Homeಮುಖಪುಟನರೇಂದ್ರ ಮೋದಿಯ ಅಸಲೀ ಜೀವನ ವೃತ್ತಾಂತದ ಬಗ್ಗೆ ನಿಮಗೆಷ್ಟು ಗೊತ್ತು?

ನರೇಂದ್ರ ಮೋದಿಯ ಅಸಲೀ ಜೀವನ ವೃತ್ತಾಂತದ ಬಗ್ಗೆ ನಿಮಗೆಷ್ಟು ಗೊತ್ತು?

- Advertisement -
| ಪ್ರವೀಣ್  ಎಸ್ ಶೆಟ್ಟಿ |
ಮೋದಿ ದೇಶಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟಿದ್ದಾರೆ, ಭಾರತೀಯರ ಪುಣ್ಯದಿಂದ ಕೊನೆಗೂ ಮೋದಿಯಂತಹಾ ಪ್ರಧಾನಿ ನಮಗೆ ಸಿಕ್ಕಿರುವುದು ಎಂಬೆಲ್ಲಾ ವಿಶೇಷಣಗಳೊಂದಿಗೆ ಮೋದಿಯ ಪ್ರಚಾರ ಮಾಡಲಾಗುತ್ತಿದೆ. ಈಗ ಮೋದಿಗೆ 69 ವರ್ಷ ವಯಸ್ಸು. 2001 ರಲ್ಲಿ ಅವರು ಗುಜರಾತಿನ ಮುಖ್ಯಮಂತ್ರಿ ಆಗುವುದಕ್ಕೆ ಮುಂಚೆ ಅವರು ಒಂದು ಸಣ್ಣ ಪಂಚಾಯತ್ ಸದಸ್ಯನಷ್ಟೂ ಜನಸೇವೆ ಅಥವಾ ದೇಶಸೇವೆ ಮಾಡಿಲ್ಲ. ಅವರು ನೇರವಾಗಿ ಆಗಿನ ಗುಜರಾತ್ ಮುಖ್ಯಮಂತ್ರಿಗಳಾಗಿದ್ದ ಕೇಶುಭಾಯಿ ಪಟೇಲ್, ಸುರೇಶ್ ಮೇಹತಾ, ಹಾಗೂ ಆರ್‌ಜೆ‌ಪಿ ಪಕ್ಷದ ಶಂಕರ್ ಸಿಂಹ ವಾಘೆಲಾ ಇವರೆಲ್ಲರ ಬೆನ್ನಿಗೆ ಇರಿದು ಗುಜರಾತ್ ಮುಖ್ಯಮಂತ್ರಿ ಸ್ಥಾನ ಕಬಳಿಸಿದ್ದು. ಅದಕ್ಕೆ ಮುಂಚೆ ಅವರು ಕೇವಲ ಅಡ್ವಾಣಿಯವರ ತಲೆಗೆ ಕೊಡೆ ಹಿಡಿದಿದ್ದು ಮತ್ತು ಬಾಯಿಗೆ ಲೌಡ್ ಸ್ಪೀಕರ್ ಹಿಡಿದಿದ್ದು ಮಾತ್ರ ಅವರು ಮಾಡಿರುವ ಜನಸೇವೆ.
ಮೋದಿ ಗುಜರಾತ್ ಮುಖ್ಯಮಂತ್ರಿ ಆಗುವಾಗ ಅವರಿಗೆ 52 ವರ್ಷ ವಯಸ್ಸು. ಅಲ್ಲಿಯವರೆಗೆ ಅವರು ಒಂದು ಪೈಸೆಯ ದೇಶಸೇವೆ ಅಥವಾ ಜನಸೇವೆ ಮಾಡಿರಲಿಲ್ಲ. ಗುಜರಾತ್ ಮುಖ್ಯಮಂತ್ರಿ ಆದ ಮೇಲೂ ಅವರು ಮಾಡಿಸಿದ್ದು ಕೋಮು ಗಲಭೆ, ನಕಲಿ ಎಂಕೌಂಟರ್, ಮುಖ್ಯಮಂತ್ರಿ ಹುದ್ದೆಯ ಸ್ಪರ್ಧಿ ಹರೇನ್ ಪಾಂಡ್ಯರ ಸಂದೇಹಾಸ್ಪದ ಮರಣ, ಗುಜರಾತ್ ಪೆಟ್ರೋಲಿಯಂನಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ, ರೈತರ ಭೂಮಿ ಕಸಿದು ತನ್ನ ಚೇಲಾ ಉದ್ಯಮಿಗಳಿಗೆ ಕವಡೆ ಬೆಲೆಗೆ ಕೊಟ್ಟಿದ್ದು ಅಷ್ಟೇ, ಇವನ್ನೆಲ್ಲಾ ಗುಜರಾತಿಗಾಗಿ ಮೋದಿಯ ಜೀವನದ ಮುಡಿಪು ಅನ್ನಬೇಕೆ? ಅಥವಾ ಆರು ಕೋಟಿ ಗುಜರಾತಿಗಳ ಪುಣ್ಯದಿಂದ ಗುಜರಾತಿಗೆ ಸಿಕ್ಕ ಮಹಾನ್ ಮುಖ್ಯಮಂತ್ರಿ ಎಂಬ ವಿಶೇಷಣ ಸೇರಿಸಬೇಕೆ?
ಚಿಕ್ಕಂದಿನಿಂದ ಮೋದಿಯ ಜೀವನ ಹೇಗೆ ವಿಶ್ಲೇಶಿಸಿದರೂ ಅವರು ಒಂದಿಷ್ಟೂ ದೇಶಸೇವೆ ಅಥವಾ ಜನಸೇವೆ ಮಾಡಿದ ಉದಾಹರಣೆ ಇಲ್ಲ. ಅವರ ತಂದೆ ತುಂಬಾ ಬಡವರಾಗಿದ್ದರಿಂದ ರೇಲ್ವೇ ಸ್ಟೇಷನ್ನಲ್ಲಿ ಚಹಾ ಮಾರುತ್ತಿದರು ಎಂಬುದೆಲ್ಲಾ ಶುದ್ಧ ಸುಳ್ಳು. ಬನಿಯಾ/ವೈಶ್ಯಾ ಮೇಲ್ಜಾತಿಯವರಾದ ಅವರ ತಂದೆಯ ಆರ್ಥಿಕ ಸ್ಥಿತಿ ಚೆನ್ನಾಗಿಯೇ ಇತ್ತು ಎಂದು ಅವರ ಮಾವನ ಮಗ ಕಲ್ಪೇಶ್ ಭಾಟಿಯಾ ಮೋದಿ ಎಂಬವರೇ ಹೇಳಿದ್ದಾರೆ. ಮೋದಿಯ ತಾಯಿ ಇತರರ ಮನೆಯ ಮುಸುರೆ ತಿಕ್ಕುವುದು ಒತ್ತಟ್ಟಿಗಿರಲಿ ಅವರು ತನ್ನ ಸ್ವಂತ ಮನೆಯ ಮುಸುರೆ ಸಹಾ ತಿಕ್ಕುತ್ತಿರಲಿಲ್ಲ. ಯಾಕೆಂದರೆ ಅವರು ಆರು ಮಕ್ಕಳನ್ನು ಹೆತ್ತು ಹೊತ್ತು ಸಾಕುವುದರಲ್ಲಿಯೇ ಅವರ ಜೀವನ ಕಳೆದು ಹೋಗಿತ್ತು.
ಮೋದಿಯ ತಂದೆಯ ಆರ್ಥಿಕ ಸ್ಥಿತಿ ಚೆನ್ನಾಗಿದ್ದುದರಿಂದಲೇ ಮೋದಿಯ ಇಬ್ಬರು ಅಣ್ಣಂದಿರು ಮತ್ತು ಇಬ್ಬರು ತಮ್ಮಂದಿರು ಸರಿಯಾಗಿ ಶಾಲೆ ಕಾಲೇಜು ಮುಗಿಸಿ ಡಿಗ್ರಿ ಪಡೆದು ಇಬ್ಬರು ಸರಕಾರಿ ನೌಕರಿ ಗಳಿಸಿದರೆ ಇನ್ನಿಬ್ಬರು ತಮ್ಮ ಸ್ವಂತ ಉದ್ಯಮ ಸ್ಥಾಪಿಸಿದರು. ತಂಗಿ ಜಯಂತಿಬೆನ್ ಸಹಾ ಪದವೀಧರೆ ಹಾಗೂ ಅವಳ ಗಂಡ ಎಲ್‌ಐಸಿ ಯಲ್ಲಿ ಅಧಿಕಾರಿಯಾಗಿದ್ದರು. ಹಾಗಿರುವಾಗ ಕೇವಲ ಮೋದಿ ಒಬ್ಬರೇ ಮಾನಸಿಕ ಸಮಸ್ಯೆಯಿಂದಾಗಿ ಸರಿಯಾಗಿ ಶಾಲೆಗೂ ಹೋಗದೆ ಉದ್ಯೋಗವನ್ನೂ ಮಾಡದೇ ಉಂಡಾಡಿಯಾಗಿ ತಿರುಗಾಡಿಕೊಂಡಿದ್ದು! ಅದನ್ನು ನೋಡಿ ಅವರ ತಂದೆ ಮೋದಿಗೆ 20 ವರ್ಷ ಆಗಿದ್ದಾಗ ಮಿಲಿಟರಿಯಲ್ಲಿ ಸೈನಿಕನಾಗಿ ಸೇರುವಂತೆ ಒತ್ತಾಯಿಸಿದರು. ಆದರೆ ಮೋದಿ ಮಿಲಿಟರಿ ಸೇರಲು ಭಯಪಟ್ಟು ಮನೆ ಬಿಟ್ಟು ಓಡಿ ಗುಜರಾತಿ ನಾಟಕ ಕಂಪನಿಯಲ್ಲಿ ತಬಲವಾದಕನಾಗಿ ಕೆಲಸಕ್ಕೆ ಸೇರಿದರು. ನಾಟಕ ಕಂಪನಿಯಲ್ಲಿ ಮೋದಿ 12 ವರ್ಷ ಕೆಲಸ ಮಾಡಿದ್ದನ್ನೇ ಅವರು ತಾನು ಹಿಮಾಲಯದಲ್ಲಿ ತಪಸ್ಸು ಮಾಡಿದ್ದೇನೆ ಎಂದು ಸುಳ್ಳು ಹೇಳಿದ್ದು. (ಯವ್ವನದಲ್ಲಿ ಮಿಲಿಟರಿ ಸೇರಲು ಭಯಪಟ್ಟ ಮೋದಿ ಈಗ ಮಾತ್ರ ವೀರ ಸೈನಿಕರ ಹೆಸರಲ್ಲಿ ವೋಟು ಕೇಳುತ್ತಿರುವುದು ವಿಪರ್ಯಾಸ).
1973 ರಲ್ಲಿ ಮೋದಿ 24 ವರ್ಷದವರಾಗಿದ್ದಾಗ ಅವರ ಹುಟ್ಟೂರು ವಡ್ನಗರದಲ್ಲಿ ಹೊಸ ರೇಲ್ವೆ ಸ್ಟೇಷನ್ ಕಟ್ಟಿದ್ದು. ಹಾಗಾದರೆ ಮೋದಿ ಚಿಕ್ಕಂದಿನಲ್ಲಿ ಚಹಾ ಮಾರಿದ್ದು ಯಾವ ರೇಲ್ವೆ ಸ್ಟೇಷನ್ನಿನಲ್ಲಿ? ಮೋದಿ 35 ವರ್ಷದವರಾಗಿದ್ದಾಗ ಅವರು ಆರೆಸ್ಸೆಸ್ಸ್ ಸೇರಿ ಅಲ್ಲಿ ಚಡ್ಡಿ ಹಾಕಿ ಹದಿನೈದು ವರ್ಷ ಲಾಠಿ ತಿರುಗಿಸಿದ್ದನ್ನು ದೇಶಸೇವೆ ಅನ್ನಲು ಸಾಧ್ಯವಿಲ್ಲ. ಮೋದಿ ಚಹಾ ಮಾರಿದ್ದು ಸುಳ್ಳು, ಹಿಮಾಲಯದಲ್ಲಿ ತಪಸ್ಸು ಮಾಡಿದ್ದು ಸುಳ್ಳು, ಮೊಸಳೆಯೊಂದಿಗೆ ಹೊಡೆದಾಡಿದ್ದು ಸುಳ್ಳು, ಬಡತನದಿಂದ ಬಳಲಿದ್ದು ಸುಳ್ಳು. ಹೀಗೆ ಸುಳ್ಳುಗಳ ಸರಮಾಲೆ ಹೆಣೆದು ಸೋಷಿಯಲ್ ಮೀಡಿಯಾದಲ್ಲಿ ಮತ್ತು ಪೇಡ್ ಪತ್ರಿಕೆಗಳಲ್ಲಿ ಈ ಕಟ್ಟುಕಥೆಗಳನ್ನು ಹರಡಿಯೇ 2014 ರಲ್ಲಿ ಮೋದಿ ಭಾರತೀಯ ಮತದಾರರ ಸಹಾನುಭೂತಿ ಗಳಿಸಿದ್ದು. ಈಗ ಸತ್ಯ ಹೊರಬಂದ ಮೇಲಾದರೂ ಮತದಾರರು ಕಣ್ಣು ತರೆಯುವರೇ?
ಟಿ‌ವಿಯಲ್ಲಿ ಬರುವ ರಿಯಾಲಿಟಿ ಶೋಗಳಲ್ಲಿ ವೇದಿಕೆಯಲ್ಲಿ ಜೋರು ಜೋರಾಗಿ ಅಳುತ್ತಾ ತಮ್ಮ ಜೀವನದ ಕಷ್ಟ ಕಾರ್ಪಣ್ಯಗಳನ್ನು ಹೇಳಿಕೊಳ್ಳುವ ಹುಡುಗ-ಹುಡುಗಿಯರನ್ನು ಎಲ್ಲರೂ ನೋಡಿರುವರು. ಆದರೆ ಈ ಸ್ಪರ್ಧಿಗಳಲ್ಲಿ ಹೆಚ್ಚಿನವರು ನಿಜ ಜೀವನದಲ್ಲಿ ಯಾವುದೇ ಕಷ್ಟ ಕಾರ್ಪಣ್ಯ ಎದುರಿಸಿರುವುದಿಲ್ಲ. ಆದರೂ ಆ ರಿಯಾಲಿಟಿ ಶೋಗಳ ನಿರ್ದೇಶಕರೇ ಈ ಸ್ಪರ್ಧಿಗಳಿಗೆ ಕಾಲ್ಪನಿಕ ಕಷ್ಟ ಕಾರ್ಪಣ್ಯಗಳನ್ನು ಹೇಳಿಕೊಂಡು ವೀಕ್ಷಕರ ಅತಿ ಹೆಚ್ಚು ಸಹಾನುಭೂತಿ ಗಳಿಸಿ ಟಿ‌ಆರ್‌ಪಿ ಏರಿಸಲು ಸಹಾಯ ಮಾಡಿದರೆ ಮಾತ್ರ ಅವರನ್ನು ಗೆಲ್ಲಿಸುವುದು ಎಂಬ ಅಮಿಷೆ ಒಡ್ಡಿರುತ್ತಾರೆ. ಅದೇ ಪ್ರಕಾರ ಮೋದಿಯ ಜೀವನದ ಕಷ್ಟಕಾರ್ಪಣ್ಯ ಬಡತನ ಎಲ್ಲವೂ ಟಿ‌ವಿ ರಿಯಾಲಿಟಿ ಶೋಗಳಲ್ಲಿ ಸ್ಪರ್ಧಿಗಳು ಅಳುತ್ತಾ ಹೇಳುವ ಕಥೆಗಳಂತೆ ಶುದ್ಧ ಕಾಲ್ಪನಿಕ. ಅದು ಕೇವಲ ಹೆಂಗರುಳಿನ ಮತದಾರರ ಮನದಲ್ಲಿ ಮೋದಿಯ ಬಗ್ಗೆ ವಯುಕ್ತಿಕವಾಗಿ ಕನಿಕರ ಹುಟ್ಟಿಸಿ ಅವರ ವೋಟು ಸೆಳೆಯಲು ಮಾಡಿರುವ “ಫೇಕೂ ರಿಯಾಲಿಟಿ ಶೋ” ಅಷ್ಟೇ. ನಟ ಭಯಂಕರ, ಅಭಿನಯ ವಿಶಾರದ, ನಟಶೇಖರ, ಕಲಾ ಸಾಮ್ರಾಟ ಮೋದಿಯ ಎದುರು ದಿಲೀಪ್ ಕುಮಾರ್, ಶಿವಾಜಿ ಗಣೇಶನ್, ಎನ್‌ಟಿ‌ಆರ್, ಮಮ್ಮುಟ್ಟಿ, ಕಮಲ ಹಾಸನ್, ನಮ್ಮ ವರನಟ ಡಾ.ರಾಜ್ ಕುಮಾರ್, ಇವರೆಲ್ಲರೂ ಅತ್ಯಂತ ಸಪ್ಪೆಯಾಗಿ ಕಾಣುತ್ತಾರೆ ಪಾಪ!
(ಮೇಲಿನ ಬರಹದಲ್ಲಿನ ಅಭಿಪ್ರಾಯಗಳು ಲೇಖಕರದ್ದಾಗಿರುತ್ತವೆ. ಅತಿಥಿ ಲೇಖಕರ ಅನಿಸಿಕೆಗಳು ನಾನುಗೌರಿ.ಕಾಂ ವೆಬ್‌ಪತ್ರಿಕೆಯ ಸಂಪಾದಕೀಯ ತಂಡದ ಅಭಿಪ್ರಾಯಗಳೇ ಆಗಿರಬೇಕೆಂದೇನಿಲ್ಲ.)
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...