇ ಸ್ವಾಧೀನ ಪಡಿಸಿಕೊಂಡಿದೆ.

ಆದರೆ ಕೂ ಅಪ್ಲಿಕೇಶನ್‌ನಲ್ಲಿ ಚೀನೀ ಹೂಡಿಕೆ ಇದ್ದು, ಚೀನಾ ಮೂಲದ ಶಿಯೋಮಿ ಕಂಪೆನಿಯೊಂದಿಗೆ ಸಂಬಂಧವಿರುವ ಶುನ್‌ವೇಯು ಇದರಲ್ಲಿ ಹಣವನ್ನು ಹೂಡಿಕೆ ಮಾಡಿದೆ. ಆದರೆ ಕೂವನ್ನು ಸಂಪೂರ್ಣ ಸ್ವದೇಶಿ ಅಪ್ಲಿಕೇಶನ್ ಮಾಡುತ್ತಿದ್ದು ಅಲ್ಪ ಪಾಲಷ್ಟೆ ಶುನ್‌ವೆ ಅವರಲ್ಲಿದೆ, ಅವರು ಅದನ್ನು ಶೀಘ್ರದಲ್ಲೇ ಮಾರಾಟ ಮಾಡಲಿದ್ದಾರೆ ಎಂದು ‘ಕೂ’ ಸಿಇಒ ಅಪ್ರಮೇಯ ಹೇಳಿದ್ದಾರೆ.

ಇದನ್ನೂ ಓದಿ: ‘ರೈತರ ನರಮೇಧ ನಡೆಸುತ್ತಿರುವ ಮೋದಿ’ – ಟ್ವಿಟರ್‌ನಲ್ಲಿ ಭುಗಿಲೆದ್ದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನನ್ನಲ್ಲಿ ಇತ್ತು.
    ಅದು ಒಂದು ಪಕ್ಷದ ಪರವಾಗಿದೆ ಎಂದು ಅಲ್ಲಿಂದ ವರ್ಷಗಳ ಹಿಂದೆ ತೊರೆದಿದ್ದೇನೆ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...