Homeಮುಖಪುಟಕೊರೊನಾ ಲಸಿಕೆ ಪೂರ್ಣಗೊಂಡ ಕೂಡಲೇ ಸಿಎಎ ಜಾರಿ: ಅಮಿತ್ ಶಾ

ಕೊರೊನಾ ಲಸಿಕೆ ಪೂರ್ಣಗೊಂಡ ಕೂಡಲೇ ಸಿಎಎ ಜಾರಿ: ಅಮಿತ್ ಶಾ

ಯಾವುದೇ ಮುಸ್ಲಿಮರ ಪೌರತ್ವವನ್ನು ಕಸಿದುಕೊಳ್ಳುವ ಯಾವುದೇ ನಿಬಂಧನೆಯನ್ನು ಸಿಎಎ ಹೊಂದಿಲ್ಲ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ...

- Advertisement -
- Advertisement -

ದೇಶಾದ್ಯಂತ ಕೊರೊನಾ ಲಸಿಕೆ ಹಾಕುವುದು ಪೂರ್ಣಗೊಂಡ ಕೂಡಲೇ ಸಿಎಎ ಜಾರಿ ಮಾಡಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳ ಚುನಾವಣಾ ಪ್ರಚಾರದಲ್ಲಿರುವ ಅವರು “ಹೊಸ ಪೌರತ್ವ ಕಾನೂನನ್ನು ತರುವುದಾಗಿ ಮೋದಿ ಸರ್ಕಾರ 2018 ರಲ್ಲಿ ಭರವಸೆ ನೀಡಿತ್ತು ಮತ್ತು 2019 ರಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಾಗ ಅದನ್ನು ಕಾನೂನು ಮಾಡಿತು. ಆದರೆ 2020 ರಲ್ಲಿ ದೇಶವು COVID-19 ಸಾಂಕ್ರಾಮಿಕಕ್ಕೆ ಒಳಗಾದ ನಂತರ ಸಿಎಎ ಅನುಷ್ಠಾನವನ್ನು ತಡೆಹಿಡಿಯಬೇಕಾಯಿತು” ಎಂದು ತಿಳಿಸಿದ್ದಾರೆ.

ನರೇಂದ್ರ ಮೋದಿ ಸರ್ಕಾರವನ್ನು 2019 ರಲ್ಲಿ ಆಯ್ಕೆ ಮಾಡಿದರೆ ನಾವು ಪೌರತ್ವ ತಿದ್ದುಪಡಿ ಕಾನೂನು ತರುತ್ತೇವೆ ಎಂದು ಹೇಳಿದ್ದೆವು. ಅದು ಮಾತುವಾ ಸಮಾಜದ ಜನರಿಗೆ ಭಾರತದ ಪೌರತ್ವವನ್ನು ನೀಡುತ್ತದೆ. ನಾವು 2020 ರಲ್ಲಿ ಸಿಎಎ ತಂದಿದ್ದೇವೆ ಮತ್ತು ಇಂದು ಕಾನೂನು ಅಸ್ತಿತ್ವಕ್ಕೆ ಬಂದಿದೆ. ಇದು ಸಂಸತ್ತು ರಚಿಸಿದ ಕಾನೂನು ಮತ್ತು ಅದನ್ನು ತಡೆಯಲು ಮಮತಾ ಬ್ಯಾನರ್ಜಿಗೆ ಸಾಧ್ಯವಾಗುವುದಿಲ್ಲ, ಏಕೆಂದರೆ ಮುಂಬರುವ ಚುನಾವಣೆಗಳಲ್ಲಿ ಅವರು ಸೋಲಲಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ.

ಮಾತುವ ಮೂಲತಃ ಹಿಂದಿನ ಪೂರ್ವ ಪಾಕಿಸ್ತಾನದ ಸಮುದಾಯವಾಗಿದೆ. ವಿಭಜನೆಯ ಸಮಯದಲ್ಲಿ ಮತ್ತು ಬಾಂಗ್ಲಾದೇಶದ ರಚನೆಯ ನಂತರ ಭಾರತಕ್ಕೆ ವಲಸೆ ಬಂದ ಒಂದು ಭಾಗ ಹಿಂದೂಗಳಿಗೆ ಭಾರತೀಯ ಪೌರತ್ವ ನೀಡಲಾಗಿದೆ ಆದರೆ ಜನಸಂಖ್ಯೆಯ ಗಣನೀಯ ಭಾಗವು ಇನ್ನೂ ಪೌರತ್ವಕ್ಕಾಗಿ ಕಾಯುತ್ತಿದೆ.

ಯಾವುದೇ ಮುಸ್ಲಿಮರ ಪೌರತ್ವವನ್ನು ಕಸಿದುಕೊಳ್ಳುವ ಯಾವುದೇ ನಿಬಂಧನೆಯನ್ನು ಸಿಎಎ ಹೊಂದಿಲ್ಲ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

“ಕಳೆದ 70 ವರ್ಷಗಳಿಂದ ಭಾರತದಲ್ಲಿ ವಾಸಿಸುತ್ತಿರುವ ಜನರಿಗೆ ಪೌರತ್ವ ನೀಡಲು ನಾವು ಬಯಸುತ್ತೇವೆ. ಅದಕ್ಕಾಗಿ ಸಿಎಎ ಜಾರಿಗೊಳಿಸಿದ್ದೇವೆ. ವದಂತಿಯನ್ನು ಹರಡುವ ಪ್ರತಿಪಕ್ಷಗಳ ಮಾತಿಗೆ ಬಲಿಯಾಗಬೇಡಿ” ಎಂದು ತಿಳಿಸಿದ್ದಾರೆ.

ನಾವು ಠಾಕೂರ್‌ನಗರ ರೈಲ್ವೆ ನಿಲ್ದಾಣವನ್ನು ಶ್ರೀಧಮ್ ಠಾಕೂರ್‌ನಗರ ರೈಲ್ವೆ ನಿಲ್ದಾಣ ಎಂದು ಮರುನಾಮಕರಣ ಮಾಡಲು ಬಯಸುತ್ತೇವೆ. ಆದರೆ ಮಮತಾ ಸರ್ಕಾರವು ಇದಕ್ಕಾಗಿ ನಮಗೆ ಅನುಮತಿ ನೀಡಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 

ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸುವಂತೆ ನಾನು ಜನರಿಗೆ ಕರೆ ನೀಡುತ್ತೇನೆ. ಆಗ ನಾವು ನಿಮಗಾಗಿ ಸುವರ್ಣ ಬಾಂಗ್ಲಾವನ್ನು ರಚಿಸುತ್ತೇವೆ ಎಂದು ಶಾ ಹೇಳಿದ್ದಾರೆ.

ಗುರುಚಂದ್ ಠಾಕೂರ್ ಮತ್ತು ಹರಿಶ್ಚಂದ್ರ ಠಾಕೂರ್ ಹೇಳಿದ ಮಾರ್ಗ, ಮೋದಿ ಸರ್ಕಾರ ಆ ಹಾದಿಯಲ್ಲಿ ಸಾಗಿದೆ. ಮೋದಿ ಸರ್ಕಾರ ದಲಿತರ, ಶೋಷಿತ, ಹಿಂದುಳಿದವರ ಕಲ್ಯಾಣಕ್ಕೆ ಸಮರ್ಪಿತವಾಗಿದೆ ಎಂದು ಹೇಳಿದ್ದಾರೆ.

ಸಿಎಎಯನ್ನು ತಪ್ಪಾಗಿ ಅರ್ಥೈಸಿಕೊಳ್ಳುವವರಿಗೆ ನಾನು ಖಂಡಿತವಾಗಿಯೂ ಕಠಿಣ ಉತ್ತರ ನೀಡುತ್ತೇನೆ ಎಂದು ಭರವಸೆ ನೀಡಿದ್ದೇನೆ. ಆದ್ದರಿಂದ ಇಂದು ನಾನು ಈ ಪವಿತ್ರ ಭೂಮಿಗೆ ಬಂದಿದ್ದೇನೆ. ಕೆಲವು ಸಂದರ್ಭಗಳಿಂದಾಗಿ ನನ್ನ ಪ್ರವಾಸವನ್ನು ರದ್ದುಗೊಳಿಸಿದಾಗ ಮಮತಾ ದೀದಿ ತುಂಬಾ ಸಂತೋಷಪಟ್ಟರು. ಆದರೆ ಅವರು ಚುನಾವಣೆಯಲ್ಲಿ ಸೋಲುವವರೆಗೂ ನಾನು ಮತ್ತೆ ಮತ್ತೆ ಇಲ್ಲಿಗೆ ಬರುತ್ತೇನೆ ಎಂದು ಶಾ ತಿಳಿಸಿದ್ದಾರೆ.


ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ 200 ಸ್ಥಾನ ಗೆಲ್ಲುತ್ತೇವೆ: ಅಮಿತ್ ಶಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...