Homeಅಂಕಣಗಳುಕೋಮುವಾದ ಮತ್ತು ಜನದ್ರೋಹಿ ಮೀಡಿಯಾವನ್ನು ಬೆತ್ತಲು ಮಾಡಿದ ರೈತ ಚಳವಳಿ: ಡಿ. ಉಮಾಪತಿ

ಕೋಮುವಾದ ಮತ್ತು ಜನದ್ರೋಹಿ ಮೀಡಿಯಾವನ್ನು ಬೆತ್ತಲು ಮಾಡಿದ ರೈತ ಚಳವಳಿ: ಡಿ. ಉಮಾಪತಿ

- Advertisement -
- Advertisement -

ದೆಹಲಿಯ ಗಡಿಗಳಿಗೆ ಲಗ್ಗೆ ಹಾಕಿದ್ದ ರೈತ ಚಳವಳಿಯ ಕತೆ ಇನ್ನೇನು ಮುಗಿದೇ ಹೋಯಿತೆಂದು ಗಹಗಹಿಸಿದ್ದ ಕೇಂದ್ರ ಸರ್ಕಾರ ಮತ್ತು ಅದರ ಮಡಿಲಲ್ಲಿ ಆಡುವ ಜನದ್ರೋಹಿ ಮೀಡಿಯಾದ ಕಪಾಳಕ್ಕೆ ಏಟು ಬಿದ್ದಿದೆ. ಆಳುವವರ ಕುತಂತ್ರ, ಷಡ್ಯಂತ್ರ, ದಮನ ದೌರ್ಜನ್ಯಗಳ ಬೂದಿಯಿಂದ ಫೀನಿಕ್ಸ್ ಹಕ್ಕಿಯಂತೆ ಜಿಗಿದೆದ್ದು ಹಾರಿದೆ ರೈತ ಹೋರಾಟ. ರೈತನ ಹಾದಿಗೆ ಪ್ರಭುತ್ವ ಮುಳ್ಳು ಹಾಸಿದರೆ, ರೈತ ಮುಳ್ಳುಗಳ ಪಕ್ಕದಲ್ಲಿ ಮಣ್ಣು ಚೆಲ್ಲಿ ಹೂವಿನ ಗಿಡಗಳನ್ನು ನೆಟ್ಟಿದ್ದಾನೆ.

ಈ ಆಂದೋಲನ ಪಶ್ಚಿಮ ಯುಪಿಯ 2013ರ ಕೋಮು ಧ್ರುವೀಕರಣವನ್ನು ಕರಗಿಸುತ್ತಿರುವ ಸೂಚನೆಗಳಿವೆ. ದೆಹಲಿ ಗಡಿಗಳಲ್ಲಿ ಅದುಮಲಾಗುತ್ತಿರುವ ರೈತರ ಆಂದೋಲನ ಒಳನಾಡುಗಳಿಗೆ ಪಸರಿಸಿ ಪುಟಿದೇಳತೊಡಗಿದೆ. ಒಂದರ ನಂತರ ಮತ್ತೊಂದರಂತೆ ನಡೆಯತೊಡಗಿರುವ ಕಿಸಾನ್ ಮಹಾ ಪಂಚಾಯತ್‌ಗಳಿಗೆ ಭಾರೀ ಸಂಖ್ಯೆಯ ರೈತರು ಹರಿದು ಸೇರುತ್ತಿದ್ದಾರೆ. 1980-90ರ ದಶಕಗಳಲ್ಲಿ ಭಾರತೀಯ ಕಿಸಾನ್ ಯೂನಿಯನ್ ಸಮಾವೇಶಗಳಲ್ಲಿ ಕೇಳಿಬರುತ್ತಿದ್ದ ಹರಹರ ಮಹಾದೇವ್-ಅಲ್ಲಾಹು ಅಕ್ಬರ್ ಘೋಷಣೆಗೆ ಹೊಸ ಜೀವ ಸಿಗುವ ಸಾಧ್ಯತೆ ಕಂಡುಬಂದಿದೆ.

ವೇದಿಕೆಗಳ ಮೇಲೆ ಮತ್ತು ಸಭೆಗಳಲ್ಲಿ ಜಾಟ್-ಮುಸ್ಲಿಮ್ ಏಕತೆ ಮತ್ತೆ ಕಾಣತೊಡಗಿದೆ. ಮುಸಲ್ಮಾನ ರೈತರು ರೈತ ಸಮಾವೇಶಗಳಲ್ಲಿ ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದಾರೆ. ಮೋದಿಯವರತ್ತ ತಿರುಗಿದ್ದ ಯುವಜನರಲ್ಲಿ ಭ್ರಮನಿರಸನ ಮತ್ತು ಸಿಟ್ಟು ಹುಟ್ಟಿದೆ. 2013ರಲ್ಲಿ ಆಗಿದ್ದು ತಪ್ಪೆಂಬ ಪಶ್ಚಾತ್ತಾಪ ಪ್ರಕಟವಾಗತೊಡಗಿದೆ. ಹರಿಯಾಣ, ಪಂಜಾಬ್, ಪಶ್ಚಿಮ ಯುಪಿ, ಮಧ್ಯ ಯುಪಿ ರಾಜಸ್ತಾನದಲ್ಲಿ ರೈತ ಆಂದೋಲನ ರಭಸ ಪಡೆಯತೊಡಗಿದೆ..

2013ರಲ್ಲಿ ಮುಝಫರ್‌ನಗರ್-ಶಾಮ್ಲಿಯ ಹಿಂದು-ಮುಸ್ಲಿಮ್ ಕೋಮು ಗಲಭೆಗಳಿಗೆ 60 ಮಂದಿ ಬಲಿಯಾಗಿದ್ದರು. ಈ ಗಲಭೆಗಳು ಅರವತ್ತು ಸಾವಿರಕ್ಕೂ ಹೆಚ್ಚು ಮಂದಿ ಮುಸಲ್ಮಾನರನ್ನು ನಿರಾಶ್ರಿತರ ಶಿಬಿರಗಳ ಸಂಕಟಕ್ಕೆ ತಳ್ಳಿದ್ದವು. ಘಾಜಿಯಾಬಾದ್, ಮೇರಠ್, ಮುಝಫರ್‌ನಗರ್, ಹಸ್ತಿನಾಪುರ, ಮವಾನ, ಶಾಮ್ಲಿ, ಕೈರಾನ, ಬಾಘ್ಪತ್, ಸಹಾರಣಪುರ, ದೇವಬಂದ್ ಉದ್ದಗಲಗಳಿಗೆ ಕೋಮುವಾದಿ ಕನ್ನಾಲಿಗೆ ಚಾಚಿ ಉರಿದಿತ್ತು.

ಕಬ್ಬು ಬೆಳೆಯುವ ಬೆಲ್ಲ- ಸಕ್ಕರೆಯ ಸಿಹಿ ಸೀಮೆ ಪಶ್ಚಿಮಿ ಉತ್ತರಪ್ರದೇಶ. ಗಂಗೆ-ಯಮುನೆಯರ ಹೇರಳ ನೀರುಂಡು ಮಲೆತ ಸದಾ ಹಸಿರಿನ ನಾಡು. ನೆರೆಯ ಹರಿಯಾಣ-ಪಂಜಾಬನ್ನೂ ಮೀರಿಸಿದ ಹಸಿರು ಕ್ರಾಂತಿ ಇಲ್ಲಿ ಜರುಗಿದೆ. ಇಲ್ಲಿನ ಜಾಟರ ಜನಸಂಖ್ಯೆಯ ಪ್ರಮಾಣ ಶೇ.6ರಷ್ಟು ಮಾತ್ರ. ಆದರೂ ಈ ನಾಡನ್ನು ಜಾಟಸೀಮೆ ಎಂದು ಕರೆಯುವುದುಂಟು. ಶೇ. ಏಳರಷ್ಟು ರಜಪೂತರು ಮತ್ತು ಶೇ.4ರಷ್ಟು ಗುಜ್ಜರರು ಇಲ್ಲಿನ ಇತರೆ ಪ್ರಭಾವಿ ಜಾತಿಗಳು.

ಮೋ-ಶಾ ಜೋಡಿಗೆ ಉತ್ತರಪ್ರದೇಶದಲ್ಲಿ ಅತಿ ಹೆಚ್ಚು ಲೋಕಸಭಾ ಸೀಟುಗಳನ್ನು ಗೆಲ್ಲುವ ಸವಾಲು ಎದುರಾದಾಗ ಅವರು ಆರಿಸಿಕೊಂಡ ನೆಲ ’ಫಲವತ್ತಾದ’ ಪಶ್ಚಿಮ ಯುಪಿ. ಯಾಕೆಂದರೆ, ಇಲ್ಲಿ ಮುಸಲ್ಮಾನರ ಜನಸಂಖ್ಯೆ ಯುಪಿಯಲ್ಲೇ ಅತಿ ಹೆಚ್ಚು. ಹನ್ನೆರಡು ಜಿಲ್ಲೆಗಳಲ್ಲಿ ಮುಸಲ್ಮಾನರ ಶೇಕಡಾವಾರು ಪ್ರಮಾಣ ಶೇ.35ಕ್ಕೂ ಹೆಚ್ಚು. ಬಿಜನೂರ್ ಜಿಲ್ಲೆಯಲ್ಲಿ ಮುಸಲ್ಮಾನರ ಪ್ರಮಾಣ ಶೇ.49.14. ಮೊರಾದಾಬಾದಿನಲ್ಲಿ ಶೇ.45.54, ಅಮರೋಹ ಮತ್ತು ಸಹಾರಣಪುರದಲ್ಲಿ ತಲಾ ಶೇ.29. ಮುಝಫರ್‌ನಗರ್‌ನಲ್ಲಿ ಶೇ.38. ಮೇರಠ್‌ನಲ್ಲಿ ಶೇ.33. ಬಾಘಪತದಲ್ಲಿ ಶೇ.25. ಇಲ್ಲಿನ ಮುಸಲ್ಮಾನರು ಲಾಗಾಯಿತಿನಿಂದ ಚರಣ್ ಸಿಂಗ್ ಅವರ ಭಾರತೀಯ ಲೋಕದಳದ ಬೆಂಬಲಿಗರು. ಚರಣಸಿಂಗ್ ಬದುಕಿರುವ ತನಕ ಜಾಟರು ಮತ್ತು ಮುಸಲ್ಮಾನರೇ ಲೋಕದಳದ ಅಡಿಪಾಯ ಆಗಿದ್ದರು. ಪಶ್ಚಿಮ ಉತ್ತರಪ್ರದೇಶದ ಮುಸಲ್ಮಾನರು ಬಹುತೇಕ ರೈತರು. ಜಾಟ ರೈತರನ್ನು ಬಾಧಿಸುತ್ತಿದ್ದ ಅವೇ ಸಮಸ್ಯೆಗಳು ಮುಸಲ್ಮಾನ ರೈತರನ್ನೂ ಕಾಡಿದ್ದವು.

ಚೌಧರಿ ಚರಣಸಿಂಗ್ ಅವರು ಮಧ್ಯಮವರ್ಗದ ರೈತಾಪಿಗಳನ್ನು ಸಂಘಟಿಸಿ ಬೆಳೆಸಿದ್ದ MAJGAR (ಮುಸ್ಲಿಮ್-ಆಹಿರ್ (ಯಾದವ್)- ಜಾಟ್- ಗುಜ್ಜರ್-ರಜಪೂತ) ಎಂಬ ಸಾಮಾಜಿಕ ಮೈತ್ರಿಕೂಟ ಚೆದುರಿ ಹೋಗಿತ್ತು. ಒಮ್ಮೆ ಬಿಜೆಪಿ, ಮತ್ತೊಮ್ಮೆ ಸಮಾಜವಾದಿ ಪಾರ್ಟಿ, ಕಾಂಗ್ರೆಸ್ಸಿನ ಜೊತೆಗೆ ಚರಣಸಿಂಗ್ ಮಗ ಅಜಿತ್ ಸಿಂಗ್ ಮಾಡಿಕೊಂಡ ಅವಕಾಶವಾದಿ ಚುನಾವಣಾ ಮೈತ್ರಿಗಳು MAJGAR ಮೈತ್ರಿಕೂಟದ ಅಡಿಗಲ್ಲುಗಳನ್ನು ಕದಲಿಸಿಬಿಟ್ಟಿತ್ತು. 2013ರ ಕೋಮು ಗಲಭೆಗಳ ಹಾದಿ ಸಲೀಸಾಗಿತ್ತು. 2009ರಲ್ಲಿ ಅಜಿತ್ ಸಿಂಗ್ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಐದು ಲೋಕಸಭಾ ಸ್ಥಾನಗಳನ್ನು ಗೆದ್ದಿದ್ದರು. ಆದರೆ ಮುಸಲ್ಮಾನರು ಅವರಿಂದ ದೂರವಾಗಿದ್ದರು. ಚರಣಸಿಂಗ್ ನಿಧನದ ನಂತರ ಮೊದಲ ಬಾರಿಗೆ ಅವರ ಸೀಮೆಯ ಜಾಟರು ಮತ್ತು ಮುಸಲ್ಮಾನರು ಪರಸ್ಪರ ವಿರುದ್ಧ ದಿಕ್ಕುಗಳಲ್ಲಿ ಮತ ಚಲಾಯಿಸಿದ್ದರು.

PC : No Filter

ಮಾಜಿ ಪ್ರಧಾನಿ ಮತ್ತು ರೈತನಾಯಕ ಚೌಧರಿ ಚರಣಸಿಂಗ್ 1985ರಲ್ಲಿ ಪಾರ್ಶ್ವವಾಯುಪೀಡಿತರಾಗಿ ಹಾಸಿಗೆ ಹಿಡಿದವರು 1987ರಲ್ಲಿ ತೀರಿಹೋದರು.

ಭಾರತೀಯ ಕಿಸಾನ್ ಯೂನಿಯನ್ ಮತ್ತು ಮಹೇಂದ್ರಸಿಂಗ್ ಟಿಕೇತ್ ಪಶ್ಚಿಮ ಯುಪಿಯಲ್ಲಿ ಚರಣಸಿಂಗ್ ಮತ್ತು ಅವರ ಪಕ್ಷ ಲೋಕದಳ ತೆರವು ಮಾಡಿದ್ದ ಸ್ಥಾನವನ್ನು ತುಂಬಿದ್ದರು.

ಮಹೇಂದ್ರಸಿಂಗ್ ಟಿಕೇತ್ ಅವರ ಮಕ್ಕಳಿಬ್ಬರು ನರೇಶ್ ಮತ್ತು ರಾಕೇಶ್ ಟಿಕೇತ್. ಪಶ್ಚಿಮ ಉತ್ತರಪ್ರದೇಶದ ಕೋಮುಗಲಭೆಗಳಲ್ಲಿ ಪ್ರತ್ಯಕ್ಷ-ಪರೋಕ್ಷವಾಗಿ ಪಾಲ್ಗೊಂಡಿದ್ದುಂಟು. 2014 ಮತ್ತು 2019ರ ಲೋಕಸಭಾ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಶ್ರಮಿಸಿದ್ದು ಹೌದು. ದೆಹಲಿ ಗಡಿಗಳಿಗೆ ಲಗ್ಗೆ ಹಾಕಿ ಕುಳಿತ ರೈತ ಆಂದೋಲನದ ದುರ್ಬಲ ಕೊಂಡಿ ಎಂದೇ ಆರಂಭದ ದಿನಗಳಲ್ಲಿ ರಾಕೇಶ್ ಟಿಕೇತ್ ಅವರನ್ನು ಅನುಮಾನಿಸಲಾಗಿತ್ತು. ಸರ್ಕಾರದ ಪರವಾಗಿ ಯಾವಾಗ ಚಾಪೆ ಸುತ್ತುವರೋ ಎಂಬ ಗುಮಾನಿಯೂ ಅವರ ಕುರಿತು ಇತ್ತು.

ಆದರೆ ಜನವರಿ 26ರ ಗಣರಾಜ್ಯ ದಿನದ ಕೆಂಪುಕೋಟೆಯ ಘಟನಾವಳಿಗಳು ಮತ್ತು ಮರುದಿನ ರೈತರ ಮೇಲೆ ನಡೆದ ಹಿಂಸಾಚಾರ ರಾಕೇಶ್-ನರೇಶ್ ಮಾತ್ರವಲ್ಲದೆ ಇಡೀ ಪಶ್ಚಿಮ ಉತ್ತರಪ್ರದೇಶ ಮತ್ತು ಹರಿಯಾಣದ ಜಾಟರು ಮತ್ತಿತರೆ ರೈತ ಸಮುದಾಯವನ್ನು ಬಿಜೆಪಿ ವಿರುದ್ಧ ತಿರುಗಿಸಿ ನಿಲ್ಲಿಸಿದೆ.

ಜನವರಿ 28ರಂದು ಮುಝಫರ್‌ನಗರ್‌ನಲ್ಲಿ ಜರುಗಿದ ಮೊದಲನೆಯ ಕಿಸಾನ್ ಮಹಾ ಪಂಚಾಯತ್ ಐತಿಹಾಸಿಕ ಎನಿಸಿತು. ಲಕ್ಷೆಪಾದಿಯಾಗಿ ನೆರೆದಿದ್ದ ರೈತರು ಈ ಸಭೆಯಲ್ಲಿ 30 ಸಾವಿರಕ್ಕೂ ಹೆಚ್ಚು ಮಂದಿ ಮುಸ್ಲಿಮ್ ರೈತರು ಪಾಲ್ಗೊಂಡಿದ್ದರು. ಚರಣ್ ಸಿಂಗ್ ಅವರ ಮಗ ಅಜಿತ್ ಸಿಂಗ್ ಅವರ ರಾಷ್ಟ್ರೀಯ ಲೋಕದಳದ ವಿರುದ್ಧ 2019ರ ಲೋಕಸಭಾ ಚುನಾವಣೆಗಳಲ್ಲಿ ಕೆಲಸ ಮಾಡಿದ್ದಕ್ಕೆ ಮತ್ತು 2013ರ ಕೋಮುಗಲಭೆಗಳಲ್ಲಿ ಮುಸಲ್ಮಾನ ಸೋದರರ ಕೈಬಿಟ್ಟಿದ್ದಕ್ಕೆ ತಮ್ಮನ್ನು ಕ್ಷಮಿಸುವಂತೆ ನರೇಶ್ ಟಿಕೇತ್ ವಿನಂತಿಸಿದರು. ನಾಯಕರು ರೈತರಲ್ಲಿ ಹಿಂದು-ಮುಸ್ಲಿಮ್ ಏಕತೆಯನ್ನು ಸಾರಿದರು. ಮಹೇಂದ್ರ ಸಿಂಗ್ ಟಿಕೇತ್ ಅವರ ಬಲಗೈಯಂತೆ ಕೆಲಸ ಮಾಡಿದ್ದ ರೈತ ನಾಯಕ ಗುಲಾಮ್ ಮಹಮ್ಮದ್ ಜೋಲಾಗೆ ಈಗ 85ರ ವಯಸ್ಸು. ತಮ್ಮ ಮಾತಿನ ಸರದಿ ಬಂದಾಗ ಮುಲಾಜಿಲ್ಲದೆ ನೆರೆದಿದ್ದವರ ಮುಖಕ್ಕೆ ಹೊಡೆದಂತೆ ಜೋಲಾ ಹೇಳಿದ್ದರು- ’ಈವರೆಗೆ ನೀವು ಎರಡು ಬಹುದೊಡ್ಡ ತಪ್ಪುಗಳನ್ನು ಮಾಡಿದ್ದೀರಿ. ಒಂದನೆಯದು ನೀವು ಅಜಿತ್ ಸಿಂಗ್ ಅವರನ್ನು ಸೋಲಿಸಿದಿರಿ. ಎರಡನೆಯದಾಗಿ ಮುಸಲ್ಮಾನರನ್ನು ಕೊಂದಿರಿ’. ಜೋಲಾ ಮಾತನ್ನು ಸಭೆ ತಿರಸ್ಕರಿಸಲಿಲ್ಲ, ಅಣಕಿಸಲಿಲ್ಲ. ಬದಲಾಗಿ ಸದ್ದಿಲ್ಲದೆ ಆತ್ಮನಿರೀಕ್ಷೆ ಮಾಡಿಕೊಳ್ಳುತ್ತಿದೆ ಎಂಬಂತೆ ಸದ್ದಿಲ್ಲದೆ ಆಲಿಸಿತು.

ಮಹಾಪಂಚಾಯತ್‌

2013ರ ಕೋಮು ಗಲಭೆಗಳ ನಂತರ ಅವರು ಭಾರತೀಯ ಕಿಸಾನ್ ಯೂನಿಯನ್‌ನಿಂದ ದೂರವಾಗಿ ಭಾರತೀಯ ಕಿಸಾನ್ ಮಜ್ದೂರ್ ಮಂಚ್ ಕಟ್ಟಿಕೊಂಡಿದ್ದರು. ನರೇಶ್ ಕ್ಷಮೆ ಕೋರಿದ ನಂತರ ಅಜಿತ್ ಸಿಂಗ್ ಅವರ ಮಗ ಜಯಂತ್ ಚೌಧರಿ ಮಹಮ್ಮದ್ ಜೋಲಾ ಅವರ ಕಾಲು ಮುಟ್ಟಿ ನಮಸ್ಕರಿಸಿದರು. 60 ಮಂದಿಯನ್ನು ಬಲಿತೆಗೆದುಕೊಂಡು 65 ಸಾವಿರ ಮಂದಿ ಮುಸಲ್ಮಾನರನ್ನು ನಿರಾಶ್ರಿತರನ್ನಾಗಿ ಮಾಡಿದ ಕೋಮುಗಲಭೆಗಳ ಗಾಯಗಳು ಇನ್ನು ಮಾಯುತ್ತವೆ ಎಂಬ ವಿಶ್ವಾಸವನ್ನು ಮಹಮ್ಮದ್ ಜೋಲಾ ವ್ಯಕ್ತಪಡಿಸಿದರು.

ಜನಪರ ಚಳವಳಿಯೊಂದು ತನ್ನ ಬೇಡಿಕೆಗಳ ಈಡೇರಿಕೆಗಾಗಿ ಹೋರಾಡುವ ಜೊತೆಜೊತೆಗೆ ಜನತಾಂತ್ರಿಕ ಮತ್ತು ಮಾನವೀಯ ಗುಣಗಳ ಮರುಸ್ಥಾಪನೆಗೆ ಸದ್ದಿಲ್ಲದೆ ಕೊಡುಗೆ ನೀಡುತ್ತಿರುತ್ತದೆ. ಆಳುವ ಪಟ್ಟಭದ್ರರು ಮತ್ತು ಅವರೊಂದಿಗೆ ಕೈ ಜೋಡಿಸಿದ ಕಾರ್ಪೊರೇಟ್ ಖೂಳರನ್ನು ಹಾಲಿ ರೈತ ಚಳವಳಿ ಹೆಸರು ಹಿಡಿದು ಕರೆದು ಗುರುತಿಸಿದೆ. ಅದೇ ರೀತಿ ಆಳುವವರ ಮಡಿಲಿನಲ್ಲಿ ಆಡತೊಡಗಿರುವ ಜನದ್ರೋಹಿ ಪತ್ರಿಕೋದ್ಯಮವನ್ನೂ ರೈತ ಚಳವಳಿ ಬೆತ್ತಲೆ ಮಾಡಿದೆ. ಅದನ್ನು ಎದುರಿಸುವ ಬಗೆ ಹೇಗೆಂದು ಸಮಾಜಕ್ಕೆ ಪಾಠ ಹೇಳಿಕೊಡತೊಡಗಿದೆ.


ಇದನ್ನೂ ಓದಿ: ಟೋಲ್ ಪ್ಲಾಜಾ ಮುತ್ತಿಗೆ, ದೇಶಾದ್ಯಂತ ರೈಲು ತಡೆ ಹೋರಾಟಕ್ಕೆ ಸಂಯುಕ್ತ ಕಿಸಾನ್ ಮೋರ್ಚಾ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...