Homeಮುಖಪುಟಜಮ್ಮುಕಾಶ್ಮೀರದಲ್ಲಿ ಮತ್ತೊಮ್ಮೆ ಗೃಹ ಬಂಧನ: ಮಾಜಿ ಮುಖ್ಯಮಂತ್ರಿ ಆರೋಪ

ಜಮ್ಮುಕಾಶ್ಮೀರದಲ್ಲಿ ಮತ್ತೊಮ್ಮೆ ಗೃಹ ಬಂಧನ: ಮಾಜಿ ಮುಖ್ಯಮಂತ್ರಿ ಆರೋಪ

- Advertisement -
- Advertisement -

ಜಮ್ಮುಕಾಶ್ಮೀರದ ಮಾಜಿ ಮುಖ್ಯಮಂತ್ರಿ, ನ್ಯಾಶನಲ್‌ ಕಾನ್ಫರೆನ್ಸ್ ‌ಪಕ್ಷದ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಅವರು, ತನ್ನನ್ನು ಸೇರಿದಂತೆ, ತನ್ನ ತಂದೆ ಫಾರೂಕ್ ಅಬ್ದುಲ್ಲಾ ಮತ್ತು ಸೋದರಿ ಹಾಗೂ ಅವರ ಮಕ್ಕಳನ್ನು ಅಧಿಕಾರಿಗಳು ಗೃಹಬಂಧನದಲ್ಲಿಟ್ಟಿದ್ದಾರೆಂದು ಭಾನುವಾರ ಆರೋಪಿಸಿದ್ದಾರೆ. ಈ ಬಗ್ಗೆ ಅವರು ತಮ್ಮ ಟ್ವಿಟರ್‌ ಮೂಲಕ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.

ಈ ಬಗ್ಗೆ ಟ್ವಿಟರ್‌ನಲ್ಲಿ ಅವರು, “ಇದು ಆಗಸ್ಟ್ 2019 ರ ನಂತರದ ಹೊಸ ಜಮ್ಮೂ ಕಾಶ್ಮೀರವಾಗಿದೆ. ಯಾವುದೇ ವಿವರಣೆಯಿಲ್ಲದೆ ನಾವು ನಮ್ಮ ಮನೆಗಳಲ್ಲಿ ಬಂಧಿಸಲ್ಪಟ್ಟಿದ್ದೇವೆ. ಅವರು ಪ್ರಸ್ತುತ ಸಂಸದರಾಗಿರುವ ನನ್ನ ತಂದೆಯನ್ನು, ನನ್ನನ್ನು ನಮ್ಮ ಮನೆಯಲ್ಲಿ ಬಂಧನದಲ್ಲಿ ಇಟ್ಟಿದ್ದಾರೆ. ಅಷ್ಟೇ ಅಲ್ಲದೆ ಅವರು ನನ್ನ ಸಹೋದರಿ ಮತ್ತು ಅವರ ಮಕ್ಕಳನ್ನೂ ಗೃಹಬಂಧನದಲ್ಲಿ ಇಟ್ಟಿದ್ದಾರೆ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಕಾಶ್ಮೀರದಲ್ಲಿ ಕಪ್ಪು ಹಿಮ ಬಿದ್ದಾಗ ಬಿಜೆಪಿ ಸೇರುತ್ತೇನೆ: ಗುಲಾಂ ನಬಿ ಆಜಾದ್

“ನಿಮ್ಮ ಹೊಸ ಪ್ರಜಾಪ್ರಭುತ್ವದ ಮಾದರಿ ಎಂದರೆ ನಮ್ಮನ್ನು ನಮ್ಮ ಮನೆಗಳಲ್ಲಿ ವಿವರಣೆಯಿಲ್ಲದೆ ಇರಿಸಲಾಗಿದೆ. ಮನೆಯಲ್ಲಿ ಕೆಲಸ ಮಾಡುವ ಸಿಬ್ಬಂದಿಯನ್ನು ಅನುಮತಿಸಲಾಗುತ್ತಿಲ್ಲ” ಎಂದ ಬರೆದಿದ್ದಾರೆ.

ಇದಕ್ಕೆ ಶ್ರೀನಗರ ಪೊಲೀಸ್ ಎಂಬ ಟ್ವಿಟರ್‌ ಹ್ಯಾಂಡಲ್ ಉತ್ತರ ನೀಡಿದ್ದು, “2019 ರ ಇಂದು ಭೀಕರ ಪುಲ್ವಾಮಾ ಭಯೋತ್ಪಾದಕ ಘಟನೆಯ 2 ವರ್ಷ ಪೂರ್ಣಗೊಂಡ ಕಾರಣ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ವಿಐಪಿಗಳು ಹಾಗೂ ಸಂರಕ್ಷಿತ ವ್ಯಕ್ತಿಗಳ ಚಲನ-ವಲನವನ್ನು ತಡೆಯಲಾಗಿದೆ” ಎಂದು ಉತ್ತರಿಸಿದ್ದಾರೆ.

ಇದಕ್ಕೆ ಮರು ಪ್ರತಿಕ್ರಿಯಿಸಿರುವ ಒಮರ್‌ ಅಬ್ದುಲ್ಲಾ, “ಈ ಟ್ವಿಟರ್‌ ಹ್ಯಾಂಡಲ್ ಪೊಲೀಸರದೆ ಎಂಬ ಬಗ್ಗೆ ನನಗೆ ಅನುಮಾನ ಇದೆ, ಯಾಕೆಂದರೆ ಇದನ್ನು ವೇರಿಫೈಡ್ ಮಾಡಿಲ್ಲ. ದಯವಿಟ್ಟು ಯಾವ ಕಾನೂನಿನ ಅಡಿಯಲ್ಲಿ ನನ್ನನ್ನುಗೃಹಬಂಧಿಯಾಗಿಸಲಾಗಿದೆ ಎಂದು ಹೇಳಿ? ಮನೆಯಿಂದ ಹೊರ ಹೋಗದಂತೆ ನೀವು ನನಗೆ ಸಲಹೆ ಮಾಡಬಹುದು. ಆದರೆ ಒತ್ತಾಯಪೂರ್ವಕವಾಗಿ ಭದ್ರತೆ ಒದಗಿಸಲು ಸಾಧ್ಯವಿಲ್ಲ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ರೈತ ಪ್ರತಿಭಟನೆ ಕುರಿತು ಸುಪ್ರೀಂ ಮಧ್ಯಸ್ಥಿಕೆ: ‘ಜಮ್ಮು ಕಾಶ್ಮೀರದ ಕುರಿತೇಕೆ ಸಾಧ್ಯವಿಲ್ಲ?’ – ಓಮರ್ ಅಬ್ದುಲ್ಲಾ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...