Homeಮುಖಪುಟಅಸ್ಸಾಂ DSP ಆಗಿ ನೇಮಕಗೊಂಡ ಓಟಗಾರ್ಟಿ ಹಿಮಾ ದಾಸ್!

ಅಸ್ಸಾಂ DSP ಆಗಿ ನೇಮಕಗೊಂಡ ಓಟಗಾರ್ಟಿ ಹಿಮಾ ದಾಸ್!

ಭತ್ತದ ಗದ್ದೆಯ ತೆವರಿಗಳ ಮೇಲೆ ಬರಿಗಾಲಲ್ಲಿ ಓಡುತ್ತಿದ್ದ ಹಿಮಾದಾಸ್ ಈಗ ವಿಶ್ವ ಅಥ್ಲೆಟಿಕ್ ಜೂನಿಯರ್ ಚಾಂಪಿಯನ್‍ಶಿಪ್‍ನ ಚಿನ್ನದ ಪದಕ ಮುಡಿಗೇರಿಸಿಕೊಂಡ ಓಟದ ಜಿಂಕೆ.

- Advertisement -
- Advertisement -

ಭಾರತದ ಖ್ಯಾತ ಓಟಗಾರ್ತಿ ಹಿಮಾ ದಾಸ್ ಅವರನ್ನು ಅಸ್ಸಾಂ ಸರ್ಕಾರ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ (DSP) ನೇಮಕ ಮಾಡಿದೆ. ಪ್ರಸ್ತುತ ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯಲು ಬಯಸುತ್ತಿರುವ ಹಿಮಾ ದಾಸ್ ಅದಕ್ಕಾಗಿ ಸಂತಸ ವ್ಯಕ್ತಪಡಿಸಿದ್ದಾರೆ.

ತನ್ನನ್ನು DSP ಆಗಿ ನೇಮಿಸಿದ್ದಕ್ಕಾಗಿ ಅಸ್ಸಾಂ ಮುಖ್ಯಮಂತ್ರಿ ಮತ್ತು ಮಾಜಿ ಕೇಂದ್ರ ಕ್ರೀಡಾ ಸಚಿವ ಸರ್ಬಾನಂದ ಸೋನೊವಾಲ್ ಅವರಿಗೆ ಹಿಮಾ ಧನ್ಯವಾದ ಅರ್ಪಿಸಿದ್ದು, ಇದು ತನ್ನನ್ನು ಪ್ರೇರೇಪಿಸುತ್ತದೆ ಎಂದು ಹೇಳಿದ್ದಾರೆ.

ಹಿಮಾ ದಾಸ್ ಅವರನ್ನು ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕ ಮಾಡಲು ನಿರ್ಧರಿಸಿದೆ ಎಂದು ಅಸ್ಸಾಂ ಹಣಕಾಸು ಸಚಿವ ಹಿಮಂತ ಬಿಸ್ವಾ ಶರ್ಮಾ ಕಳೆದ ವರ್ಷವೇ ಘೋಷಿಸಿದ್ದರು. 2020-21ರ ಹಣಕಾಸು ವರ್ಷದ ರಾಜ್ಯ ಬಜೆಟ್ ಅನ್ನು ಶುಕ್ರವಾರ ಮಂಡಿಸುವಾಗ ಈ ಘೋಷಣೆ ಮಾಡಿದ್ದರು. ಇಂದು ಅಧಿಕೃತವಾಗಿ ನೇಮಿಸಲಾಗಿದೆ.

ಧಿಂಗ್ ಎಕ್ಸ್‌ಪ್ರೆಸ್ ಎಂದು ಖ್ಯಾತಿಯ ಅಸ್ಸಾಂನ 21 ವರ್ಷದ ಹಿಮಾ ದಾಸ್ ಪ್ರಸ್ತುತ ಎನ್‌ಐಎಸ್-ಪಟಿಯಾಲದಲ್ಲಿ ತರಬೇತಿ ಪಡೆಯುತ್ತಿದ್ದಾಳೆ. ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯುವ ಗುರಿಯಲ್ಲಿ ತಲ್ಲೀನಳಾಗಿದ್ದಾಳೆ.

ಹಿಮಾ ದಾಸ್ ಹಿನ್ನೆಲೆ

ಭತ್ತದ ಗದ್ದೆಯ ತೆವರಿಗಳ ಮೇಲೆ ಬರಿಗಾಲಲ್ಲಿ ಓಡುತ್ತಿದ್ದ ಹಿಮಾದಾಸ್ ಈಗ ವಿಶ್ವ ಅಥ್ಲೆಟಿಕ್ ಜೂನಿಯರ್ ಚಾಂಪಿಯನ್‍ಶಿಪ್‍ನ ಚಿನ್ನದ ಪದಕ ಮುಡಿಗೇರಿಸಿಕೊಂಡ ಓಟದ ಜಿಂಕೆ. ಅಸ್ಸಾಂನ ನಾಗಾಂವ ಜಿಲ್ಲೆಯ ಧಿಂಗ್ ಹಳ್ಳಿಯ ಬಡರೈತ ಕುಟುಂಬದ ಈ ಕೂಸಿಗೆ ಕ್ರೀಡಾ ಹಿನ್ನೆಲೆ ಇಲ್ಲ. ಹುಟ್ಟಿದೂರಿನಲ್ಲಿ ಕ್ರೀಡೆಯ ಮೂಲ ಸೌಕರ್ಯದ ಯಾವ ಸವಲತ್ತೂ ಇರಲಿಲ್ಲ. ಇಂಥಾ ಹುಡುಗಿ ಇಡೀ ಜಗತ್ತೇ ನಿಬ್ಬೆರಗಾಗುವಂಥ ಸಾಧನೆ ಮಾಡಿದ್ದಾಳೆ. ಭಾರತದ ಕ್ರೀಡಾ ಇತಿಹಾಸದಲ್ಲೇ ಅಥ್ಲೆಟಿಕ್ಸ್‌ನಲ್ಲಿ ಪ್ರಪ್ರಥಮ ಬಾರಿಗೆ ಚಿನ್ನ ಪಡೆದವಳು ಹಿಮಾ ದಾಸ್!

ಇನ್ನು ಹಿಮಾಳ ವೈಯುಕ್ತಿಕ ಹಿನ್ನೆಲೆಯನ್ನು ಗಮನಿಸಿದರೆ ಅವಳ ಸಾಧನೆಯ ಮಹತ್ವ ನಮ್ಮ ಅರಿವಿಗೆ ಬರುತ್ತದೆ. ಶಾಲಾ ದಿನಗಳಲ್ಲಿ ಹುಡುಗರ ತಂಡದಲ್ಲಿ ಪುಟ್ಬಾಲ್ ಆಡುತ್ತಿದ್ದ ಹಿಮಾ ಫಿನ್ಲೆಂಡ್‍ನಲ್ಲಿ ನಡೆದ 20 ವರ್ಷದೊಳಗಿನ ವಿಶ್ವ ಅಥ್ಲೇಟಿಕ್ ಜೂನಿಯರ್ಸ್ ಮಹಿಳಾ ವಿಭಾಗದ 400 ಮೀಟರ್ ಓಟದಲ್ಲಿ ಕೇವಲ 51.46 ಸೆಕೆಂಡುಗಳಲ್ಲಿ ಚಿನ್ನದ ಜಯ ಸಾಧಿಸಿ ದಾಖಲೆ ಬರೆದ ಭಾರತದ ಮೊದಲ ಅಥ್ಲೇಟ್.

16 ಜನರ ಅವಿಭಕ್ತ ಕುಟುಂಬದಲ್ಲಿ ಜೋನಿಲಾ ಮತ್ತು ರಂಜಿತ ದಾಸ್ ರೈತ ದಂಪತಿಗಳ ಕೂಸು ಹಿಮ. ಇಡೀ ಕುಟುಂಬ ಇರುವ ಭತ್ತದ ಗದ್ದೆಯಲ್ಲಿ ದುಡಿದರಷ್ಟೇ ಆದಾಯ. ಆದರೆ ಇದಾವುದು ಹಿಮಾ ಸಾಧನೆಗೆ ಅಡ್ಡಿಯಾಗಲೇ ಇಲ್ಲ. ಫುಟ್ಬಾಲ್ ಕನಸು ಕಂಡು, ವಾಸ್ತವದಲ್ಲಿ ಅಥ್ಳೇಟಿಕ್ಸ್‍ನಲ್ಲಿ ಹೆಜ್ಜೆಯಿರಿಸಿದ ಹಿಮಾಗೆ ಗುವಾಹಟಿಯ ಯುವಜನ ಕ್ರೀಡಾ ಇಲಾಖೆಯ ತರಬೇತುದಾರ ನಿಪೋ ದಾಸ್ ಬೆಂಬಲವಾಗಿ ನಿಂತರು. ರಾಷ್ಟ್ರೀಯ ತಂಡದ ಕೋಚ್ ಬಸಂತ ಸಿಂಗ್ ಹಿಮಾಳ ಹಾದಿಯನ್ನು ಮತ್ತಷ್ಟು ಸ್ಪಷ್ಟ ಮತ್ತು ನಿಚ್ಚಳವಾಗಿಸಿದರು. ಪಿ.ಟಿ.ಉಷಾ ಕೂಡ ಹಿಮಾಳ ಜೊತೆಯಲ್ಲೇ ಇದ್ದು ಆಕೆಯನ್ನು ಹುರಿದುಂಬಿಸಿದ್ದರು. ಈ ಎಲ್ಲರ ಶ್ರಮವನ್ನು ನಾವು ಗೌರವದಿಂದ ನೆನೆಯಬೇಕು.

ಕೊರೊನಾಕ್ಕೂ ಮೊದಲು ಯೂರೋಪ್ ನಲ್ಲಿ ಹಿಮಾ ದಾಸ್ ರವರ ಸಾಧನೆಯ ವಿವರ ಹೀಗಿದೆ.

ಜುಲೈ 02 ರಂದು ಪೋಲಾಂಡ್ ನಲ್ಲಿ ನಡೆದ ಪ್ರೊಜ್ನಾನ್ ಗ್ರ್ಯಾನ್ ಫ್ರಿ ರೇಸ್ ನಲ್ಲಿ 200 ಮೀಟರ್ ಓಟದಲ್ಲಿ ಚಿನ್ನದ ಗೆಲುವು

ಜುಲೈ 07 ರಂದು ಪೋಲಾಂಡ್ ನಲ್ಲಿ ನಡೆದ ಕುಂಟೋ ಅಥ್ಲೆಟಿಕ್ ಕ್ರೀಡಾಕೂಟದ 200 ಮೀಟರ್ ಓಟದಲ್ಲಿ ಚಿನ್ನದ ಸಾಧನೆ

ಜುಲೈ 13 ರಂದು ಜೆಕ್ ರಿಪಬ್ಲಿಕ್ ನಲ್ಲಿ ನಡೆದ ಕ್ಲಾಡೋ ಅಥ್ಲೆಟಿಕ್ ಕ್ರೀಡಾಕೂಟದ 200 ಮೀಟರ್ ಓಟದಲ್ಲಿ ಚಿನ್ನದ ಪದಕ

ಜುಲೈ 17 ರಂದು ಜೆಕ್ ರಿಪಬ್ಲಿಕ್ ನಲ್ಲಿ ನಡೆದ ತಬೂರ್ ಅಥ್ಲೆಟಿಕ್ ಕೂಟದಲ್ಲಿ ಚಿನ್ನದ ಗೆಲುವು

ಜುಲೈ 20 ರಂದು ಪ್ರಾಗ್ ನಲ್ಲಿ ನಡೆದ ನೊವಾ ಮೆಸ್ಟೊ ಅಥ್ಲೆಟಿಕ್ ಕೂಟದಲ್ಲಿ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ್ದರು.

ಆಗಸ್ಟ್ 19 ರಂದು ಜೆಕ್ ಗಣರಾಜ್ಯದಲ್ಲಿ ನಡೆದ ಅಥ್ಲೆಟಿಕ್ ಮಿಟಿಂಗ್ ರೇಟರ್ ಸ್ಪರ್ಧೆಯ 300 ಮೀಟರ್ ಓಟದ ವಿಭಾಗದಲ್ಲಿ ಅವರು ಚಿನ್ನ ಗೆದ್ದಿದ್ದಾರೆ.


ಇದನ್ನೂ ಓದಿ: ಭತ್ತದ ಗದ್ದೆಯಿಂದ ವಿಶ್ವ ಅಥ್ಲೆಟಿಕ್ಸ್‌ವರೆಗೆ ಓಡಿದ ಚಿನ್ನದ ಹುಡುಗಿ ಹಿಮಾ ದಾಸ್ ಬಗ್ಗೆ ನಿಮಗೆ ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...