Homeಪಿಕೆ ಟಾಕೀಸ್ಪಿಕೆ ಟಾಕೀಸ್: ವ್ಯಕ್ತಿ ಮತ್ತು ಸಮಾಜದ ನಡುವಿನ ಅಮೂರ್ತ ಸಂಬಂಧಗಳ ಸಿನಿಯಾನ

ಪಿಕೆ ಟಾಕೀಸ್: ವ್ಯಕ್ತಿ ಮತ್ತು ಸಮಾಜದ ನಡುವಿನ ಅಮೂರ್ತ ಸಂಬಂಧಗಳ ಸಿನಿಯಾನ

- Advertisement -
- Advertisement -

ಪಿಕೆ ಟಾಕೀಸ್ 05/ ಜಾಗತಿಕ ಸಿನಿಮಾ/ ಗ್ರೀಸ್ ಸಿನಿಮಾ/ ಬಾಬಿಸ್ ಮಕ್ರಿಡೀಸ್

ಪಿಟಿ (2018): ಒಬ್ಬ ವ್ಯಕ್ತಿ ತನ್ನ ನೋವನ್ನು ಅಥವಾ ದುಃಖವನ್ನು ಮತ್ತೊಬ್ಬರ ಬಳಿ ಹಂಚಿಕೊಳ್ಳುವುದಾದರೂ ಏಕೆ? ಎದುರಿಗಿರುವವರಿಂದ ಕರುಣೆ ಅಥವಾ ಅನುಕಂಪವನ್ನು ಗಿಟ್ಟಿಸಿಕೊಳ್ಳಲಿಕ್ಕಾ? ಮತ್ತೊಬ್ಬರಿಂದ ಅನುಕಂಪವನ್ನು ನಿರೀಕ್ಷಿಸುವುದೇ ವ್ಯಸನವಾಗಿಬಿಟ್ಟರೆ? ಒಮ್ಮೆ ಬದುಕಿನಲ್ಲಿದ್ದ ನೋವೆಲ್ಲ ದೂರವಾಗಿ, ಸುತ್ತಲಿನವರು ಅನುಕಂಪವನ್ನು ವ್ಯಕ್ತಪಡಿಸುವುದು ನಿಲ್ಲಿಸಿದರೆ ಮುಂದೇನಾಗಬಹುದು?

ನಲವತ್ತರ ಅಸುಪಾಸಿನ ವ್ಯಕ್ತಿಯೊಬ್ಬ ಕಚೇರಿಗೆ ತಯಾರಾಗಿ ಕೈಗಡಿಯಾರವನ್ನು ನೋಡುತ್ತಾ ಬಾಗಿಲ ಮುಂದೆ ನಿಂತಿರುತ್ತಾನೆ. ಅದೇ ಸಮಯಕ್ಕೆ ಬಾಗಿಲ ಗಂಟೆಯ ಶಬ್ದ, ಪಕ್ಕದ ಮನೆಯಾಕೆ ಆರೆಂಜ್ ಕೇಕ್ ಕೊಟ್ಟು, ಕೋಮಾದಲ್ಲಿರುವ ತನ್ನ ಹೆಂಡತಿಯ ಆರೋಗ್ಯದ ಸ್ಥಿತಿಯನ್ನು ವಿಚಾರಿಸುತ್ತಾಳೆ. ಸಪ್ಪೆ ಮೋರೆಯಲ್ಲಿ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿ, ನಂತರ ಮಗನ ಜೊತೆ ಕುಳಿತು ಕೇಕ್‌ಅನ್ನು ಸವಿದು ಕಚೇರಿಗೆ ತೆರಳುತ್ತಾನೆ.

ಬೆಳಿಗ್ಗೆ ನಿದ್ದೆಯಿಂದ ಎದ್ದ ಕೂಡಲೇ ಬಿಕ್ಕಳಿಸಿ ಅಳುವ, ದಿನಾಲು ಕೋಮಾದಲ್ಲಿರುವ ಹೆಂಡತಿಯನ್ನು ಆಸ್ಪತ್ರೆಯಲ್ಲಿ ನೋಡಿ ದುಃಖಭರಿತನಾಗಿ ಅವಳಿಗೆ ಮುತ್ತನ್ನಿಡುವುದು, ಅದೇ ದುಗುಡದಲ್ಲಿ ಕಚೇರಿಯ ಕೆಲಸವನ್ನು ಸರಿಯಾಗಿ ಮಾಡದೆ, ತಂದೆ, ಗೆಳೆಯರು, ನೆರೆಹೊರೆಯವರು ಕಡೆಗೆ ಲಾಂಡ್ರಿವನ ಬಳಿಯೂ ಹೆಂಡತಿಯ ಸ್ಥಿತಿಯ ಬಗ್ಗೆ ದುಃಖ ತೋಡಿಕೊಂಡು ಸಮಯ ಕಳೆಯುತ್ತಿರುವ ವ್ಯಕ್ತಿ..

ಹೆಂಡತಿ ಮತ್ತೆ ಸಹಜವಾಗುವುದಿಲ್ಲವೆಂದು, ಅವಳ ಸಾವಿನ ತಯಾರಿ ಮಾಡಿಕೊಳ್ಳುತ್ತಿದ್ದ ವ್ಯಕ್ತಿಗೆ ಆಘಾತವಾಗುತ್ತದೆ. ಅವನ ಹೆಂಡತಿಗೆ ಪ್ರಜ್ಞೆ ಬಂದು ಆರೋಗ್ಯಕರವಾಗಿ ಮನೆಗೆ ತೆರಳುತ್ತಾಳೆ. ಇದರಿಂದ ಅವನು ದಿನ ಬೆಳಿಗ್ಗೆ ಎದ್ದು ಅಳಲು ಕಾರಣವಿಲ್ಲವಾಗುತ್ತದೆ, ಪಕ್ಕದ ಮನೆಯಾಕೆಯ ಕೇಕ್ ಬರುವುದು ನಿಲ್ಲುತ್ತದೆ, ಸುತ್ತಮುತ್ತಲಿನವರ ಕಾಳಜಿ ಮತ್ತು ಕಾರುಣ್ಯದ ಮಾತುಗಳು ಇಲ್ಲವಾಗುತ್ತದೆ.

ಪಿಟಿ (2018)

ಈ ರೀತಿಯ ಮನಸ್ಥಿತಿ ಒಂದಲ್ಲ ಒಂದು ರೀತಿಯಲ್ಲಿ ಎಲ್ಲರಲ್ಲೂ ಸಹಜವಾಗಿ ಇರುತ್ತದೆ. ಮುಖ್ಯವಾಗಿ ಮಕ್ಕಳಲ್ಲಿ. ಹಠ ಮಾಡುವುದು, ಅತ್ತು ಕರೆಯುವುದು ಅದಕ್ಕೆ ಸಮಾಧಾನವನ್ನು ಅಪೇಕ್ಷಿಸುವುದು ಇವೆಲ್ಲವೂ ಬಾಲ್ಯದಲ್ಲಿ ಕಾಣುವಂತವೇ. ವಯೋವೃದ್ಧರಲ್ಲಿಯೂ ಇದು ಸಾಮಾನ್ಯವಾಗಿ ಕಾಣುವ ಮನೋಭಾವ ಕೂಡ. ಕೆಲವು ವಯೋವೃದ್ಧರು ಮನೆಗೆ ಯಾರೇ ಬಂದು ಸಹಜವಾದ ಸಂಭಾಷಣೆಗೆ ಪ್ರೇರೇಪಿಸಿದರೂ, ಅವರ ಮಾತು ಮಾತ್ರ ಸದಾ ಆಸ್ಪತ್ರೆ, ಕಾಯಿಲೆ, ಔಷಧಿಗಳ ಸುತ್ತ ಸುತ್ತುತ್ತಲೇ ಇರುತ್ತದೆ. ಇವರಷ್ಟೇ ಏಕೆ, ಕೊನೆಗೆ ಐಷಾರಾಮಿ ಹೆಲಿಕಾಪ್ಟರ್‌ನಿಂದ ಇಳಿದು ಬರುವ ನಮ್ಮ ಪ್ರಧಾನಮಂತ್ರಿಗಳು ತಮ್ಮ ಗತ ಜೀವನದ ಬಡತನ ದಿನಗಳನ್ನು ನೆನಪಿಸಿಕೊಳ್ಳುವುದರಿಂದಲೋ, ತಮ್ಮ ಹೋರಾಟವನ್ನು ಕಷ್ಟಮಯ ಎಂದು ಬಗೆದು ಅತಿರಂಜಿತವಾಗಿ ಬಣ್ಣಿಸುವುದರಿಂದಲೋ ಮತ್ತು ಸೈನಿಕರ ಸಾವನ್ನು ತಮ್ಮ ರಾಜಕೀಯ ಅನುಕೂಲಕ್ಕೆ ಪ್ರಸ್ತಾಪಿಸಿ ಮತದಾರರಿಂದ ಅನುಕಂಪ ಗಿಟ್ಟಿಸಿಕೊಂಡು ಗೆಲುವು ಸಾಧಿಸುವುದನ್ನು ಕಂಡಿದ್ದೇವೆ.

ಸಿನಿಮಾದ ಕೊನೆ ಭಾಗದಲ್ಲಿ ಸುತ್ತಲಿನವರಿಂದ ಅನುಕಂಪ ಸಿಗದೆ ಹೋದಾಗ ಪ್ರಧಾನ ಪಾತ್ರಧಾರಿ ತನ್ನ ಸಾಕು ನಾಯಿಯನ್ನೇ ಸಮುದ್ರದ ಮಧ್ಯೆ ಬಿಟ್ಟು ಬಂದು ತಂದೆ ಮತ್ತು ಹೆಂಡತಿಯ ಬಳಿ ದುಃಖ ತೋಡಿಕೊಳ್ಳುತ್ತಾನೆ. ಅದರೆ ಅವರು ಗಮನ ಹರಿಸದೆ ಹೋದಾಗ, ಕೊನೆಗೆ ತನ್ನ ತಂದೆ ಮತ್ತು ಹೆಂಡತಿಯನ್ನು ಕೊಂದು ಯಾರೋ ಕೊಲೆ ಮಾಡಿರುವುರಂತೆ ಚಿತ್ರಿಸಿ, ಮತ್ತೆ ಬೆಳಿಗ್ಗೆ ನಿದ್ದೆಯಿಂದ ಎದ್ದು ಅಳುವ ದೃಶ್ಯ ಮನುಷ್ಯನ ಮನಸ್ಸಿನ ಭಾವನೆಗಳ ಸಂಕೀರ್ಣತೆಯನ್ನು ತೋರಿಸುತ್ತದೆ. ಅನುಕಂಪದ ಬಯಕೆಯನ್ನು ವ್ಯಸನವಾಗಿಸಿಕೊಳ್ಳುವ ಮನುಷ್ಯ ಶಿಥಿಲಗೊಳ್ಳುವ ಬಗೆಯನ್ನು ಹಿಡಿದಿಡುತ್ತದೆ.

ಈ ಸಿನಿಮಾ ಡಾರ್ಕ್ ಕಾಮಿಡಿ. ದುಃಖದಲ್ಲಿರುವನು ಸದಾ ದುಃಖದಲ್ಲೇ ಇರಲು ಮಾಡುವ ಪ್ರಯತ್ನಗಳು ನಗು ತರಿಸುತ್ತವೆ, ಆದರೆ ಅಂತ್ಯ ಆಘಾತವನ್ನು ಹುಟ್ಟಿಸುತ್ತದೆ. ಸಿನಿಮಾದಲ್ಲಿ ಹೇಳಿರುವಂತೆ ನಗುವನ್ನು ನಕಲಿ ಮಾಡಬಹುದು, ಆದರೆ ದುಃಖವನ್ನಲ್ಲ. ಆದರೆ ನಮ್ಮಲ್ಲೇ ಎಷ್ಟು ಜನ ಅನುಕಂಪದ ನಿರೀಕ್ಷೆಯಲ್ಲಿ ದುಃಖಕ್ಕೆ ವ್ಯಸನಿಗಳಾಗಿ ಬದುಕಿನ ಒಳ್ಳೆಯ ಮತ್ತು ಸಂಭ್ರಮನ ಕ್ಷಣಗಳಲ್ಲೂ ದೋಷಗಳನ್ನು ಹುಡುಕುತ್ತಾ ಸಹಜ ಬದುಕನ್ನೇ ದುಃಖಕರವಾಗಿಸಿಕೊಳ್ಳುವುದಕ್ಕೆ ಸಿನಿಮಾ ಕನ್ನಡಿಯಾಗಿದೆ.

ನಮ್ಮಲ್ಲೇ ಶೇಕಡ ತೊಂಭತ್ತಕ್ಕೂ ಹೆಚ್ಚಿನ ಜನ ಅಂಧಶ್ರದ್ಧೆಗೆ ಸೋಲುವುದು, ಮದ್ಯಪಾನ ಮಾಡುವುದು, ಮನಸ್ಸೋ ಇಚ್ಛ ತಿನ್ನುವುದು ಹೀಗೆ ಬೇಜವಾಬ್ದಾರಿಯಾಗಿ ತಮ್ಮ ಕೆಲಸಗಳನ್ನು, ಸಮಯವನ್ನು ಮತ್ತು ಆರೋಗ್ಯವನ್ನು ನಿರ್ಲಕ್ಷಿಸಿ ಬದುಕಲು ದುಃಖವನ್ನು ಕಾರಣವಾಗಿ ಬಳಸುವುದು ದುಃಖಕರದ ಸಂಗತಿಯಲ್ಲವೇ!

ಎಲ್ (2012): ಇಂಗ್ಲಿಷ್ ವರ್ಣಮಾಲೆಯ ಎಲ್ ಅಕ್ಷರವನ್ನು, ಕಲಿಕೆಯ ಹಂತದಲ್ಲಿರುವ ಸೂಚಕವಾಗಿ ವಾಹನಗಳ ಮೇಲೆ ಬಳಸುವುದು ವಾಡಿಕೆ. ಒಂದು ವೇಳೆ ಸಮಾಜವನ್ನು ಕಾರು, ಬೈಕು, ದೋಣಿಗಳೆಂದು ಹಲವಾರು ವರ್ಗಗಳಾಗಿ ವಿಂಗಡಿಸಿದರೆ, ವ್ಯಕ್ತಿಯೊಬ್ಬ ಯಾವುದಾದರೂ ಒಂದು ವರ್ಗಕ್ಕೆ ಸೇರುವ ಸಲುವಾಗಿ ಮಾಡುವ ಕಲಿಕ ಪ್ರಯತ್ನಗಳು ಮತ್ತು ಅವನ ಸುತ್ತಮುತ್ತಲಿನವರ ಅನಿಸಿಕೆಗಳೇ ಈ ಸಿನಿಮಾ.

ವ್ಯಕ್ತಿಯೊಬ್ಬ ಕಾರನ್ನು ತನ್ನ ಮನೆಯನ್ನಾಗಿಸಿಕೊಂಡು ಬದುಕುತ್ತಿರುತ್ತಾನೆ. ಕಾರಿನಲ್ಲಿ ತಿನ್ನುವುದು, ಮಲಗುವುದು, ವ್ಯರ್ಥವಾಗಿ ಸುತ್ತುವುದು. ಮತ್ತೊಂದು ಕಾರಿನಲ್ಲಿ ಬಂದ ಹೆಂಡತಿ ಮಕ್ಕಳು ಮತ್ತು ಗೆಳೆಯರು ಇವನ ಕಾರಿನಲ್ಲಿ ಕೂತು ಹುಟ್ಟುಹಬ್ಬವನ್ನು ಆಚರಿಸುವುದು ಹೀಗೆ, ಇವನು ಕಾರಿನಿಂದ ಕೆಳಗಿಳಿದ ಸಂದರ್ಭಗಳೇ ಕಾಣುವುದಿಲ್ಲ.

ಈ ಸಿನಿಮಾದಲ್ಲಿ ಚಿತ್ರಿಸಿರುವ ಘಟನೆಗಳು ಹೆಚ್ಚು ರಸ್ತೆಗಳಲ್ಲೇ ನಡೆಯುತ್ತವೆ. ಇವನು ಮಾಡುತ್ತಿರುವ ವಿಚಿತ್ರ ಡ್ರೈವರ್ ನೌಕರಿಯಲ್ಲಿ ಎರಡು ಬಾರಿ ತಡವಾಗಿ ಬಂದ ಕಾರಣದಿಂದ, ಮತ್ತೊಬ್ಬ ಡ್ರೈವರ್‌ನೊಂದಿಗೆ ರೇಸ್‌ನಲ್ಲಿ ಪಾಲ್ಗೊಳ್ಳುತ್ತಾನೆ. ಆದರೆ ಅದರಲ್ಲಿ ಸೋತು, ಈ ಕಾರಿನ ಪಂಗಡದವರ ಮೇಲೆ ವಿರಕ್ತಿ ಹುಟ್ಟಿ ಕಾರನ್ನು ಗುದ್ದಿ, ಬೈಕ್ ಪಂಗಡಕ್ಕೆ ಸೇರುತ್ತಾನೆ.

ಎಲ್ (2012)

ಈ ಬೆಳವಣಿಗೆ ತನ್ನ ಹೆಂಡತಿ, ಮಕ್ಕಳು ಮತ್ತು ಗೆಳೆಯನಿಗೆ ಇಷ್ಟವಾಗುವುದಿಲ್ಲ. ಎಷ್ಟು ಪ್ರಯತ್ನಿಸಿದರೂ ಇವನಿಂದ ದೂರವಾಗಿ ಬಿಡುತ್ತಾರೆ. ಹೀಗೆ ಒಂಟಿಯಾಗಿ ಈತ ಬೈಕರ್ ಪಂಗಡವರೊಂದಿಗೆ, ಬೈಕ್ ಮೇಲೆ ಸುತ್ತುತ್ತಾ, ತಿನ್ನುತ್ತಾ, ಮಲಗುತ್ತಾ, ಪಂಗಡಕ್ಕಿರುವ ಹಾಡನ್ನು ಹಾಡುತ್ತಾ ಸಮಯ ಕಳೆಯುತ್ತಾನೆ.

ಇವನ ಗೆಳೆಯನೊಬ್ಬ ಅಂಬೆಗಾಲಿನಲ್ಲಿ ನಡೆಯುತ್ತಾ ಕರಡಿ ಪಂಗಡಕ್ಕೆ ಸೇರಿಕೊಂಡಿರುತ್ತಾನೆ. ಆ ಗೆಳೆಯ ಇವನ ಕೂದಲು ಮತ್ತು ಗಡ್ಡವನ್ನು ಮುಟ್ಟಿ ನೋಡಿ, ಇವನನ್ನು ಕರಡಿ ಪಂಗಡಕ್ಕೆ ಸೇರುವಂತೆ ಒತ್ತಾಯಿಸುತ್ತಾನೆ. ಕೊನೆಗೆ ಅಲ್ಲೂ ಇರಲಾಗದೆ ಸಮುದ್ರ ಅಥವಾ ದೋಣಿಗೆ ಹೊಂದುವಂತ ಶೂ ಧರಿಸಿ ದೋಣಿ ಪಂಗಡಕ್ಕೆ ಸೇರಿ ಅವರ ಹಾಡನ್ನು ಗಟ್ಟಿಯಾಗಿ ಹಾಡುವ ದೃಶ್ಯದೊಂದಿಗೆ ಸಿನಿಮಾ ಮುಗಿಯುತ್ತದೆ.

ಈ ಸಿನಿಮಾ ಅಮೂರ್ತವಾಗಿದ್ದು, ಒಂದು ಕಡೆಯಿಂದ ತನ್ನತನವನ್ನು ಹುಡುಕುವ ವ್ಯಕ್ತಿಯೋರ್ವನ ಕಥೆಯಂತೆ ಕಂಡರೆ, ಮತ್ತೊಂದೆಡೆಯಿಂದ ಕಾರು, ಬೈಕು ಮತ್ತು ದೋಣಿಯ ಪಂಗಡಗಳನ್ನು ವಿವಿಧ ಧರ್ಮಗಳನ್ನು ಪ್ರತಿನಿಧಿಸುವ ಸಮುದಾಯದವರಂತೆ ಕಾಣುತ್ತಾರೆ. ವ್ಯಕ್ತಿಯ ಸಮಾಜವಾಗಿರುವ ಕುಟುಂಬ, ಗೆಳೆಯರು ಮತ್ತು ಪರಿಚಿತರು ಸದಾ ವ್ಯಕ್ತಿಯನ್ನು ಅವರ ಕಥೆಯಲ್ಲಿರುವಂತೆಯೇ ಕಾಪಾಡಿಕೊಳ್ಳಲು ಪ್ರಯತ್ನಿಸುತ್ತಿರುತ್ತಾರೆ. ಒಂದು ವೇಳೆ ವ್ಯಕ್ತಿ ಬದಲಾದರೂ ಆ ಬದಲಾವಣೆಯನ್ನು ಜೀರ್ಣಿಸಿಕೊಳ್ಳಲಾಗದೆ, ಮೊದಲೇ ಸರಿಯಿತ್ತೆಂದು ವಾದ ಮಾಡುವುದು, ವೈಯಕ್ತಿಕ ಬದುಕಿನಲ್ಲಿ ಸಮಾಜದ ಹಸ್ತಕ್ಷೇಪ ಇವೆಲ್ಲವನ್ನೂ ಸಿನಿಮಾ ಗಟ್ಟಿಯಾಗಿ ಹಿಡಿದಿಟ್ಟಿದೆ.

ರಸ್ತೆಯಲ್ಲಿ ಅಪಘಾತವಾಗಿ ರಕ್ತ ಸುರಿಸುತ್ತಾ ಇರುವ ವ್ಯಕ್ತಿಯನ್ನು ನೋಡುತ್ತಾ ನಿಂತ ಬೈಕರ್‌ಗಳು, ಕರಡಿಯಂತೆ ನಡೆಯುತ್ತಾ ತಲೆಯಿಂದ ರಕ್ತ ಸುರಿಯುತ್ತಿದ್ದರೂ ಏನು ಆಗದವನಂತಿರುವ ಗೆಳೆಯ, ತನ್ನ ಕಾರನ್ನು ತಾನೇ ಪದೇ ಪದೇ ಗುದ್ದಿ ಹಾಳಾಗುವಂತೆ ಮಾಡಿದ್ದು ಮತ್ತು ಬೈಕ್ ಹೆಲ್ಮೆಟಿನ ಸುತ್ತಲು ಗಾಳಿಯಾಡದಂತೆ ಟೇಪನ್ನು ಆಂಟಿಸಿ ಉಸಿರಾಡದಂತೆ ಸಾಯುವವನ ದೃಶ್ಯಾವಳಿಗಳನ್ನು ನೋಡಿದಾಗ ಸಮಾಜದಲ್ಲಿರುವ ವಿವಿಧ ಗುಂಪುಗಳ ನಡುವಿನ ವೈರತ್ವದ ಅಸಂಬದ್ಧತೆಯನ್ನು ತೋರಿಸುತ್ತದೆ.

ವ್ಯಕ್ತಿಯೊಬ್ಬ ಸಮಾಜದಲ್ಲಿರುವ ಗುಂಪೊಂದಕ್ಕೆ ಸೇರಲು ಮಾಡುವ ಪ್ರಯತ್ನಗಳು ಸೋತಾಗ, ಅವನು ಯಾವುದೇ ಗುಂಪಿಗೆ ಸೇರಲು ಸಾಧ್ಯವಾಗದೇ ಹೋದಾಗ, ಅವನ ಸ್ಥಿತಿ ಏನೆಂಬ ಪ್ರಶ್ನೆ ನಮ್ಮ ನಾಗರಿಕತೆಯ ಖಾಲಿತನವನ್ನೇ ಪ್ರಶ್ನಿಸುತ್ತದೆ.

ಬಾಬಿಸ್ ಮಕ್ರಿಡೀಸ್: ಬಾಬಿಸ್‌ರ ಸಿನಿಮಾಗಳು ವ್ಯಕ್ತಿ ಮತ್ತು ಸಮಾಜದ ನಡುವಿನ ಅಮೂರ್ತ ಸಂಬಂಧಗಳ ಕುರಿತು ಮತ್ತು ಬದುಕಿನಲ್ಲಿ ಸಾಮಾನ್ಯವೆಂಬಂತಿರುವ ಅಸಂಬದ್ಧತೆಯನ್ನು ಎತ್ತಿ ತೋರಿಸುತ್ತದೆ. ಬಾಬಿಸ್‌ರ ಸಿನಿಮಾ ಶೈಲಿ ಮತ್ತು ವಿನ್ಯಾಸ ಅತಿ ಸರಳ, ಯಾವುದೇ ರೀತಿಯ ಕ್ಯಾಮರಾದ ಚಲನೆಗಳೇ ಇಲ್ಲದೆ ಸೀದಾ ಸಾದಾ ಸ್ಥಿರ ಪೋಟೊಗ್ರಾಫಿಯಂತೆ ದೃಶ್ಯ ಕಟ್ಟುತ್ತಾರೆ.

ಇವರ ಎಲ್ಲ ಸಿನಿಮಾಗಳಲ್ಲೂ ವ್ಯಕ್ತಿ ಸಮಾಜದಿಂದ ಒಪ್ಪಿಗೆ ಪಡೆಯುವ ಚಡಪಡಿಕೆ ಎದ್ದು ಕಾಣುತ್ತದೆ. ಇವರ ದಿ ಲಾಸ್ಟ್ ಫಕೀರ್(2005) ಎಂಬ ಕಿರುಚಿತ್ರ ಭಾರತದ ಜೈಪುರದಲ್ಲಿ ನಡೆಯುವ ಕಥೆ. ಇದರಲ್ಲಿ ಫಕೀರನೊಬ್ಬ ಪ್ರೇಕ್ಷಕರಿಂದ ಪ್ರಶಂಸೆ ಪಡೆಯುವ ಆಸೆಯಿಂದ ಮಾಡುವ ವಿವಿಧ ಪ್ರಯತ್ನಗಳಲ್ಲಿ ಸೋತು, ಕೊನೆಗೆ ಫಕೀರನೇ ಮಾಯವಾಗಿ ಬಿಡುತ್ತಾನೆ.

ಬಾಬಿಸ್ ಮಕ್ರಿಡೀಸ್

ಫಕೀರ ಮತ್ತು ಪ್ರೇಕ್ಷಕರನ್ನು ಸಾಂಕೇತಿಕವಾಗಿ ವ್ಯಕ್ತಿ ಮತ್ತು ಸಮಾಜಕ್ಕೆ ಹೋಲಿಸಿದ್ದಾರೆ. ಕಿರುಚಿತ್ರದಲ್ಲಿ ಮೊದಲಿಗೆ ಗಾಜನ್ನು ಬಾಯಲ್ಲಿ ಅಗಿಯಲು ಪ್ರಯತ್ನಿಸಿ ರಕ್ತಸ್ರಾವವಾಗುತ್ತದೆ. ಮುಳ್ಳಿನ ಹಾಸಿಗೆಯ ಮೇಲೆ ಮಲಗುವುದು, ಮೂರಡಿ ಉದ್ದದ ಖಡ್ಗವೊಂದನ್ನು ಬಾಯಿಂದ ದೇಹದೊಳಗೆ ತೂರಿಸಲು ಪ್ರಯತ್ನಿಸಿ ಖಡ್ಗ ಅಲ್ಲೇ ಸಿಕ್ಕಿಕೊಳ್ಳುತ್ತದೆ. ಕೊನೆಗೆ ನೀರಿನಲ್ಲಿ ಮುಳುಗಿ ಫಕೀರನೇ ಮಾಯವಾಗಿಬಿಡುತ್ತಾನೆ. ಫಕೀರ ಮಾಡುವ ಪ್ರಯತ್ನಗಳು ನಾವು ಸಮಾಜಕ್ಕೆ ಹೊಂದಿಕೊಳ್ಳಲು ಮಾಡುವ ಮದುವೆಯ ಸಂಭ್ರಮ, ಆಚರಣೆಗಳು, ಎಷ್ಟೇ ಒತ್ತಡ ಮತ್ತು ಸಮಗಳಿದ್ದರೂ ಬೇರೆಯವರಿಗೆ ಹೆದರಿ ಸಮಸ್ಯೆಗಳಿಗೆ ಸಿಕ್ಕಿಕೊಳ್ಳುವುದನ್ನು ಮಾರ್ಮಿಕವಾಗಿ ಹೇಳುತ್ತದೆ.

ಇದೇ ವಿನ್ಯಾಸ ಎಲ್ ಮತ್ತು ಪಿಟಿ ಸಿನಿಮಾಗಳಲ್ಲೂ ಕಾಣಬಹುದು. ಸಂದರ್ಶನವೊಂದರಲ್ಲಿ ನಿರ್ದೇಶಕರು ಹೇಳುವಂತೆ, ಅವರು ಮಾಡುವ ಸಿನಿಮಾಗಳು ಎಲ್ಲರಿಗೂ ಒಂದೇ ರೀತಿ ಕಂಡರೆ ಅದು ಕಲೆ ಅಲ್ಲ ಬದಲಾಗಿ ಅವರ ಸಿನಿಮಾವನ್ನು ಪ್ರೇಕ್ಷಕ ವಿವಿಧ ರೀತಿಗಳಲ್ಲಿ ವ್ಯಾಖ್ಯಾನಿಸುತ್ತಾ ಅವರವರ ಬದುಕುಗಳ ಮತ್ತು ಸಮಾಜದ ಕುರಿತು ಆಲೋಚನೆಗಳಿಗೆ ಮುಖಾಮುಖಿಯಾಗಬೇಕು ಮತ್ತು ಪ್ರಶ್ನೆಗಳನ್ನು ಎತ್ತುವಂತಾಗಬೇಕು ಎನ್ನುತ್ತಾರೆ.

ಪಿಟಿ ಸಿನಿಮಾದಲ್ಲಿ ದುಃಖವನ್ನೇ ವ್ಯಕ್ತಿಯೊಬ್ಬ ವ್ಯಸನದಂತೆ ಅನುಭವಿಸುವುದನ್ನು ಸ್ಥಿರ ಚಿತ್ರಕ್ಕೆ ಜೋರಾದ ಒಪೆರಾ ಸಂಗೀತವನ್ನು ಬಳಸುವುದು ನಿರ್ದೇಶಕರ ಸಿನಿಮಾ ನೈಪುಣ್ಯತೆಯನ್ನು ತೋರಿಸುತ್ತದೆ.

ಬಾಬಿಸ್‌ರ ಸಿನಿಮಾಗಳು ಅಮೂರ್ತ ಮತ್ತು ಅಸಂಬದ್ಧವಾಗಿವೆ ಅನ್ನಿಸುವುದು ನಿಜ. ಇವುಗಳ ಕುರಿತು ವಿಶ್ಲೇಷಣೆ ಹಾಗೂ ವ್ಯಾಖ್ಯಾನಗಳನ್ನು ಮಾಡುವ ಮೊದಲು ಪಾತ್ರಗಳು ಅನುಭವಿಸುವ ಭಾವನೆಗಳು ಪ್ರೇಕ್ಷಕನಿಗೆ ಮುಟ್ಟಿದರೆ ಸಾಕೆನ್ನುವುದು ನಿರ್ದೇಶಕರ ಆಶಯ. ಗ್ರೀಕ್ ವಿಲಕ್ಷಣ ಸಿನಿಮಾ ಅಲೆಯನ್ನು ಮುಂದುವರೆಸುತ್ತಿರುವವರಲ್ಲಿ ಬಾಬಿಸ್ ಕೂಡ ಪ್ರಮುಖರು.


ಇದನ್ನೂ ಓದಿ: ಪಿಕೆ ಟಾಕೀಸ್: ಗ್ರೀಕ್ ವಿಲಕ್ಷಣ ಅಲೆಯ ಸಿನಿಮಾಗಳ ಪ್ರವರ್ತಕಿ ಅಥಿನಾ ರೇಚಲ್ ಸಂಗಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...