Homeಅಂಕಣಗಳುಇನ್ನಾದರು ಈ ಪ್ರಕೃತಿ ಸಂಪತ್ತುಗಳ ಲೂಟಿಗೆ ಕಡಿವಾಣ ಹಾಕಬೇಕು: ಎಚ್ ಎಸ್ ದೊರೆಸ್ವಾಮಿ

ಇನ್ನಾದರು ಈ ಪ್ರಕೃತಿ ಸಂಪತ್ತುಗಳ ಲೂಟಿಗೆ ಕಡಿವಾಣ ಹಾಕಬೇಕು: ಎಚ್ ಎಸ್ ದೊರೆಸ್ವಾಮಿ

- Advertisement -
- Advertisement -

ಗುಡ್ಡ ಕರಗಿಸುವವರ ಹಾವಳಿ ಕಳೆದ 40 ವರ್ಷಗಳಿಂದಲೂ ನಡೆಯುತ್ತಿದೆ. ಕಲ್ಲುಬಂಡೆ ಡಿ.ಕೆ. ಶಿವಕುಮಾರ್ ಅವರ ತಮ್ಮ ಎಂಪಿ. ಡಿ.ಕೆ. ಸುರೇಶ್, ಮಾಲೂರು ಶಾಸಕ ನಂಜೇಗೌಡ, ಮೇಲುಕೋಟೆ ಶಾಸಕ ಪುಟ್ಟರಾಜು, ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿ ಅವರ ಮಗ, ಅರಸೀಕೆರೆ ಶಾಸಕ ಶಿವಲಿಂಗೇಗೌಡ, ಹುನಗುಂದ ಶಾಸಕ ದೊಡ್ಡನಗೌಡ ಪಾಟೀಲ, ಬೆಳಗಾವಿಯ ಶಾಸಕ ಸತೀಶ್ ಜಾರಕಿಹೊಳಿ, ಶಾಸಕ ಅಮರೇಗೌಡ, ಬೈಯ್ಯಾಪುರದಲ್ಲಿ ಅವರ ಅಣ್ಣನ ಮಗ ಶರಣಗೌಡ ಪಾಟೀಲ್, ಕೊಪ್ಪಳ ಸಂಸದ ಸಂಗಣ್ಣ ಕರಡಿ ಅವರ ಮಗ ಅಮರೇಶ್ ಕರಡಿ ಶಾಸಕ ಹಾಲಪ್ಪ ಆಚಾರ್, ರಾಘವೇಂದ್ರ ಹಿಟ್ನಾಳ್, ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಕಲ್ಲು ಕರಗಿಸುವ ಗುತ್ತಿಗೆ ಪಡೆದಿದ್ದಾರೆ. ಇವರೆಲ್ಲಾ ಭೂ ವಿಜ್ಞಾನ ನಿರ್ದೇಶಕರಿಂದ ಪರವಾನಗಿ ಪಡೆದು ಗುಡ್ಡ ಕರಗಿಸುವವರು. ಅಕ್ರಮವಾಗಿ ಬೆಟ್ಟಗಳನ್ನು ಕರಗಿಸುವವರ ವಿರುದ್ಧ ನ್ಯಾಯಾಲಯಕ್ಕೆ 2015-2020ರವರೆಗೆ 9076 ಪ್ರಕರಣಗಳು ದಾಖಲಾಗಿವೆ.

ಶಿವಮೊಗ್ಗ ಜಿಲ್ಲೆಯಲ್ಲಿ ಕಲ್ಲು ತೆಗೆಯುತ್ತಿರುವ ಕ್ವಾರಿಗಳ ಸಂಖ್ಯೆ 150. ಅವುಗಳಲ್ಲಿ ಅಕ್ರಮವಾಗಿ ದೋಚುತ್ತಿರುವುದು 73 ಕ್ವಾರಿಗಳು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 120 ಕ್ವಾರಿಗಳಲ್ಲಿ ಕಲ್ಲು ಗಣಿಗಾರಿಕೆ ನಡೆಯುತ್ತಿದೆ. ಸ್ಥಳೀಯ ರಾಜಕಾರಣಿಗಳಲ್ಲದೇ ಹೊರ ಜಿಲ್ಲೆಗಳ ರಾಜಕಾರಣಿಗಳು ಇದ್ದಾರೆ. ಅಕ್ರಮ ಗಣಿಗಾರಿಕೆ ತಡೆಗಟ್ಟುವೆನೆಂದು ಗಣಿ ಮಂತ್ರಿ ಗುಡುಗುತ್ತಾರೆ. ಬೇಲಿಯೇ ಎದ್ದು ಹೊಲ ಮೇಯುವಾಗ ಪುಂಡ ಹಸುಗಳು ಹೊಲಕ್ಕೆ ನುಗ್ಗದೇ ಇರುತ್ತವೆಯೇ? ಶಾಸಕರೇ ಭ್ರಷ್ಟರಾದ ಮೇಲೆ ಇನ್ನು ದುರುಳ ಕಲ್ಲು ಉದ್ಯಮಿಗಳ ಭ್ರಷ್ಟಾಚಾರವನ್ನು ತಡೆಗಟ್ಟುವವರು ಯಾರು?

ಯಡಿಯೂರಪ್ಪನವರಿಗೆ ತಮ್ಮ ಸುತ್ತ ಇರುವ ಭ್ರಷ್ಟರ ಮೇಲೆ ಕ್ರಮ ಕೈಗೊಳ್ಳಲು ಸಾಧ್ಯವೇ? ಆ ಜನರ ನೆರವಿನಿಂದ ಅವರ ಸಿಂಹಾಸನ ಉಳಿದಿದೆ. ಅವರನ್ನು ಎದುರುಹಾಕಿಕೊಂಡರೆ ಅವರಿಗೆ ಉಳಿಗಾಲವಿದೆಯೇ? ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಲು ಬಿಡುತ್ತಾರಾ?

ಶಾಸಕರಿಗೂ, ಮಂತ್ರಿಗಳಿಗೂ, ಅಧಿಕಾರಿಗಳಿಗೂ ಒಂದು ಸಂದೇಶ ಕೊಡಲು ಬಯಸುತ್ತೇನೆ. ಗಾಂಧೀಜಿ ಎಚ್ಚರಿಸಿದಂತೆ ಪ್ರಕೃತಿ ಮಾನವನ ಆಸೆಯನ್ನು ಸಹಿಸಬಲ್ಲದು. ದುರಾಸೆಯನ್ನು ಸಹಿಸಲು ಸಾಧ್ಯವೇ? ನೀವೆಲ್ಲಾ ದುರಾಸೆಯನ್ನು ಸಹಿಸಿಕೊಂಡಿದ್ದೀರಿ. ಪ್ರಕೃತಿ ಬೆಟ್ಟ ಗುಡ್ಡಗಳನ್ನು ಸೃಷ್ಟಿ ಮಾಡಿದೆ. ಅರಣ್ಯ ಸೃಷ್ಟಿ ಮಾಡಿದೆ. ಖನಿಜಗಳನ್ನು ಭೂಗರ್ಭದಲ್ಲಿ ಅಡಗಿಸಿಟ್ಟಿದೆ. ಅದು ಮುಗಿದರೆ ಮತ್ತೆ ಉತ್ಪತ್ತಿಯಾಗದು. ಸಮುದ್ರದಲ್ಲಿ ಹವಳ ಮುಂತಾದ ಬೆಲೆಬಾಳುವ ಅಲಂಕಾರಿಕ ವಸ್ತುಗಳನ್ನು ತಯಾರಿಸುವ ಮುತ್ತು ರತ್ನಗಳನ್ನು ಹುದುಗಿಸಿಟ್ಟ ಪಶ್ಚಿಮ ಘಟ್ಟಗಳಂತಹ ಬೃಹದಾಕಾರದ ಅರಣ್ಯಗಳಿವೆ. ಕಪ್ಪತಗುಡ್ಡದಲ್ಲಿ ಬಂಗಾರ ಇದೆ ಎಂದು ಅದನ್ನು ಆಕ್ರಮಣ ಮಾಡಲು ಹೊಂಚುಹಾಕುತ್ತಿರುವ ಪಟ್ಟಭದ್ರರು ಇದ್ದಾರೆ.

PC : News Express

ಭಾರತದಲ್ಲಿ ದೊರೆಯುವ ಎಲ್ಲಾ ಖನಿಜಗಳನ್ನು ಬಗೆದು ದೋಚಬೇಕೆಂಬ, ಬೆಟ್ಟಗಳನ್ನೆಲ್ಲಾ ತಮ್ಮ ತಲೆಮಾರಿನಲ್ಲೇ ಕರಗಿಸಿ ತಮ್ಮ ತಿಜೋರಿ ತುಂಬಿಕೊಳ್ಳಲು, ಅರಣ್ಯವನ್ನೆಲ್ಲಾ ಕೊಳ್ಳೆ ಹೊಡೆದು ಬರಿದಾಗಿಸಬೇಕೆಂಬ ದುರಾತ್ಮರ ಮತ್ತು ಸಮುದ್ರದ ಆದಳದಲ್ಲಿರುವ ಪೆಟ್ರೋಲಿಯಂ, ಹವಳ ಮತ್ತು ಮುತ್ತುಗಳನ್ನು ದೋಚಬೇಕೆಂದಿರುವ ಕಾರ್ಪೋರೇಟ್ ಕುಳಗಳದ್ದು ಒಂದೇ ಸಂಕಲ್ಪ. ಅದೇನೆಂದರೆ ನಮ್ಮ ತಲೆಮಾರಿನಲ್ಲೇ ಈ ಎಲ್ಲವನ್ನೂ ದೋಚಿ ಮುಂದಿನ ತಲೆಮಾರಿಗೆ ಅವು ಯಾವುದೂ ಲಭ್ಯವಾಗದಂತೆ ಮಾಡುವ ಮ್ಯಾಡ್ ರೇಸ್‌ನಲ್ಲಿ ಮುಳುಗುವುದು. ಇವರಿಗೆಲ್ಲಾ ದುಡ್ಡೇ ಆರಾಧ್ಯ ದೈವ. ದುಡ್ಡಿಗಾಗಿ ಇವರು ಎಂತಹ ಪಾತಕ ಮಾಡಲು ಹೇಸುವವರಲ್ಲ.

ನಮ್ಮ ಸರ್ಕಾರಗಳು ಈ ದೋಚುವ ಜನರಿಗೆ ಪೂರ್ಣ ಸಹಕಾರ ಕೊಡುತ್ತದೆ. 32% ಅರಣ್ಯ ಇರಬೇಕೆಂಬ ಕಾಳಜಿ ಸರ್ಕಾರಕ್ಕಿಲ್ಲ. ಅದು ಈಗ 13% ಇಳಿದಿರಬಹುದು. ಆನೆ, ಹುಲಿ, ಕರಡಿ, ತೋಳಗಳಿಗೆ ಕಾಡು ಕಿರಿದಾಗುತ್ತಿರುವುದರಿಂದ ನೆಲೆತಪ್ಪಿ ಆಹಾರ, ನೀರು, ಅಭಾವ ಕಾಣಿಸಿರುವುದರಿಂದ ಅವು ಈಗ ಕಾಡು ಬಿಟ್ಟು ನಾಡಿಗೆ ಅಧಿಕ ಸಂಖ್ಯೆಯಲ್ಲಿ ವಲಸೆ ಬರುತ್ತಿವೆ. ನಾಡಿನಲ್ಲಿ ವಾಸಿಸುವ ಜನಕ್ಕೆ ನೆಮ್ಮದಿ ತಪ್ಪಿದೆ. ಕಾಡುಪ್ರಾಣಿಗಳ ಭಯ ಕಾಡುತ್ತಿದೆ. ಅರಣ್ಯವಾಸಿ ಹುಲಿ, ಚಿರತೆಗಳೊಡನೆ ಅನಿವಾರ್ಯವಾಗಿ ಸಹಬಾಳ್ವೆ ಮಾಡುವ ಅನಿವಾರ್ಯತೆ ಉಂಟಾಗಿದೆ. ಸರ್ಕಾರಕ್ಕೆ, ಖನಿಜ ಇಲಾಖೆಯ ಅಧಿಕಾರಿಗಳಿಗೆ ಚಿನ್ನವಾಗಲಿ, ಬೆಳ್ಳಿಯಾಗಲಿ, ತಾಮ್ರವಾಗಲಿ, ಕಬ್ಬಿಣವಾಗಲಿ, ಮ್ಯಾಂಗನೀಸ್ ಆಗಲಿ, ಬೆಟ್ಟದ ಕಲ್ಲುಗಳಾಗಲಿ ಅವು ಉತ್ಪತ್ತಿಯಾಗುವುದಕ್ಕೆ ನೂರರಿಂದ ಐನೂರು ವರ್ಷಗಳು ಬೇಕಾಗುತ್ತದೆ ಎಂಬ ಪರಿಜ್ಞಾನವಿಲ್ಲ.

ಈ ಖನಿಜಗಳು ಬರಿದಾಗುವುದಕ್ಕೆ ಬಿಡದೇ ನಮ್ಮ ತಲೆಮಾರಿನಲ್ಲಿ ಇಂತಿಷ್ಟು ಮಾತ್ರ ತೆಗೆಯಲು ಶಾಸನ ಮಾಡಬೇಕು. ಉಳಿದ ಖನಿಜಗಳನ್ನು ಮುಂದಿನ ತಲೆಮಾರಿನ ಜನರಿಗಾಗಿ ಮೀಸಲಿಡಬೇಕು. ಅದು ಸರ್ಕಾರದ ಧರ್ಮ.ಇನ್ನಾದರು ಈ ಪ್ರಕೃತಿ ಸಂಪತ್ತುಗಳ ಲೂಟಿಗೆ ಕಡಿವಾಣ ಹಾಕಬೇಕು. ನ್ಯಾಯದ ದೃಷ್ಟಿಯಿಂದ ನೋಡಿದರೆ ಈ ಎಲ್ಲಾ ಪ್ರಕೃತಿ ಸಂಪತ್ತನ್ನು ಸೃಷ್ಟಿಕರ್ತ ತಾನು ಸೃಷ್ಟಿಸಿದ ಎಲ್ಲಾ ಮನುಷ್ಯರಿಗೆ ದೊರೆಯುವಂತಾಗಲಿ ಎಂದು ಬಗೆದಿದ್ದ. ಅನೀತಿಯುತ ಸರ್ಕಾರಗಳು ದೋಚುವ ಮಹಾನುಭಾವರ ಪರವಾಗಿ ನಿಂತು, ಜನರಿಗೆ ಅವುಗಳು ದೊರೆಯದಂತೆ ವಂಚನೆ ಮಾಡುತ್ತಿವೆ. ಪ್ರಕೃತಿ ಸಂಪತ್ತು ಎಲ್ಲರಿಗೂ ಸುಲಭ ಬೆಲೆಯಲ್ಲಿ ದೊರೆಯುವಂತಾಗಬೇಕಾದರೆ ಪ್ರಕೃತಿ ನೀಡಿರುವ ಎಲ್ಲಾ ಸಂಪತ್ತನ್ನು ರಾಷ್ಟ್ರೀಕರಣ ಮಾಡಬೇಕು. ಸರ್ಕಾರ ಈಗಲಾದರೂ ಪ್ರಕೃತಿ ಸಂಪತ್ತಿಗೆ ಪ್ರಜೆಗಳು ಒಡೆಯರು ಎಂದು ಘೋಷಿಸಲಿ.


ಇದನ್ನೂ ಓದಿ: ನೂರರ ನೋಟ: ಕರ ನಿರಾಕರಣೆಯನ್ನು ನೆನಪಿಸಿದ ದೆಹಲಿ ರೈತ ಹೋರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...