Homeಮುಖಪುಟನಾವಿಬ್ಬರು, ನಮಗಿಬ್ಬರು ಎಂದು 4 ಜನರು ದೇಶ ಆಳುತ್ತಿದ್ದಾರೆ: ರಾಹುಲ್ ಗಾಂಧಿ

ನಾವಿಬ್ಬರು, ನಮಗಿಬ್ಬರು ಎಂದು 4 ಜನರು ದೇಶ ಆಳುತ್ತಿದ್ದಾರೆ: ರಾಹುಲ್ ಗಾಂಧಿ

- Advertisement -
- Advertisement -

ಕುಟುಂಬ ಯೋಜನೆಯೊಂದರ ಘೋಷಣೆಯಾದ ’ನಾವಿಬ್ಬರು ನಮಗಿಬ್ಬರು’ ಎಂಬ ಆಧಾರದಲ್ಲಿ, ದೇಶವನ್ನು ನಾಲ್ಕು ಜನರು ನಡೆಸುತ್ತಿದ್ದಾರೆ ಎಂದು ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಉದ್ಯಮಿಗಳಾದ ಅಂಬಾನಿ-ಅದಾನಿಯ ಹೆಸರನ್ನು ಉಲ್ಲೇಖಿಸದೆ ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಲೋಕಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, “ನಿನ್ನೆ ಸದನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಪ್ರತಿಪಕ್ಷಗಳು ರೈತರ ಪ್ರತಿಭಟನೆಯ ಬಗ್ಗೆ ಮಾತನಾಡುತ್ತಿವೆ ಆದರೆ ಕೃಷಿ ಕಾನೂನುಗಳ ವಿಷಯ ಮತ್ತು ಉದ್ದೇಶದ ಮಾತನಾಡುತ್ತಿಲ್ಲ ಎಂದು ಹೇಳಿದ್ದಾರೆ. ಆದ್ದರಿಂದ ಇಂದು ನಾನು ಅವರನ್ನು ಸಂತೋಷಪಡಿಸಬೇಕು ಮತ್ತು ಕಾನೂನುಗಳ ವಿಷಯ ಮತ್ತು ಉದ್ದೇಶದ ಬಗ್ಗೆ ಮಾತನಾಡಬೇಕು ಭಾವಿಸಿದ್ದೇನೆ” ಎಂದು ಹೇಳಿದರು.

ಇದನ್ನೂ ಓದಿ: ಒಂದೇ ಒಂದು ಇಂಚು ಹಿಂದೆ ಸರಿಯದಿರಿ, ನಿಮ್ಮ ಜೊತೆ ನಾವಿದ್ದೇವೆ: ರೈತರಿಗೆ ರಾಹುಲ್ ಗಾಂಧಿ

“ಮೊದಲ ಕಾನೂನು ದೇಶದಲ್ಲಿ ಎಲ್ಲಿ ಬೇಕಾದರೂ ಆಹಾರ ಧಾನ್ಯಗಳು, ಹಣ್ಣುಗಳು ಮತ್ತು ತರಕಾರಿಗಳನ್ನು ಖರೀದಿಸಬಹುದು ಎಂದು ಹೇಳುತ್ತದೆ. ದೇಶದಲ್ಲಿ ಎಲ್ಲಿಯಾದರೂ ಖರೀದಿ ಮಾಡಬಹುದಾಗಿದ್ದರೆ, ಮಂಡಿಗಳಿಗೆ ಯಾರು ಹೋಗುತ್ತಾರೆ? ಮೊದಲ ಕಾನೂನಿನ ವಿಷಯವೇನೆಂದರೆ ಮಂಡಿಗಳನ್ನು ಮುಗಿಸುವುದು” ಎಂದು ರಾಹುಲ್ ಗಾಂಧಿ ಹೇಳಿದರು.

ಇದನ್ನೂ ಓದಿ: ಜಗತ್ತಿನ ಸರ್ವಾಧಿಕಾರಿಗಳ ಹೆಸರು ‘M’ ಅಕ್ಷರದಿಂದಲೇ ಏಕೆ ಆರಂಭವಾಗುತ್ತದೆ: ರಾಹುಲ್ ಗಾಂಧಿ

“ಎರಡನೆಯ ಕಾನೂನಿನ ವಿಷಯವೆಂದರೆ ದೊಡ್ಡ ಉದ್ಯಮಿಗಳು ತಮಗೆ ಬೇಕಾದಷ್ಟು ಆಹಾರ ಧಾನ್ಯಗಳು, ಹಣ್ಣುಗಳು ಮತ್ತು ತರಕಾರಿಗಳನ್ನು ಅವರು ಬಯಸಿದಷ್ಟು ಸಂಗ್ರಹಿಸಬಹುದು. ಈ ಮೂಲಕ ಅಗತ್ಯ ಸರಕುಗಳ ಕಾಯ್ದೆಯನ್ನು ಕೊನೆಗೊಳಿಸಿ, ಭಾರತದಲ್ಲಿ ಅನಿಯಂತ್ರಿತ ಸಂಗ್ರಹಣೆ ಪ್ರಾರಂಭಿಸುವುದು ಎರಡನೆ ಕಾನೂನಿನ ವಿಷಯವಾಗಿದೆ

ಮೂರನೆಯ ಕಾನೂನಿನ ವಿಷಯವೆಂದರೆ, ಒಬ್ಬ ರೈತ ತನ್ನ ಬೆಳೆಗಳಿಗೆ ಸರಿಯಾದ ಬೆಲೆ ನೀಡುವಂತೆ ಭಾರತದ ದೊಡ್ಡ ಉದ್ಯಮಿ ಮುಂದೆ ಹೋದಾಗ, ಅವನನ್ನು ನ್ಯಾಯಾಲಯಕ್ಕೆ ಹೋಗದಂತೆ ತಡೆಯುವುದಾಗಿದೆ” ಎಂದು ರಾಹುಲ್ ಗಾಂಧಿ ಸದನದಲ್ಲಿ ಹೇಳಿದರು.

“ಕುಟುಂಬ ಯೋಜನೆಗಾಗಿ ‘ನಾವಿಬ್ಬರು ನಮಗಿಬ್ಬರು’ ಎಂಬ ಘೋಷಣೆ ಇತ್ತು. ಕೊರೊನಾ ಮತ್ತೊಂದು ರೂಪದಲ್ಲಿ ಬಂದಂತೆ ಈ ಘೋಷಣೆಯು ಬೇರೆ ರೂಪದಲ್ಲಿ ಬಂದಿದೆ. ’ನಾವಿಬ್ಬರು ನಮಗಿಬ್ಬರು’ ಎಂಬಂತೆ ದೇಶವನ್ನು 4 ಜನರು ನಡೆಸುತ್ತಿದ್ದಾರೆ. ಎಲ್ಲರಿಗೂ ಅವರ ಹೆಸರು ತಿಳಿದಿದೆ, ಇದು ‘ನಾವಿಬ್ಬರು ನಮಗಿಬ್ಬರು’ ಸರ್ಕಾರ” ಎಂದು ರಾಹುಲ್ ಗಾಂಧಿ ಹೇಳಿದರು.

ಇದನ್ನೂ ಓದಿ: ಈ ಸರ್ಕಾರದಿಂದ ದೇಶಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಅಪಖ್ಯಾತಿ – ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...