Homeಕರ್ನಾಟಕಕಲಬುರ್ಗಿ: ‘ಈ ಸಲ ಖರ್ಗೆಯವರಿಗೆ ಟಫ್ ಇದೆ’

ಕಲಬುರ್ಗಿ: ‘ಈ ಸಲ ಖರ್ಗೆಯವರಿಗೆ ಟಫ್ ಇದೆ’

- Advertisement -
- Advertisement -

ಹಾಗಂತ ಖರ್ಗೆ ತುಂಬ ತೊಂದರೆಯಲ್ಲಿ ಏನಿಲ್ಲ. ಆದರೆ ಅಲ್ಲಿನ ಲೋಕಲ್ ರಾಜಕೀಯ ವಿದ್ಯಮಾನಗಳಿಗೆ ಕುರುಡಾದ ಅವರು, ಪುತ್ರ ವಾತ್ಸಲ್ಯಕ್ಕೆ ಜೋತು ಬಿದ್ದುದರ ಪರಿಣಾಮವಿದು. ಇದನ್ನು ವ್ಯವಸ್ಥಿತವಾಗಿ ಬಳಸಿಕೊಂಡು ಅವರನ್ನು ಹಣಿಯಲು ‘ಮೋದಿ ಪ್ರೇರಿತ’ ಸಂಘ ಟೀಮ್ ಇಲ್ಲಿ ಒಂದೂವರೆ ವರ್ಷದಿಂದ ಕೆಲಸ ಮಾಡುತ್ತಿದೆ. ಹಾಗಾಗಿ ಖರ್ಗೆಗೆ ಈ ಸಲ ‘ಟಪ್ಫು’ ಎನ್ನುವುದು ಮೇಲ್ನೋಟಕ್ಕೆ ನಿಚ್ಚಳವಾದರೂ, ಖರ್ಗೆ ಕಡಿಮೆ ಅಂತರದಲ್ಲಿ ಗೆಲ್ಲುವ ಸೂಚನೆಗಳು ದಟ್ಟವಾಗಿವೆ…

‘ಈ ಸಲ ಖರ್ಗೆಯವರಿಗೆ ಟಪ್ಫು ಇದೆ’
ಕಷ್ಟವಾದರೂ ಖರ್ಗೆ ಗೆಲುವು ನಿಶ್ಚಿತ ಎಂದು ಕಾಂಗ್ರೆಸ್‍ನವರು, ಪ್ರಗತಿಪರರು ಹೇಳುತ್ತಾರೆ. ಬಿಜೆಪಿ, ಸಂಘ ಪರಿವಾರದವರಂತೂ ಈ ಸಲ ನಮ್ಮದೇ ಗೆಲುವು ಅನ್ನುತ್ತಿದ್ದಾರೆ. ಸತ್ಯ ಇವೆರಡರ ನಡುವೆ ತೇಲುತ್ತಿದೆಯಾದರೂ, ಅದು ಒಂದು ಕಡೆಯೇ ಹೆಚ್ಚಿಗೆ ವಾಲುತ್ತಿದೆ!

ಎಲ್ಲ ಕಡೆಯಂತೆ ಇಲ್ಲಿ ಜಾತಿ ಇಕ್ವೇಶನ್ ಇದೆ. ಹಳೆ ಸಮೀಕರಣದ ಲೆಕ್ಕದಲ್ಲಿ ಖರ್ಗೆಗೆ ಗೆಲುವು ಲಭಿಸಬಹುದಿತ್ತು. ಸಮೀಕರಣಗಳು ಬದಲಾಗುವ ಪರಿಯನ್ನು ಖರ್ಗೆ ಅಂದಾಜು ಮಾಡಿದ್ದಾರಾದರೂ, ಸಮೀಕರಣಗಳ ಆಚೆ ನಡೆಯುವ ‘ಧರ್ಮ’ದ ಆಟ ಅವರ ಕ್ಷೇತ್ರದಲ್ಲಿ ಎರಡು ವರ್ಷಗಳಿಂದ ವ್ಯವಸ್ಥಿತವಾಗಿ ನಡೆಯುತ್ತಿರುವುದನ್ನು ಅವರು ಗುರುತಿಸಿಲ್ಲ ಅನಿಸುತ್ತದೆ.

ಇಲ್ಲಿ ಅವರ ಜಯಕ್ಕೆ ತೊಡಕಾಗಿರುವ ಹಲವು ಸಂಗತಿಗಳಿವೆ:
ಮಗನನ್ನು ಮಿನಿಸ್ಟರ್ ಮಾಡಿದ್ದು ಖರ್ಗೆ ಅವರಿಗೆ, ಅವರ ಮಗನಿಗೆ ಮತ್ತು ಅಂಧಾಭಿಮಾನಿಗಳಿಗೆ ಖುಷಿ ತಂದಿರಬಹುದು. ಆದರೆ ಇದೇ ಅವರಿಗೆ ಈ ಸಲದ ಚುನಾವಣೆಯಲ್ಲಿ ತೊಂದರೆ ಮಾಡಲೂಬಹುದು. ಕಾಂಗ್ರೆಸ್‍ನಿಂದ ಸೋತ ಮಾಲೀಕಯ್ಯ ಗುತ್ತೇದಾರ್, ಬಾಬುರಾವ್ ಚಿಂಚಸನೂರು ಈಗ ಬಿಜೆಪಿಯಲ್ಲಿದ್ದು ಫುಲ್ ಆ್ಯಕ್ಟಿವ್ ಆಗಿದ್ದಾರೆ. ಕಾಂಗ್ರೆಸ್‍ನ ಮಲಕರೆಡ್ಡಿ ಕೂಡ ಖರ್ಗೆ ಪರವಿಲ್ಲ.

2013ರಲ್ಲಿ ಈ ಲೋಕಸಭಾ ಕ್ಷೇತ್ರದಲ್ಲಿ 7 ಸ್ಥಾನ ಹೊಂದಿದ್ದ ಕಾಂಗ್ರೆಸ್ ಈಗ ನಾಲ್ಕಕ್ಕೆ ಕುಸಿದಿದೆ. ಬಿಜೆಪಿ ಈಗ 3 ಸ್ಥಾನ ಹೊಂದಿದ್ದರೆ, ಜೆಡಿಎಸ್ ಒಂದು ಸ್ಥಾನ ಹೊಂದಿದೆ. ಇಷ್ಟಾದರೂ ಖರ್ಗೆಗೆ ಗೆಲುವಿನ ಹಾದಿ ಕಷ್ಟ ಆಗುತ್ತಿರಲಿಲ್ಲ. ಆದರೆ ಅವರು ತಮ್ಮ ಮಗನನ್ನು ಪ್ರಮೋಟ್ ಮಾಡಿದ್ದೇ ಇಲ್ಲಿ ಹಲವು ಲಿಂಗಾಯತರು ಮತ್ತು ಇತರ ಹಿಂದುಳಿದ ಜಾತಿಗಳು ಹಾಗೂ ಎಸ್‍ಸಿ ಎಡಗೈ ಸಮುದಾಯದಲ್ಲಿ ಅಸಮಾಧಾನ ಉಂಟು ಮಾಡಿದೆ.

ಈ ಭಾಗದಲ್ಲಿ ಹಲವಷ್ಟು ಬಹುಮುಖ್ಯ ಯೋಜನೆಗಳು ಜಾರಿಯಾಗಲು ಖರ್ಗೆಯವರೇ ಕಾರಣ. 371 ಜೆ, ಇಪಿಎಫ್ ಹಾಸ್ಪಿಟಲ್, ಕೇಂದ್ರೀಯ ವಿವಿ… ಜೊತೆಗೆ ಕೇಂದ್ರದ ಹಲವಾರು ಕಾರ್ಯಕ್ರಮಗಳ ಅನುಷ್ಠಾನ…. ಲೋಕಸಭೆಯಲ್ಲಿ ಮೋದಿಯ ಸುಳ್ಳುಗಳಿಗೆ ತಿರುಗೇಟು ನೀಡುವಲ್ಲಿ ಸಫಲರಾದವರು ಖರ್ಗೆ. ಆಗಿಂದಲೇ ಮೋದಿಗೆ ಖರ್ಗೆ ಬಗ್ಗೆ ಅಸಮಾಧಾನವಿದ್ದು, ಖರ್ಗೆ ಲೋಕಸಭೆಯಲ್ಲಿ ಜಾಡಿಸಿದ ನಂತರ, ಅಂತಿಮದಲ್ಲಿ ಮಾತಾಡಿದ್ದ ಮೋದಿ, ಖರ್ಗೆಜೀ, ಇದು ಲೋಕಸಭೆಯಲ್ಲಿ ನಿಮ್ಮ ಕೊನೆ ಭಷಣ ಎಂದು ಗೇಲಿ ಮಾಡಿದ್ದರು.

ಆದರೆ ಆಗಿಂದ ಇಲ್ಲಿ ಚೆಡ್ಡಿಗಳು ಫುಲ್ ಆಕ್ಟಿವ್ ಆಗಿದ್ದಾರೆ. ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ತಿಂಗಳಿಂದ ಕಲಬುರ್ಗಿಯಲ್ಲೇ ಟೆಂಟು ಹೊಡೆದಿದ್ದಾರೆ. ಇಲ್ಲಿನ ಲಿಂಗಾಯತ ಯುವಕರಲ್ಲಿ ಮೋದಿ ಕ್ರೇಜ್ ಇನ್ನೂ ಇದೆ. ಆದರೆ ಬಲಗೈ ದಲಿತರು, ಮುಸ್ಲಿಮರು, ಲಿಂಗಾಯತರು ಇವರೆಲ್ಲ ಸದ್ಯ ಖರ್ಗೆ ಪರ ಎಂದು ಕಾಣಿಸುತ್ತಿದೆ. ಇಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಜಾಧವ ನೆಪಕ್ಕಷ್ಟೇ.

ಖರ್ಗೆ ವಿರುದ್ಧ ಎಲ್ಲ ಪಟ್ಟಭದ್ರ ಶಕ್ತಿಗಳು ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಒಂದಾಗುತ್ತಿರುವಂತೆ ಕಂಡರೂ, ಅದು ಪೂರ್ತಿ ಸತ್ಯವಲ್ಲ.
ಇಲ್ಲಿ ಖರ್ಗೆಗೇ ಗೆಲುವಿನ ಅವಕಾಶ ಜಾಸ್ತಿ, ಅಂತರ ಮಾತ್ರ ಕಡಿಮೆಯಾಗಲಿದೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...