Homeಚಳವಳಿಅವರು ಮನೆಯಲ್ಲಿದ್ದರೂ ಸಾಯುತ್ತಿದ್ದರು: ರೈತರ ಸಾವಿನ ಬಗ್ಗೆ ನಾಲಗೆ ಹರಿಯ ಬಿಟ್ಟ ಹರಿಯಾಣ ಕೃಷಿ ಸಚಿವ

ಅವರು ಮನೆಯಲ್ಲಿದ್ದರೂ ಸಾಯುತ್ತಿದ್ದರು: ರೈತರ ಸಾವಿನ ಬಗ್ಗೆ ನಾಲಗೆ ಹರಿಯ ಬಿಟ್ಟ ಹರಿಯಾಣ ಕೃಷಿ ಸಚಿವ

ಕೆಲವು ರೈತರು ಸಹಾನುಭೂತಿಗಾಗಿ ಮತ್ತು ಕೆಲವರು ಜಾತಿಯ ಕಾರಣಕ್ಕಾಗಿ ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನನ್ನು ವಿರೋಧಿಸಿ ನಡೆಯುತ್ತಿರುವ ಹೋರಾಟದಲ್ಲಿ ಹಲವಾರು ರೈತರು ಸಾವನ್ನಪ್ಪಿದ್ದಾರೆ. ಈ ರೈತರ ಕುರಿತ ಪ್ರಶ್ನೆಗಳಿಗೆ ಹರಿಯಾಣ ಕೃಷಿ ಸಚಿವ ಜೆ.ಪಿ. ದಲಾಲ್, ಅವರು ಮನೆಯಲ್ಲಿದ್ದರೂ ಸಾಯುತ್ತಿದ್ದರು. ಕೆಲವು ರೈತರು ಸಹಾನುಭೂತಿಗಾಗಿ ಮತ್ತು ಕೆಲವರು ಜಾತಿಯ ಕಾರಣದಿಂದಾಗಿ ತಮ್ಮ ಪ್ರಾಣವನ್ನು ಕಳೆದುಕೊಂಡರು ಎಂದು ಉತ್ತರಿಸಿ ವಿವಾದಕ್ಕೊಳಗಾಗಿದ್ದಾರೆ.

ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ಆಂದೋಲನದಲ್ಲಿ ವಿವಿಧ ಕಾರಣಗಳಿಂದ ಸುಮಾರು 200 ರೈತರು ಪ್ರಾಣ ಕಳೆದುಕೊಂಡಿದ್ದಾರೆ. ಈ ಬಗ್ಗೆ ಮಾದ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಅವರು (ರೈತರು) ಮನೆಯಲ್ಲಿಯೂ ಸಾಯುತ್ತಿದ್ದರು. ಅವರು ಇಲ್ಲಿ ಸಾಯುತ್ತಿಲ್ಲವೇ? ನನ್ನ ಮಾತುಗಳನ್ನು ಕೇಳಿ, ಒಂದೆರೆರಡು ಲಕ್ಷ ಜನರಲ್ಲಿ, ಆರು ತಿಂಗಳಲ್ಲಿ 200 ಮಂದಿ ಸಾಯುದಿಲ್ಲವೇ? ಕೆಲವರು ಹೃದಯಾಘಾತದಿಂದ ಸಾವಿಗೀಡಾದರು, ಕೆಲವರು ಜ್ವರದಿಂದ ಸಾವಿಗೀಡಾದರು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮೋದಿ ಸತ್ಯ ಒಪ್ಪಿಕೊಂಡಿದ್ದಾರೆ, ಹಾಗೆಯೆ ಕಾಯ್ದೆ ವಾಪಸ್ ಪಡೆಯಲಿ: ದರ್ಶನ್ ಪಾಲ್

“ಒಂದು ವಿಷಯ ಹೇಳಿ, ಭಾರತದಲ್ಲಿ ಸರಾಸರಿ ಜೀವಿತಾವಧಿ ಎಷ್ಟು ಮತ್ತು ವರ್ಷದಲ್ಲಿ ಎಷ್ಟು ಮಂದಿ ಸಾಯುತ್ತಾರೆ. 135 ಕೋಟಿ ಜನರಲ್ಲಿ ಪ್ರತಿಯೊಬ್ಬ ನಾಗರಿಕನ ಸಾವಿಗೆ ನನ್ನ ಸಹಾನುಭೂತಿಯಿದೆ. ಭಾರತವು ಒಂದೇ ಆಗಿದ್ದು, ಪ್ರತಿಯೊಬ್ಬ ಭಾರತೀಯನ ಹಕ್ಕುಗಳು ಒಂದೇ” ಎಂದು ಹೇಳಿದ್ದಾರೆ.

ಆಂದೋಲನದ ಸಮಯದಲ್ಲಿ ರೈತರು ಪ್ರಾಣ ಕಳೆದುಕೊಂಡ ರೀತಿ ಕುರಿತು ಮಾಧ್ಯಮಗಳ ಪ್ರಶ್ನೆಗಳಿಗೆ ದಲಾಲ್, “ಅವರು ಯಾವುದೇ ಅಪಘಾತದಲ್ಲಿ ಸಾಯಲಿಲ್ಲ, ಅವರು ತಮ್ಮ ಸ್ವಂತ ಇಚ್ಛೆಯಿಂದ ಸಾವನ್ನಪ್ಪಿದರು…. ಅವರಿಗೆ ನನ್ನ ಸಂತಾಪವನ್ನು ಅರ್ಪಿಸುತ್ತೇನೆ. ಕೆಲವರು ಸಹಾನುಭೂತಿಗಾಗಿ ಮತ್ತು ಕೆಲವರು ಜಾತಿಯ ಕಾರಣದಿಂದಾಗಿ ತಮ್ಮ ಪ್ರಾಣವನ್ನು ಕಳೆದುಕೊಂಡರು” ಎಂದು ಅವರು ಹೇಳಿದ್ದಾರೆ.

ದಲಾಲ್‌ ಅವರ ಹೇಳಿಕೆಗೆ ಕಾಂಗ್ರೆಸ್‌‌ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, “ಸಂವೇದನಾಶೀಲ ಮತ್ತು ಸಂಸ್ಕೃತಿಯಿಲ್ಲದ ವ್ಯಕ್ತಿ ಮಾತ್ರ ತಮ್ಮ ಬೇಡಿಕೆಗಳಿಗಾಗಿ ಹೆಣಗಾಡುತ್ತಿರುವ ಅನ್ನದಾತರಿಗೆ ಅಂತಹ ಪದಗಳನ್ನು ಬಳಸಬಹುದು. ಆದರೆ, ಇಷ್ಟಾಗಿಯು ಅವರಿಗೆ ನಾಚಿಕೆಪಡುತ್ತಿಲ್ಲ. ಈ ಹಿಂದೆ ರೈತರನ್ನು ಪಾಕಿಸ್ತಾನಿ, ಚೀನೀ ಬೆಂಬಲಿಗರು ಎಂದು ಕರೆದಿದ್ದ ಹರಿಯಾಣದ ಕೃಷಿ ಸಚಿವ ಜೆ.ಪಿ. ದಲಾಲ್ ಅವರನ್ನು ರಾಜ್ಯದ ಮಂತ್ರಿ ಮಂಡಳಿಯಿಂದ ವಜಾಗೊಳಿಸಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೈತರಿಗೆ ಪ್ರತಿಭಟಿಸುವ ಹಕ್ಕಿದೆ: ರೈತ ಹೋರಾಟ ಬೆಂಬಲಿಸಿದ ಅಮೆರಿಕ ರಾಜಕಾರಣಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...