Homeಸಾಹಿತ್ಯ-ಸಂಸ್ಕೃತಿಕವನಅಂತಿಮ ವಲಸೆಯ ಮುನ್ನ..; ಖಲೀಲ್ ಮಾಮೂನ್ ಅವರ ಉರ್ದು ಕವಿತೆಯ ಅನುವಾದ

ಅಂತಿಮ ವಲಸೆಯ ಮುನ್ನ..; ಖಲೀಲ್ ಮಾಮೂನ್ ಅವರ ಉರ್ದು ಕವಿತೆಯ ಅನುವಾದ

- Advertisement -
- Advertisement -

ಉಳಿದಿರುವ ಹಾದಿ ಇದೊಂದು ಈಗ
ಈ ಹಾದಿಯಿಂದಲೆ ಸಾಗಬೇಕಾಗಿದೆ ನಾನು
ಸಾಗಬೇಕು, ಚಲಿಸಬೇಕು,
ಎದ್ದೆದ್ದು ಬಿದ್ದು ಪಾರಾಗಬೇಕು

ರಮಣಿಸುವ ಕಾಲುಹಾದಿಗಳು
ನನ್ನ ಅಕ್ಕ-ಪಕ್ಕ, ಸುತ್ತ-ಮುತ್ತ
ಅಲ್ಲಲ್ಲಿ ಕಗ್ಗಂಟಾಗಿರುವ ಮುಳ್ಳಿನ ಪೊದೆಗಳು
ಬರೀ ಪೊದೆಗಳು
ತೀವ್ರ ವಿಷಕರ ಮುಳ್ಳುಗಂಟೆಗಳು
ಅವತಿಕೊಂಡ ಹಾವು, ಚೇಳು
ಮೋಹಿನಿ-ಭೂತ ಪ್ರೇತಗಳು
ರಂಜಿಸುವ ಮೋಹ-ಮಾಯೆಗೆ ಸಿಲುಕದೆ
ಸಾಗುತ್ತಿರುವೆ ಇತ್ತ ನೇರ ನಾನು

ಎಲ್ಲಾದರೊಂದು ಸಿಕ್ಕೆ ಸಿಗುವುದು
ಲಕ್ಷ್ಯದ ಘಟಕಗಳು
ಇಲ್ಲಿಯೇ ನಿಂತು ಮರಳಿ ಬಾರದೆಂದು
ಇಲ್ಲಿಂದಲೆ ಅಜ್ಹಾಂ, ಇಲ್ಲಿಯೇ ಗಂಟೆಯ ನಾದಸ್ವರ
ಮೌನಧರಿಸಿದ ಮೀನಾರದಿಂದ ಕೊಳೆತ ಕುರುಹುಗಳ
ಅರ್ತನಾದ
ಇಲ್ಲಿಯೇ ಹಗಲಿರುಳು
ಕ್ಷಣ ಕ್ಷಣಕ್ಕೂ ಧಗಧಗಿಸುತ್ತಿರುವ
ಹವನದ ತಾಜಾ ತಾಜಾ
ನೀಲಿ ನೀಲಿ ಹೊಗೆ ಹೊರಸೂಸುತ್ತಿದೆ
ಇಲ್ಲಿಯೇ ಕಂಪಿಸುತ್ತಿರುವ ಗಗನದ ನಿರರ್ಥಕ ದೆಸೆಯಲ್ಲಿ
ನನ್ನ ನಿನ್ನ ಕಣ್ಣೀರಿನ ಎತ್ತೆರೆತ್ತರಕ್ಕೇರುವ ನಿರಂತರ ಬಳ್ಳಿ
ಹಬ್ಬಿರಲಿ ನಂದನವನದಲ್ಲಿ

ಉಳಿದಿರುವ ಇದೇ ತಾನೆ ಏಕೈಕ ಹಾದಿ
ಇದರಿಂದ ಪಾರಾಗಲೇಬೇಕಿದೆ ನಾನು
ಒಮ್ಮೆ ನಿನ್ನ ಸನಿಹದೊಂದಿಗೆ
ಇನ್ನೊಮ್ಮೆ ಒಬ್ಬಂಟಿಯಾಗಿ
ಒಮ್ಮೆ ಜನಜಂಗುಳಿಯೊಂದಿಗೆ
ನನ್ನ ಅಸ್ಮಿತೆಯ ಪಾಪ-ಪುಣ್ಯವ
ಸತ್ಯ-ಮಿಥ್ಯವ ಏನಾದರೊಂದು ನಾನೇ ಅವಲೋಕಿಸಿಕೊಳ್ಳುತ್ತಾ
ನುಡಿಯಲೇಬೇಕು, ಪಠಿಸಲೇಬೇಕು
ಈ ಚೂರು-ಪಾರನ್ನು ಬರಿದಾದ ಹವೆಯಲ್ಲಿ ಹಾರಿಸುತ್ತಾ
ಆರಾಧನೆಯ ಹೊದಿಕೆಯಿಂದ ಹೊದಿಸಿ
ನೈಜತೆಯೋ ಅಥವಾ ಭ್ರಾಂತಿಯೋ
ದಾನಶೂರನೋ-ತಿರುಕನೋ
ತುಂಬಿ ತುಳುಕುತ್ತಿರುವುದೋ
ಅಥವಾ ಬರಿದು ಬರಡಾಗಿರುವುದೋ
ಉಳಿದಿರುವುದು ಇದೇ ಒಂದು ದಾರಿ

ಇಲ್ಲಿಯೇ ಚಂದಿರನ ಮಿಂಚಿನ ಕಾಂತಿ
ಕಂಬನಿಯ ಮುಸುಕುಗಟ್ಟಿದ ಕಾರ್ಮೋಡಗಳು
ಸರ್ವಶಕ್ತತೆಯಿಂದ ಸುರಿಯುತ್ತಿರುವ
ಮನೋ-ಸಲ್ವಾವಿನ(1) ಮಳೆಯು
ನನ್ನ ನಿನ್ನ ಹಸ್ತದೊಂದಿಗೆ
ಅಥವಾ
ಪರಹಸ್ತದಲ್ಲಿ
ಅಥವಾ
ನನ್ನೊಡನೆಯೋ
ಇಲ್ಲಿಯೇ ತೆರೆದಿರುವುದು ನಮ್ಮ
ಅಂತರಂಗದ ಕಣ್ಣುಗಳು
ಇಲ್ಲಿಯೇ ನಮ್ಮ ಸಂಗಮ ಇಲ್ಲಿಯೇ ನಮ್ಮ ವಿದಾಯ

ಒಗ್ಗೂಡುವುದಿಲ್ಲ
ಮತ್ತೆ ನಾವೆಂದಿಗೂ
ಚಂಚಲ ರಾತ್ರಿ ಸಾಕಷ್ಟು ನವರಾತ್ರಿಗಳನ್ನು ಬಿಟ್ಟು
ಎಲ್ಲಿಗೆ ಸಾಗುವೆ, ಯಾರಿಗೆ ಕೂಗುವೆ
ಯಾವ ಅಲ್ವಂದ್(2) ಪರ್ವತದಿಂದಲೂ
ಮರಳಿ ಬರುವುದುಂಟೆ ಕೂಗು

ನನ್ನ ಗದ್ಗದಿತ ಯಾವ ಶ್ರವಣಕ್ಕೂ ಕೇಳಿಸದೆ
ಇದೇ ಹಾದಿಯಲ್ಲಿ ಸಾಗುತ್ತಾ ಜೀವಿಸುವೆ,
ಮರಣಿಸುವೆ, ಕಾದಾಡುವೆ
ಮತ್ತು ಇಲ್ಲಿಯೇ ಆಲಂಗಿಸಿಕೊಳ್ಳುವೆ
ಇದೇ ಹಾದಿ ತಾನೇ ನನ್ನ ಏಕೈಕೆ ಸರ್ವಸ್ವ
ಇದರ ಹೊರತು ಅನ್ಯಕ್ಕೆ ಕಣ್ಣಾಡಿಸುವುದೇಕೆ
ನಿದ್ದೆ ಮಂಪರಿಸಿದರೆ ನಿದ್ದೆಗೆ ಜಾರೋಣ
ಆಯಾಸಕ್ಕೆ ತುತ್ತಾಗಿದ್ದರೆ ಕುಳ್ಳಿರಿಸೋಣ

ಎಂದಾದರೊಮ್ಮೆ ಇದೇ ಹಾದಿಯಿಂದ
ನನ್ನೆಡೆಗೆ ಯಾರಾದರೂ ಬಂದು ಸಂತೈಸಬಹುದು
ಮರಳಿ ಎಚ್ಚರಿಸಿ ತನ್ನೊಡನೆಯೇ
ಅಂತಿಮ ಗುರಿಯೆಡೆಗೆ
ಕರೆದೊಯ್ಯಬಹುದು

ಎಂದಾದರೊಮ್ಮೆ ಯಾರಾದರೂ ಬರುವರು.

ಅಡಿ ಟಿಪ್ಪಣಿ

1) ’ಮನೋ-ಸಲ್ವಾ’ ಎಂಬುದು ಖುರಾನ್‌ನಲ್ಲಿ ಉಲ್ಲೇಖಗೊಂಡಿರುವ ಪದ. ಪ್ರವಾದಿ ಮೂಸಾ ಅವರ ಕಾಲದಲ್ಲಿ ಭೀಕರವಾದ ಬರಗಾಲ ಬಂದಿತ್ತು. ಮೂಸಾ ಅವರು ಅಲ್ಹಾಗೆ ಪ್ರಾರ್ಥಿಸಿದಾಗ ಸ್ವರ್ಗದಿಂದ ಜನರ ಹಸಿವನ್ನು ತಣಿಸುವ ಸಲುವಾಗಿ ಜೇನಿನಂತೆ ಸಿಹಿಯಾಗಿರುವ ಮತ್ತು ಹಾಲಿನಂತೆ ಬೆಳ್ಳಗಾಗಿರುವ ಪದಾರ್ಥವನ್ನು ಭೂಮಿಗೆ ಕಳುಹಿಸಲಾಯಿತು. ಇದರ ಜೊತೆಗೆ Quail (ಕ್ವೇಲ್) ಎಂಬ ಪಕ್ಷಿಯನ್ನು ಕಳುಹಿಸಲಾಗಿತ್ತು. ಸಾಂಕೇತಿಕವಾಗಿ ಇದೊಂದು ಅಲ್ಹಾನ ವರದಾನ ಎಂದೇ ಭಾವಿಸಲಾಗಿದೆ.

2) ಇರಾನ್‌ನಲ್ಲಿ ಅತಿ ಎತ್ತರವಾದ ಪರ್ವತವೇ ಅಲ್ವಂದ್.

ಮೂಲ ಉರ್ದು : ಖಲೀಲ್ ಮಾಮೂನ್
ಅನುವಾದ : ಡಾ. ತಸ್ನೀಮ್ ತಾಜ್


ಇದನ್ನೂ ಓದಿ: ನಾವೂ ನೋಡುತ್ತೇವೆ, ಸಾಕ್ಷಿಯಾಗುತ್ತೇವೆ: ಈ ದುರಿತ ಕಾಲದಲ್ಲಿ ಮತ್ತೆ ನೆನಪಾಗುವ ಫೈಜ್‌ ಕವನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...