Homeಮುಖಪುಟಕೊವ್ಯಾಕ್ಸಿನ್‌ನ ಸಮಸ್ಯೆ ಬಗೆಹರಿಯುವವರೆಗೆ ರಾಜ್ಯಕ್ಕೆ ಲಸಿಕೆ ಬೇಡ: ಛತ್ತೀಸ್‌ಘಡ ಸರ್ಕಾರ

ಕೊವ್ಯಾಕ್ಸಿನ್‌ನ ಸಮಸ್ಯೆ ಬಗೆಹರಿಯುವವರೆಗೆ ರಾಜ್ಯಕ್ಕೆ ಲಸಿಕೆ ಬೇಡ: ಛತ್ತೀಸ್‌ಘಡ ಸರ್ಕಾರ

ತನ್ನ ಮೂರನೇ ಹಂತದ ಪ್ರಯೋಗಗಳನ್ನು ಇನ್ನೂ ಪೂರ್ಣಗೊಳಿಸದ ಕೊವಾಕ್ಸಿನ್ ಅನ್ನು ಕ್ಲಿನಿಕಲ್ ಟ್ರಯಲ್ ಮೋಡ್‌ನಲ್ಲಿ ಬಳಸಲಾಗುತ್ತಿದೆ. ಅಂದರೆ ಇದನ್ನು ಸ್ವೀಕರಿಸುವವರನ್ನು ಇನ್ನೂ ಮೇಲ್ವಿಚಾರಣೆ ಮಾಡಲಾಗುತ್ತಿದೆ

- Advertisement -
- Advertisement -

ಕೋವಾಕ್ಸಿನ್ ಲಸಿಕೆಯ “ಮೂರನೇ ಹಂತದ ಪ್ರಯೋಗಗಳ ಅಪೂರ್ಣತೆ” ಮತ್ತು “ಲಸಿಕೆಗಳ ಮುಕ್ತಾಯ ದಿನಾಂಕ”ಕ್ಕೆ ಸಂಬಂಧಿಸಿದ ಗೊಂದಲಗಳು ನಮ್ಮ ರಾಜ್ಯದ ಪ್ರಾಥಮಿಕ ಕಾಳಜಿಯ ವಿಷಯವಾಗಿದೆ. ಈ ಸಮಸ್ಯೆಗಳನ್ನು ಬಗೆಹರಿಸುವವರೆಗೆ ಛತ್ತೀಸ್‌ಗಡಕ್ಕೆ ಕೋವಾಕ್ಸಿನ್ ಸರಬರಾಜನ್ನು ನಿಲ್ಲಿಸಬೇಕು ಎಂದು ರಾಜ್ಯದ ಆರೋಗ್ಯ ಸಚಿವ ಡಿಯೋ ಕೇಂದ್ರ ಆರೋಗ್ಯ ಸಚಿವರಿಗೆ ಪತ್ರಬರೆದಿದ್ದರು.

ಲಸಿಕೆಯ ಬಾಟಲುಗಳಲ್ಲಿ ಮುಕ್ತಾಯ ದಿನಾಂಕವಿಲ್ಲದಿರುವುದು ಸೇರಿದಂತೆ ಮುಂತಾದ ಸಮಸ್ಯೆಗಳನ್ನು ಪರಿಹರಿಸುವವರೆಗೆ ಛತೀಸ್‌ಘಡ್ ಸರ್ಕಾರಕ್ಕೆ ಕೋವಾಕ್ಸಿನ್ ಸರಬರಾಜನ್ನು ನಿಲ್ಲಿಸುವಂತೆ ನಾನು ಕೇಂದ್ರವನ್ನು ವಿನಂತಿಸಿದ್ದೇನೆ ಎಂದು ಛತ್ತೀಸ್‌ಘಡ ಆರೋಗ್ಯ ಸಚಿವರು ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಕಾಶ್ಮೀರದಲ್ಲಿ ಕಪ್ಪು ಹಿಮ ಬಿದ್ದಾಗ ಬಿಜೆಪಿ ಸೇರುತ್ತೇನೆ: ಗುಲಾಂ ನಬಿ ಆಜಾದ್

 

ಈ ಹಿನ್ನೆಲೆಯಲ್ಲಿ ಕೇಂದ್ರ ಮಂತ್ರಿ ಡಾ.ಹರ್ಷವರ್ಧನ್ ಅವರು ಛತ್ತೀಸ್‌ಗಡದ ಆರೋಗ್ಯ ಸಚಿವ ಟಿ.ಎಸ್. ಸಿಂಗ್ ಡಿಯೊ ಅವರಿಗೆ ಪ್ರತಿಕ್ರಿಯಿಸಿ ಪತ್ರ ಬರೆದಿದ್ದಾರೆ.

ಡಾ.ಹರ್ಷವರ್ಧನ್ ತಮ್ಮ ಪತ್ರದಲ್ಲಿ, ವ್ಯಾಕ್ಸಿನೇಷನ್ ವೇಳಾಪಟ್ಟಿಯಲ್ಲಿ ರಾಜ್ಯವು ತೀರಾ ಹಿಂದುಳಿದಿದೆ. ಇದು ಕೇಂದ್ರಕ್ಕೆ ಹೆಚ್ಚಿನ ಚಿಂತೆಯನ್ನುಂಟುಮಾಡಿದೆ. ಛತ್ತೀಸ್‌ಘಡ ಸರ್ಕಾರವು ತಮ್ಮ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆಯ ಮೊದಲ ಪ್ರಮಾಣವನ್ನು ನೀಡುವ ಮೂಲಕ 69.87% ರಷ್ಟು ಮಾತ್ರ ಲಸಿಕೆ ನೀಡಿದೆ. ಜೊತೆಗೆ ರಾಜ್ಯವು ತನ್ನ 2,09,512 ಮುಂಚೂಣಿಯ ಕಾರ್ಯಕರ್ತರಲ್ಲಿ ಕೇವಲ 9.55% ರಷ್ಟು ಜನರಿಗೆ ಮಾತ್ರ ಲಸಿಕೆಯ ಮೊದಲ ಡೋಸ್ ನೀಡಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯನವರು ಸ್ವತಂತ್ರ ಪಕ್ಷ ಕಟ್ಟಿ ಕೇವಲ 5 ಸ್ಥಾನ ಗೆದ್ದು ತೋರಿಸಲಿ: HDK ಸವಾಲ್

“ಕೊವಾಕ್ಸಿನ್ ಬಾಟಲಿಯಲ್ಲಿ ಮುಕ್ತಾಯ ದಿನಾಂಕ ಲಭ್ಯವಿಲ್ಲದಿರುವ ಬಗ್ಗೆ ನಿಮ್ಮ ಕಾಳಜಿ ಸಂಪೂರ್ಣವಾಗಿ ಆಧಾರರಹಿತವಾಗಿದೆ” ಎಂದು ಹರ್ಷವರ್ಧನ್ ಛತ್ತೀಸ್‌ಘಡ ಆರೋಗ್ಯ ಸಚಿವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಡಾ. ಹರ್ಷವರ್ಧನ್ ಅವರು ರಾಜ್ಯಗಳಿಗೆ ಸರಬರಾಜು ಮಾಡುವ ಎಲ್ಲಾ ಲಸಿಕೆಗಳು “ಸುರಕ್ಷಿತ ಮತ್ತು ಇಮ್ಯುನೊಜೆನಿಕ್” ಮತ್ತು ಇದನ್ನು ತ್ವರಿತವಾಗಿ ಬಳಸಬೇಕು ಎಂದು ಹೇಳಿದ್ದಾರೆ.

ತನ್ನ ಮೂರನೇ ಹಂತದ ಪ್ರಯೋಗಗಳನ್ನು ಇನ್ನೂ ಪೂರ್ಣಗೊಳಿಸದ ಕೊವಾಕ್ಸಿನ್ ಅನ್ನು ಕ್ಲಿನಿಕಲ್ ಟ್ರಯಲ್ ಮೋಡ್‌ನಲ್ಲಿ ಬಳಸಲಾಗುತ್ತಿದೆ. ಅಂದರೆ ಇದನ್ನು ಸ್ವೀಕರಿಸುವವರನ್ನು ಇನ್ನೂ ಮೇಲ್ವಿಚಾರಣೆ ಮಾಡಲಾಗುತ್ತಿದೆ. ಹಾಗಾಗಿ ಕಾಂಗ್ರೆಸ್ ಆಡಳಿತದ ರಾಜ್ಯವಾದ ಛತ್ತೀಸ್‌ಘಡವು ಈ ಹಿಂದೆ ಕೋವಾಕ್ಸಿನ್ ಬಗ್ಗೆ ತನ್ನ ಆಕ್ಷೇಪವನ್ನು ವ್ಯಕ್ತಪಡಿಸಿತ್ತು.


ಇದನ್ನೂ ಓದಿ: ರಾಜ್ಯಸಭಾ ವಿರೋಧ ಪಕ್ಷದ ನಾಯಕರಾಗಿ ಮಲ್ಲಿಕಾರ್ಜುನ ಖರ್ಗೆ: ಕಾಂಗ್ರೆಸ್ ತೀರ್ಮಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...