Homeಚಳವಳಿಅವರು ಮನೆಯಲ್ಲಿದ್ದರೂ ಸಾಯುತ್ತಿದ್ದರು: ರೈತರ ಸಾವಿನ ಬಗ್ಗೆ ನಾಲಗೆ ಹರಿಯ ಬಿಟ್ಟ ಹರಿಯಾಣ ಕೃಷಿ ಸಚಿವ

ಅವರು ಮನೆಯಲ್ಲಿದ್ದರೂ ಸಾಯುತ್ತಿದ್ದರು: ರೈತರ ಸಾವಿನ ಬಗ್ಗೆ ನಾಲಗೆ ಹರಿಯ ಬಿಟ್ಟ ಹರಿಯಾಣ ಕೃಷಿ ಸಚಿವ

ಕೆಲವು ರೈತರು ಸಹಾನುಭೂತಿಗಾಗಿ ಮತ್ತು ಕೆಲವರು ಜಾತಿಯ ಕಾರಣಕ್ಕಾಗಿ ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನನ್ನು ವಿರೋಧಿಸಿ ನಡೆಯುತ್ತಿರುವ ಹೋರಾಟದಲ್ಲಿ ಹಲವಾರು ರೈತರು ಸಾವನ್ನಪ್ಪಿದ್ದಾರೆ. ಈ ರೈತರ ಕುರಿತ ಪ್ರಶ್ನೆಗಳಿಗೆ ಹರಿಯಾಣ ಕೃಷಿ ಸಚಿವ ಜೆ.ಪಿ. ದಲಾಲ್, ಅವರು ಮನೆಯಲ್ಲಿದ್ದರೂ ಸಾಯುತ್ತಿದ್ದರು. ಕೆಲವು ರೈತರು ಸಹಾನುಭೂತಿಗಾಗಿ ಮತ್ತು ಕೆಲವರು ಜಾತಿಯ ಕಾರಣದಿಂದಾಗಿ ತಮ್ಮ ಪ್ರಾಣವನ್ನು ಕಳೆದುಕೊಂಡರು ಎಂದು ಉತ್ತರಿಸಿ ವಿವಾದಕ್ಕೊಳಗಾಗಿದ್ದಾರೆ.

ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ಆಂದೋಲನದಲ್ಲಿ ವಿವಿಧ ಕಾರಣಗಳಿಂದ ಸುಮಾರು 200 ರೈತರು ಪ್ರಾಣ ಕಳೆದುಕೊಂಡಿದ್ದಾರೆ. ಈ ಬಗ್ಗೆ ಮಾದ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಅವರು (ರೈತರು) ಮನೆಯಲ್ಲಿಯೂ ಸಾಯುತ್ತಿದ್ದರು. ಅವರು ಇಲ್ಲಿ ಸಾಯುತ್ತಿಲ್ಲವೇ? ನನ್ನ ಮಾತುಗಳನ್ನು ಕೇಳಿ, ಒಂದೆರೆರಡು ಲಕ್ಷ ಜನರಲ್ಲಿ, ಆರು ತಿಂಗಳಲ್ಲಿ 200 ಮಂದಿ ಸಾಯುದಿಲ್ಲವೇ? ಕೆಲವರು ಹೃದಯಾಘಾತದಿಂದ ಸಾವಿಗೀಡಾದರು, ಕೆಲವರು ಜ್ವರದಿಂದ ಸಾವಿಗೀಡಾದರು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮೋದಿ ಸತ್ಯ ಒಪ್ಪಿಕೊಂಡಿದ್ದಾರೆ, ಹಾಗೆಯೆ ಕಾಯ್ದೆ ವಾಪಸ್ ಪಡೆಯಲಿ: ದರ್ಶನ್ ಪಾಲ್

“ಒಂದು ವಿಷಯ ಹೇಳಿ, ಭಾರತದಲ್ಲಿ ಸರಾಸರಿ ಜೀವಿತಾವಧಿ ಎಷ್ಟು ಮತ್ತು ವರ್ಷದಲ್ಲಿ ಎಷ್ಟು ಮಂದಿ ಸಾಯುತ್ತಾರೆ. 135 ಕೋಟಿ ಜನರಲ್ಲಿ ಪ್ರತಿಯೊಬ್ಬ ನಾಗರಿಕನ ಸಾವಿಗೆ ನನ್ನ ಸಹಾನುಭೂತಿಯಿದೆ. ಭಾರತವು ಒಂದೇ ಆಗಿದ್ದು, ಪ್ರತಿಯೊಬ್ಬ ಭಾರತೀಯನ ಹಕ್ಕುಗಳು ಒಂದೇ” ಎಂದು ಹೇಳಿದ್ದಾರೆ.

ಆಂದೋಲನದ ಸಮಯದಲ್ಲಿ ರೈತರು ಪ್ರಾಣ ಕಳೆದುಕೊಂಡ ರೀತಿ ಕುರಿತು ಮಾಧ್ಯಮಗಳ ಪ್ರಶ್ನೆಗಳಿಗೆ ದಲಾಲ್, “ಅವರು ಯಾವುದೇ ಅಪಘಾತದಲ್ಲಿ ಸಾಯಲಿಲ್ಲ, ಅವರು ತಮ್ಮ ಸ್ವಂತ ಇಚ್ಛೆಯಿಂದ ಸಾವನ್ನಪ್ಪಿದರು…. ಅವರಿಗೆ ನನ್ನ ಸಂತಾಪವನ್ನು ಅರ್ಪಿಸುತ್ತೇನೆ. ಕೆಲವರು ಸಹಾನುಭೂತಿಗಾಗಿ ಮತ್ತು ಕೆಲವರು ಜಾತಿಯ ಕಾರಣದಿಂದಾಗಿ ತಮ್ಮ ಪ್ರಾಣವನ್ನು ಕಳೆದುಕೊಂಡರು” ಎಂದು ಅವರು ಹೇಳಿದ್ದಾರೆ.

ದಲಾಲ್‌ ಅವರ ಹೇಳಿಕೆಗೆ ಕಾಂಗ್ರೆಸ್‌‌ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, “ಸಂವೇದನಾಶೀಲ ಮತ್ತು ಸಂಸ್ಕೃತಿಯಿಲ್ಲದ ವ್ಯಕ್ತಿ ಮಾತ್ರ ತಮ್ಮ ಬೇಡಿಕೆಗಳಿಗಾಗಿ ಹೆಣಗಾಡುತ್ತಿರುವ ಅನ್ನದಾತರಿಗೆ ಅಂತಹ ಪದಗಳನ್ನು ಬಳಸಬಹುದು. ಆದರೆ, ಇಷ್ಟಾಗಿಯು ಅವರಿಗೆ ನಾಚಿಕೆಪಡುತ್ತಿಲ್ಲ. ಈ ಹಿಂದೆ ರೈತರನ್ನು ಪಾಕಿಸ್ತಾನಿ, ಚೀನೀ ಬೆಂಬಲಿಗರು ಎಂದು ಕರೆದಿದ್ದ ಹರಿಯಾಣದ ಕೃಷಿ ಸಚಿವ ಜೆ.ಪಿ. ದಲಾಲ್ ಅವರನ್ನು ರಾಜ್ಯದ ಮಂತ್ರಿ ಮಂಡಳಿಯಿಂದ ವಜಾಗೊಳಿಸಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೈತರಿಗೆ ಪ್ರತಿಭಟಿಸುವ ಹಕ್ಕಿದೆ: ರೈತ ಹೋರಾಟ ಬೆಂಬಲಿಸಿದ ಅಮೆರಿಕ ರಾಜಕಾರಣಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....