Homeಕರ್ನಾಟಕಮನೆ ಮುಂದೆ ಕಾರು ಪಾರ್ಕಿಂಗ್‌ಗೆ ವಾರ್ಷಿಕ 5000/- ವರೆಗೆ ಶುಲ್ಕ: ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ

ಮನೆ ಮುಂದೆ ಕಾರು ಪಾರ್ಕಿಂಗ್‌ಗೆ ವಾರ್ಷಿಕ 5000/- ವರೆಗೆ ಶುಲ್ಕ: ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ

ಮನೆ ಮುಂದೆ ಸಣ್ಣ ಕಾರು ಪಾರ್ಕಿಂಗ್‌ಗೆ ವಾರ್ಷಿಕ 1000 ರೂ ಮತ್ತು ದೊಡ್ಡ ಕಾರುಗಳಿಗೆ 5000 ರೂವರೆಗೆ ಶುಲ್ಕ ವಿಧಿಸುವುದಾಗಿ ಸರ್ಕಾರ ಘೋಷಿಸಿದೆ.

- Advertisement -
- Advertisement -

ರಾಜ್ಯ ಸರ್ಕಾರ ಪಾರ್ಕಿಂಗ್ 2.0 ನೀತಿ ಜಾರಿಗೆ ತರಲು ಉದ್ದೇಶಿಸಿದ್ದು, ರಸ್ತೆ ಬದಿ ಪಾರ್ಕಿಂಗ್‌ಗೆ ದುಬಾರಿ ಶುಲ್ಕ, ಮನೆ ಮುಂದೆ ಪಾರ್ಕಿಂಗ್‌ಗೆ ಸಹ ಶುಲ್ಕ ವಿಧಿಸಲು ಹೊರಟಿದೆ. ಹೊಸ ವಾಹನ ಖರೀದಿಗೆ ವಾಹನ ನಿಲುಗಡೆ ಪರವಾನಗಿ ಕಡ್ಡಾಯಗೊಳಿಸಿದ್ದು ಆರು ತಿಂಗಳಿನಿಂದ ವರ್ಷದೊಳಗೆ ಈ ನಿಯಮಗಳನ್ನು ಜಾರಿಗೊಳಿವುದಾಗಿ ತಿಳಿಸಿದೆ.

ಮನೆ ಮುಂದೆ ಸಣ್ಣ ಕಾರು ಪಾರ್ಕಿಂಗ್‌ಗೆ ವಾರ್ಷಿಕ 1000 ರೂ ಮತ್ತು ದೊಡ್ಡ ಕಾರುಗಳಿಗೆ 5000 ರೂವರೆಗೆ ಶುಲ್ಕ ವಿಧಿಸುವುದಾಗಿ ಸರ್ಕಾರ ಘೋಷಿಸಿದೆ. ನಗರ ಭೂಸಾರಿಗೆ ನಿರ್ದೇಶನಾಲಯ ಮತ್ತು ಬಿಬಿಎಂಪಿ ಜಂಟಿಯಾಗಿ ಇದನ್ನು ಅನುಷ್ಠಾನಗೊಳಿಸುವ ಹೊಣೆ ಹೊತ್ತಿವೆ.

ಸರ್ಕಾರದ ಈ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ವಾಹನ ಕೊಳ್ಳುವಾಗಲೇ ತೆರಿಗೆ ಕಟ್ಟಿರುತ್ತೇವೆ ಹಾಗಿದ್ದೂ ಮತ್ತೆ ಮತ್ತೆ ಶುಲ್ಕ ಸಂಗ್ರಹಿಸುವ ಮೂಲಕ ಸರ್ಕಾರ ಹಗಲು ದರೋಡೆಗಿಳಿದಿದೆ ಎಂದು ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ರಸ್ತೆ ಬದಿ ವಾಹನ ನಿಲುಗಡೆಗೆ ದುಬಾರಿ ಶುಲ್ಕ ವಿಧಿಸಲು ಹೊರಟಿರುವ ಬಿಬಿಎಂಪಿಯ ಅವೈಜ್ಞಾನಿಕ ನಿರ್ಧಾರವನ್ನು ಆಮ್ ಆದ್ಮಿ ಪಕ್ಷ ತೀವ್ರವಾಗಿ ಖಂಡಿಸುತ್ತದೆ. ಸರಿಯಾದ ಮೂಲ ಸೌಕರ್ಯಗಳನ್ನೇ ನೀಡದೆ ತರಲು ಹೊರಟಿರುವ ಈ ನಿರ್ಧಾರ ಮೂರ್ಖತನದ್ದು, ಜನರನ್ನು ಸುಲಿಗೆ ಮಾಡಲು ನಿಂತಿದೆ ಎಂದು ಆಮ್ ಆದ್ಮಿ ಪಕ್ಷದ ಮುಖ್ಯ ವಕ್ತಾರ ಶರತ್ ಖಾದ್ರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರ್ವಜನಿಕ ರಸ್ತೆಗಳಲ್ಲಿ ಬೇಕಾಬಿಟ್ಟಿಯಾಗಿ ವಾಹನ ನಿಲುಗಡೆ ಮಾಡುತ್ತಿರುವುದು ವಾಸ್ತವ. ಈ ಸಮಸ್ಯೆಗಳಿಗೆ ಬಿಬಿಎಂಪಿಯ ವೈಫಲ್ಯವೇ ಕಾರಣ, ಏಕೆಂದರೆ ರಸ್ತೆ ಬದಿಗಳಲ್ಲಿ ಅನಧಿಕೃತ ಕಟ್ಟಡಗಳು ನಿರ್ಮಾಣವಾಗುವ ತನಕ ಕಣ್ಣು ಮುಚ್ಚಿಕೊಂಡು ಕೂತ ಕಾರಣ ಇಂದು ಈ ಸಮಸ್ಯೆಯನ್ನು ಎದುರಿಸಬೇಕಿದೆ. ದೊಡ್ಡ ದೊಡ್ಡ ಕಟ್ಟಡಗಳು ತಮ್ಮ ನೆಲ ಅಂತಸ್ತಿನಲ್ಲಿ ವಾಹನ ನಿಲುಗಡೆಗೆ ಅವಕಾಶ ನೀಡಲೇ ಬೇಕು ಎನ್ನುವ ನಿಯಮವಿದೆ. ನೆಲ ಮಾಳಿಗೆಯಲ್ಲೂ ಬಾಡಿಗೆಗೆ ಮಳಿಗೆಗಳನ್ನು ನೀಡಿ ನಿಯಮ ಉಲ್ಲಂಘಿಸುತ್ತಿರುವವರ ವಿರುದ್ದ ಬಿಬಿಎಂಪಿ ಇದುವರೆಗೂ ಯಾವ ಕ್ರಮ ತೆಗೆದುಕೊಂಡ ಉದಾಹರಣೆ ಇಲ್ಲ ಎಂದು ಹೇಳಿದ್ದಾರೆ.

ಶುಲ್ಕ ಪಾವತಿ ಮಾಡಿ ರಸ್ತೆ ಬದಿ ವಾಹನ ನಿಲ್ಲಿಸುವ ನಿಯಮದಿಂದ ರಸ್ತೆಗಳ ಮೇಲಿನ ಒತ್ತಡ ಕಡಿಮೆ ಆಗುತ್ತದೆ ಎನ್ನುವುದು ಸದ್ಯಕ್ಕೆ ದೂರವಾದ ಮಾತು. ಇದು ಜನರನ್ನು ಹೆದರಿಸಿ ಬೆದರಿಸಿ ಹಣ ವಸೂಲಿ ಮಾಡುವ ತಂತ್ರ, ಸಮಸ್ಯೆಯನ್ನು ನಿಜವಾಗಿ ಬಗೆಹರಿಸುವ ಯಾವುದೇ ಆಲೋಚನೆ ಬಿಬಿಎಂಪಿಗೆ ಇಲ್ಲ ಎಂದು ಕಿಡಿಕಾರಿದ್ದಾರೆ.

ಸರಕು ಸಾಗಣೆ ಲಾರಿಗಳು ಸೇರಿದಂತೆ ಇತರೇ ವಾಣಿಜ್ಯ ಉದ್ದೇಶಕ್ಕೆ ಬಳಸುತ್ತಿರುವ ವಾಹನಗಳಿಂದ ರಸ್ತೆಗಳ ಮೇಲೆ ಹೆಚ್ಚು ಹೊರೆಯಾಗುತ್ತಿದೆ. ಇಂತಹ ವಾಹನಗಳ ಮಾಲೀಕರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿದರೆ ಸಮಸ್ಯೆ ನಿವಾರಣೆಯಾಗುತ್ತದೆ ಹಾಗೂ ವಾಹನ ನಿಲುಗಡೆಗೆ ಪ್ರತ್ಯೇಕ ಡಿಪೋ ಸ್ಥಾಪನೆ, ಬಿಬಿಎಂಪಿಯಿಂದ ಪಾರ್ಕಿಂಕ್ ಲಾಟ್‌ಗಳನ್ನು ಸ್ಥಾಪಿಸದ ಹೊರತು ಈ ಸಮಸ್ಯೆಗೆ ಶಾಶ್ವತ ಪರಿಹಾರ ದೊರಕುವುದು ಅಸಾಧ್ಯ ಎಂದರು.

ಕಟ್ಟಡ ನಿರ್ಮಾಣ ಮಾಡುವಾಗಲೇ ವಾಹನ ನಿಲುಗಡೆಗೂ ಸೂಕ್ತ ಸ್ಥಳವಾಕಾಶ ಬಿಡದ ಕಟ್ಟಡಗಳಿಗೂ ಅನುಮತಿ ನೀಡಿದ ಬಿಬಿಎಂಪಿ ತನ್ನ ವೈಫಲ್ಯವನ್ನು ಜನರ ಮೇಲೆ ಹಾಕಲು ಹೊರಟಿದೆ. ಈ ಕೂಡಲೇ ತನ್ನ ಅವೈಜ್ಞಾನಿಕ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದ್ದಾರೆ.

ಈ ಹಿಂದೆ ಬಿಬಿಎಂಪಿ ಮನೆ ಮನೆಯಲ್ಲಿ ಕಸಕ್ಕೂ ಶುಲ್ಕ ವಿಧಿಸಲು ಹೊರಟಿತ್ತು. ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಅದನ್ನು ಕೈಬಿಟ್ಟಿತು. ಈಗ ವಾಹನ ಪಾರ್ಕಿಂಗ್‌ಗೆ ಶುಲ್ಕ ವಿಧಿಸಲು ಹೊರಟಿದೆ. ಇದನ್ನು ಸಾರ್ವಜನಿಕರು ಯಾವ ರೀತಿ ಸ್ವೀಕರಿಸುತ್ತಾರೆ ಕಾದು ನೋಡಬೇಕಿದೆ.


ಇದನ್ನೂ ಓದಿ: ಯತ್ನಾಳ್‌ಗೆ ನೋಟಿಸ್: 15 ದಿನದಲ್ಲಿ ಉತ್ತರಿಸುವಂತೆ ಬಿಜೆಪಿ ಹೈಕಮಾಂಡ್ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...