Homeಮುಖಪುಟ’ಟ್ವಿಟರ್‌ ಬಿಡಿ, ಅದು ಉತ್ತಮ ಸ್ಥಳವಾಗಿಯೆ ಉಳಿಯಲಿ’- ‘ಕೂ’ ಸೇರುತ್ತಿರುವ ಬಿಜೆಪಿಗರ ಕಾಲೆಳೆದ ನೆಟ್ಟಿಗರು

’ಟ್ವಿಟರ್‌ ಬಿಡಿ, ಅದು ಉತ್ತಮ ಸ್ಥಳವಾಗಿಯೆ ಉಳಿಯಲಿ’- ‘ಕೂ’ ಸೇರುತ್ತಿರುವ ಬಿಜೆಪಿಗರ ಕಾಲೆಳೆದ ನೆಟ್ಟಿಗರು

- Advertisement -
- Advertisement -

ತಾನು ನಿರ್ದೇಶಿಸಿರುವ ಸಾವಿರಾರು ಖಾತೆಯನ್ನು ತಡೆಹಿಡಿಯದೆ ಇರುವುದರಿಂದ ಕೇಂದ್ರ ಸರ್ಕಾರವು ಟ್ವಿಟರ್ ವಿರುದ್ದ ತಿರುಗಿ ಬಿದ್ದಿದೆ. ಈ ಹಿನ್ನಲೆಯಲ್ಲಿ ಟ್ವಿಟರ್‌ ಮಾದರಿಯ ಸಾಮಾಜಿಕ ಜಾಲತಾಣವಾದ ‘ಕೂ’ ಅಪ್ಲಿಕೇಷನನ್ನು ಬಳಸುವಂತೆ ಕೇಂದ್ರ ಸರ್ಕಾರವು ಕೇಳಿಕೊಂಡಿದೆ. ಹೊಸ ಅಪ್ಲಿಕೇಷನ್‌ ಅನ್ನು ಬಿಜೆಪಿ ಹಾಗು ಅದರ ಬೆಂಬಲಿಗರು ಹೆಚ್ಚಾಗಿ ಬೆಂಬಲಿಸುತ್ತಿದ್ದು, ಅದಕ್ಕಾಗಿ ಹಲವಾರು ಜನರು ಟ್ವಿಟ್ಟರ್‌‌ನಲ್ಲಿ ವ್ಯಂಗ್ಯವಾಡಿದ್ದಾರೆ.

” ‘ಕೂ’ ತೆರಳುವವರು ಬೇಗ ತೆರಳಿದರೆ ಟ್ವಿಟರ್‌ ಹೆಚ್ಚು ಒಳ್ಳೆಯ ಸ್ಥಳವಾಗಲಿದೆ” ಎಂದು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಬಿಜೆಪಿ ಬೆಂಬಲಿಗರನ್ನು ಉದ್ದೇಶಿಸಿ ಹೇಳಿದ್ದಾರೆ. ಟ್ವಿಟರ್‌ನಲ್ಲಿ ಬಿಜೆಪಿಯು ಪ್ರಬಲ ಐಟಿ ಸೆಲ್‌ ತಂಡವನ್ನು ಹೊಂದಿದ್ದು ತಮ್ಮ ಪರವಾಗಿ ಹಲವಾರು ಟ್ರೆಂಡ್‌ಗಳನ್ನು ಸೃಷ್ಟಿ ಮಾಡುತ್ತದೆ ಹಾಗೂ ಹಲವು ನಕಲಿ ಖಾತೆಗಳ ಮೂಲಕ ತನ್ನ ಪ್ರೊಪಗಾಂಡವನ್ನು ಹರಡುತ್ತಿದೆ ಎಂಬ ಆರೋಪಗಳಿವೆ. ಇತ್ತೀಚೆಗೆ ಬಾಲಿವುಡ್ ನಟ ಸುಶಾಂತ್ ಸಿಂಗ್ ಪರವಾಗಿ ಬಿಜೆಪಿಯು 85 ಸಾವಿರ ನಕಲಿ ಖಾತೆಯನ್ನು ಸೃಷ್ಟಿ ಮಾಡಿತ್ತು ಎಂದು ಮುಂಬೈ ಪೊಲೀಸರು ಆರೋಪಿಸಿದ್ದರು.

ಇದನ್ನೂ ಓದಿ: ‘ಕೂ’ ಆಪ್ ಸುರಕ್ಷಿತವೆ? ಪ್ರಶ್ನೆಗೆ ’ರಾಷ್ಟ್ರೀಯತೆ’ ಹೆಸರು ಹೇಳಿ ತಪ್ಪಿಸಿಕೊಂಡ ’ಕೂ’ ಸಂಸ್ಥಾಪಕ!

ಸಾಮಾಜಿಕ ಕಾರ್ಯಕರ್ತ ಶ್ರೀವತ್ಸ ಅವರು, “KOO ಗೆ ಚೀನಾ ಹಣ ಹೂಡಿಕೆ ಮಾಡಿದೆ ಮತ್ತು ಅದನ್ನು ಅಲ್ಲಿಯೆ ನೋಂದಾಯಿಸಲಾಗಿದೆ. ರಾಮ್‌ದೇವ್‌ ತಮ್ಮ ಪತಂಜಲಿ ಜೇನಿಗೆ ಚೀನೀ ಸಕ್ಕರೆ ಪಾಕವನ್ನು ಸೇರಿಸುತ್ತಾರೆ. ಜಯ್ ಶಾ ಬಿಸಿಸಿಐನಲ್ಲಿ ಚೀನೀ ಹಣವನ್ನು ತೆಗೆದುಕೊಳ್ಳುತ್ತಾರೆ. ಅರ್ನಾಬ್ ಅವರ ರಿಪಬ್ಲಿಕ್ ಟಿವಿ ಚೀನೀ ಕಂಪನಿಗಳಿಂದ ಜಾಹೀರಾತುಗಳನ್ನು ತೆಗೆದುಕೊಳ್ಳುತ್ತದೆ, ಇವರೆಲ್ಲರೂ ‘ರಾಷ್ಟ್ರೀಯವಾದಿಗಳು’. ಆದರೆ ನೀವು ಕ್ಯಾಮ್‌ಸ್ಕಾನರ್ ಅಪ್ಲಿಕೇಶನ್ ಬಳಸುತ್ತಿದ್ದರೆ ಅಥವಾ PUBG ವಿಡಿಯೋ ಗೇಮ್ ಆಡಿದರೆ ‘ದೇಶ ವಿರೋಧಿ’ ಆಗಿರುತ್ತೀರಿ” ಎಂದು ಬಿಜೆಪಿಯನ್ನು ಹಾಗೂ ಬಿಜೆಪಿ ಬೆಂಬಲಿಗರನ್ನು ಕುಕ್ಕಿದ್ದಾರೆ.

ಸುಪ್ರೀಂಕೋರ್ಟ್‌ನ ಹಿರಿಯ ವಕೀಲ ಪ್ರಶಾಂತ್ ಭೂಷಣ್, ಕೂ ಆಪ್‌ನಿಂದ ಬಳಕೆದಾರರ ಮಾಹಿತಿ ಸೋರಿಕೆಯಾಗುವ ಬಗ್ಗೆ ವ್ಯಂಗ್ಯವಾಗಿ ಬಿಜೆಪಿ ಬೆಂಬಲಿಗರನ್ನು ಕಾಲೆಳೆದಿದ್ದಾರೆ.

ಇದನ್ನೂ ಓದಿ: ನಿಜಕ್ಕೂ ’ಕೂ’ ಸುರಕ್ಷಿತವೆ? ಸಾಮಾಜಿಕ ಜಾಲತಾಣಗಳ ಭದ್ರತಾ ಸಂಶೋಧಕರು ಹೇಳುತ್ತಿರುವುದೇನು?

ಪರಿಸರ ಹೋರಾಟಗಾರ್ತಿ ಲಿಸಿಪ್ರಿಯ ಅವರು, “ಕೂ ಅಮೇರಿಕಾದಲ್ಲಿ ಹುಟ್ಟಿದ ಆಪ್ ಆಗಿದೆ. ಚೀನಾದಲ್ಲಿ ರಿಜಿಸ್ಟರ್‌ ಆಗಿದೆ. ಹಾಗಾದರೆ ನಿಜವಾಗಿಯು ಇದು ಆತ್ಮನಿರ್ಭರ್‌ ಭಾರತ ಅಲ್ಲವೆ” ಎಂದು ಪ್ರಶ್ನಿಸಿದ್ದಾರೆ.

ಕೂ ಆಪ್‌ನಲ್ಲಿ ನಾಲ್ಕನೇ ಮೂರರಷ್ಟು ಪಾಲನ್ನು ಇನ್ಪೋಸಿಸ್ ಮಾಜಿ ನಿರ್ದೇಶಕ, ಬಿಜೆಪಿ ಬೆಂಬಲಿಗ ಉದ್ಯಮಿ ಮೋಹನ್ ದಾಸ್ ಪೈ ಹೊಂದಿದ್ದಾರೆ. ಉಳಿದಂತೆ ಚೀನಾದ ಕಂಪೆನಿ ಕೂಡಾ ಇದರಲ್ಲಿ ಹೂಡಿಕೆಯನ್ನು ಹೊಂದಿದೆ.

ಇದನ್ನೂ ಓದಿ: ಅಭಿವ್ಯಕ್ತಿ ಸ್ವಾತಂತ್ಯ್ರ, ಪ್ರಜಾಪ್ರಭುತ್ವ ಮೌಲ್ಯಕ್ಕೆ ಸದಾ ಬದ್ಧ: ಟ್ವಿಟರ್‌ ಬೆಂಬಲಕ್ಕೆ ಅಮೆರಿಕ

ಅಷ್ಟೇ ಅಲ್ಲದೆ ಈ ಆಪ್‌ ಬಗ್ಗೆ ಹಲವಾರು ಅಘಾತಕಾರಿ ಮಾಹಿತಿಗಳು ಹೊರಬಿದ್ದಿದ್ದು, ಆಪ್‌ ಸುರಕ್ಷಿತ ಅಲ್ಲ ಎಂದು ಹೇಳಿದ್ದಾರೆ. ಟ್ವಿಟರ್‌ನಲ್ಲಿ ಎಲಿಯಟ್ ಆಂಡರ್ಸನ್ ಎಂದು ಜನಪ್ರಿಯವಾಗಿರುವ ಫ್ರೆಂಚ್ ಸೈಬರ್‌ ಸೆಕ್ಯುರಿಟಿ ಸಂಶೋಧಕ ರಾಬರ್ಟ್ ಬ್ಯಾಪ್ಟಿಸ್ಟ್, ’ಕೂ’ ಅಪ್ಲಿಕೇಷನ್‌ನಲ್ಲಿ ಬಳಕೆದಾರರ ಮಾಹಿತಿ ಸೋರಿಕೆಯಾಗುತ್ತದೆ ಎಂದು ಕಂಡು ಹಿಡಿದಿದ್ದಾರೆ. ಬ್ಯಾಪ್ಟಿಸ್ಟ್ ಈ ಹಿಂದೆ ಆಧಾರ್ ವ್ಯವಸ್ಥೆಯಲ್ಲಿನ ಹಲವಾರು ದೋಷಗಳನ್ನು ಎತ್ತಿ ತೋರಿಸಿದ್ದು, ಇದರ ನಂತರ ಅವರು ಜನಪ್ರಿಯರಾಗಿದ್ದರು.

ಬ್ಯಾಪ್ಟಿಸ್ಟ್ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ‘ಕೂ’ ಸಂಸ್ಥಾಪಕ ಅಪ್ರಮೇಯ, “ಕೂ ಪ್ರೋಫೈಲ್‌ನಲ್ಲಿ ಬಳಕೆದಾರರು ತಾವಾಗಿಯೆ ಈ ಮಾಹಿತಿಯನ್ನು ಬಹಿರಂಗ ಪಡಿಸಿದರಷ್ಟೇ ಅದು ಬಹಿರಂಗವಾಗುತ್ತದೆ” ಎಂದು ಹೇಳಿದ್ದಾರೆ. ಆದರೆ ಇದಕ್ಕೆ ಬ್ಯಾಷ್ಟಿಸ್ಟ್, ಸೋನಾಲ್ ಗೋಯಲ್ ಎಂಬ ಐಎಎಸ್ ಅಧಿಕಾರಿಯ ‘ಕೂ’ ಫ್ರೋಫೈಲ್‌ ಒಂದರ ಸ್ಕ್ರೀನ್ ಶಾರ್ಟ್ ಹಾಕಿ ಉತ್ತರಿಸಿದ್ದಾರೆ. ಅದರಲ್ಲಿ “ಮೊದಲಿಗೆ ಕಂಡು ಹಿಡಿದ ಫ್ರೋಫೈಲ್ ಇದು.  ಈ ಪ್ರೋಫೈಲ್‌‌ನಲ್ಲಿ ಇವರು ಯಾವುದೆ ಹುಟ್ಟಿದ ದಿನಾಂಕ, ಅವರ ಲಿಂಗ, ಅವರ ವೈವಾಹಿಕ ಸ್ಥಿತಿಯ ಬಗ್ಗೆ ಬಹಿರಂಗಪಡಿಸಿದ್ದಾರೆಯೆ ಎಂದು” ಪ್ರಶ್ನಿಸಿದ್ದಾರೆ. ಆದರೆ ಅಪ್ರಮೇಯ ಅವರು ರಾಷ್ಟ್ರೀಯತೆಯ ಹೆಸರು ಹೇಳಿ ಪ್ರಶ್ನೆಯಿಂದ ತಪ್ಪಿಸಿಕೊಂಡಿದ್ದಾರೆ.

ಇದನ್ನೂ ಓದಿ: ರೈತರನ್ನು ಬೆಂಬಲಿಸುವ ಖಲಿಸ್ತಾನಿ-ಪಾಕಿಸ್ತಾನಿ ಟ್ವಿಟ್ಟರ್‌ ಖಾತೆಗಳನ್ನು ಕಿತ್ತುಹಾಕಿ: ಟ್ವಿಟರ್‌ಗೆ ಕೇಂದ್ರ ತಾಕೀತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...