Homeಮುಖಪುಟನಮ್ಮ ಮೇಲಿನ ದ್ವೇಷಕ್ಕೆ ದೊಡ್ಡ ಶತ್ರುವಾದ ಬಿಜೆಪಿಗೆ ದಾರಿ ಮಾಡಿಕೊಡದಿರಿ: ಟಿಎಂಸಿ ಮನವಿ

ನಮ್ಮ ಮೇಲಿನ ದ್ವೇಷಕ್ಕೆ ದೊಡ್ಡ ಶತ್ರುವಾದ ಬಿಜೆಪಿಗೆ ದಾರಿ ಮಾಡಿಕೊಡದಿರಿ: ಟಿಎಂಸಿ ಮನವಿ

- Advertisement -
- Advertisement -

ತನ್ನ ಮೇಲಿನ ದ್ವೇಷಕ್ಕೆ ರಾಜ್ಯದ ವಿಧಾನಸಭಾ ಚುಣಾವಣೆಯಲ್ಲಿ ಅತ್ಯಂತ ದೊಡ್ಡ ಶತ್ರು ಬಿಜೆಪಿಗೆ ದಾರಿ ಮಾಡಿ ಕೊಡಬೇಡಿ ಎಂದು ಟಿಎಂಸಿಯು ಶನಿವಾರ ಎಡಪಂಥೀಯ-ಕಾಂಗ್ರೆಸ್ ಮೈತ್ರಿಕೂಟಕ್ಕೆ ಮನವಿ ಮಾಡಿದೆ. ಆದರೆ, ಎಡ ಮತ್ತು ಕಾಂಗ್ರೆಸ್ ಮೈತ್ರಿಕೂಟವು ಈ ಮನವಿಯನ್ನು ಸಂಪೂರ್ಣವಾಗಿ ತಿರಸ್ಕರಿಸಿದ್ದು, ಟಿಎಂಸಿಯನ್ನು ಪಶ್ಚಿಮ ಬಂಗಾಳದ ಬಿಜೆಪಿಯ “ಬಿ ತಂಡ” ಎಂದು ಕರೆದಿದೆ.

ಟಿಎಂಸಿ ಕಳೆದೊಂದು ತಿಂಗಳಲ್ಲಿ ಇದು ಎರಡನೆ ಬಾರಿಗೆ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಒಗ್ಗಟ್ಟಿನಲ್ಲಿ ಹೋರಾಟ ನಡೆಸುವಂತೆ ಎಡ ಮತ್ತು ಕಾಂಗ್ರೆಸ್ ಗೆ ಮನವಿ ಮಾಡಿದೆ.

ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ 200 ಸ್ಥಾನ ಗೆಲ್ಲುತ್ತೇವೆ: ಅಮಿತ್ ಶಾ

ಬಿಜೆಪಿಯು ಟಿಎಂಸಿ ಮಾಡಿರುವ ಮನವಿಯ ಬಗ್ಗೆ, ರಾಜ್ಯದಲ್ಲಿ ತೃಣಮೂಲಕ್ಕೆ ಪರ್ಯಾಯವಾಗಿ ಬಿಜೆಪಿ ಮಾತ್ರ ಇದೆ ಎಂದು ಈ ಮನವಿ ಸಾಬೀತುಪಡಿಸುತ್ತದೆ ಎಂದು ಹೇಳಿದೆ.

294 ಸದಸ್ಯ ಬಲವಿರುವ ರಾಜ್ಯ ವಿಧಾನಸಭೆಗೆ ಏಪ್ರಿಲ್-ಮೇ ತಿಂಗಳಲ್ಲಿ ಚುನಾವಣೆ ನಡೆಯಲಿದೆ.

“ಎಡಪಂಥೀಯ ಮತ್ತು ಕಾಂಗ್ರೆಸ್ ಪಕ್ಷಗಳು ನಿಜವಾದ ಬಿಜೆಪಿ ವಿರೋಧಿಗಳಾಗಿದ್ದರೆ ಅವರು ಬಿಜೆಪಿಯ ಕೋಮು ಮತ್ತು ವಿಭಜಕ ರಾಜಕಾರಣದ ವಿರುದ್ಧದ ಹೋರಾಟದಲ್ಲಿ ಮಮತಾ ಬ್ಯಾನರ್ಜಿ ಅವರ ಬೆನ್ನಿಗೆ ನಿಲ್ಲಬೇಕು” ಎಂದು ಪಶ್ಚಿಮ ಬಂಗಾಳದ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ತಪಸ್ ರಾಯ್ ಹೇಳಿದ್ದಾರೆ.

“ಮಮತಾ ಬ್ಯಾನರ್ಜಿ ಮತ್ತು ಟಿಎಂಸಿಯನ್ನು ವಿರೋಧಿಸುತ್ತಾ ಅವರು ಬಂಗಾಳದ ದೊಡ್ಡ ಶತ್ರು ಬಿಜೆಪಿಯನ್ನು ಆಹ್ವಾನಿಸುವ ತಪ್ಪನ್ನು ಮಾಡಬಾರದು. ಅವರು ತ್ರಿಪುರದ ಪರಿಸ್ಥಿತಿಯನ್ನು ಗಮನಿಸಿ ಏನು ಮಾಡಬೇಕೆಂದು ನಿರ್ಧರಿಸಬೇಕು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಂಗಾಳ: ಬಿಜೆಪಿಯ ರಥಯಾತ್ರೆಯಂದು, ಅದೇ ಜಿಲ್ಲೆಯಲ್ಲಿ ಬೈಕ್ ರ್‍ಯಾಲಿ ನಡೆಸಲಿರುವ ಟಿಎಂಸಿ

ಟಿಎಂಸಿಯ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿದ ರಾಜ್ಯ ಹಿರಿಯ ಕಾಂಗ್ರೆಸ್ ಮುಖಂಡ ಅಬ್ದುಲ್ ಮನ್ನನ್ ಅವರು ಬಂಗಾಳದಲ್ಲಿ ಬಿಜೆಪಿಯ ಬೆಳವಣಿಗೆಗೆ ಟಿಎಂಸಿಯೆ ಕಾರಣ ಎಂದು ದೂಷಿಸಿದ್ದಾರೆ.

“ಟಿಎಂಸಿಯೊಂದಿಗೆ ಹೊಂದಾಣಿಕೆ ಮಾಡಲು ನಮಗೆ ಆಸಕ್ತಿಯಿಲ್ಲ. ಕಳೆದ 10 ವರ್ಷಗಳಿಂದ ನಮ್ಮ ಶಾಸಕರನ್ನು ಬೇಟೆಯಾಡಿದ ಟಿಎಂಸಿ, ಈಗ ಮೈತ್ರಿ ಮಾಡಿಕೊಳ್ಳಲು ಯಾಕೆ ಆಸಕ್ತಿ ವಹಿಸುತ್ತಿದೆ? ಮಮತಾ ಬ್ಯಾನರ್ಜಿ ಅವರಿಂದಾಗಿಯೆ ಬಂಗಾಳದಲ್ಲಿ ಬಿಜೆಪಿ ಬಲವನ್ನು ಹೆಚ್ಚಿಸಿದೆ” ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಪಕ್ಷಾಂತರದ ‘ಮಹಿಮೆ’: ಬಂಗಾಳದ ಬಿಜೆಪಿ ಕಚೇರಿಗಳಲ್ಲಿ ಹೊಡೆದಾಟ, ಬೀದಿ ರಂಪಾಟ, ವಾಹನಗಳಿಗೆ ಬೆಂಕಿ!

ಸಿಪಿಐ (ಎಂ) ಹಿರಿಯ ನಾಯಕ ಸುಜನ್ ಚಕ್ರವರ್ತಿ ಮಾತನಾಡಿ, ಬಿಜೆಪಿ ಮತ್ತು ಟಿಎಂಸಿ ಎರಡೂ ಎಡ ಮತ್ತು ಕಾಂಗ್ರೆಸ್ ಅನ್ನು ರಾಜ್ಯದಲ್ಲಿ ನಗಣ್ಯ ರಾಜಕೀಯ ಶಕ್ತಿ ಎಂದು ಬ್ರಾಂಡ್ ಮಾಡಿ ಈ  ಅದೇ ಪಕ್ಷಗಳ ಮತವನ್ನು ಸೆಳೆಯಲು ಪ್ರಯತ್ನಿಸುತ್ತಿದೆ. ಟಿಎಂಸಿ ಮತ್ತು ಬಿಜೆಪಿ ಎರಡೂ ಈಗ ಎಡಪಂಥೀಯರನ್ನು ಹೊಗಳುತ್ತಾ ನಮ್ಮ ಬೆಂಬಲವನ್ನು ಬಯಸುತ್ತಿವೆ ಎಂದು ಹೇಳಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಎಡ ಮತ್ತು ಕಾಂಗ್ರೆಸ್ ಮೈತ್ರಿಯು ಟಿಎಂಸಿ ಮತ್ತು ಬಿಜೆಪಿ ಎರಡನ್ನೂ ಸೋಲಿಸುತ್ತದೆ ಎಂದು ಚಕ್ರವರ್ತಿ ಪ್ರತಿಪಾದಿಸಿದ್ದಾರೆ.

ಪಶ್ಚಿಮ ಬಂಗಾಳದ ಆಡಳಿತ ಪಕ್ಷವು ಬಿಜೆಪಿ ವಿರುದ್ಧ ಸ್ವತಃ ಹೋರಾಡಲು ಸಾಧ್ಯವಿಲ್ಲ ಎಂದು ಈ ಮನವಿಯು ಸಾಬೀತುಪಡಿಸುತ್ತದೆ ಎಂದು ಬಿಜೆಪಿ ಹೇಳಿದೆ. “ಇದು ಟಿಎಂಸಿಯ ಹತಾಶೆಯನ್ನು ಸಹ ಸಾಬೀತುಪಡಿಸುತ್ತದೆ, ಅವರು ನಮ್ಮ ವಿರುದ್ಧ ತಾವಾಗಿಯೇ ಹೋರಾಡಲು ಸಾಧ್ಯವಿಲ್ಲ, ಆದ್ದರಿಂದ ಅವರು ಇತರ ಪಕ್ಷಗಳ ಸಹಾಯವನ್ನು ಪಡೆಯುತ್ತಿದ್ದಾರೆ. ಟಿಎಂಸಿಗೆ ಬಿಜೆಪಿ ಮಾತ್ರ ಪರ್ಯಾಯವಾಗಿದೆ ಎಂದು ಇದು ಸಾಬೀತುಪಡಿಸುತ್ತದೆ” ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ದಿಲೀಪ್ ಘೋಷ್ ಹೇಳಿದ್ದಾರೆ.

ಇದನ್ನೂ ಓದಿ: ಪ.ಬಂಗಾಳ ಚುನಾವಣೆ: ನಂದಿಗ್ರಾಮದಿಂದ ಸ್ಪರ್ಧಿಸುವುದಾಗಿ ಮಮತಾ ಬ್ಯಾನರ್ಜಿ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...