Homeಮುಖಪುಟಸಿಎಎ ಜಾರಿ ಮಾಡುವುದಿಲ್ಲ: ಅಮಿತ್ ಶಾಗೆ ಸ್ಪಷ್ಟ ಉತ್ತರ ನೀಡಿದ ಕೇರಳ ಮುಖ್ಯಮಂತ್ರಿ

ಸಿಎಎ ಜಾರಿ ಮಾಡುವುದಿಲ್ಲ: ಅಮಿತ್ ಶಾಗೆ ಸ್ಪಷ್ಟ ಉತ್ತರ ನೀಡಿದ ಕೇರಳ ಮುಖ್ಯಮಂತ್ರಿ

ಕೊರೊನಾ ಲಸಿಕಾ ಅಭಿಯಾನ ಮುಗಿದ ನಂತರ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯನ್ನು ಜಾರಿ ಮಾಡುತ್ತೇವೆ ಎಂದು ಗೃಹಮಂತ್ರಿ ಅಮಿತ್ ಶಾ ಹೇಳಿದ್ದರು.

- Advertisement -
- Advertisement -

ಕೊರೊನಾ ಲಸಿಕಾ ಅಭಿಯಾನ ಮುಗಿದ ನಂತರ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯನ್ನು ಜಾರಿ ಮಾಡುತ್ತೇವೆ ಎಂದು ಗೃಹಮಂತ್ರಿ ಅಮಿತ್ ಶಾ ಹೇಳಿದ ಬೆನ್ನಲ್ಲೇ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, “ಸಿಎಎ ಜಾರಿ ಮಾಡುವುದಿಲ್ಲ” ಎಂದು ಅಮಿತ್ ಶಾಗೆ ಸ್ಪಷ್ಟ ಉತ್ತರ ನೀಡಿದ್ದಾರೆ.

“ಕೋವಿಡ್ ಲಸಿಕೆ ಅಭಿಯಾನ ಮುಗಿದ ನಂತರ ಸಿಎಎ ಜಾರಿಗೆ ತರುವುದಾಗಿ ಗೃಹ ಸಚಿವರು ಹೇಳಿದ್ದಾರೆ. ನಾವು ಈಗಾಗಲೇ ನಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದೇವೆ. ಕೇರಳದಲ್ಲಿ ಈ ಅನಾಹುತವನ್ನು ನಮ್ಮ ಸರ್ಕಾರ ಅನುಮತಿಸುವುದಿಲ್ಲ” ಎಂದು ಪಿಣರಾಯಿ ವಿಜಯನ್ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಸಿಎಎ ಮತ್ತು ಎನ್‌ಆರ್‌ಸಿ ಜಾರಿಯಿಂದಾಗುವ ಆರ್ಥಿಕ ನಷ್ಟವೆಷ್ಟು?

ಪಶ್ಚಿಮ ಬಂಗಾಳ ಚುನಾವಣಾ ಪ್ರಚಾರದಲ್ಲಿರುವ ಅಮಿತ್ ಶಾ, ಮಟುವಾ ಸಮುದಾಯವನ್ನು ಉದ್ದೇಶಿಸಿ “ಹೊಸ ಪೌರತ್ವ ಕಾನೂನನ್ನು ತರುವುದಾಗಿ ಮೋದಿ ಸರ್ಕಾರ 2018 ರಲ್ಲಿ ಭರವಸೆ ನೀಡಿತ್ತು. ಹಾಗಾಗಿ 2019 ರಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಾಗ ಅದನ್ನು ಕಾನೂನು ಮಾಡಿತು. ಆದರೆ 2020 ರಲ್ಲಿ ದೇಶವು COVID-19 ಸಾಂಕ್ರಾಮಿಕಕ್ಕೆ ಒಳಗಾದ ನಂತರ ಸಿಎಎ ಅನುಷ್ಠಾನವನ್ನು ತಡೆಹಿಡಿಯಬೇಕಾಯಿತು. ಕೊರೊನಾ ಲಸಿಕಾ ಅಭಿಯಾನ ಮುಗಿದ ನಂತರ ದೇಶದಾದ್ಯಂತ ಸಿಎಎ ಜಾರಿ ಮಾಡಲಾಗುವುದು” ಎಂದು ತಿಳಿಸಿದ್ದರು.

ಸಿಎಎ ಜಾರಿಯನ್ನು ವಿರೋಧಿಸಿ 2019 ರಲ್ಲಿ ದೇಶದಾದ್ಯಂತ ವ್ಯಾಪಕ ಪ್ರತಿಭಟನೆಗಳು ನಡೆದವು. ಸಿಎಎ ಜಾರಿಯನ್ನು ಕಾನೂನಾತ್ಮಕವಾಗಿ ಸುಪ್ರೀಂ ಕೋರ್ಟಿನಲ್ಲಿ ಪ್ರಶ್ನಿಸಿದ ರಾಜ್ಯ ಕೇರಳ.

ಸಿಎಎ ಮತ್ತು ಎನ್‌ಆರ್‌ಸಿ ಜಾರಿಯಾದರೆ ಭಾರತದಲ್ಲಿರುವ ಮುಸ್ಲಿಮರು ಮಾತ್ರವಲ್ಲದೇ ಅನೆಕರು ಪೌರತ್ವವನ್ನು ಕಳೆದುಕೊಳ್ಳುತ್ತಾರೆ. ಅಷ್ಟೆ ಅಲ್ಲದೇ ಈ ಕಾಯ್ದೆಯು ಸಂಪೂರ್ಣ ಅವೈಜ್ಞಾನಿಕವಾಗಿದೆ ಎಂದು ಹಲವಾರು ತಜ್ಞರು ಅಭಿಪ್ರಾಯಪಟ್ಟಿದ್ದರು.


ಇದನ್ನೂ ಓದಿ: ಸಿಎಎ, ಎನ್‌ಆರ್‌ಸಿ ಕುರಿತು …. ಐಎಎಸ್ ಅಧಿಕಾರಿಗಳು ಏನು ಹೇಳುತ್ತಾರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...