Homeಮುಖಪುಟರೈತ ಹೋರಾಟ 80ನೇ ದಿನಕ್ಕೆ: ಪ್ರೊ ಎಂ.ಡಿ ನಂಜುಂಡಸ್ವಾಮಿಯವರನ್ನು ನೆನೆದ ರೈತ ಒಕ್ಕೂಟ

ರೈತ ಹೋರಾಟ 80ನೇ ದಿನಕ್ಕೆ: ಪ್ರೊ ಎಂ.ಡಿ ನಂಜುಂಡಸ್ವಾಮಿಯವರನ್ನು ನೆನೆದ ರೈತ ಒಕ್ಕೂಟ

ಆಹಾರದ ಹೆಸರಿನಲ್ಲಿ ಮತ್ತು ರೈತರ ಹಣದಲ್ಲಿ ಕಾರ್ಪೊರೇಟ್‌ಗಳು ಲಾಭ ಗಳಿಸಲು ಅವಕಾಶ ನೀಡುವುದಿಲ್ಲ. ಹಸಿವು ವ್ಯಾಪಾರವಲ್ಲ.

- Advertisement -
- Advertisement -

“ಕರ್ನಾಟಕ ರಾಜ್ಯ ರೈತ ಸಂಘದ ಸಂಸ್ಥಾಪಕರಾದ ಪ್ರೊ.ಎಂ.ಡಿ ನಂಜುಂಡಸ್ವಾಮಿಯವರ ಜನ್ಮದಿನದ ಪ್ರಯುಕ್ತ (ಫೆಬ್ರವರಿ 13) ಅವರ ಆಶಯದಂತೆ ರೈತರ ಹಕ್ಕುಗಳನ್ನು ಎತ್ತಿಹಿಡಿದು, ಪ್ರಗತಿಪರ, ನ್ಯಾಯಸಮ್ಮತ ಮತ್ತು ನ್ಯಾಯಯುತ ಸಮಾಜದ ನಿರ್ಮಾಣಕ್ಕಾಗಿ ಈ ಹೋರಾಟವನ್ನು ಇನ್ನಷ್ಟು ಮುಂದೆ ಸಾಗಿಸುವ ಕೆಲಸವನ್ನು ಮಾಡುತ್ತೇವೆ” ಎಂದು ಸಂಯುಕ್ತ ಕಿಸಾನ್ ಮೋರ್ಚಾ (SKM) ಪುನರುಚ್ಚರಿಸಿದೆ.

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಮತ್ತು ಕನಿಷ್ಟ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ದೆಹಲಿಯ ಗಡಿಗಳಲ್ಲಿ ಲಕ್ಷಾಂತರ ರೈತರು ನಡೆಸುತ್ತಿರುವ ಪ್ರತಿಭಟನೆ 80ನೇ ದಿನಕ್ಕೆ ಕಾಲಿಟ್ಟಿದೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ SKM, “ದೇಶದೆಲ್ಲೆಡೆ ಪ್ರಬಲವಾಗಿ ನಡೆಯುತ್ತಿರುವ ರೈತ ಮಹಾಪಂಚಾಯತ್‌ಗಳು ರೈತರ ಹೋರಾಟಕ್ಕೆ ಭಾರೀ ಪ್ರಮಾಣದ ಬೆಂಬಲವನ್ನು ನೀಡುತ್ತಿವೆ. ಇಂದು ಬಿಲಾರಿ ಮತ್ತು ಬಹದ್ದೂರ್‌ಗಡ್‌ನಲ್ಲಿ ಸಾವಿರಾರು ರೈತರು ಭಾಗವಹಿಸಿದ್ದರು” ಎಂದು ಹೇಳಿದೆ.

ಇದನ್ನೂ ಓದಿ: ಗೆದ್ದೇ ಮನೆಗೆ ತೆರಳುತ್ತೇವೆ, ಇಲ್ಲವೆಂದರೆ ತ್ರಿವರ್ಣ ಧ್ವಜದಲ್ಲಿ ನಮ್ಮ ಮೃತದೇಹ ಹೋಗಲಿವೆ!

“ಆಹಾರದ ಹೆಸರಿನಲ್ಲಿ ಮತ್ತು ರೈತರ ಹಣದಲ್ಲಿ ಕಾರ್ಪೊರೇಟ್‌ಗಳು ಲಾಭ ಗಳಿಸಲು ಅವಕಾಶ ನೀಡುವುದಿಲ್ಲ. ಹಸಿವು ವ್ಯಾಪಾರವಲ್ಲ. ಹೀಗೆ ಯೋಚಿಸುವ ಸರ್ಕಾರಗಳು ಮತ್ತು ಕಾರ್ಪೊರೇಟ್‌ಗಳಿಗೆ ಇದು ಅವಮಾನ” ಎಂದು ಮಹಾಪಂಚಾಯತ್‌ನಲ್ಲಿ SKM ನಾಯಕರು ಅಭಿಪ್ರಾಯ ವ್ಯಕ್ತಪಡಿಸಿದರು.

“ಈವರೆಗೆ 228 ಪ್ರತಿಭಟನಾಕಾರರು ತಮ್ಮ ಪ್ರಾಣ ತ್ಯಾಗ ಮಾಡಿ ಈ ಆಂದೋಲನದಲ್ಲಿ ಹುತಾತ್ಮರಾಗಿದ್ದಾರೆ. ಈ ಹುತಾತ್ಮರ ಕುಟುಂಬಗಳಿಗೆ ಬೆಂಬಲವನ್ನು ನೀಡುವ ಯಾವುದೇ ಯೋಜನೆಯೂ ಇಲ್ಲ ಎಂದು ಸರ್ಕಾರವು ಸಂಸತ್ತಿನಲ್ಲಿ ಒಪ್ಪಿಕೊಂಡಿರುವುದು ನಾಚಿಕೆಗೇಡಿನ ಸಂಗತಿ. ಹುತಾತ್ಮರಾದ ಜೀವಗಳಿಗೆ ಸರ್ಕಾರವನ್ನೇ ದೂಷಿಸಬೇಕಾಗಿದೆ. ಪ್ರತಿಭಟನಾಕಾರರ ನ್ಯಾಯಸಮ್ಮತ ಬೇಡಿಕೆಗಳಿಗೆ ಸರ್ಕಾರ ಒಪ್ಪುವುದಕ್ಕೆ ಇನ್ನೂ ಎಷ್ಟು ಜೀವಗಳನ್ನು ತ್ಯಾಗ ಮಾಡಬೇಕು. ನಾವು ಸರ್ಕಾರದ ಅಸೂಕ್ಷ್ಮತೆಯನ್ನು ಖಂಡಿಸುತ್ತೇವೆ” ಎಂದು SKM ತನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಬ್ಯಾರಿಕೇಡ್‌ಗಳನ್ನು ತೆಗೆಯಿರಿ, ಬಂಧಿಸಿರುವ ರೈತರನ್ನು ಬಿಡುಗಡೆಗೊಳಿಸಿ: ಅಂತರರಾಷ್ಟ್ರೀಯ ನ್ಯಾಯಶಾಸ್ತ್ರಜ್ಞರ ಆಯೋಗ

“ಬಲಗೊಳ್ಳುತ್ತಿರುವ ಚಳವಳಿಯನ್ನು ಕಂಡು ಸರ್ಕಾರ ಹೆದರುತ್ತಿದೆ. ಹಾಗಾಗಿ ನಾಗರೀಕರ ಮತ್ತು ಪ್ರಜಾಪ್ರಭುತ್ವದ ಧ್ವನಿಯನ್ನು ಅಡಗಿಸಲು ಸರ್ಕಾರ ಪ್ರಯತ್ನಿಸುತ್ತಿದೆ. ಚಳವಳಿಯ ತೀವ್ರತೆಗೆ ಬೆಂಬಲವಾಗಿ ನಿಂತಿರುವ ಮಾಧ್ಯಮಗಳ ಮೇಲೆ ಸರ್ಕಾರ ನಿರಂತರವಾಗಿ ದಾಳಿ ಮಾಡುತ್ತಿದೆ. ಇದಕ್ಕೆ ಇತ್ತೀಚಿನ ಉದಾಹರಣೆ ನ್ಯೂಸ್‌ ಕ್ಲಿಕ್ ಮೇಲೆ ನಡೆದ ದಾಳಿಯಾಗಿದೆ. ಇದನ್ನು SKM ಖಂಡಿಸುತ್ತದೆ” ಎಂದು ತನ್ನ ಹೇಳಿಕೆಯನ್ನು ಬಿಡುಗಡೆ ಮಾಡಿದೆ.

“ಬಿಜೆಪಿ ಸರ್ಕಾರದ ಹುಸಿ ರಾಷ್ಟ್ರೀಯತೆಯನ್ನು ಬಹಿರಂಗಪಡಿಸಲು ಮತ್ತು ಮಾಧ್ಯಮ ಮಿತ್ರರಿಬ್ಬರ ವಾಟ್ಸಾಪ್‌ ಚಾಟ್‌ನಿಂದ ಸೋರಿಕೆಯಾದ ರಕ್ಷಣಾ ರಹಸ್ಯಗಳ ಹಿನ್ನೆಲೆಯಲ್ಲಿ ಹಾಗೂ ಗಡಿಗಳಲ್ಲಿ ನಿಂತು ನಮ್ಮೆಲ್ಲರನ್ನೂ ರಕ್ಷಿಸುತ್ತಿರುವ ನಮ್ಮ ಸೈನಿಕರನ್ನು ನಾವು ನಿಜವಾಗಿಯೂ ಗೌರವಿಸುತ್ತೇವೆ ಎಂಬುದನ್ನು ತೋರಿಸಲು ಫೆಬ್ರವರಿ 14 ರಂದು ವಿಶಿಷ್ಟ ಕಾರ್ಯಕ್ರಮವೊಂದನ್ನು ಹಮ್ಮಿಕೊಂಡಿದ್ದೇವೆ. ಟಾರ್ಚ್ ಲೈಟ್ ಮತ್ತು ಕ್ಯಾಂಡಲ್ ಲೈಟ್ ಮೆರವಣಿಗೆಯನ್ನು ದೇಶದಾದ್ಯಂತ ಪ್ರತಿ ನಗರ ಮತ್ತು ಹಳ್ಳಿಗಳಲ್ಲಿಯೂ ಆಯೋಜಿಸಲಾಗುವುದು. ಈ ಮೂಲಕ ಚಳವಳಿಯಲ್ಲಿ ಹುತಾತ್ಮರಾದ ರೈತರಿಗೆ ಗೌರವ ಸಲ್ಲಿಸಲಾಗುವುದು. ರೈತರ ಚಳವಳಿಯ ಧ್ಯೇಯವಾಕ್ಯವಾದ ಜೈ ಜವಾನ್-ಜೈಕಿಸಾನ್ ಘೋಷಣೆಯನ್ನು ಪುನರುಚ್ಚರಿಸಲಾಗುವುದು” ಎಂದು SKM ತೀರ್ಮಾನಿಸಿದೆ.


ಇದನ್ನೂ ಓದಿ: ನಮ್ಮ ಅನ್ನದಾತರ ಹೋರಾಟಕ್ಕೆ ಜಯವಾಗಲಿ: ತಿಂಗಳ ಹಿಂದಿನ ನಾಸಿರುದ್ದೀನ್‌ ಶಾ ವಿಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...