Homeಫ್ಯಾಕ್ಟ್‌ಚೆಕ್ಕೇಂದ್ರ ಬಜೆಟ್‌ನಲ್ಲಿ ಏರ್‌ಪೋರ್ಟ್-ಸಿಲ್ಕ್‌ಬೋರ್ಡ್ ಮೆಟ್ರೋ ಕಾಮಗಾರಿಗೆ 15,000 ಕೋಟಿ ಮಂಜೂರು?: ವಾಸ್ತವವೇನು?

ಕೇಂದ್ರ ಬಜೆಟ್‌ನಲ್ಲಿ ಏರ್‌ಪೋರ್ಟ್-ಸಿಲ್ಕ್‌ಬೋರ್ಡ್ ಮೆಟ್ರೋ ಕಾಮಗಾರಿಗೆ 15,000 ಕೋಟಿ ಮಂಜೂರು?: ವಾಸ್ತವವೇನು?

- Advertisement -
- Advertisement -

ಫೆಬ್ರವರಿ 01 ರಂದು ಕೇಂದ್ರ ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಬಜೆಟ್‌ನಲ್ಲಿ ಬೆಂಗಳೂರಿನ ಏರ್‌ಪೋರ್ಟ್-ಸಿಲ್ಕ್‌ಬೋರ್ಡ್ ಮೆಟ್ರೋ ಮಾರ್ಗ ಕಾಮಗಾರಿಗೆ 15,000 ಕೋಟಿ ಮಂಜೂರು ಮಾಡಿದ್ದಾರೆ ಎಂದು ಬಿಜೆಪಿ ಸಂಸದರಾದ ತೇಜಸ್ವಿ ಸೂರ್ಯ ಮತ್ತು ಪಿ.ಸಿ ಮೋಹನ್ ಪ್ರತಿಪಾದಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಬೆಂಗಳೂರು ಕೇಂದ್ರ ಸಂಸದ ಪಿ.ಸಿ ಮೋಹನ್, “ಬೆಂಗಳೂರು ನಗರವನ್ನು ವೇಗ ಮತ್ತು ಸ್ಮಾರ್ಟ್‌ಗೊಳಿಸಲು ಪ್ರಮುಖ ಹೆಜ್ಜೆ ಇಡಲಾಗಿದೆ. ಹಣಕಾಸು ಸಚಿವೆ ನಿರ್ಮಲಾ ಸಿತಾರಾಮನ್ ನಮ್ಮ ಬೆಂಗಳೂರು ಮೆಟ್ರೋ ಹಂತ II ಎ ಮತ್ತು II ಬಿ ಅನ್ನು 14,788 ಕೋಟಿ ವೆಚ್ಚ ಪ್ರಕಟಿಸಿದ್ದಾರೆ” ಎಂದು ತಿಳಿಸಿದ್ದಾರೆ.

ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಇನ್ನು ಒಂದು ಹೆಜ್ಜೆ ಮುಂದೆ ಹೋಗಿ “19 & 20ನೇ ಶತಮಾನದಲ್ಲಿಯೇ ಲಂಡನ್, ನ್ಯೂಯಾರ್ಕ್, ಮಾಸ್ಕೋ ನಗರಗಳಲ್ಲಿ ಸಾರ್ವಜನಿಕ ಸಾರಿಗೆಗಾಗಿ ಬಂಡವಾಳ ಹೂಡಿದ್ದರೆ ನಾವು ಕ್ರೂರವಾಗಿ ತೀರಾ ತಡ ಮಾಡಿದ್ದೇವೆ. ಆದರೆ ನಗರ ಸೌಲಭ್ಯಗಳಿಗೆ ಹೆಚ್ಚು ಹೂಡಿಕೆ ಮಾಡುವ ಮೂಲಕ ಮೋದಿ ಸರ್ಕಾರ ಅದಕ್ಕೆ ತಿದ್ದುಪಡಿ ಮಾಡಿದೆ. ಬೆಂಗಳೂರು ಮೆಟ್ರೋದ ವಿಮಾನ ನಿಲ್ದಾಣ ಮತ್ತು ಸಿಲ್ಕ್‌ಬೋರ್ಡ್‌ (ಒಆರ್‌ಆರ್) ಮಾರ್ಗಗಳಿಗೆ 15 ಸಾವಿರ ಕೋಟಿ ರೂ ಮಂಜೂರು ಮಾಡಿದ್ದಕ್ಕೆ ನಾನು ನಿರ್ಮಲಾ ಸೀತಾರಾಮನ್‌ರವರಿಗೆ ಧನ್ಯವಾದ ತಿಳಿಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

 

ವಾಸ್ತವವೇನು?

ಮೊದಲನೇಯದಾಗಿ ಬಜೆಟ್ ನಲ್ಲಿ 15 ಸಾವಿರ ಕೋಟಿ ಹಣವನ್ನು ಮಂಜೂರು ಮಾಡಿಲ್ಲ. ಅರ್ಥ ಸಚಿವರು ಮೆಟ್ರೋದ 2‌A ಮತ್ತು 2‌Bಯ ಒಟ್ಟು ಯೋಜನಾ ವೆಚ್ಚ `14,778 ಕೋಟಿಗಳ ಪ್ರತಿರೂಪವನ್ನು ಘೋಷಿಸಿದ್ದಾರೆ ಅಷ್ಟೇ. ಅಂದರೆ ಬೆಂಗಳೂರು ಮೆಟ್ರೋ ಹಂತ 2 (ಎ) ಮತ್ತು 2 (ಬಿ) ಯೋಜನೆಯ ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್‌ನಿಂದ ಕೆ.ಆರ್.ಪುರಂ ಮತ್ತು ಕೆ.ಆರ್.ಪುರಂನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದವರೆಗೆ 58.19 ಕಿ.ಮೀ ವಿಸ್ತರಣೆಗೆ 14,788 ಕೋಟಿ ರೂ. ಒಟ್ಟು ಯೋಜನಾ ವೆಚ್ಚ. ಇದರಲ್ಲಿ ಕೇಂದ್ರ ಸರ್ಕಾರವು ನೇರ ಅನುದಾನವನ್ನಾಗಿ ಶೇಕಡಾ 15 ರಷ್ಟನ್ನು ನೀಡುತ್ತದೆ. ಶೇ.35 ರಷ್ಟು ಹಣವನ್ನು ಕೇಂದ್ರ ಸರ್ಕಾರದ ಬಹುಪಕ್ಷೀಯ ಮತ್ತು ದ್ವಿಪಕ್ಷೀಯ ಅಭಿವೃದ್ಧಿ ಸಂಸ್ಥೆಗಳ ಮೂಲಕ ಪಡೆಯಬೇಕಾಗಿದೆ. ಶೇ. 35 ರಷ್ಟು ಹಣವನ್ನು ರಾಜ್ಯ ಸರ್ಕಾರ ಭರಿಸಿದರೆ, ಉಳಿದ ಶೇ.15 ರಷ್ಟು ಹಣವನ್ನು ಖಾಸಗಿ ವಲಯದಿಂದ ಸಂಗ್ರಹಿಸಲಾಗುತ್ತದೆ. ಈ ಕುರಿತು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವಿವರವಾದ ವರದಿ ಮಾಡಿದೆ.

ಈ ಕುರಿತು ಟ್ವಿಟ್ಟರ್‌ನಲ್ಲಿಯೇ ‘ತಪ್ಪು ಮಾಹಿತಿ ಹರಡಬೇಡಿ’ ಎಂದು ಹಲವಾರು ಕನ್ನಡಿಗರು ತೇಜಸ್ವಿ ಸೂರ್ಯರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. “15 ಸಾವಿರ ಕೋಟಿ ನಮ್ಮ ಮೆಟ್ರೋ ನ 2‌A ಮತ್ತು 2‌B project ನ ‌Total cost. ಈ Total cost ನಲ್ಲಿ ಸುಮಾರು 15% ಅಷ್ಟು ಕೇಂದ್ರ ಸರಕಾರ ಕೊಡುತ್ತೆ. ಜೊತೆಗೆ public domain ನಲ್ಲಿರೋ ಬಜೆಟ್ ನ documents ನಲ್ಲಿ ಎಲ್ಲೂ 15 ಸಾವಿರ ಕೋಟಿ sanction ಮಾಡಿರುವ ಮಾಹಿತಿ ಇಲ್ಲ” ಎಂದು ಕರವೇ ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್ ಜಾವಗಲ್ ಟ್ವೀಟ್ ಮಾಡಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಅರುಣ್ ಜಾವಗಲ್ “ಕೇಂದ್ರ ಸರ್ಕಾರದ ಬಳಿ ಕೊಡಲು ಹಣವೇ ಇಲ್ಲ. ಈಗಾಗಲೇ ಅದು 106 ಲಕ್ಷ ಕೋಟಿಯಷ್ಟು ಸಾಲ ಮಾಡಿಕೊಂಡಿದೆ. ಅದರ ಬಡ್ಡಿ ಕಟ್ಟುವಲ್ಲಿಯೇ ಅದು ಸುಸ್ತಾಗುತ್ತಿದೆ. ಆದರೆ ದೊಡ್ಡ ದೊಡ್ಡ ಘೋಷಣೆ ನೀಡಿ ಮರಳು ಮಾಡುತ್ತಿದೆ. ನಮ್ಮ ಸಂಸದರು ಸಹ ಅದನ್ನೇ ಹೇಳಿ ದಾರಿ ತಪ್ಪಿಸುತ್ತಿದ್ದಾರೆಯೇ ಹೊರತು ಬೇರೆನಿಲ್ಲ. ಈ ಹಿಂದೆ ಉಪನಗರ ರೈಲು ಯೋಜನೆಯಲ್ಲಿಯೂ ಸಹ ಕೇಂದ್ರ ಸರ್ಕಾರ 2,479 ಕೋಟಿ ನೇರ ಅನುದಾನ ಕೊಡಬೇಕಿತ್ತು. ಅದರಲ್ಲಿ ಕೇವಲ 500 ಕೋಟಿಗಷ್ಟೆ ಕೇಂದ್ರ ಸರ್ಕಾರ ಸೀಮಿತವಾಗಿದೆ. ಇದು ಅಷ್ಟೆಯೆ” ಎಂದು ತಿಳಿಸಿದ್ದಾರೆ.

ಇನ್ನು ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ಬೆಂಗಳೂರು ಮೆಟ್ರೋ ಹಂತ II ಎ ಮತ್ತು II ಬಿ ಮಾರ್ಗಕ್ಕಾಗಿ ಬೇಕಾಗುವ ಹಣದಲ್ಲಿ ಅರ್ಧ ಅನುದಾವನ್ನು ಕೇಂದ್ರ ಸರ್ಕಾರ ನೀಡಬೇಕೆಂದು ಒತ್ತಾಯಿಸಿದ್ದರು. ಆದರೆ ಅದಕ್ಕೆ ಕೇಂದ್ರ ಸರ್ಕಾರ ಒಪ್ಪಿರಲಿಲ್ಲ. ಈಗ ಅದರಲ್ಲಿ ನೇರವಾಗಿ 15% ಕೊಡಲು ಒಪ್ಪಿದೆ. ಈ ಕುರಿತು ಬಜೆಟ್ ಮಂಡನೆಯಾದ ದಿನವೇ ‘ಅದು ಹೊಸ ಅನುದಾನವಲ್ಲ’ ಎಂದು ಸಿದ್ದರಾಮಯ್ಯನವರು ಟ್ವೀಟ್ ಮಾಡಿದ್ದರು.

ಒಟ್ಟಿನಲ್ಲಿ ಮೆಟ್ರೋದ 2‌A ಮತ್ತು 2‌Bಯ ಒಟ್ಟು ಯೋಜನಾ ವೆಚ್ಚ `14,778 ಕೋಟಿಗಳನ್ನು ಪೂರ್ಣ ಕೇಂದ್ರ ಸರ್ಕಾರ ನೀಡುತ್ತಿಲ್ಲ. ಅದರ 15% ರಷ್ಟನ್ನು ನೀಡಲಿದೆ. ಅದು ಇನ್ನು ಮಂಜೂರಾಗಿಲ್ಲ.


ಇದನ್ನೂ ಓದಿ: ಫ್ಯಾಕ್ಟ್ ಚೆಕ್: ಕೇಜ್ರಿವಾಲ್ ಕೃಷಿ ಕಾಯ್ದೆ ಪರ ಮಾತನಾಡಿದರೆಂದು ಎಡಿಟ್ ವಿಡಿಯೋ ಹಂಚಿಕೊಂಡ ಬಿಜೆಪಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...