Homeಮುಖಪುಟಬಿಜೆಪಿಯ ರಾಗಗಳಿಗೆ ರಾಜ್ಯಪಾಲರನ್ನು ನೃತ್ಯ ಮಾಡಿಸಲಾಗುತ್ತಿದೆ: ಶಿವಸೇನೆ

ಬಿಜೆಪಿಯ ರಾಗಗಳಿಗೆ ರಾಜ್ಯಪಾಲರನ್ನು ನೃತ್ಯ ಮಾಡಿಸಲಾಗುತ್ತಿದೆ: ಶಿವಸೇನೆ

ಸಂವಿಧಾನವನ್ನು ಎತ್ತಿ ಹಿಡಿಯಬೇಕೆಂದು ಕೇಂದ್ರ ಬಯಸಿದರೆ ಅವರನ್ನು ವಾಪಾಸು ಕರೆಸಿಕೊಳ್ಳಿ ಎಂದು ಹೇಳಿದೆ

- Advertisement -
- Advertisement -

ಮಹಾರಾಷ್ಟ್ರದ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಬಿಜೆಪಿಗೆ ಬದ್ಧರಾಗಿದ್ದು, ಅವರನ್ನು ಬಿಜೆಪಿಯ ರಾಗಗಳಿಗೆ ನೃತ್ಯ ಮಾಡುವಂತೆ ಒತ್ತಾಯಿಸಲಾಗುತ್ತಿದೆ. ಸಂವಿಧಾನವನ್ನು ಎತ್ತಿ ಹಿಡಿಯಬೇಕೆಂದು ಕೇಂದ್ರ ಬಯಸಿದರೆ ಅವರನ್ನು ವಾಪಾಸು ಕರೆಸಿಕೊಳ್ಳಬೇಕೆಂದು, ರಾಜ್ಯದಲ್ಲಿ ಅಧಿಕಾರದಲ್ಲಿರುವ ಮಹಾವಿಕಾಸ್ ಅಘಾಡಿ ಮೈತ್ರಿ ಸರ್ಕಾರದ ಪ್ರಮುಖ ಪಕ್ಷವಾದ ಶಿವಸೇನೆ ಕೇಂದ್ರ ಸರ್ಕಾರಕ್ಕೆ ಶನಿವಾರ ಹೇಳಿದೆ.

ಮಹಾ ವಿಕಾಸ್ ಅಘಾಡಿ ಸರ್ಕಾರವು ಸ್ಥಿರ ಮತ್ತು ದೃಡವಾಗಿದೆ ಎಂದು ಪಕ್ಷವು ಪ್ರತಿಪಾದಿಸಿದೆ. ಕೇಂದ್ರ ಸರ್ಕಾರವು ರಾಜ್ಯ ಸರ್ಕಾರವನ್ನು ಗುರಿಯಾಗಿಸಲು ರಾಜ್ಯಪಾಲರ ಹೆಗಲನ್ನು ಬಳಸಬಾರದು ಎಂದು ಎಚ್ಚರಿಸಿದೆ.

“ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಮತ್ತೆ ಸುದ್ದಿಯಲ್ಲಿದ್ದಾರೆ. ಅವರು ಕಳೆದ ಹಲವು ವರ್ಷಗಳಿಂದ ರಾಜಕೀಯದಲ್ಲಿದ್ದಾರೆ. ಅವರು ಕೇಂದ್ರ ಸಚಿವರಾಗಿದ್ದರು ಮತ್ತು ಉತ್ತರಾಖಂಡದ ಮುಖ್ಯಮಂತ್ರಿಯಾಗಿದ್ದರು. ಆದಾಗ್ಯೂ, ಅವರು ಮಹಾರಾಷ್ಟ್ರ ರಾಜ್ಯಪಾಲರಾದ ನಂತರ ಅವರು ಸುದ್ದಿಯಲ್ಲಿರುತ್ತಾ ವಿವಾದ ಸೃಷ್ಟಿಸುತ್ತಿದ್ದಾರೆ” ಎಂದು ಶಿವಸೇನೆ ಮುಖವಾಣಿ ‘ಸಾಮ್ನಾ’ ಸಂಪಾದಕೀಯದಲ್ಲಿ ಹೇಳಿದೆ.

ಇದನ್ನೂ ಓದಿ: ಅಮಿತ್‌ ಶಾ ಮಹಾರಾಷ್ಟ್ರ ಭೇಟಿ ಬೆನ್ನಲ್ಲೆ BJP ತೊರೆದು ಶಿವಸೇನೆ ಸೇರಿದ 7 ಕೌನ್ಸಿಲರ್‌ಗಳು

“ಅವರು ಯಾಕೆ ಯಾವಾಗಲೂ ವಿವಾದದಲ್ಲಿತ್ತಾರೆ ಎಂಬುದು ಒಂದು ಪ್ರಶ್ನೆಯಾಗಿದೆ. ಇತ್ತೀಚೆಗೆ ಅವರು ರಾಜ್ಯ ಸರ್ಕಾರದ ವಿಮಾನವನ್ನು ಬಳಸಿದ ಬಗ್ಗೆ ಸುದ್ದಿಯಲ್ಲಿದ್ದರು. ರಾಜ್ಯದ ವಿಮಾನವನ್ನು ಬಳಸಿಕೊಂಡು ರಾಜ್ಯಪಾಲರು ಡೆಹ್ರಾಡೂನ್‌ಗೆ ಹೋಗಲು ಬಯಸಿದ್ದರು. ಆದರೆ ಸರ್ಕಾರ ಅದಕ್ಕೆ ಅನುಮತಿ ನಿರಾಕರಿಸಿತು. ಅವರು ಗುರುವಾರ ಬೆಳಿಗ್ಗೆ ವಿಮಾನದಲ್ಲಿ ಕುಳಿತುಕೊಂಡಿದ್ದರು, ಆದರೆ ವಿಮಾನ ಹಾರಾಟಕ್ಕೆ ಅನುಮೋದನೆ ಇಲ್ಲದ ಕಾರಣ, ಅದರಿಂದ ಇಳಿದು ವಾಣಿಜ್ಯ ವಿಮಾನದ ಮೂಲಕ ಡೆಹ್ರಾಡೂನ್‌ಗೆ ಹೊರಡಬೇಕಾಯಿತು” ಎಂದು ಶಿವಸೇನೆ ಹೇಳಿದೆ.

ಈ ಘಟನೆಯನ್ನುಹಿಡಿದುಕೊಂಡು ಪ್ರತಿಪಕ್ಷ ಬಿಜೆಪಿ ಸಮಸ್ಯೆಯನ್ನು ಸೃಷ್ಟಿಸುತ್ತಿದೆ. ಆದರೆ ವಿಮಾನ ಹಾರಾಟಕ್ಕೆ ಸರ್ಕಾರ ಅನುಮೋದನೆ ನೀಡದಿದ್ದರೂ ರಾಜ್ಯಪಾಲರು ವಿಮಾನದಲ್ಲಿ ಏಕೆ ಕುಳಿತುಕೊಂಡರು ಎಂದು ಶಿವಸೇನೆ ಪ್ರಶ್ನಿಸಿದೆ.

ಅದು ರಾಜ್ಯಪಾಲರ ಖಾಸಗಿ ಪ್ರವಾಸವಾಗಿತ್ತು ಮತ್ತು ಕಾನೂನಿನ ಪ್ರಕಾರ ರಾಜ್ಯಪಾಲರು ಮಾತ್ರವಲ್ಲ, ಮುಖ್ಯಮಂತ್ರಿಯೂ ಸಹ ಅಂತಹ ಉದ್ದೇಶಗಳಿಗಾಗಿ ರಾಜ್ಯ ವಿಮಾನವನ್ನು ಬಳಸಬಾರದು. ಮುಖ್ಯಮಂತ್ರಿಗಳ ಕಚೇರಿ (ಸಿಎಮ್‌ಒ) ಯು ಕಾನೂನಿನ ಪ್ರಕಾರ ನಡೆದುಕೊಂಡಿದೆ ಎಂದು ಘಟನೆಯ ಬಗ್ಗೆ ಪಕ್ಷವು ಸಮರ್ಥಿಸಿಕೊಂಡಿದೆ.

ಇದನ್ನೂ ಓದಿ: ‘ಡಿಜಿಟಲ್ ಕುದುರೆಯ ಮೇಲೆ ಕನಸಿನ ಪ್ರವಾಸ’ ಬಜೆಟ್ ಟೀಕಿಸಿದ ಶಿವಸೇನೆ

“ಆದರೆ ಪ್ರತಿಪಕ್ಷದ ನಾಯಕ ದೇವೇಂದ್ರ ಫಡ್ನವಿಸ್ ರಾಜ್ಯ ಸರ್ಕಾರವು ಅಹಂಕಾರಿ ಎಂದು ಆರೋಪಿಸಿದ್ದಾರೆ. ಅಹಂಕಾರದ ರಾಜಕೀಯ ಯಾರು ಮಾಡುತ್ತಿದ್ದಾರೆಂದು ಇಡಿ ದೇಶಕ್ಕೆ ತಿಳಿದಿದೆ. ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಸಂದರ್ಭದಲ್ಲಿ 200 ಕ್ಕೂ ಹೆಚ್ಚು ರೈತರು ಸಾವನ್ನಪ್ಪಿದರೂ, ಸರ್ಕಾರ ಆ ಕಾನೂನುಗಳನ್ನು ಹಿಂತೆಗೆದುಕೊಳ್ಳಲು ಸಿದ್ಧವಾಗಿಲ್ಲ. ಅದು ಅಹಂಕಾರವಲ್ಲವೆ?” ಎಂದು ಶಿವಸೇನೆ ಪ್ರಶ್ನಿಸಿದೆ.

“ರಾಜ್ಯಪಾಲರು ಅಂದಿನ ಸರ್ಕಾರದ ಕಾರ್ಯಸೂಚಿಯನ್ನು ಅನುಸರಿಸಬೇಕು ಹೊರತು ಪ್ರತಿಪಕ್ಷಗಳಲ್ಲ. ರಾಜ್ಯಪಾಲರು ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ” ಎಂದು ಪಕ್ಷವು ಆರೋಪಿಸಿದ್ದು, ತಮ್ಮ ಕೋಟಾದಿಂದ ವಿಧಾನ ಪರಿಷತ್ತಿಗೆ ನಾಮನಿರ್ದೇಶನ ಮಾಡಲು ರಾಜ್ಯ ಸಚಿವ ಸಂಪುಟ ಶಿಫಾರಸು ಮಾಡಿದ 12 ಹೆಸರುಗಳನ್ನು ರಾಜ್ಯಪಾಲರು ಅನುಮೋದಿಸುವಲ್ಲಿನ ವಿಳಂಬವನ್ನೂ ಶಿವಸೇನೆ ಟೀಕಿಸಿದೆ.

ಮಹಾರಾಷ್ಟ್ರದ ರಾಜ್ಯಪಾಲರು ಗೌರವಾನ್ವಿತ ವ್ಯಕ್ತಿ. ಆದರೆ ಅವರ ಸ್ಥಾನದ ಪ್ರತಿಷ್ಠೆಯನ್ನು ಉಳಿಸಿಕೊಳ್ಳುವುದು ಅವರ ಸ್ವಂತ ಜವಾಬ್ದಾರಿಯಾಗಿದೆ. ಆದರೆ, ಅವರನ್ನು ಬಿಜೆಪಿಯ ರಾಗಗಳಿಗೆ ನೃತ್ಯ ಮಾಡಲು ಒತ್ತಾಯಿಸಲಾಗುತ್ತಿದೆ. ಕೇಂದ್ರ ಗೃಹ ಸಚಿವಾಲಯವು ಸಂವಿಧಾನ, ಕಾನೂನುಗಳು ಮತ್ತು ರೂಡಿಗಳನ್ನು ಎತ್ತಿ ಹಿಡಿಯಬೇಕೆಂದು ಬಯಸಿದರೆ, ರಾಜ್ಯಪಾಲರನ್ನು ವಾಪಾಸು ಕರೆಸಿಕೊಳ್ಳಬೇಕೆಂದು ಎಂದು ಶೀವಸೇನೆ ಹೇಳಿದೆ.

ಇದನ್ನೂ ಓದಿ: ರಾಕೇಶ್ ಟಿಕಾಯತ್ ಭೇಟಿಯಾಗಿ ಬೆಂಬಲ ಘೋಷಿಸಿದ ಶಿವಸೇನೆಯ ಸಂಜಯ್ ರಾವತ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...