Homeಮುಖಪುಟ’ಟ್ವಿಟರ್‌ ಬಿಡಿ, ಅದು ಉತ್ತಮ ಸ್ಥಳವಾಗಿಯೆ ಉಳಿಯಲಿ’- ‘ಕೂ’ ಸೇರುತ್ತಿರುವ ಬಿಜೆಪಿಗರ ಕಾಲೆಳೆದ ನೆಟ್ಟಿಗರು

’ಟ್ವಿಟರ್‌ ಬಿಡಿ, ಅದು ಉತ್ತಮ ಸ್ಥಳವಾಗಿಯೆ ಉಳಿಯಲಿ’- ‘ಕೂ’ ಸೇರುತ್ತಿರುವ ಬಿಜೆಪಿಗರ ಕಾಲೆಳೆದ ನೆಟ್ಟಿಗರು

- Advertisement -
- Advertisement -

ತಾನು ನಿರ್ದೇಶಿಸಿರುವ ಸಾವಿರಾರು ಖಾತೆಯನ್ನು ತಡೆಹಿಡಿಯದೆ ಇರುವುದರಿಂದ ಕೇಂದ್ರ ಸರ್ಕಾರವು ಟ್ವಿಟರ್ ವಿರುದ್ದ ತಿರುಗಿ ಬಿದ್ದಿದೆ. ಈ ಹಿನ್ನಲೆಯಲ್ಲಿ ಟ್ವಿಟರ್‌ ಮಾದರಿಯ ಸಾಮಾಜಿಕ ಜಾಲತಾಣವಾದ ‘ಕೂ’ ಅಪ್ಲಿಕೇಷನನ್ನು ಬಳಸುವಂತೆ ಕೇಂದ್ರ ಸರ್ಕಾರವು ಕೇಳಿಕೊಂಡಿದೆ. ಹೊಸ ಅಪ್ಲಿಕೇಷನ್‌ ಅನ್ನು ಬಿಜೆಪಿ ಹಾಗು ಅದರ ಬೆಂಬಲಿಗರು ಹೆಚ್ಚಾಗಿ ಬೆಂಬಲಿಸುತ್ತಿದ್ದು, ಅದಕ್ಕಾಗಿ ಹಲವಾರು ಜನರು ಟ್ವಿಟ್ಟರ್‌‌ನಲ್ಲಿ ವ್ಯಂಗ್ಯವಾಡಿದ್ದಾರೆ.

” ‘ಕೂ’ ತೆರಳುವವರು ಬೇಗ ತೆರಳಿದರೆ ಟ್ವಿಟರ್‌ ಹೆಚ್ಚು ಒಳ್ಳೆಯ ಸ್ಥಳವಾಗಲಿದೆ” ಎಂದು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಬಿಜೆಪಿ ಬೆಂಬಲಿಗರನ್ನು ಉದ್ದೇಶಿಸಿ ಹೇಳಿದ್ದಾರೆ. ಟ್ವಿಟರ್‌ನಲ್ಲಿ ಬಿಜೆಪಿಯು ಪ್ರಬಲ ಐಟಿ ಸೆಲ್‌ ತಂಡವನ್ನು ಹೊಂದಿದ್ದು ತಮ್ಮ ಪರವಾಗಿ ಹಲವಾರು ಟ್ರೆಂಡ್‌ಗಳನ್ನು ಸೃಷ್ಟಿ ಮಾಡುತ್ತದೆ ಹಾಗೂ ಹಲವು ನಕಲಿ ಖಾತೆಗಳ ಮೂಲಕ ತನ್ನ ಪ್ರೊಪಗಾಂಡವನ್ನು ಹರಡುತ್ತಿದೆ ಎಂಬ ಆರೋಪಗಳಿವೆ. ಇತ್ತೀಚೆಗೆ ಬಾಲಿವುಡ್ ನಟ ಸುಶಾಂತ್ ಸಿಂಗ್ ಪರವಾಗಿ ಬಿಜೆಪಿಯು 85 ಸಾವಿರ ನಕಲಿ ಖಾತೆಯನ್ನು ಸೃಷ್ಟಿ ಮಾಡಿತ್ತು ಎಂದು ಮುಂಬೈ ಪೊಲೀಸರು ಆರೋಪಿಸಿದ್ದರು.

ಇದನ್ನೂ ಓದಿ: ‘ಕೂ’ ಆಪ್ ಸುರಕ್ಷಿತವೆ? ಪ್ರಶ್ನೆಗೆ ’ರಾಷ್ಟ್ರೀಯತೆ’ ಹೆಸರು ಹೇಳಿ ತಪ್ಪಿಸಿಕೊಂಡ ’ಕೂ’ ಸಂಸ್ಥಾಪಕ!

ಸಾಮಾಜಿಕ ಕಾರ್ಯಕರ್ತ ಶ್ರೀವತ್ಸ ಅವರು, “KOO ಗೆ ಚೀನಾ ಹಣ ಹೂಡಿಕೆ ಮಾಡಿದೆ ಮತ್ತು ಅದನ್ನು ಅಲ್ಲಿಯೆ ನೋಂದಾಯಿಸಲಾಗಿದೆ. ರಾಮ್‌ದೇವ್‌ ತಮ್ಮ ಪತಂಜಲಿ ಜೇನಿಗೆ ಚೀನೀ ಸಕ್ಕರೆ ಪಾಕವನ್ನು ಸೇರಿಸುತ್ತಾರೆ. ಜಯ್ ಶಾ ಬಿಸಿಸಿಐನಲ್ಲಿ ಚೀನೀ ಹಣವನ್ನು ತೆಗೆದುಕೊಳ್ಳುತ್ತಾರೆ. ಅರ್ನಾಬ್ ಅವರ ರಿಪಬ್ಲಿಕ್ ಟಿವಿ ಚೀನೀ ಕಂಪನಿಗಳಿಂದ ಜಾಹೀರಾತುಗಳನ್ನು ತೆಗೆದುಕೊಳ್ಳುತ್ತದೆ, ಇವರೆಲ್ಲರೂ ‘ರಾಷ್ಟ್ರೀಯವಾದಿಗಳು’. ಆದರೆ ನೀವು ಕ್ಯಾಮ್‌ಸ್ಕಾನರ್ ಅಪ್ಲಿಕೇಶನ್ ಬಳಸುತ್ತಿದ್ದರೆ ಅಥವಾ PUBG ವಿಡಿಯೋ ಗೇಮ್ ಆಡಿದರೆ ‘ದೇಶ ವಿರೋಧಿ’ ಆಗಿರುತ್ತೀರಿ” ಎಂದು ಬಿಜೆಪಿಯನ್ನು ಹಾಗೂ ಬಿಜೆಪಿ ಬೆಂಬಲಿಗರನ್ನು ಕುಕ್ಕಿದ್ದಾರೆ.

ಸುಪ್ರೀಂಕೋರ್ಟ್‌ನ ಹಿರಿಯ ವಕೀಲ ಪ್ರಶಾಂತ್ ಭೂಷಣ್, ಕೂ ಆಪ್‌ನಿಂದ ಬಳಕೆದಾರರ ಮಾಹಿತಿ ಸೋರಿಕೆಯಾಗುವ ಬಗ್ಗೆ ವ್ಯಂಗ್ಯವಾಗಿ ಬಿಜೆಪಿ ಬೆಂಬಲಿಗರನ್ನು ಕಾಲೆಳೆದಿದ್ದಾರೆ.

ಇದನ್ನೂ ಓದಿ: ನಿಜಕ್ಕೂ ’ಕೂ’ ಸುರಕ್ಷಿತವೆ? ಸಾಮಾಜಿಕ ಜಾಲತಾಣಗಳ ಭದ್ರತಾ ಸಂಶೋಧಕರು ಹೇಳುತ್ತಿರುವುದೇನು?

ಪರಿಸರ ಹೋರಾಟಗಾರ್ತಿ ಲಿಸಿಪ್ರಿಯ ಅವರು, “ಕೂ ಅಮೇರಿಕಾದಲ್ಲಿ ಹುಟ್ಟಿದ ಆಪ್ ಆಗಿದೆ. ಚೀನಾದಲ್ಲಿ ರಿಜಿಸ್ಟರ್‌ ಆಗಿದೆ. ಹಾಗಾದರೆ ನಿಜವಾಗಿಯು ಇದು ಆತ್ಮನಿರ್ಭರ್‌ ಭಾರತ ಅಲ್ಲವೆ” ಎಂದು ಪ್ರಶ್ನಿಸಿದ್ದಾರೆ.

ಕೂ ಆಪ್‌ನಲ್ಲಿ ನಾಲ್ಕನೇ ಮೂರರಷ್ಟು ಪಾಲನ್ನು ಇನ್ಪೋಸಿಸ್ ಮಾಜಿ ನಿರ್ದೇಶಕ, ಬಿಜೆಪಿ ಬೆಂಬಲಿಗ ಉದ್ಯಮಿ ಮೋಹನ್ ದಾಸ್ ಪೈ ಹೊಂದಿದ್ದಾರೆ. ಉಳಿದಂತೆ ಚೀನಾದ ಕಂಪೆನಿ ಕೂಡಾ ಇದರಲ್ಲಿ ಹೂಡಿಕೆಯನ್ನು ಹೊಂದಿದೆ.

ಇದನ್ನೂ ಓದಿ: ಅಭಿವ್ಯಕ್ತಿ ಸ್ವಾತಂತ್ಯ್ರ, ಪ್ರಜಾಪ್ರಭುತ್ವ ಮೌಲ್ಯಕ್ಕೆ ಸದಾ ಬದ್ಧ: ಟ್ವಿಟರ್‌ ಬೆಂಬಲಕ್ಕೆ ಅಮೆರಿಕ

ಅಷ್ಟೇ ಅಲ್ಲದೆ ಈ ಆಪ್‌ ಬಗ್ಗೆ ಹಲವಾರು ಅಘಾತಕಾರಿ ಮಾಹಿತಿಗಳು ಹೊರಬಿದ್ದಿದ್ದು, ಆಪ್‌ ಸುರಕ್ಷಿತ ಅಲ್ಲ ಎಂದು ಹೇಳಿದ್ದಾರೆ. ಟ್ವಿಟರ್‌ನಲ್ಲಿ ಎಲಿಯಟ್ ಆಂಡರ್ಸನ್ ಎಂದು ಜನಪ್ರಿಯವಾಗಿರುವ ಫ್ರೆಂಚ್ ಸೈಬರ್‌ ಸೆಕ್ಯುರಿಟಿ ಸಂಶೋಧಕ ರಾಬರ್ಟ್ ಬ್ಯಾಪ್ಟಿಸ್ಟ್, ’ಕೂ’ ಅಪ್ಲಿಕೇಷನ್‌ನಲ್ಲಿ ಬಳಕೆದಾರರ ಮಾಹಿತಿ ಸೋರಿಕೆಯಾಗುತ್ತದೆ ಎಂದು ಕಂಡು ಹಿಡಿದಿದ್ದಾರೆ. ಬ್ಯಾಪ್ಟಿಸ್ಟ್ ಈ ಹಿಂದೆ ಆಧಾರ್ ವ್ಯವಸ್ಥೆಯಲ್ಲಿನ ಹಲವಾರು ದೋಷಗಳನ್ನು ಎತ್ತಿ ತೋರಿಸಿದ್ದು, ಇದರ ನಂತರ ಅವರು ಜನಪ್ರಿಯರಾಗಿದ್ದರು.

ಬ್ಯಾಪ್ಟಿಸ್ಟ್ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ‘ಕೂ’ ಸಂಸ್ಥಾಪಕ ಅಪ್ರಮೇಯ, “ಕೂ ಪ್ರೋಫೈಲ್‌ನಲ್ಲಿ ಬಳಕೆದಾರರು ತಾವಾಗಿಯೆ ಈ ಮಾಹಿತಿಯನ್ನು ಬಹಿರಂಗ ಪಡಿಸಿದರಷ್ಟೇ ಅದು ಬಹಿರಂಗವಾಗುತ್ತದೆ” ಎಂದು ಹೇಳಿದ್ದಾರೆ. ಆದರೆ ಇದಕ್ಕೆ ಬ್ಯಾಷ್ಟಿಸ್ಟ್, ಸೋನಾಲ್ ಗೋಯಲ್ ಎಂಬ ಐಎಎಸ್ ಅಧಿಕಾರಿಯ ‘ಕೂ’ ಫ್ರೋಫೈಲ್‌ ಒಂದರ ಸ್ಕ್ರೀನ್ ಶಾರ್ಟ್ ಹಾಕಿ ಉತ್ತರಿಸಿದ್ದಾರೆ. ಅದರಲ್ಲಿ “ಮೊದಲಿಗೆ ಕಂಡು ಹಿಡಿದ ಫ್ರೋಫೈಲ್ ಇದು.  ಈ ಪ್ರೋಫೈಲ್‌‌ನಲ್ಲಿ ಇವರು ಯಾವುದೆ ಹುಟ್ಟಿದ ದಿನಾಂಕ, ಅವರ ಲಿಂಗ, ಅವರ ವೈವಾಹಿಕ ಸ್ಥಿತಿಯ ಬಗ್ಗೆ ಬಹಿರಂಗಪಡಿಸಿದ್ದಾರೆಯೆ ಎಂದು” ಪ್ರಶ್ನಿಸಿದ್ದಾರೆ. ಆದರೆ ಅಪ್ರಮೇಯ ಅವರು ರಾಷ್ಟ್ರೀಯತೆಯ ಹೆಸರು ಹೇಳಿ ಪ್ರಶ್ನೆಯಿಂದ ತಪ್ಪಿಸಿಕೊಂಡಿದ್ದಾರೆ.

ಇದನ್ನೂ ಓದಿ: ರೈತರನ್ನು ಬೆಂಬಲಿಸುವ ಖಲಿಸ್ತಾನಿ-ಪಾಕಿಸ್ತಾನಿ ಟ್ವಿಟ್ಟರ್‌ ಖಾತೆಗಳನ್ನು ಕಿತ್ತುಹಾಕಿ: ಟ್ವಿಟರ್‌ಗೆ ಕೇಂದ್ರ ತಾಕೀತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...