Homeಕರ್ನಾಟಕಹುರಿಗೊಳ್ಳುತ್ತಿದೆ ಶಿರಸಿ ಜಿಲ್ಲಾ ರಚನೆ ಹೋರಾಟ; ಹೊಸ ಜಿಲ್ಲೆಯ ಕೂಗು ಎದ್ದಿದೆ ಏಕೆ?

ಹುರಿಗೊಳ್ಳುತ್ತಿದೆ ಶಿರಸಿ ಜಿಲ್ಲಾ ರಚನೆ ಹೋರಾಟ; ಹೊಸ ಜಿಲ್ಲೆಯ ಕೂಗು ಎದ್ದಿದೆ ಏಕೆ?

- Advertisement -
- Advertisement -

ಮುಕ್ಕಾಲುಪಾಲು ಅರಣ್ಯದಿಂದ ಆವೃತವಾಗಿರುವ ಉತ್ತರ ಕನ್ನಡ ವಿಸ್ತೀರ್ಣದಲ್ಲಿ ಮೂರು ಗೋವಾ ರಾಜ್ಯಕ್ಕೆ ಸಮನಾಗಿದೆ. ಕರಾವಳಿ, ಮಲೆನಾಡು ಮತ್ತು ಅರೆ ಬಯಲುಸೀಮೆ ಒಳಗೊಂಡ ಈ ಜಿಲ್ಲೆ 10291 ಚ.ಕಿ.ಮೀ ನಷ್ಟು ದೊಡ್ಡದು. ವಾಸ್ತವ್ಯ ಹಾಗೂ ಸಾಗುವಳಿಗೆ ಯೋಗ್ಯವಾದ ಪ್ರದೇಶವಿರುವುದು ಶೇ.10 ರಷ್ಟು ಮಾತ್ರ. ಈ ವಿಶಾಲವಾದ ಜಿಲ್ಲೆಯನ್ನು ಎರಡಾಗಿ ವಿಭಾಗಿಸುವುದು ಆಡಳಿತಾತ್ಮಕವಾಗಿ ಅಭಿವೃದ್ಧಿಯ ದೃಷ್ಟಿಯಿಂದ ಮತ್ತು ನೈಸರ್ಗಿಕ ನ್ಯಾಯತತ್ವದಂತೆ ಸರಿಯಾದ ಕ್ರಮವೆಂಬುದರಲ್ಲಿ ಎರಡು ಮಾತೇ ಇಲ್ಲ. ಆದರೆ ಘಟ್ಟದ ಮೇಲಿನ ಘಟಾನುಘಟಿ ರಾಜಕೀಯ ಪಟುಗಳ ಇಚ್ಛಾಶಕ್ತಿಯ ಕೊರತೆ ಮತ್ತು ಪೆದ್ದುತನದಿಂದ ಜನರು ತೊಂದರೆಗೀಡಾಗಿ ಪರದಾಡುತ್ತಿದ್ದಾರೆ.

ಘಟ್ಟದ ಮೇಲಿನ ಆರು ತಾಲ್ಲೂಕುಗಳನ್ನು ಒಳಗೊಂಡ ’ಕದಂಬ’ ಜಿಲ್ಲೆ ಮತ್ತು ಕರಾವಳಿಯ ಐದು ತಾಲ್ಲೂಕುಗಳ ಜೊತೆ ಜೋಯಿಡ ಸೇರಿಸಿ ಉತ್ತರ ಕನ್ನಡ ಜಿಲ್ಲೆ ರಚನೆ ಮಾಡುವ ಅನಿವಾರ್ಯತೆ ಎದುರಾಗಿ ದಶಕಗಳೇ ಉರುಳಿಹೋಗಿವೆ. ಹಾಗೆ ನೋಡಿದರೆ ಶಿರಸಿಯನ್ನು ಜಿಲ್ಲಾ ಕೇಂದ್ರವಾಗಿಸಿ ಶಿರಸಿ ಜಿಲ್ಲೆ ಮಾಡಬೇಕೆಂಬ ಕೂಗು ಮೂರು ದಶಕಗಳ ಹಿಂದಿನದು. ಭಾವನೆಗಳ ಬಂಧನ, ಅನುಕೂಲತೆ ಸಹಿಸಿಕೊಳ್ಳುವ ಮೂಗರ್ಜಿ ಸ್ವಭಾವ, ಹೋರಾಟದ ಹಠ ಮಾಡದಿರುವುದು ಎಲ್ಲಕ್ಕಿಂತ ಹೆಚ್ಚಾಗಿ ಸ್ಥಳೀಯ ಶಾಸಕ, ಸಂಸದ, ಸಚಿವರ ಉದಾಸೀನತೆಯಿಂದಾಗಿ ಜಿಲ್ಲೆಯ ಕನಸು ನನಸಾಗಲೇ ಇಲ್ಲ.

ಮೂರ್ನಾಲ್ಕು ತಾಲ್ಲೂಕುಗಳುಳ್ಳ ಉಡುಪಿ, ಹಾವೇರಿ, ಯಾದಗಿರಿಯಂತಹ ಜಿಲ್ಲೆಗಳನ್ನು ಹಿಂದೆ ರಚಿಸಲಾಗಿತ್ತು. ವಿವೇಚನೆ, ವಿವೇಕದಿಂದ ಉತ್ತರ ಕನ್ನಡ ವಿಭಾಗಿಸಿದರೆ ಆರಾರು ತಾಲ್ಲೂಕುಗಳ ಎರಡು ಜಿಲ್ಲೆ ಹುಟ್ಟುಹಾಕಬಹುದು. ಜೋಯಿಡ ಘಟ್ಟದ ಪ್ರದೇಶದಲ್ಲಿದ್ದರೂ, ಅದೂ ಕಾರವಾರಕ್ಕೆ ಹತ್ತಿರದಲ್ಲಿದೆ. ಅದನ್ನು ಶಿರಸಿ ಜಿಲ್ಲೆಗೆ ಸೇರಿಸಿದರೆ ಪ್ರಸ್ತಾವಿತ ಜಿಲ್ಲಾ ಕೇಂದ್ರ ಶಿರಸಿಯಿಂದ ನೂರೈವತ್ತು ಕಿ.ಮೀ ಅಂತರದಲ್ಲಿರುತ್ತದೆ. ಜೊತೆಗೆ ಜೋಯಿಡದ ಸಾಂಸ್ಕೃತಿಕ, ವ್ಯಾವಹಾರಿಕ, ಕೌಟುಂಬಿಕ ಭಾಷಾ ಬಾಂಧವ್ಯ ಹೆಚ್ಚಾಗಿ ಕಾರವಾರದೊಂದಿಗಿದೆ. ಜೋಯಿಡದಲ್ಲಿ ಕೊಂಕಣಿ ಮಾತನಾಡುವ ಮಂದಿಯೇ ಜಾಸ್ತಿ. ಹೀಗಾಗಿ ಕನ್ನಡ ಮಾತನಾಡುವ ಶಿರಸಿ ಸೀಮೆ ಜೊತೆ ಜೋಯಿಡಕ್ಕೆ ಹೊಂದಾಣಿಕೆ ಹಲವು ಕಾರಣದಿಂದ ಸಾಧ್ಯವಾಗದು. ಹಾಗಾಗಿ ಅದನ್ನು ಕರಾವಳಿಯ ಉತ್ತರ ಕನ್ನಡದ ಜೊತೆ ಇಡುವುದೇ ಸೂಕ್ತ.

ಈಚೆಗೆ ದಾಂಡೇಲಿ ತಾಲ್ಲೂಕು ರಚನೆಯಾಗಿದೆ. ಕನ್ನಡದ ಮೊದಲ ರಾಜಧಾನಿ ಎಂಬ ಹೆಗ್ಗಳಿಕೆಯ ಬನವಾಸಿ ತಾಲ್ಲೂಕು ರಚನೆಯ ಹೋರಾಟ ಜೋರಾಗಿದೆ. ಕರಾವಳಿಯ ಗೋಕರ್ಣ ತಾಲ್ಲೂಕು ಮಾಡುವ ಪ್ರಸ್ತಾಪವೂ ಇದೆ. ಈ ಎರಡೂ ತಾಲ್ಲೂಕುಗಳು ಅಸ್ತಿತ್ವಕ್ಕೆ ಬಂದರೆ ಒಟ್ಟು 14 ತಾಲ್ಲೂಕುಗಳಾಗಿ ಎರಡೂ ಜಿಲ್ಲೆಗೆ ತಲಾ ಏಳೇಳು ತಾಲ್ಲೂಕುಗಳು ಸೇರುತ್ತವೆ. ಈ ಭೌಗೋಳಿಕ ಕಾರಣ ಹೊಸ ಜಿಲ್ಲೆಗೆ ಒತ್ತಾಸೆಯಾಗಿ ನಿಂತಿದೆ. ಶಿರಸಿ, ಸಿದ್ಧಾಪುರ, ಮುಂಡಗೋಡ, ಯಲ್ಲಾಪುರ, ದಾಂಡೇಲಿ ಮತ್ತು ಹಳಿಯಾಳ ತಾಲ್ಲೂಕುಗಳಿರುವ ಶಿರಸಿ ಜಿಲ್ಲೆ ಮತ್ತು ಜೋಯಿಡ, ಕಾರವಾರ, ಅಂಕೋಲಾ, ಕುಮುಟಾ, ಹೊನ್ನಾವರ ಮತ್ತು ಭಟ್ಕಳ ತಾಲ್ಲೂಕುಗಳ ಉತ್ತರ ಕನ್ನಡ (ಕರಾವಳಿ) ಜಿಲ್ಲೆ ರಚನೆ ಮಾಡುವುದರಿಂದ ಅಭಿವೃದ್ಧಿಯೂ ವೇಗ ಪಡೆದುಕೊಳ್ಳುತ್ತದೆ. ಆಡಳಿತಾತ್ಮಕವಾಗಿ ಅಧಿಕಾರಿಗಳ ಕಾರ್ಯಕ್ಷಮತೆ ಎಚ್ಚರ ತಪ್ಪದಂತೆ ನಿಗಾ ವಹಿಸುತ್ತದೆ. ಅವಳಿ ಜಿಲ್ಲಾ ರಚನೆಯಿಂದ ವೈವಿಧ್ಯತೆ, ವೈಶಿಷ್ಟ್ಯತೆ, ಪ್ರಾಕೃತಿಕ ಸೊಬಗಿಗೂ ಭಂಗ ಬರದು. ಉಡುಪಿ ದಕ್ಷಿಣ ಕನ್ನಡದ ಸಂಬಂಧದಂತೆ ಕಾರವಾರ-ಶಿರಸಿ ಜಿಲ್ಲೆಗಳ ನಂಟು ಅನ್ಯೋನ್ಯವಾಗೇ ಇರುತ್ತದೆ.

ಈಗಿನ ಜಿಲ್ಲಾ ಕೇಂದ್ರ ಕಾರವಾರದಿಂದ ಘಟ್ಟದ ಮೇಲಿನ ಎಲ್ಲಾ ತಾಲ್ಲೂಕುಗಳು ತುಂಬಾ ದೂರದಲ್ಲಿದೆ. ಮುಂಡಗೋಡದವರು ಸರ್ಕಾರಿ ಕೆಲಸ, ಕಾರ್ಯಕ್ಕಾಗಿ ಜಿಲ್ಲಾ ಕೇಂದ್ರಕ್ಕೆ ಬರಬೇಕೆಂದರೆ ಬರೋಬ್ಬರಿ 140 ಕಿ.ಮೀ ಕ್ರಮಿಸಬೇಕು. ಅವರು ಜಿಲ್ಲಾ ಕೇಂದ್ರ ತಲುಪುವಾಗಲೇ ಅರ್ಧ ದಿನ ಕಳೆದಿರುತ್ತದೆ. ಸಂಬಂಧಿಸಿದ ಅಧಿಕಾರಿಗಳು ಸಿಕ್ಕರೆ ಪುಣ್ಯ. ಮರಳಿ ಮನೆ ಸೇರುವಾಗ ನಡುರಾತ್ರಿ ಆಗಿರುತ್ತದೆ. ಅಧಿಕಾರಿಗಳಿಗೂ ಅಷ್ಟೆ. ಸಭೆ, ಸಮಾಲೋಚನೆ, ತರಬೇತಿ ಎಂದು ಜಿಲ್ಲಾ ಕೇಂದ್ರಕ್ಕೆ ಓಡಾಡಿ ಸ್ಥಳೀಯ ಕೆಲಸ ಕರ್ತವ್ಯ ನಿಭಾಯಿಸಲು ಸಾಧ್ಯವಾಗುವುದಿಲ್ಲ. ವ್ಯರ್ಥ ತಿರುಗಾಟ ಘಟ್ಟದ ಮೇಲಿನ ತಾಲ್ಲೂಕುಗಳಿಗೆ ಶಾಪದಂತೆ ಕಾಡುತ್ತಲೇ ಇದೆ. ಹೀಗಾಗಿ ವಿಭಜನೆ ಎರಡು ಜಿಲ್ಲೆಗಳ ಪ್ರಗತಿಗೂ ಪೂರಕ. ಎರಡೆರಡು ಆಡಳಿತ ವ್ಯವಸ್ಥೆ, ಎರಡೆರಡು ಅನುದಾನದಿಂದ ಅವಳಿ ಜಿಲ್ಲೆಗಳ ಅಭಿವೃದ್ಧಿ ನಕ್ಷೆಯೇ ಬದಲಾಗಲಿದೆ.

ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿದ್ದಾಗ ಶಿರಸಿ ಜಿಲ್ಲೆ ಮಾಡುವ ಪ್ರಯತ್ನ ಪಡದಿದ್ದರೂ ಹಲವು ಪ್ರತ್ಯೇಕ ಜಿಲ್ಲಾ ಮಟ್ಟದ ಕಚೇರಿ ಶಿರಸಿಗೆ ತಂದಿದ್ದರು. ಆಗ ಶಿಕ್ಷಣ ಮಂತ್ರಿಯಾಗಿದ್ದರಿಂದ ಶಿರಸಿಯನ್ನು ಶೈಕ್ಷಣಿಕ ಜಿಲ್ಲೆಯಾಗಿಸಿ ಉತ್ತರ ಕನ್ನಡದಿಂದ ಬೇರ್ಪಡಿಸಿದ್ದರು. ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ವಿಭಾಗ, ಲೋಕೋಪಯೋಗಿ ಕಚೇರಿಗಳು ಶಿರಸಿಯಲ್ಲಿದೆ. ಶಿರಸಿಗೆ ಜಿಲ್ಲಾ ಕೇಂದ್ರವಾಗುವ ಅರ್ಹತೆ, ಅನುಕೂಲತೆ ಎರಡೂ ಇದೆ. ಉತ್ತರ ಕನ್ನಡದ ಜಿಲ್ಲಾ ಕೇಂದ್ರ ಕಾರವಾರವಾದರೂ ವಾಣಿಜ್ಯ, ಆರ್ಥಿಕ ಮತ್ತು ರಾಜಕೀಯ ಆಡಂಬೋಲ ಶಿರಸಿಯೇ. ವಾಣಿಜ್ಯ, ಕೃಷಿ, ಸಹಕಾರಿ ಕ್ಷೇತ್ರದ ಬೃಹತ್ ಸಂಸ್ಥೆಗಳು ಶಿರಸಿಯಲ್ಲಿವೆ. ತೋಟಗಾರಿಕೆ, ಅರಣ್ಯ, ಕಾನೂನು ಮಹಾವಿದ್ಯಾಲಯಗಳಿವೆ. ಜಿಲ್ಲಾ ಮಟ್ಟದ ನ್ಯಾಯಾಲಯ, ಕೃಷಿ ಸಂಶೋಧನಾ ಕೇಂದ್ರ, ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ವಿಭಾಗೀಯ ಕಚೇರಿಗಳಿವೆ.

ಜಿಲ್ಲಾ ಕೇಂದ್ರಕ್ಕೆ ಬೇಕಾದ ಹಲವು ಅನುಕೂಲಗಳು, ಸೌಲಭ್ಯಗಳು ಕಟ್ಟಡ ಇನ್ನಿತರ ಸೌಕರ್ಯ ಶಿರಸಿಯಲ್ಲಿದೆ. ಸರ್ಕಾರದ ಅಂಕಿಅಂಶಗಳು ಶಿರಸಿ ಪ್ರತ್ಯೇಕ ಜಿಲ್ಲೆಯ ಪ್ರಸ್ತುತತೆಯನ್ನು ಮನದಟ್ಟು ಮಾಡುತ್ತದೆ. ಹಾಗಂತ ಶಿರಸಿಯ ಶಾಸಕ ಕಂ ಸ್ಪೀಕರ್ ಕಾಗೇರಿಯಾಗಲಿ, ದೀರ್ಘ ಕಾಲ ಉತ್ತರ ಕನ್ನಡ ಆಳಿದ ಆರ್.ವಿ. ದೇಶಪಾಂಡೆಯಾಗಲಿ ಈಗ ಜಿಲ್ಲಾ ಉಸ್ತುವಾರಿ ಮಂತ್ರಿಗಿರಿ ಠಾಕುಠೀಕಿಂದ ಓಡಾಡುತ್ತಿರುವ ಶಿವರಾಮ ಹೆಬ್ಬಾರರಾಗಲಿ, ಸಂಸದ ಅನಂತ್ ಕುಮಾರ್ ಹೆಗಡೆಯಾಗಲಿ ಶಿರಸಿ ಜಿಲ್ಲಾ ರಚನೆಯನ್ನು ಗಂಭೀರವಾಗಿ ಪರಿಗಣಿಸಿಯೇ ಇಲ್ಲ. ಕಾಗೇರಿ, ಹೆಗಡೆ, ಹೆಬ್ಬಾರ್‌ಗಳ ತ್ರಿಕೋನ ಒಣಪ್ರತಿಷ್ಠೆಯ ಮೋಗಮ್ ಕಾಳದಲ್ಲಿ ಶಿರಸಿ ಜಿಲ್ಲಾ ರಚನೆ ಬೇಡಿಕೆಗೆ ಮಹತ್ವ ಬರುತ್ತಿಲ್ಲ.

ಹೀಗಿದ್ದರೂ ಶಿರಸಿಯಲ್ಲಿ ಜಿಲ್ಲಾ ರಚನೆಯ ಹೋರಾಟ ನಡೆಯುತ್ತಲೇ ಇದೆ. ಕೆಲವು ದಿನಗಳ ಹಿಂದೆ ಕಂದಾಯ ಮಂತ್ರಿಯನ್ನು ಹೋರಾಟ ಸಮಿತಿಯ ನಿಯೋಗ ಭೇಟಿಯಾಗಿ ಇದೇ ಬಜೆಟ್‌ನಲ್ಲಿ ಶಿರಸಿ ಜಿಲ್ಲೆ ರಚನೆ ನಿರ್ಣಯ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಸರಣಿ ಪ್ರತಿಭಟನೆಗಳು ಘಟ್ಟದ ಮೇಲೆ ನಡೆಯುತ್ತಿದೆ. ನಿಧಾನಕ್ಕೆ ಜಿಲ್ಲಾ ಬೇಡಿಕೆಯ ಹೋರಾಟ ಹುರಿಗಟ್ಟುತ್ತಿದೆ. ಈ ವರದಿ ಬರೆಯುವ ಹೊತ್ತಿಗೆ ಶಿರಸಿ ಬಾರ್ ಅಸೋಸಿಯೇಶನ್ ಮೂಲಕ ಜಿಲ್ಲಾ ಬೇಡಿಕೆ ಮಂಡಿಸಲು ನಿರ್ಧರಿಸಲಾಗಿದೆ. ಕಾಗೇರಿ, ಹೆಗಡೆ, ಹೆಬ್ಬಾರ್‌ಗಳಿಗೆ ತಮ್ಮನ್ನು ಆರಿಸಿ ಕಳಿಸಿದವರ ಕೂಗು ಕೇಳಿಸುವುದೇ?


ಇದನ್ನೂ ಓದಿ: ಕುರುಬ ಸಮುದಾಯ ಒಡೆಯುವುದೇ RSS, BJPಯವರ ಉದ್ದೇಶ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಅಭಿವೃದ್ಧಿಯ ಹೆಸರಲ್ಲಿ ನಿಮ್ಮ ಬೇಳೆ ಬೇಯಿಸಿಕೊಳ್ಳಬೇಡಿ.
    ಇವತ್ತು, ಉತ್ತರಕನ್ನಡ ವಿಭಿನ್ನವಾಗಿ ನಿಲ್ಲುವುದೇ ಅದರ ವಿಸ್ತಾರ ಮತ್ತು ಎಲ್ಲ ತರಹದ ಭೂ ಪ್ರದೇಶದಿಂದ. ಜಿಲ್ಲೆಯ ವಿಭಜನೆಯಿಂದ ಇನ್ನಷ್ಟು ಕಾಡು ನಾಶ ಮಾಡ್ತಾರೆಯೇ ಹೊರತೂ ಇನ್ನೇನು ಆಗಲ್ಲ…

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...