ಮಹಾರಾಷ್ಟ್ರದ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಬಿಜೆಪಿಗೆ ಬದ್ಧರಾಗಿದ್ದು, ಅವರನ್ನು ಬಿಜೆಪಿಯ ರಾಗಗಳಿಗೆ ನೃತ್ಯ ಮಾಡುವಂತೆ ಒತ್ತಾಯಿಸಲಾಗುತ್ತಿದೆ. ಸಂವಿಧಾನವನ್ನು ಎತ್ತಿ ಹಿಡಿಯಬೇಕೆಂದು ಕೇಂದ್ರ ಬಯಸಿದರೆ ಅವರನ್ನು ವಾಪಾಸು ಕರೆಸಿಕೊಳ್ಳಬೇಕೆಂದು, ರಾಜ್ಯದಲ್ಲಿ ಅಧಿಕಾರದಲ್ಲಿರುವ ಮಹಾವಿಕಾಸ್ ಅಘಾಡಿ ಮೈತ್ರಿ ಸರ್ಕಾರದ ಪ್ರಮುಖ ಪಕ್ಷವಾದ ಶಿವಸೇನೆ ಕೇಂದ್ರ ಸರ್ಕಾರಕ್ಕೆ ಶನಿವಾರ ಹೇಳಿದೆ.
ಮಹಾ ವಿಕಾಸ್ ಅಘಾಡಿ ಸರ್ಕಾರವು ಸ್ಥಿರ ಮತ್ತು ದೃಡವಾಗಿದೆ ಎಂದು ಪಕ್ಷವು ಪ್ರತಿಪಾದಿಸಿದೆ. ಕೇಂದ್ರ ಸರ್ಕಾರವು ರಾಜ್ಯ ಸರ್ಕಾರವನ್ನು ಗುರಿಯಾಗಿಸಲು ರಾಜ್ಯಪಾಲರ ಹೆಗಲನ್ನು ಬಳಸಬಾರದು ಎಂದು ಎಚ್ಚರಿಸಿದೆ.
“ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಮತ್ತೆ ಸುದ್ದಿಯಲ್ಲಿದ್ದಾರೆ. ಅವರು ಕಳೆದ ಹಲವು ವರ್ಷಗಳಿಂದ ರಾಜಕೀಯದಲ್ಲಿದ್ದಾರೆ. ಅವರು ಕೇಂದ್ರ ಸಚಿವರಾಗಿದ್ದರು ಮತ್ತು ಉತ್ತರಾಖಂಡದ ಮುಖ್ಯಮಂತ್ರಿಯಾಗಿದ್ದರು. ಆದಾಗ್ಯೂ, ಅವರು ಮಹಾರಾಷ್ಟ್ರ ರಾಜ್ಯಪಾಲರಾದ ನಂತರ ಅವರು ಸುದ್ದಿಯಲ್ಲಿರುತ್ತಾ ವಿವಾದ ಸೃಷ್ಟಿಸುತ್ತಿದ್ದಾರೆ” ಎಂದು ಶಿವಸೇನೆ ಮುಖವಾಣಿ ‘ಸಾಮ್ನಾ’ ಸಂಪಾದಕೀಯದಲ್ಲಿ ಹೇಳಿದೆ.
ಇದನ್ನೂ ಓದಿ: ಅಮಿತ್ ಶಾ ಮಹಾರಾಷ್ಟ್ರ ಭೇಟಿ ಬೆನ್ನಲ್ಲೆ BJP ತೊರೆದು ಶಿವಸೇನೆ ಸೇರಿದ 7 ಕೌನ್ಸಿಲರ್ಗಳು
“ಅವರು ಯಾಕೆ ಯಾವಾಗಲೂ ವಿವಾದದಲ್ಲಿತ್ತಾರೆ ಎಂಬುದು ಒಂದು ಪ್ರಶ್ನೆಯಾಗಿದೆ. ಇತ್ತೀಚೆಗೆ ಅವರು ರಾಜ್ಯ ಸರ್ಕಾರದ ವಿಮಾನವನ್ನು ಬಳಸಿದ ಬಗ್ಗೆ ಸುದ್ದಿಯಲ್ಲಿದ್ದರು. ರಾಜ್ಯದ ವಿಮಾನವನ್ನು ಬಳಸಿಕೊಂಡು ರಾಜ್ಯಪಾಲರು ಡೆಹ್ರಾಡೂನ್ಗೆ ಹೋಗಲು ಬಯಸಿದ್ದರು. ಆದರೆ ಸರ್ಕಾರ ಅದಕ್ಕೆ ಅನುಮತಿ ನಿರಾಕರಿಸಿತು. ಅವರು ಗುರುವಾರ ಬೆಳಿಗ್ಗೆ ವಿಮಾನದಲ್ಲಿ ಕುಳಿತುಕೊಂಡಿದ್ದರು, ಆದರೆ ವಿಮಾನ ಹಾರಾಟಕ್ಕೆ ಅನುಮೋದನೆ ಇಲ್ಲದ ಕಾರಣ, ಅದರಿಂದ ಇಳಿದು ವಾಣಿಜ್ಯ ವಿಮಾನದ ಮೂಲಕ ಡೆಹ್ರಾಡೂನ್ಗೆ ಹೊರಡಬೇಕಾಯಿತು” ಎಂದು ಶಿವಸೇನೆ ಹೇಳಿದೆ.
ಈ ಘಟನೆಯನ್ನುಹಿಡಿದುಕೊಂಡು ಪ್ರತಿಪಕ್ಷ ಬಿಜೆಪಿ ಸಮಸ್ಯೆಯನ್ನು ಸೃಷ್ಟಿಸುತ್ತಿದೆ. ಆದರೆ ವಿಮಾನ ಹಾರಾಟಕ್ಕೆ ಸರ್ಕಾರ ಅನುಮೋದನೆ ನೀಡದಿದ್ದರೂ ರಾಜ್ಯಪಾಲರು ವಿಮಾನದಲ್ಲಿ ಏಕೆ ಕುಳಿತುಕೊಂಡರು ಎಂದು ಶಿವಸೇನೆ ಪ್ರಶ್ನಿಸಿದೆ.
ಅದು ರಾಜ್ಯಪಾಲರ ಖಾಸಗಿ ಪ್ರವಾಸವಾಗಿತ್ತು ಮತ್ತು ಕಾನೂನಿನ ಪ್ರಕಾರ ರಾಜ್ಯಪಾಲರು ಮಾತ್ರವಲ್ಲ, ಮುಖ್ಯಮಂತ್ರಿಯೂ ಸಹ ಅಂತಹ ಉದ್ದೇಶಗಳಿಗಾಗಿ ರಾಜ್ಯ ವಿಮಾನವನ್ನು ಬಳಸಬಾರದು. ಮುಖ್ಯಮಂತ್ರಿಗಳ ಕಚೇರಿ (ಸಿಎಮ್ಒ) ಯು ಕಾನೂನಿನ ಪ್ರಕಾರ ನಡೆದುಕೊಂಡಿದೆ ಎಂದು ಘಟನೆಯ ಬಗ್ಗೆ ಪಕ್ಷವು ಸಮರ್ಥಿಸಿಕೊಂಡಿದೆ.
ಇದನ್ನೂ ಓದಿ: ‘ಡಿಜಿಟಲ್ ಕುದುರೆಯ ಮೇಲೆ ಕನಸಿನ ಪ್ರವಾಸ’ ಬಜೆಟ್ ಟೀಕಿಸಿದ ಶಿವಸೇನೆ
“ಆದರೆ ಪ್ರತಿಪಕ್ಷದ ನಾಯಕ ದೇವೇಂದ್ರ ಫಡ್ನವಿಸ್ ರಾಜ್ಯ ಸರ್ಕಾರವು ಅಹಂಕಾರಿ ಎಂದು ಆರೋಪಿಸಿದ್ದಾರೆ. ಅಹಂಕಾರದ ರಾಜಕೀಯ ಯಾರು ಮಾಡುತ್ತಿದ್ದಾರೆಂದು ಇಡಿ ದೇಶಕ್ಕೆ ತಿಳಿದಿದೆ. ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಸಂದರ್ಭದಲ್ಲಿ 200 ಕ್ಕೂ ಹೆಚ್ಚು ರೈತರು ಸಾವನ್ನಪ್ಪಿದರೂ, ಸರ್ಕಾರ ಆ ಕಾನೂನುಗಳನ್ನು ಹಿಂತೆಗೆದುಕೊಳ್ಳಲು ಸಿದ್ಧವಾಗಿಲ್ಲ. ಅದು ಅಹಂಕಾರವಲ್ಲವೆ?” ಎಂದು ಶಿವಸೇನೆ ಪ್ರಶ್ನಿಸಿದೆ.
“ರಾಜ್ಯಪಾಲರು ಅಂದಿನ ಸರ್ಕಾರದ ಕಾರ್ಯಸೂಚಿಯನ್ನು ಅನುಸರಿಸಬೇಕು ಹೊರತು ಪ್ರತಿಪಕ್ಷಗಳಲ್ಲ. ರಾಜ್ಯಪಾಲರು ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ” ಎಂದು ಪಕ್ಷವು ಆರೋಪಿಸಿದ್ದು, ತಮ್ಮ ಕೋಟಾದಿಂದ ವಿಧಾನ ಪರಿಷತ್ತಿಗೆ ನಾಮನಿರ್ದೇಶನ ಮಾಡಲು ರಾಜ್ಯ ಸಚಿವ ಸಂಪುಟ ಶಿಫಾರಸು ಮಾಡಿದ 12 ಹೆಸರುಗಳನ್ನು ರಾಜ್ಯಪಾಲರು ಅನುಮೋದಿಸುವಲ್ಲಿನ ವಿಳಂಬವನ್ನೂ ಶಿವಸೇನೆ ಟೀಕಿಸಿದೆ.
ಮಹಾರಾಷ್ಟ್ರದ ರಾಜ್ಯಪಾಲರು ಗೌರವಾನ್ವಿತ ವ್ಯಕ್ತಿ. ಆದರೆ ಅವರ ಸ್ಥಾನದ ಪ್ರತಿಷ್ಠೆಯನ್ನು ಉಳಿಸಿಕೊಳ್ಳುವುದು ಅವರ ಸ್ವಂತ ಜವಾಬ್ದಾರಿಯಾಗಿದೆ. ಆದರೆ, ಅವರನ್ನು ಬಿಜೆಪಿಯ ರಾಗಗಳಿಗೆ ನೃತ್ಯ ಮಾಡಲು ಒತ್ತಾಯಿಸಲಾಗುತ್ತಿದೆ. ಕೇಂದ್ರ ಗೃಹ ಸಚಿವಾಲಯವು ಸಂವಿಧಾನ, ಕಾನೂನುಗಳು ಮತ್ತು ರೂಡಿಗಳನ್ನು ಎತ್ತಿ ಹಿಡಿಯಬೇಕೆಂದು ಬಯಸಿದರೆ, ರಾಜ್ಯಪಾಲರನ್ನು ವಾಪಾಸು ಕರೆಸಿಕೊಳ್ಳಬೇಕೆಂದು ಎಂದು ಶೀವಸೇನೆ ಹೇಳಿದೆ.
ಇದನ್ನೂ ಓದಿ: ರಾಕೇಶ್ ಟಿಕಾಯತ್ ಭೇಟಿಯಾಗಿ ಬೆಂಬಲ ಘೋಷಿಸಿದ ಶಿವಸೇನೆಯ ಸಂಜಯ್ ರಾವತ್!