Homeಕರ್ನಾಟಕಕಲಬುರ್ಗಿ: ‘ಈ ಸಲ ಖರ್ಗೆಯವರಿಗೆ ಟಫ್ ಇದೆ’

ಕಲಬುರ್ಗಿ: ‘ಈ ಸಲ ಖರ್ಗೆಯವರಿಗೆ ಟಫ್ ಇದೆ’

- Advertisement -
- Advertisement -

ಹಾಗಂತ ಖರ್ಗೆ ತುಂಬ ತೊಂದರೆಯಲ್ಲಿ ಏನಿಲ್ಲ. ಆದರೆ ಅಲ್ಲಿನ ಲೋಕಲ್ ರಾಜಕೀಯ ವಿದ್ಯಮಾನಗಳಿಗೆ ಕುರುಡಾದ ಅವರು, ಪುತ್ರ ವಾತ್ಸಲ್ಯಕ್ಕೆ ಜೋತು ಬಿದ್ದುದರ ಪರಿಣಾಮವಿದು. ಇದನ್ನು ವ್ಯವಸ್ಥಿತವಾಗಿ ಬಳಸಿಕೊಂಡು ಅವರನ್ನು ಹಣಿಯಲು ‘ಮೋದಿ ಪ್ರೇರಿತ’ ಸಂಘ ಟೀಮ್ ಇಲ್ಲಿ ಒಂದೂವರೆ ವರ್ಷದಿಂದ ಕೆಲಸ ಮಾಡುತ್ತಿದೆ. ಹಾಗಾಗಿ ಖರ್ಗೆಗೆ ಈ ಸಲ ‘ಟಪ್ಫು’ ಎನ್ನುವುದು ಮೇಲ್ನೋಟಕ್ಕೆ ನಿಚ್ಚಳವಾದರೂ, ಖರ್ಗೆ ಕಡಿಮೆ ಅಂತರದಲ್ಲಿ ಗೆಲ್ಲುವ ಸೂಚನೆಗಳು ದಟ್ಟವಾಗಿವೆ…

‘ಈ ಸಲ ಖರ್ಗೆಯವರಿಗೆ ಟಪ್ಫು ಇದೆ’
ಕಷ್ಟವಾದರೂ ಖರ್ಗೆ ಗೆಲುವು ನಿಶ್ಚಿತ ಎಂದು ಕಾಂಗ್ರೆಸ್‍ನವರು, ಪ್ರಗತಿಪರರು ಹೇಳುತ್ತಾರೆ. ಬಿಜೆಪಿ, ಸಂಘ ಪರಿವಾರದವರಂತೂ ಈ ಸಲ ನಮ್ಮದೇ ಗೆಲುವು ಅನ್ನುತ್ತಿದ್ದಾರೆ. ಸತ್ಯ ಇವೆರಡರ ನಡುವೆ ತೇಲುತ್ತಿದೆಯಾದರೂ, ಅದು ಒಂದು ಕಡೆಯೇ ಹೆಚ್ಚಿಗೆ ವಾಲುತ್ತಿದೆ!

ಎಲ್ಲ ಕಡೆಯಂತೆ ಇಲ್ಲಿ ಜಾತಿ ಇಕ್ವೇಶನ್ ಇದೆ. ಹಳೆ ಸಮೀಕರಣದ ಲೆಕ್ಕದಲ್ಲಿ ಖರ್ಗೆಗೆ ಗೆಲುವು ಲಭಿಸಬಹುದಿತ್ತು. ಸಮೀಕರಣಗಳು ಬದಲಾಗುವ ಪರಿಯನ್ನು ಖರ್ಗೆ ಅಂದಾಜು ಮಾಡಿದ್ದಾರಾದರೂ, ಸಮೀಕರಣಗಳ ಆಚೆ ನಡೆಯುವ ‘ಧರ್ಮ’ದ ಆಟ ಅವರ ಕ್ಷೇತ್ರದಲ್ಲಿ ಎರಡು ವರ್ಷಗಳಿಂದ ವ್ಯವಸ್ಥಿತವಾಗಿ ನಡೆಯುತ್ತಿರುವುದನ್ನು ಅವರು ಗುರುತಿಸಿಲ್ಲ ಅನಿಸುತ್ತದೆ.

ಇಲ್ಲಿ ಅವರ ಜಯಕ್ಕೆ ತೊಡಕಾಗಿರುವ ಹಲವು ಸಂಗತಿಗಳಿವೆ:
ಮಗನನ್ನು ಮಿನಿಸ್ಟರ್ ಮಾಡಿದ್ದು ಖರ್ಗೆ ಅವರಿಗೆ, ಅವರ ಮಗನಿಗೆ ಮತ್ತು ಅಂಧಾಭಿಮಾನಿಗಳಿಗೆ ಖುಷಿ ತಂದಿರಬಹುದು. ಆದರೆ ಇದೇ ಅವರಿಗೆ ಈ ಸಲದ ಚುನಾವಣೆಯಲ್ಲಿ ತೊಂದರೆ ಮಾಡಲೂಬಹುದು. ಕಾಂಗ್ರೆಸ್‍ನಿಂದ ಸೋತ ಮಾಲೀಕಯ್ಯ ಗುತ್ತೇದಾರ್, ಬಾಬುರಾವ್ ಚಿಂಚಸನೂರು ಈಗ ಬಿಜೆಪಿಯಲ್ಲಿದ್ದು ಫುಲ್ ಆ್ಯಕ್ಟಿವ್ ಆಗಿದ್ದಾರೆ. ಕಾಂಗ್ರೆಸ್‍ನ ಮಲಕರೆಡ್ಡಿ ಕೂಡ ಖರ್ಗೆ ಪರವಿಲ್ಲ.

2013ರಲ್ಲಿ ಈ ಲೋಕಸಭಾ ಕ್ಷೇತ್ರದಲ್ಲಿ 7 ಸ್ಥಾನ ಹೊಂದಿದ್ದ ಕಾಂಗ್ರೆಸ್ ಈಗ ನಾಲ್ಕಕ್ಕೆ ಕುಸಿದಿದೆ. ಬಿಜೆಪಿ ಈಗ 3 ಸ್ಥಾನ ಹೊಂದಿದ್ದರೆ, ಜೆಡಿಎಸ್ ಒಂದು ಸ್ಥಾನ ಹೊಂದಿದೆ. ಇಷ್ಟಾದರೂ ಖರ್ಗೆಗೆ ಗೆಲುವಿನ ಹಾದಿ ಕಷ್ಟ ಆಗುತ್ತಿರಲಿಲ್ಲ. ಆದರೆ ಅವರು ತಮ್ಮ ಮಗನನ್ನು ಪ್ರಮೋಟ್ ಮಾಡಿದ್ದೇ ಇಲ್ಲಿ ಹಲವು ಲಿಂಗಾಯತರು ಮತ್ತು ಇತರ ಹಿಂದುಳಿದ ಜಾತಿಗಳು ಹಾಗೂ ಎಸ್‍ಸಿ ಎಡಗೈ ಸಮುದಾಯದಲ್ಲಿ ಅಸಮಾಧಾನ ಉಂಟು ಮಾಡಿದೆ.

ಈ ಭಾಗದಲ್ಲಿ ಹಲವಷ್ಟು ಬಹುಮುಖ್ಯ ಯೋಜನೆಗಳು ಜಾರಿಯಾಗಲು ಖರ್ಗೆಯವರೇ ಕಾರಣ. 371 ಜೆ, ಇಪಿಎಫ್ ಹಾಸ್ಪಿಟಲ್, ಕೇಂದ್ರೀಯ ವಿವಿ… ಜೊತೆಗೆ ಕೇಂದ್ರದ ಹಲವಾರು ಕಾರ್ಯಕ್ರಮಗಳ ಅನುಷ್ಠಾನ…. ಲೋಕಸಭೆಯಲ್ಲಿ ಮೋದಿಯ ಸುಳ್ಳುಗಳಿಗೆ ತಿರುಗೇಟು ನೀಡುವಲ್ಲಿ ಸಫಲರಾದವರು ಖರ್ಗೆ. ಆಗಿಂದಲೇ ಮೋದಿಗೆ ಖರ್ಗೆ ಬಗ್ಗೆ ಅಸಮಾಧಾನವಿದ್ದು, ಖರ್ಗೆ ಲೋಕಸಭೆಯಲ್ಲಿ ಜಾಡಿಸಿದ ನಂತರ, ಅಂತಿಮದಲ್ಲಿ ಮಾತಾಡಿದ್ದ ಮೋದಿ, ಖರ್ಗೆಜೀ, ಇದು ಲೋಕಸಭೆಯಲ್ಲಿ ನಿಮ್ಮ ಕೊನೆ ಭಷಣ ಎಂದು ಗೇಲಿ ಮಾಡಿದ್ದರು.

ಆದರೆ ಆಗಿಂದ ಇಲ್ಲಿ ಚೆಡ್ಡಿಗಳು ಫುಲ್ ಆಕ್ಟಿವ್ ಆಗಿದ್ದಾರೆ. ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ತಿಂಗಳಿಂದ ಕಲಬುರ್ಗಿಯಲ್ಲೇ ಟೆಂಟು ಹೊಡೆದಿದ್ದಾರೆ. ಇಲ್ಲಿನ ಲಿಂಗಾಯತ ಯುವಕರಲ್ಲಿ ಮೋದಿ ಕ್ರೇಜ್ ಇನ್ನೂ ಇದೆ. ಆದರೆ ಬಲಗೈ ದಲಿತರು, ಮುಸ್ಲಿಮರು, ಲಿಂಗಾಯತರು ಇವರೆಲ್ಲ ಸದ್ಯ ಖರ್ಗೆ ಪರ ಎಂದು ಕಾಣಿಸುತ್ತಿದೆ. ಇಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಜಾಧವ ನೆಪಕ್ಕಷ್ಟೇ.

ಖರ್ಗೆ ವಿರುದ್ಧ ಎಲ್ಲ ಪಟ್ಟಭದ್ರ ಶಕ್ತಿಗಳು ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಒಂದಾಗುತ್ತಿರುವಂತೆ ಕಂಡರೂ, ಅದು ಪೂರ್ತಿ ಸತ್ಯವಲ್ಲ.
ಇಲ್ಲಿ ಖರ್ಗೆಗೇ ಗೆಲುವಿನ ಅವಕಾಶ ಜಾಸ್ತಿ, ಅಂತರ ಮಾತ್ರ ಕಡಿಮೆಯಾಗಲಿದೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...